Homeಅಂತರಾಷ್ಟ್ರೀಯನೇಪಾಳ | ರಾಜಪ್ರಭುತ್ವ ಮರುಸ್ಥಾಪನೆಗಾಗಿ ಪ್ರತಿಭಟನೆ; ಇಬ್ಬರು ಸಾವು, 45 ಜನರಿಗೆ ಗಾಯ

ನೇಪಾಳ | ರಾಜಪ್ರಭುತ್ವ ಮರುಸ್ಥಾಪನೆಗಾಗಿ ಪ್ರತಿಭಟನೆ; ಇಬ್ಬರು ಸಾವು, 45 ಜನರಿಗೆ ಗಾಯ

- Advertisement -
- Advertisement -

ನೇಪಾಳದ ಕಠ್ಮಂಡುವಿನಲ್ಲಿ ಶುಕ್ರವಾರ ನೇಪಾಳಿ ಭದ್ರತಾ ಪಡೆಗಳು ಮತ್ತು ದೇಶದ ಈ ಹಿಂದಿನ ರಾಜಪ್ರಭುತ್ವದ ಬೆಂಬಲಿಗರ ನಡುವಿನ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸುಮಾರು 45 ಜನರು ಗಾಯಗೊಂಡಿದ್ದಾರೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ದೇಶದಲ್ಲಿ ಮತ್ತೆ ರಾಜಪ್ರಭುತ್ವವನ್ನು ಪುನಃಸ್ಥಾಪಿಸಬೇಕೆಂದು ಒತ್ತಾಯಿಸಿ ದೇಶದ ಮಾಜಿ ರಾಜ ಜ್ಞಾನೇಂದ್ರ ಶಾ ಅವರ ಬೆಂಬಲಿಗರು ಈ ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನೇಪಾಳ

2008 ರಲ್ಲಿ ನೇಪಾಳದಲ್ಲಿ ರಾಜಪ್ರಭುತ್ವವನ್ನು ರದ್ದುಗೊಳಿಸಲಾಗಿತ್ತು. ಪ್ರತಿಭಟನೆಯ ಸಂದರ್ಭದಲ್ಲಿ ರಾಜಧಾನಿಯ ಟಿಂಕುನೆ ಪ್ರದೇಶದಲ್ಲಿ ಘರ್ಷಣೆಗಳು ಭುಗಿಲೆದ್ದವು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪ್ರತಿಭಟನಾಕಾರರು ನಿಷೇಧಾಜ್ಞೆಗಳನ್ನು ವಿಧಿಸಲಾಗಿದ್ದ ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದಾಗ ಪೊಲೀಸರು ಜಲಫಿರಂಗಿಗಳನ್ನು ಬಳಸಿದರು ಮತ್ತು ಅಶ್ರುವಾಯು ಶೆಲ್‌ಗಳು ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘರ್ಷಣೆಯಲ್ಲಿ ಹಲವಾರು ಕಟ್ಟಡಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಯಿತು ಎಂದು ಪೊಲೀಸ್ ಉಪ ಮಹಾನಿರ್ದೇಶಕ ದಿನೇಶ್ ಕುಮಾರ್ ಆಚಾರ್ಯ ಹೇಳಿದ್ದಾರೆ ಎಂದು ಕಠ್ಮಂಡು ಪೋಸ್ಟ್ ಉಲ್ಲೇಖಿಸಿದೆ. ಹಿಂಸಾಚಾರದಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬರನ್ನು ಕಠ್ಮಂಡುವಿನ 29 ವರ್ಷದ ಸಬಿನ್ ಮಹಾರ್ಜನ್ ಎಂದು ಗುರುತಿಸಲಾಗಿದೆ ಎಂದು ದೇಶದ ಗೃಹ ಸಚಿವಾಲಯ ತಿಳಿಸಿದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ಮತ್ತೊಬ್ಬ ಮೃತನನ್ನು ಪ್ರತಿಭಟನೆಯನ್ನು ಚಿತ್ರೀಕರಿಸುತ್ತಿದ್ದ ಅವೆನ್ಯೂಸ್ ಟೆಲಿವಿಷನ್‌ನ ಛಾಯಾಗ್ರಾಹಕ ಸುರೇಶ್ ರಜಕ್ ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಸುಮಾರು ಅರ್ಧದಷ್ಟು ಜನರು ಪೊಲೀಸ್ ಸಿಬ್ಬಂದಿ ಎಂದು ಪಿಟಿಐ ವರದಿ ಮಾಡಿದೆ. ನೇಪಾಳ

ಹಿಂಸಾಚಾರದ ನಂತರ ಕಠ್ಮಂಡುವಿನಲ್ಲಿ ನೇಪಾಳಿ ಸೈನ್ಯವನ್ನು ನಿಯೋಜಿಸಲಾಗಿದೆ. ಕೋಟೆಶ್ವರ್ ಮತ್ತು ಟಿಂಕುನೆ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಜನರ ಸಂಚಾರವನ್ನು ನಿರ್ಬಂಧಿಸುವ ಮೂಲಕ ಜಿಲ್ಲಾಡಳಿತವು ಐದು ಗಂಟೆಗಳ ಕರ್ಫ್ಯೂ ವಿಧಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

“ಇಂತಹ ಹಿಂಸಾಚಾರದ ಕೃತ್ಯಗಳಿಗೆ ಸಂಘಟಕರೇ ಜವಾಬ್ದಾರರು” ಎಂದು ದೇಶದ ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ ಎಂದು ಪಿಟಿಐ ಉಲ್ಲೇಖಿಸಿದೆ. ಕಾನೂನನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ಅಶಾಂತಿಯ ಬಗ್ಗೆ ಚರ್ಚಿಸಲು ಕ್ಯಾಬಿನೆಟ್‌ನ ತುರ್ತು ಸಭೆಯನ್ನು ಕರೆದಿದ್ದಾರೆ.

2008 ರಲ್ಲಿ, ನೇಪಾಳವು ತನ್ನ 240 ವರ್ಷಗಳಷ್ಟು ಹಳೆಯದಾದ ರಾಜಪ್ರಭುತ್ವವನ್ನು ರದ್ದುಗೊಳಿಸಿ ಜಾತ್ಯತೀತ, ಫೆಡರಲ್ ಮತ್ತು ಪ್ರಜಾಪ್ರಭುತ್ವ ಗಣರಾಜ್ಯವಾಗಿ ಪರಿವರ್ತನೆಗೊಂಡಿತು. ಫೆಬ್ರವರಿ 19 ರಂದು ಪ್ರಜಾಪ್ರಭುತ್ವ ದಿನದಂದು ವಿಡಿಯೋ ಸಂದೇಶದಲ್ಲಿ ಮಾತನಾಡಿದ್ದ ಮಾಜಿ ರಾಜ ಜ್ಞಾನೇಂದ್ರ ಶಾ ರಾಜಪ್ರಭುತ್ವ ಮರುಸ್ಥಾಪನೆಗೆ ಸಾರ್ವಜನಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದರು. ಇದರ ನಂತರ, ಇತ್ತೀಚಿನ ವಾರಗಳಲ್ಲಿ ರಾಜಪ್ರಭುತ್ವದ ಪುನಃಸ್ಥಾಪನೆಗೆ ಹೊಸದಾಗಿ ಬೇಡಿಕೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆರ್‌ಜಿ ಕರ್ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ನ್ಯಾಯಾಲಯಕ್ಕೆ ಸಿಬಿಐ ವರ

ಆರ್‌ಜಿ ಕರ್ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ನ್ಯಾಯಾಲಯಕ್ಕೆ ಸಿಬಿಐ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...