Homeಮುಖಪುಟಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು 'ಬುದ್ಧ ಬಾಲಕ'ನ ಬಂಧನ

ಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು ‘ಬುದ್ಧ ಬಾಲಕ’ನ ಬಂಧನ

- Advertisement -
- Advertisement -

ಆಶ್ರಮದಲ್ಲಿದ್ದವರ ನಾಪತ್ತೆ ಪ್ರಕರಣ ಸಂಬಂಧ ಮತ್ತು ಅತ್ಯಾಚಾರದ ಆರೋಪದ ಮೇಲೆ ಬುದ್ಧನ ಪುನರ್ಜನ್ಮ ಎಂದು ನಂಬಲಾಗಿದ್ದ ನೇಪಾಳದ ವಿವಾದಾತ್ಮಕ ಧಾರ್ಮಿಕ ನಾಯಕ ‘ಬುದ್ಧ ಬಾಲಕ’ನನ್ನು ಪೊಲೀಸರು ಬಂಧಿಸಿದ್ದಾರೆ.

ಅನುಯಾಯಿಗಳಿಂದ ಬುದ್ದ ಬಾಯ್ (ಬುದ್ದ ಬಾಲಕ) ಎಂದು ಕರೆಯಲ್ಪಡುವ ವಿವಾದಾತ್ಮಕ ಧಾರ್ಮಿಕ ನಾಯಕ ರಾಮ್ ಬಹದ್ದೂರ್ ಬೊಮ್ಜಾನ್ ನೀರು, ಆಹಾರ ಸೇವಿಸದೆ, ನಿದ್ದೆ ಮಾಡದೆ ತಿಂಗಳುಗಟ್ಟಲೆ ಚಲನರಹಿತ ಧ್ಯಾನಸ್ಥನಾಗಿ ಇರಬಲ್ಲ ಎಂದು ಅನುಯಾಯಿಗಳು ಹೇಳಿದ ನಂತರ ಸಣ್ಣ ವಯಸ್ಸಿನಲ್ಲೇ ಪ್ರಸಿದ್ದಿ ಪಡೆದಿದ್ದ.

ಪ್ರಸ್ತುತ 33 ವರ್ಷ ವಯಸ್ಸಿನ ಬೊಮ್ಜಾನ್ ಮೇಲೆ, ತನ್ನ ಅನುಯಾಯಿಗಳಿಗೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ನೀಡಿದ ಆರೋಪದವಿದೆ. ಈ ಆರೋಪ ಬಹಳ ಹಿಂದೆಯೇ ಕೇಳಿ ಬಂದಿದ್ದರೂ, ಬೊಮ್ಜಾನ್ ತನ್ನ ಪ್ರಭಾವ ಬಳಸಿ ಸುದೀರ್ಘ ಸಮಯದಿಂದ ಕಾನೂನಿಂದ ತಪ್ಪಿಸಿಕೊಂಡಿದ್ದ ಎಂದು ವರದಿಗಳು ಹೇಳಿವೆ.

“ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೊಮ್ಜಾನ್‌ನನ್ನು ಬಂಧಿಸಲಾಗಿದೆ” ಎಂದು ಕಠ್ಮಂಡು ಪೊಲೀಸ್ ವಕ್ತಾರ ಕುಬೇರ್ ಕಡಯತ್ ಎಪಿಎಫ್‌ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಬೊಮ್ಜಾನ್‌ ಮೇಲೆ ಹಲವು ಆರೋಪಗಳಿದ್ದರೂ, ನೇಪಾಳದ ರಾಜಧಾನಿ ಕಠ್ಮಂಡುವಿನ ದಕ್ಷಿಣ ಜಿಲ್ಲೆಯ ಸರ್ಲಾಹಿಯ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೊರಡಿಸಲಾದ ವಾರಂಟ್‌ನ ಸಂಬಂಧ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಂಧಿಸುವ ವೇಳೆ ಬೊಮ್ಜಾನ್‌ನ ನಿವಾಸದಿಂದ 30 ದಶಲಕ್ಷಕ್ಕೂ ಅಧಿಕ ರೂಪಾಯಿ (ನೇಪಾಳಿ ರೂಪಾಯಿ) ಗಳನ್ನು ವಶಕ್ಕೆ ಪಡೆಯಲಾಗಿದೆ. ಬೊಮ್ಜಾನ್ ವಿರುದ್ಧ ಹಣ ದುರುಪಯೋಗ ಮತ್ತು ದುಷ್ಕೃತ್ಯದ ಆರೋಪಗಳು ಒಂದು ದಶಕಕ್ಕೂ ಹಿಂದಿನಿಂದ ಇದೆ ಎಂದು ವರದಿಗಳು ಹೇಳಿವೆ.

2010ರಲ್ಲಿ ಬೊಮ್ಜಾನ್ ವಿರುದ್ಧ ಹತ್ತಾರು ಹಲ್ಲೆ ದೂರುಗಳು ದಾಖಲಾಗಿತ್ತು. ತನ್ನ ಧ್ಯಾನಕ್ಕೆ ಭಂಗ ತಂದಿದ್ದಾರೆ ಎಂದು ಅನುಯಾಯಿಗಳಿಗೆ ಆತ ಥಳಿಸಿದ್ದ ಎಂದು ಆರೋಪಿಸಲಾಗಿತ್ತು. 2018ರಲ್ಲಿ ಆಶ್ರಮದಲ್ಲಿ ಬೊಮ್ಜಾನ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು 18 ವರ್ಷದ ಸನ್ಯಾಸಿನಿಯೊಬ್ಬರು ಆರೋಪಿಸಿದ್ದರು.

ಬೊಮ್ಜಾನ್‌ನ ಆಶ್ರಮವೊಂದರಿಂದ ಆತನ ನಾಲ್ವರು ಭಕ್ತರು ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ ನಂತರ, ಕಳೆದ ವರ್ಷ ಪೊಲೀಸರು ಆತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ನಾಪತ್ತೆಯಾದ ನಾಲ್ವರು ಎಲ್ಲಿ ಹೋಗಿದ್ದಾರೆ ಎಂಬುವುದು ಇನ್ನೂ ಗೊತ್ತಾಗಿಲ್ಲ ಎಂದು ನೇಪಾಳದ ಕೇಂದ್ರ ತನಿಖಾ ದಳದ ಮುಖ್ಯಸ್ಥ ದಿನೇಶ್ ಆಚಾರ್ಯ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

16 ವರ್ಷ ವಯಸ್ಸಿನವನಾಗಿದ್ದಾಗ ಬೊಮ್ಜಾನ್‌ ಒಂದು ದಿನ ಪೂರ್ವ ನೇಪಾಳದ ದಟ್ಟ ಅರಣ್ಯಕ್ಕೆ ತೆರಳಿದ್ದವ ಸುಮಾರು 9 ತಿಂಗಳ ಕಾಲ ನಾಪತ್ತೆಯಾಗಿದ್ದ. ಆತನ ಸುರಕ್ಷಿತ ಮರಳುವಿಕೆಗೆ ಬೌದ್ಧ ಬಿಕ್ಕುಗಳು ನಿರಂತರವಾಗಿ ಪ್ರಾರ್ಥಿಸಿದ್ದರು. 9 ತಿಂಗಳ ಬಳಿಕ ಆತನ ಕಾಡಿನಿಂದ ವಾಪಸ್ ಬಂದಾಗ ಪ್ರಸಿದ್ದಿ ಹೆಚ್ಚಾಗಿತ್ತು.

ಇದನ್ನೂ ಓದಿ : ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...