Homeಮುಖಪುಟಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು 'ಬುದ್ಧ ಬಾಲಕ'ನ ಬಂಧನ

ಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು ‘ಬುದ್ಧ ಬಾಲಕ’ನ ಬಂಧನ

- Advertisement -
- Advertisement -

ಆಶ್ರಮದಲ್ಲಿದ್ದವರ ನಾಪತ್ತೆ ಪ್ರಕರಣ ಸಂಬಂಧ ಮತ್ತು ಅತ್ಯಾಚಾರದ ಆರೋಪದ ಮೇಲೆ ಬುದ್ಧನ ಪುನರ್ಜನ್ಮ ಎಂದು ನಂಬಲಾಗಿದ್ದ ನೇಪಾಳದ ವಿವಾದಾತ್ಮಕ ಧಾರ್ಮಿಕ ನಾಯಕ ‘ಬುದ್ಧ ಬಾಲಕ’ನನ್ನು ಪೊಲೀಸರು ಬಂಧಿಸಿದ್ದಾರೆ.

ಅನುಯಾಯಿಗಳಿಂದ ಬುದ್ದ ಬಾಯ್ (ಬುದ್ದ ಬಾಲಕ) ಎಂದು ಕರೆಯಲ್ಪಡುವ ವಿವಾದಾತ್ಮಕ ಧಾರ್ಮಿಕ ನಾಯಕ ರಾಮ್ ಬಹದ್ದೂರ್ ಬೊಮ್ಜಾನ್ ನೀರು, ಆಹಾರ ಸೇವಿಸದೆ, ನಿದ್ದೆ ಮಾಡದೆ ತಿಂಗಳುಗಟ್ಟಲೆ ಚಲನರಹಿತ ಧ್ಯಾನಸ್ಥನಾಗಿ ಇರಬಲ್ಲ ಎಂದು ಅನುಯಾಯಿಗಳು ಹೇಳಿದ ನಂತರ ಸಣ್ಣ ವಯಸ್ಸಿನಲ್ಲೇ ಪ್ರಸಿದ್ದಿ ಪಡೆದಿದ್ದ.

ಪ್ರಸ್ತುತ 33 ವರ್ಷ ವಯಸ್ಸಿನ ಬೊಮ್ಜಾನ್ ಮೇಲೆ, ತನ್ನ ಅನುಯಾಯಿಗಳಿಗೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ನೀಡಿದ ಆರೋಪದವಿದೆ. ಈ ಆರೋಪ ಬಹಳ ಹಿಂದೆಯೇ ಕೇಳಿ ಬಂದಿದ್ದರೂ, ಬೊಮ್ಜಾನ್ ತನ್ನ ಪ್ರಭಾವ ಬಳಸಿ ಸುದೀರ್ಘ ಸಮಯದಿಂದ ಕಾನೂನಿಂದ ತಪ್ಪಿಸಿಕೊಂಡಿದ್ದ ಎಂದು ವರದಿಗಳು ಹೇಳಿವೆ.

“ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೊಮ್ಜಾನ್‌ನನ್ನು ಬಂಧಿಸಲಾಗಿದೆ” ಎಂದು ಕಠ್ಮಂಡು ಪೊಲೀಸ್ ವಕ್ತಾರ ಕುಬೇರ್ ಕಡಯತ್ ಎಪಿಎಫ್‌ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಬೊಮ್ಜಾನ್‌ ಮೇಲೆ ಹಲವು ಆರೋಪಗಳಿದ್ದರೂ, ನೇಪಾಳದ ರಾಜಧಾನಿ ಕಠ್ಮಂಡುವಿನ ದಕ್ಷಿಣ ಜಿಲ್ಲೆಯ ಸರ್ಲಾಹಿಯ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೊರಡಿಸಲಾದ ವಾರಂಟ್‌ನ ಸಂಬಂಧ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಂಧಿಸುವ ವೇಳೆ ಬೊಮ್ಜಾನ್‌ನ ನಿವಾಸದಿಂದ 30 ದಶಲಕ್ಷಕ್ಕೂ ಅಧಿಕ ರೂಪಾಯಿ (ನೇಪಾಳಿ ರೂಪಾಯಿ) ಗಳನ್ನು ವಶಕ್ಕೆ ಪಡೆಯಲಾಗಿದೆ. ಬೊಮ್ಜಾನ್ ವಿರುದ್ಧ ಹಣ ದುರುಪಯೋಗ ಮತ್ತು ದುಷ್ಕೃತ್ಯದ ಆರೋಪಗಳು ಒಂದು ದಶಕಕ್ಕೂ ಹಿಂದಿನಿಂದ ಇದೆ ಎಂದು ವರದಿಗಳು ಹೇಳಿವೆ.

2010ರಲ್ಲಿ ಬೊಮ್ಜಾನ್ ವಿರುದ್ಧ ಹತ್ತಾರು ಹಲ್ಲೆ ದೂರುಗಳು ದಾಖಲಾಗಿತ್ತು. ತನ್ನ ಧ್ಯಾನಕ್ಕೆ ಭಂಗ ತಂದಿದ್ದಾರೆ ಎಂದು ಅನುಯಾಯಿಗಳಿಗೆ ಆತ ಥಳಿಸಿದ್ದ ಎಂದು ಆರೋಪಿಸಲಾಗಿತ್ತು. 2018ರಲ್ಲಿ ಆಶ್ರಮದಲ್ಲಿ ಬೊಮ್ಜಾನ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು 18 ವರ್ಷದ ಸನ್ಯಾಸಿನಿಯೊಬ್ಬರು ಆರೋಪಿಸಿದ್ದರು.

ಬೊಮ್ಜಾನ್‌ನ ಆಶ್ರಮವೊಂದರಿಂದ ಆತನ ನಾಲ್ವರು ಭಕ್ತರು ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ ನಂತರ, ಕಳೆದ ವರ್ಷ ಪೊಲೀಸರು ಆತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ನಾಪತ್ತೆಯಾದ ನಾಲ್ವರು ಎಲ್ಲಿ ಹೋಗಿದ್ದಾರೆ ಎಂಬುವುದು ಇನ್ನೂ ಗೊತ್ತಾಗಿಲ್ಲ ಎಂದು ನೇಪಾಳದ ಕೇಂದ್ರ ತನಿಖಾ ದಳದ ಮುಖ್ಯಸ್ಥ ದಿನೇಶ್ ಆಚಾರ್ಯ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

16 ವರ್ಷ ವಯಸ್ಸಿನವನಾಗಿದ್ದಾಗ ಬೊಮ್ಜಾನ್‌ ಒಂದು ದಿನ ಪೂರ್ವ ನೇಪಾಳದ ದಟ್ಟ ಅರಣ್ಯಕ್ಕೆ ತೆರಳಿದ್ದವ ಸುಮಾರು 9 ತಿಂಗಳ ಕಾಲ ನಾಪತ್ತೆಯಾಗಿದ್ದ. ಆತನ ಸುರಕ್ಷಿತ ಮರಳುವಿಕೆಗೆ ಬೌದ್ಧ ಬಿಕ್ಕುಗಳು ನಿರಂತರವಾಗಿ ಪ್ರಾರ್ಥಿಸಿದ್ದರು. 9 ತಿಂಗಳ ಬಳಿಕ ಆತನ ಕಾಡಿನಿಂದ ವಾಪಸ್ ಬಂದಾಗ ಪ್ರಸಿದ್ದಿ ಹೆಚ್ಚಾಗಿತ್ತು.

ಇದನ್ನೂ ಓದಿ : ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...