Homeಮುಖಪುಟಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು 'ಬುದ್ಧ ಬಾಲಕ'ನ ಬಂಧನ

ಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು ‘ಬುದ್ಧ ಬಾಲಕ’ನ ಬಂಧನ

- Advertisement -
- Advertisement -

ಆಶ್ರಮದಲ್ಲಿದ್ದವರ ನಾಪತ್ತೆ ಪ್ರಕರಣ ಸಂಬಂಧ ಮತ್ತು ಅತ್ಯಾಚಾರದ ಆರೋಪದ ಮೇಲೆ ಬುದ್ಧನ ಪುನರ್ಜನ್ಮ ಎಂದು ನಂಬಲಾಗಿದ್ದ ನೇಪಾಳದ ವಿವಾದಾತ್ಮಕ ಧಾರ್ಮಿಕ ನಾಯಕ ‘ಬುದ್ಧ ಬಾಲಕ’ನನ್ನು ಪೊಲೀಸರು ಬಂಧಿಸಿದ್ದಾರೆ.

ಅನುಯಾಯಿಗಳಿಂದ ಬುದ್ದ ಬಾಯ್ (ಬುದ್ದ ಬಾಲಕ) ಎಂದು ಕರೆಯಲ್ಪಡುವ ವಿವಾದಾತ್ಮಕ ಧಾರ್ಮಿಕ ನಾಯಕ ರಾಮ್ ಬಹದ್ದೂರ್ ಬೊಮ್ಜಾನ್ ನೀರು, ಆಹಾರ ಸೇವಿಸದೆ, ನಿದ್ದೆ ಮಾಡದೆ ತಿಂಗಳುಗಟ್ಟಲೆ ಚಲನರಹಿತ ಧ್ಯಾನಸ್ಥನಾಗಿ ಇರಬಲ್ಲ ಎಂದು ಅನುಯಾಯಿಗಳು ಹೇಳಿದ ನಂತರ ಸಣ್ಣ ವಯಸ್ಸಿನಲ್ಲೇ ಪ್ರಸಿದ್ದಿ ಪಡೆದಿದ್ದ.

ಪ್ರಸ್ತುತ 33 ವರ್ಷ ವಯಸ್ಸಿನ ಬೊಮ್ಜಾನ್ ಮೇಲೆ, ತನ್ನ ಅನುಯಾಯಿಗಳಿಗೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ನೀಡಿದ ಆರೋಪದವಿದೆ. ಈ ಆರೋಪ ಬಹಳ ಹಿಂದೆಯೇ ಕೇಳಿ ಬಂದಿದ್ದರೂ, ಬೊಮ್ಜಾನ್ ತನ್ನ ಪ್ರಭಾವ ಬಳಸಿ ಸುದೀರ್ಘ ಸಮಯದಿಂದ ಕಾನೂನಿಂದ ತಪ್ಪಿಸಿಕೊಂಡಿದ್ದ ಎಂದು ವರದಿಗಳು ಹೇಳಿವೆ.

“ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೊಮ್ಜಾನ್‌ನನ್ನು ಬಂಧಿಸಲಾಗಿದೆ” ಎಂದು ಕಠ್ಮಂಡು ಪೊಲೀಸ್ ವಕ್ತಾರ ಕುಬೇರ್ ಕಡಯತ್ ಎಪಿಎಫ್‌ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಬೊಮ್ಜಾನ್‌ ಮೇಲೆ ಹಲವು ಆರೋಪಗಳಿದ್ದರೂ, ನೇಪಾಳದ ರಾಜಧಾನಿ ಕಠ್ಮಂಡುವಿನ ದಕ್ಷಿಣ ಜಿಲ್ಲೆಯ ಸರ್ಲಾಹಿಯ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೊರಡಿಸಲಾದ ವಾರಂಟ್‌ನ ಸಂಬಂಧ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಂಧಿಸುವ ವೇಳೆ ಬೊಮ್ಜಾನ್‌ನ ನಿವಾಸದಿಂದ 30 ದಶಲಕ್ಷಕ್ಕೂ ಅಧಿಕ ರೂಪಾಯಿ (ನೇಪಾಳಿ ರೂಪಾಯಿ) ಗಳನ್ನು ವಶಕ್ಕೆ ಪಡೆಯಲಾಗಿದೆ. ಬೊಮ್ಜಾನ್ ವಿರುದ್ಧ ಹಣ ದುರುಪಯೋಗ ಮತ್ತು ದುಷ್ಕೃತ್ಯದ ಆರೋಪಗಳು ಒಂದು ದಶಕಕ್ಕೂ ಹಿಂದಿನಿಂದ ಇದೆ ಎಂದು ವರದಿಗಳು ಹೇಳಿವೆ.

2010ರಲ್ಲಿ ಬೊಮ್ಜಾನ್ ವಿರುದ್ಧ ಹತ್ತಾರು ಹಲ್ಲೆ ದೂರುಗಳು ದಾಖಲಾಗಿತ್ತು. ತನ್ನ ಧ್ಯಾನಕ್ಕೆ ಭಂಗ ತಂದಿದ್ದಾರೆ ಎಂದು ಅನುಯಾಯಿಗಳಿಗೆ ಆತ ಥಳಿಸಿದ್ದ ಎಂದು ಆರೋಪಿಸಲಾಗಿತ್ತು. 2018ರಲ್ಲಿ ಆಶ್ರಮದಲ್ಲಿ ಬೊಮ್ಜಾನ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು 18 ವರ್ಷದ ಸನ್ಯಾಸಿನಿಯೊಬ್ಬರು ಆರೋಪಿಸಿದ್ದರು.

ಬೊಮ್ಜಾನ್‌ನ ಆಶ್ರಮವೊಂದರಿಂದ ಆತನ ನಾಲ್ವರು ಭಕ್ತರು ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ ನಂತರ, ಕಳೆದ ವರ್ಷ ಪೊಲೀಸರು ಆತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ನಾಪತ್ತೆಯಾದ ನಾಲ್ವರು ಎಲ್ಲಿ ಹೋಗಿದ್ದಾರೆ ಎಂಬುವುದು ಇನ್ನೂ ಗೊತ್ತಾಗಿಲ್ಲ ಎಂದು ನೇಪಾಳದ ಕೇಂದ್ರ ತನಿಖಾ ದಳದ ಮುಖ್ಯಸ್ಥ ದಿನೇಶ್ ಆಚಾರ್ಯ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

16 ವರ್ಷ ವಯಸ್ಸಿನವನಾಗಿದ್ದಾಗ ಬೊಮ್ಜಾನ್‌ ಒಂದು ದಿನ ಪೂರ್ವ ನೇಪಾಳದ ದಟ್ಟ ಅರಣ್ಯಕ್ಕೆ ತೆರಳಿದ್ದವ ಸುಮಾರು 9 ತಿಂಗಳ ಕಾಲ ನಾಪತ್ತೆಯಾಗಿದ್ದ. ಆತನ ಸುರಕ್ಷಿತ ಮರಳುವಿಕೆಗೆ ಬೌದ್ಧ ಬಿಕ್ಕುಗಳು ನಿರಂತರವಾಗಿ ಪ್ರಾರ್ಥಿಸಿದ್ದರು. 9 ತಿಂಗಳ ಬಳಿಕ ಆತನ ಕಾಡಿನಿಂದ ವಾಪಸ್ ಬಂದಾಗ ಪ್ರಸಿದ್ದಿ ಹೆಚ್ಚಾಗಿತ್ತು.

ಇದನ್ನೂ ಓದಿ : ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...