Homeಮುಖಪುಟಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು 'ಬುದ್ಧ ಬಾಲಕ'ನ ಬಂಧನ

ಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು ‘ಬುದ್ಧ ಬಾಲಕ’ನ ಬಂಧನ

- Advertisement -
- Advertisement -

ಆಶ್ರಮದಲ್ಲಿದ್ದವರ ನಾಪತ್ತೆ ಪ್ರಕರಣ ಸಂಬಂಧ ಮತ್ತು ಅತ್ಯಾಚಾರದ ಆರೋಪದ ಮೇಲೆ ಬುದ್ಧನ ಪುನರ್ಜನ್ಮ ಎಂದು ನಂಬಲಾಗಿದ್ದ ನೇಪಾಳದ ವಿವಾದಾತ್ಮಕ ಧಾರ್ಮಿಕ ನಾಯಕ ‘ಬುದ್ಧ ಬಾಲಕ’ನನ್ನು ಪೊಲೀಸರು ಬಂಧಿಸಿದ್ದಾರೆ.

ಅನುಯಾಯಿಗಳಿಂದ ಬುದ್ದ ಬಾಯ್ (ಬುದ್ದ ಬಾಲಕ) ಎಂದು ಕರೆಯಲ್ಪಡುವ ವಿವಾದಾತ್ಮಕ ಧಾರ್ಮಿಕ ನಾಯಕ ರಾಮ್ ಬಹದ್ದೂರ್ ಬೊಮ್ಜಾನ್ ನೀರು, ಆಹಾರ ಸೇವಿಸದೆ, ನಿದ್ದೆ ಮಾಡದೆ ತಿಂಗಳುಗಟ್ಟಲೆ ಚಲನರಹಿತ ಧ್ಯಾನಸ್ಥನಾಗಿ ಇರಬಲ್ಲ ಎಂದು ಅನುಯಾಯಿಗಳು ಹೇಳಿದ ನಂತರ ಸಣ್ಣ ವಯಸ್ಸಿನಲ್ಲೇ ಪ್ರಸಿದ್ದಿ ಪಡೆದಿದ್ದ.

ಪ್ರಸ್ತುತ 33 ವರ್ಷ ವಯಸ್ಸಿನ ಬೊಮ್ಜಾನ್ ಮೇಲೆ, ತನ್ನ ಅನುಯಾಯಿಗಳಿಗೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ನೀಡಿದ ಆರೋಪದವಿದೆ. ಈ ಆರೋಪ ಬಹಳ ಹಿಂದೆಯೇ ಕೇಳಿ ಬಂದಿದ್ದರೂ, ಬೊಮ್ಜಾನ್ ತನ್ನ ಪ್ರಭಾವ ಬಳಸಿ ಸುದೀರ್ಘ ಸಮಯದಿಂದ ಕಾನೂನಿಂದ ತಪ್ಪಿಸಿಕೊಂಡಿದ್ದ ಎಂದು ವರದಿಗಳು ಹೇಳಿವೆ.

“ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೊಮ್ಜಾನ್‌ನನ್ನು ಬಂಧಿಸಲಾಗಿದೆ” ಎಂದು ಕಠ್ಮಂಡು ಪೊಲೀಸ್ ವಕ್ತಾರ ಕುಬೇರ್ ಕಡಯತ್ ಎಪಿಎಫ್‌ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಬೊಮ್ಜಾನ್‌ ಮೇಲೆ ಹಲವು ಆರೋಪಗಳಿದ್ದರೂ, ನೇಪಾಳದ ರಾಜಧಾನಿ ಕಠ್ಮಂಡುವಿನ ದಕ್ಷಿಣ ಜಿಲ್ಲೆಯ ಸರ್ಲಾಹಿಯ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೊರಡಿಸಲಾದ ವಾರಂಟ್‌ನ ಸಂಬಂಧ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಂಧಿಸುವ ವೇಳೆ ಬೊಮ್ಜಾನ್‌ನ ನಿವಾಸದಿಂದ 30 ದಶಲಕ್ಷಕ್ಕೂ ಅಧಿಕ ರೂಪಾಯಿ (ನೇಪಾಳಿ ರೂಪಾಯಿ) ಗಳನ್ನು ವಶಕ್ಕೆ ಪಡೆಯಲಾಗಿದೆ. ಬೊಮ್ಜಾನ್ ವಿರುದ್ಧ ಹಣ ದುರುಪಯೋಗ ಮತ್ತು ದುಷ್ಕೃತ್ಯದ ಆರೋಪಗಳು ಒಂದು ದಶಕಕ್ಕೂ ಹಿಂದಿನಿಂದ ಇದೆ ಎಂದು ವರದಿಗಳು ಹೇಳಿವೆ.

2010ರಲ್ಲಿ ಬೊಮ್ಜಾನ್ ವಿರುದ್ಧ ಹತ್ತಾರು ಹಲ್ಲೆ ದೂರುಗಳು ದಾಖಲಾಗಿತ್ತು. ತನ್ನ ಧ್ಯಾನಕ್ಕೆ ಭಂಗ ತಂದಿದ್ದಾರೆ ಎಂದು ಅನುಯಾಯಿಗಳಿಗೆ ಆತ ಥಳಿಸಿದ್ದ ಎಂದು ಆರೋಪಿಸಲಾಗಿತ್ತು. 2018ರಲ್ಲಿ ಆಶ್ರಮದಲ್ಲಿ ಬೊಮ್ಜಾನ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು 18 ವರ್ಷದ ಸನ್ಯಾಸಿನಿಯೊಬ್ಬರು ಆರೋಪಿಸಿದ್ದರು.

ಬೊಮ್ಜಾನ್‌ನ ಆಶ್ರಮವೊಂದರಿಂದ ಆತನ ನಾಲ್ವರು ಭಕ್ತರು ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ ನಂತರ, ಕಳೆದ ವರ್ಷ ಪೊಲೀಸರು ಆತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ನಾಪತ್ತೆಯಾದ ನಾಲ್ವರು ಎಲ್ಲಿ ಹೋಗಿದ್ದಾರೆ ಎಂಬುವುದು ಇನ್ನೂ ಗೊತ್ತಾಗಿಲ್ಲ ಎಂದು ನೇಪಾಳದ ಕೇಂದ್ರ ತನಿಖಾ ದಳದ ಮುಖ್ಯಸ್ಥ ದಿನೇಶ್ ಆಚಾರ್ಯ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

16 ವರ್ಷ ವಯಸ್ಸಿನವನಾಗಿದ್ದಾಗ ಬೊಮ್ಜಾನ್‌ ಒಂದು ದಿನ ಪೂರ್ವ ನೇಪಾಳದ ದಟ್ಟ ಅರಣ್ಯಕ್ಕೆ ತೆರಳಿದ್ದವ ಸುಮಾರು 9 ತಿಂಗಳ ಕಾಲ ನಾಪತ್ತೆಯಾಗಿದ್ದ. ಆತನ ಸುರಕ್ಷಿತ ಮರಳುವಿಕೆಗೆ ಬೌದ್ಧ ಬಿಕ್ಕುಗಳು ನಿರಂತರವಾಗಿ ಪ್ರಾರ್ಥಿಸಿದ್ದರು. 9 ತಿಂಗಳ ಬಳಿಕ ಆತನ ಕಾಡಿನಿಂದ ವಾಪಸ್ ಬಂದಾಗ ಪ್ರಸಿದ್ದಿ ಹೆಚ್ಚಾಗಿತ್ತು.

ಇದನ್ನೂ ಓದಿ : ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...