Homeಮುಖಪುಟಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು 'ಬುದ್ಧ ಬಾಲಕ'ನ ಬಂಧನ

ಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು ‘ಬುದ್ಧ ಬಾಲಕ’ನ ಬಂಧನ

- Advertisement -
- Advertisement -

ಆಶ್ರಮದಲ್ಲಿದ್ದವರ ನಾಪತ್ತೆ ಪ್ರಕರಣ ಸಂಬಂಧ ಮತ್ತು ಅತ್ಯಾಚಾರದ ಆರೋಪದ ಮೇಲೆ ಬುದ್ಧನ ಪುನರ್ಜನ್ಮ ಎಂದು ನಂಬಲಾಗಿದ್ದ ನೇಪಾಳದ ವಿವಾದಾತ್ಮಕ ಧಾರ್ಮಿಕ ನಾಯಕ ‘ಬುದ್ಧ ಬಾಲಕ’ನನ್ನು ಪೊಲೀಸರು ಬಂಧಿಸಿದ್ದಾರೆ.

ಅನುಯಾಯಿಗಳಿಂದ ಬುದ್ದ ಬಾಯ್ (ಬುದ್ದ ಬಾಲಕ) ಎಂದು ಕರೆಯಲ್ಪಡುವ ವಿವಾದಾತ್ಮಕ ಧಾರ್ಮಿಕ ನಾಯಕ ರಾಮ್ ಬಹದ್ದೂರ್ ಬೊಮ್ಜಾನ್ ನೀರು, ಆಹಾರ ಸೇವಿಸದೆ, ನಿದ್ದೆ ಮಾಡದೆ ತಿಂಗಳುಗಟ್ಟಲೆ ಚಲನರಹಿತ ಧ್ಯಾನಸ್ಥನಾಗಿ ಇರಬಲ್ಲ ಎಂದು ಅನುಯಾಯಿಗಳು ಹೇಳಿದ ನಂತರ ಸಣ್ಣ ವಯಸ್ಸಿನಲ್ಲೇ ಪ್ರಸಿದ್ದಿ ಪಡೆದಿದ್ದ.

ಪ್ರಸ್ತುತ 33 ವರ್ಷ ವಯಸ್ಸಿನ ಬೊಮ್ಜಾನ್ ಮೇಲೆ, ತನ್ನ ಅನುಯಾಯಿಗಳಿಗೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ನೀಡಿದ ಆರೋಪದವಿದೆ. ಈ ಆರೋಪ ಬಹಳ ಹಿಂದೆಯೇ ಕೇಳಿ ಬಂದಿದ್ದರೂ, ಬೊಮ್ಜಾನ್ ತನ್ನ ಪ್ರಭಾವ ಬಳಸಿ ಸುದೀರ್ಘ ಸಮಯದಿಂದ ಕಾನೂನಿಂದ ತಪ್ಪಿಸಿಕೊಂಡಿದ್ದ ಎಂದು ವರದಿಗಳು ಹೇಳಿವೆ.

“ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೊಮ್ಜಾನ್‌ನನ್ನು ಬಂಧಿಸಲಾಗಿದೆ” ಎಂದು ಕಠ್ಮಂಡು ಪೊಲೀಸ್ ವಕ್ತಾರ ಕುಬೇರ್ ಕಡಯತ್ ಎಪಿಎಫ್‌ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಬೊಮ್ಜಾನ್‌ ಮೇಲೆ ಹಲವು ಆರೋಪಗಳಿದ್ದರೂ, ನೇಪಾಳದ ರಾಜಧಾನಿ ಕಠ್ಮಂಡುವಿನ ದಕ್ಷಿಣ ಜಿಲ್ಲೆಯ ಸರ್ಲಾಹಿಯ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೊರಡಿಸಲಾದ ವಾರಂಟ್‌ನ ಸಂಬಂಧ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಂಧಿಸುವ ವೇಳೆ ಬೊಮ್ಜಾನ್‌ನ ನಿವಾಸದಿಂದ 30 ದಶಲಕ್ಷಕ್ಕೂ ಅಧಿಕ ರೂಪಾಯಿ (ನೇಪಾಳಿ ರೂಪಾಯಿ) ಗಳನ್ನು ವಶಕ್ಕೆ ಪಡೆಯಲಾಗಿದೆ. ಬೊಮ್ಜಾನ್ ವಿರುದ್ಧ ಹಣ ದುರುಪಯೋಗ ಮತ್ತು ದುಷ್ಕೃತ್ಯದ ಆರೋಪಗಳು ಒಂದು ದಶಕಕ್ಕೂ ಹಿಂದಿನಿಂದ ಇದೆ ಎಂದು ವರದಿಗಳು ಹೇಳಿವೆ.

2010ರಲ್ಲಿ ಬೊಮ್ಜಾನ್ ವಿರುದ್ಧ ಹತ್ತಾರು ಹಲ್ಲೆ ದೂರುಗಳು ದಾಖಲಾಗಿತ್ತು. ತನ್ನ ಧ್ಯಾನಕ್ಕೆ ಭಂಗ ತಂದಿದ್ದಾರೆ ಎಂದು ಅನುಯಾಯಿಗಳಿಗೆ ಆತ ಥಳಿಸಿದ್ದ ಎಂದು ಆರೋಪಿಸಲಾಗಿತ್ತು. 2018ರಲ್ಲಿ ಆಶ್ರಮದಲ್ಲಿ ಬೊಮ್ಜಾನ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು 18 ವರ್ಷದ ಸನ್ಯಾಸಿನಿಯೊಬ್ಬರು ಆರೋಪಿಸಿದ್ದರು.

ಬೊಮ್ಜಾನ್‌ನ ಆಶ್ರಮವೊಂದರಿಂದ ಆತನ ನಾಲ್ವರು ಭಕ್ತರು ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ ನಂತರ, ಕಳೆದ ವರ್ಷ ಪೊಲೀಸರು ಆತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ನಾಪತ್ತೆಯಾದ ನಾಲ್ವರು ಎಲ್ಲಿ ಹೋಗಿದ್ದಾರೆ ಎಂಬುವುದು ಇನ್ನೂ ಗೊತ್ತಾಗಿಲ್ಲ ಎಂದು ನೇಪಾಳದ ಕೇಂದ್ರ ತನಿಖಾ ದಳದ ಮುಖ್ಯಸ್ಥ ದಿನೇಶ್ ಆಚಾರ್ಯ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

16 ವರ್ಷ ವಯಸ್ಸಿನವನಾಗಿದ್ದಾಗ ಬೊಮ್ಜಾನ್‌ ಒಂದು ದಿನ ಪೂರ್ವ ನೇಪಾಳದ ದಟ್ಟ ಅರಣ್ಯಕ್ಕೆ ತೆರಳಿದ್ದವ ಸುಮಾರು 9 ತಿಂಗಳ ಕಾಲ ನಾಪತ್ತೆಯಾಗಿದ್ದ. ಆತನ ಸುರಕ್ಷಿತ ಮರಳುವಿಕೆಗೆ ಬೌದ್ಧ ಬಿಕ್ಕುಗಳು ನಿರಂತರವಾಗಿ ಪ್ರಾರ್ಥಿಸಿದ್ದರು. 9 ತಿಂಗಳ ಬಳಿಕ ಆತನ ಕಾಡಿನಿಂದ ವಾಪಸ್ ಬಂದಾಗ ಪ್ರಸಿದ್ದಿ ಹೆಚ್ಚಾಗಿತ್ತು.

ಇದನ್ನೂ ಓದಿ : ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...