Homeಮುಖಪುಟಸೋದರಳಿಯ ಆಕಾಶ್‌ರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಮಾಯಾವತಿ!

ಸೋದರಳಿಯ ಆಕಾಶ್‌ರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಮಾಯಾವತಿ!

- Advertisement -
- Advertisement -

‘ದುರಹಂಕಾರ’ ಮತ್ತು ‘ಸ್ವಾರ್ಥ’ದ ಕಾರಣಕ್ಕೆ ಪಕ್ಷದಿಂದ ಹೊರಹಾಕಲ್ಪಟ್ಟ ನಲವತ್ತೊಂದು ದಿನಗಳ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿರುವ ವಿದ್ಯಾಮಾನ ನಡೆದಿದೆ ಎಂದು ವರದಿಯಾಗಿದೆ. ಆಕಾಶ್ ಆನಂದ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಅವರಿಗೆ ‘ಇನ್ನೊಂದು ಅವಕಾಶ’ ನೀಡುತ್ತಿದ್ದೇನೆ. ಜೊತೆಗೆ ತಾನು ಆರೋಗ್ಯವಾಗಿರುವವರೆಗೆ ಯಾರನ್ನೂ ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಸೋದರಳಿಯ ಆಕಾಶ್‌ರನ್ನು

‘ಎಕ್ಸ್’ನಲ್ಲಿ ಆಕಾಶ್ ಅವರು ಕ್ಷಮೆಯಾಚಿಸಿದ ನಂತರ ಮಾಯಾವತಿಯವರ ಮನಸ್ಸು ಬದಲಾಗಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ತಮ್ಮ ಏಕೈಕ ‘ರಾಜಕೀಯ ಗುರು’ ಮತ್ತು ‘ಆದರ್ಶ’ ಎಂದು ಮಾಯಾವತಿಯವರನ್ನು ಪರಿಗಣಿಸಿರುವ ಆಕಾಶ್, ಅವರೊಂದಿಗೆ ಕ್ಷಮೆಯಾಚಿಸಿದ್ದಾಗಿ ಹೇಳಿದ್ದಾರೆ.

”ಸಂಬಂಧಿಕರು ಮತ್ತು ಸಲಹೆಗಾರರಿಂದ ಅವರ ರಾಜಕೀಯ ನಿರ್ಧಾರಗಳಿಗಾಗಿ ನಾನು ಎಂದಿಗೂ ಯಾವುದೇ ಸಲಹೆಯನ್ನು ತೆಗೆದುಕೊಳ್ಳುವುದಿಲ್ಲ ಮತ್ತು ಮಾಯಾವತಿಯ ಸೂಚನೆಗಳನ್ನು ಮಾತ್ರ ಅನುಸರಿಸುತ್ತೇನೆ ಎಂದು ಖಚಿತಪಡಿಸಿಕೊಳ್ಳುತ್ತೇನೆ…. ಪಕ್ಷದ ಹಿರಿಯರು ಮತ್ತು ಹಳೆಯ ನಾಯಕರರನ್ನು ನಾನು ಗೌರವಿಸುತ್ತೇನೆ,” ಎಂದು ಅವರು ಹೇಳಿದ್ದಾರೆ.

ಆಕಾಶ್ ಅವರು ಮಾಯಾವತಿಯವರನ್ನು ಕ್ಷಮಿಸುವಂತೆ ಮತ್ತು ಬಿಎಎಸ್‌ಪಿಗಾಗಿ ಕೆಲಸ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಇಂತಹ ಅವಕಾಶ ನೀಡಿದರೆ ತಾನು ‘ಎಂದೆಂದಿಗೂ’ ಅವರಿಗೆ ‘ಋಣಿಯಾಗಿ’ ಇರುವುದಾಗಿ ಹೇಳಿದ್ದಾರೆ.

ಆಕಾಶ್ ಕ್ಷಮೆಯಾಚಿಸಿದ ಕೆಲವು ಗಂಟೆಗಳ ನಂತರ, ಮಾಯಾವತಿ ತಮ್ಮ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಿಕೆಯನ್ನು ಪೋಸ್ಟ್ ಮಾಡಿ, “ಆಕಾಶ್ ಸಾರ್ವಜನಿಕ ಕ್ಷಮೆಯಾಚಿಸಿದ್ದು ಮತ್ತು ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಜೊತೆಗೆ ಬಿಎಸ್‌ಪಿಯಿಂದ ಹೊರಹಾಕಲ್ಪಟ್ಟ ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರ ಸಲಹೆಗಳನ್ನು ಪಾಲಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಆದ್ದರಿಂದ ಅವರಿಗೆ ‘ಇನ್ನೊಂದು ಅವಕಾಶ’ ನೀಡಲು ನಿರ್ಧರಿಸಿದ್ದೇನೆ” ಎಂದು ಹೇಳಿದರು.

ತಾವು ಆರೋಗ್ಯವಾಗಿರುವವರೆಗೆ ಯಾರನ್ನೂ ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸುವುದಿಲ್ಲ ಎಂದು ಮಾಯಾವತಿ ಅವರು ಸ್ಪಷ್ಟಪಡಿಸಿದ್ದಾರೆ.

ಮಾಯಾವತಿ ಅವರು ಕಳೆದ ತಿಂಗಳು ಆಕಾಶ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ವಜಾಗೊಳಿಸಿದ್ದರು. ಒಂದು ವರ್ಷದಲ್ಲಿ ಎರಡನೇ ಬಾರಿಗೆ ಆಕಾಶ್ ಆನಂದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಕಳೆದ ವರ್ಷವೂ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ವಜಾಗೊಳಿಸಲಾಯಿತು, ಕೆಲವು ತಿಂಗಳ ನಂತರ ಅವರನ್ನು ಮತ್ತೆ ನೇಮಿಸಲಾಯಿತು.

ನಂತರ ಅವರು ತಾನು ಜೀವಂತವಾಗಿರುವವರೆಗೆ ಯಾರನ್ನೂ ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಲಾಗುವುದಿಲ್ಲ ಎಂದು ಹೇಳಿದ್ದರು. ಪಕ್ಷದ ನಾಯಕರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ನಾನು ಬದುಕಿರುವವರೆಗೂ ಉತ್ತರಾಧಿಕಾರಿಯನ್ನು ಘೋಷಿಸಬಾರದು ಎಂದು ನಾನು ನಿರ್ಧರಿಸಿದ್ದೇನೆ…. ಪಕ್ಷದ ಹಿತಾಸಕ್ತಿಗಳಿಗಿಂತ ಸಂಬಂಧಗಳು, ಕುಟುಂಬ ಮುಖ್ಯವಲ್ಲ….. ನನಗೆ ಪಕ್ಷ ಮೊದಲು” ಎಂದು ಅವರು ಹೇಳಿದ್ದರು. ಸೋದರಳಿಯ ಆಕಾಶ್‌ರನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...