Homeಮುಖಪುಟಸೋದರಳಿಯ ಆಕಾಶ್‌ರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಮಾಯಾವತಿ!

ಸೋದರಳಿಯ ಆಕಾಶ್‌ರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಮಾಯಾವತಿ!

- Advertisement -
- Advertisement -

‘ದುರಹಂಕಾರ’ ಮತ್ತು ‘ಸ್ವಾರ್ಥ’ದ ಕಾರಣಕ್ಕೆ ಪಕ್ಷದಿಂದ ಹೊರಹಾಕಲ್ಪಟ್ಟ ನಲವತ್ತೊಂದು ದಿನಗಳ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿರುವ ವಿದ್ಯಾಮಾನ ನಡೆದಿದೆ ಎಂದು ವರದಿಯಾಗಿದೆ. ಆಕಾಶ್ ಆನಂದ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಅವರಿಗೆ ‘ಇನ್ನೊಂದು ಅವಕಾಶ’ ನೀಡುತ್ತಿದ್ದೇನೆ. ಜೊತೆಗೆ ತಾನು ಆರೋಗ್ಯವಾಗಿರುವವರೆಗೆ ಯಾರನ್ನೂ ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಸೋದರಳಿಯ ಆಕಾಶ್‌ರನ್ನು

‘ಎಕ್ಸ್’ನಲ್ಲಿ ಆಕಾಶ್ ಅವರು ಕ್ಷಮೆಯಾಚಿಸಿದ ನಂತರ ಮಾಯಾವತಿಯವರ ಮನಸ್ಸು ಬದಲಾಗಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ತಮ್ಮ ಏಕೈಕ ‘ರಾಜಕೀಯ ಗುರು’ ಮತ್ತು ‘ಆದರ್ಶ’ ಎಂದು ಮಾಯಾವತಿಯವರನ್ನು ಪರಿಗಣಿಸಿರುವ ಆಕಾಶ್, ಅವರೊಂದಿಗೆ ಕ್ಷಮೆಯಾಚಿಸಿದ್ದಾಗಿ ಹೇಳಿದ್ದಾರೆ.

”ಸಂಬಂಧಿಕರು ಮತ್ತು ಸಲಹೆಗಾರರಿಂದ ಅವರ ರಾಜಕೀಯ ನಿರ್ಧಾರಗಳಿಗಾಗಿ ನಾನು ಎಂದಿಗೂ ಯಾವುದೇ ಸಲಹೆಯನ್ನು ತೆಗೆದುಕೊಳ್ಳುವುದಿಲ್ಲ ಮತ್ತು ಮಾಯಾವತಿಯ ಸೂಚನೆಗಳನ್ನು ಮಾತ್ರ ಅನುಸರಿಸುತ್ತೇನೆ ಎಂದು ಖಚಿತಪಡಿಸಿಕೊಳ್ಳುತ್ತೇನೆ…. ಪಕ್ಷದ ಹಿರಿಯರು ಮತ್ತು ಹಳೆಯ ನಾಯಕರರನ್ನು ನಾನು ಗೌರವಿಸುತ್ತೇನೆ,” ಎಂದು ಅವರು ಹೇಳಿದ್ದಾರೆ.

ಆಕಾಶ್ ಅವರು ಮಾಯಾವತಿಯವರನ್ನು ಕ್ಷಮಿಸುವಂತೆ ಮತ್ತು ಬಿಎಎಸ್‌ಪಿಗಾಗಿ ಕೆಲಸ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಇಂತಹ ಅವಕಾಶ ನೀಡಿದರೆ ತಾನು ‘ಎಂದೆಂದಿಗೂ’ ಅವರಿಗೆ ‘ಋಣಿಯಾಗಿ’ ಇರುವುದಾಗಿ ಹೇಳಿದ್ದಾರೆ.

ಆಕಾಶ್ ಕ್ಷಮೆಯಾಚಿಸಿದ ಕೆಲವು ಗಂಟೆಗಳ ನಂತರ, ಮಾಯಾವತಿ ತಮ್ಮ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಿಕೆಯನ್ನು ಪೋಸ್ಟ್ ಮಾಡಿ, “ಆಕಾಶ್ ಸಾರ್ವಜನಿಕ ಕ್ಷಮೆಯಾಚಿಸಿದ್ದು ಮತ್ತು ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಜೊತೆಗೆ ಬಿಎಸ್‌ಪಿಯಿಂದ ಹೊರಹಾಕಲ್ಪಟ್ಟ ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರ ಸಲಹೆಗಳನ್ನು ಪಾಲಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಆದ್ದರಿಂದ ಅವರಿಗೆ ‘ಇನ್ನೊಂದು ಅವಕಾಶ’ ನೀಡಲು ನಿರ್ಧರಿಸಿದ್ದೇನೆ” ಎಂದು ಹೇಳಿದರು.

ತಾವು ಆರೋಗ್ಯವಾಗಿರುವವರೆಗೆ ಯಾರನ್ನೂ ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸುವುದಿಲ್ಲ ಎಂದು ಮಾಯಾವತಿ ಅವರು ಸ್ಪಷ್ಟಪಡಿಸಿದ್ದಾರೆ.

ಮಾಯಾವತಿ ಅವರು ಕಳೆದ ತಿಂಗಳು ಆಕಾಶ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ವಜಾಗೊಳಿಸಿದ್ದರು. ಒಂದು ವರ್ಷದಲ್ಲಿ ಎರಡನೇ ಬಾರಿಗೆ ಆಕಾಶ್ ಆನಂದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಕಳೆದ ವರ್ಷವೂ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ವಜಾಗೊಳಿಸಲಾಯಿತು, ಕೆಲವು ತಿಂಗಳ ನಂತರ ಅವರನ್ನು ಮತ್ತೆ ನೇಮಿಸಲಾಯಿತು.

ನಂತರ ಅವರು ತಾನು ಜೀವಂತವಾಗಿರುವವರೆಗೆ ಯಾರನ್ನೂ ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಲಾಗುವುದಿಲ್ಲ ಎಂದು ಹೇಳಿದ್ದರು. ಪಕ್ಷದ ನಾಯಕರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ನಾನು ಬದುಕಿರುವವರೆಗೂ ಉತ್ತರಾಧಿಕಾರಿಯನ್ನು ಘೋಷಿಸಬಾರದು ಎಂದು ನಾನು ನಿರ್ಧರಿಸಿದ್ದೇನೆ…. ಪಕ್ಷದ ಹಿತಾಸಕ್ತಿಗಳಿಗಿಂತ ಸಂಬಂಧಗಳು, ಕುಟುಂಬ ಮುಖ್ಯವಲ್ಲ….. ನನಗೆ ಪಕ್ಷ ಮೊದಲು” ಎಂದು ಅವರು ಹೇಳಿದ್ದರು. ಸೋದರಳಿಯ ಆಕಾಶ್‌ರನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...