Homeಮುಖಪುಟಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

- Advertisement -
- Advertisement -

ಬಹುತೇಕರಿಗೆ ನೆನಪಿದೆ. ತೊಂಬತ್ತರ ದಶಕದ ಮಧ್ಯಭಾಗದಲ್ಲಿ, ಅಂದರೆ 1995ರಲ್ಲಿ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ರಂಗೀಲಾ’ ಚಿತ್ರ ಹೊರಬಂತು. 90ರ ದಶಕದ ಹಿಂದಿ ಚಿತ್ರರಂಗದ ಅಷ್ಟೇನು ಆಪ್ತವಲ್ಲದ ಸಿನಿ ಸಂಗೀತಕ್ಕೆ ಹೊಸ ಹುರುಪು ಬಂದಿತ್ತು. ಮೂವತ್ತು ವರ್ಷದ ಎ ಆರ್ ರೆಹಮಾನ್ ಸಿನಿ ಸಂಗೀತದ ಹೊಸ ರುಚಿಯನ್ನು ಉಣಿಸಿದರು. ಅಷ್ಟು ಹೊತ್ತಿಗೆ ದಕ್ಷಿಣ ಭಾರತದಲ್ಲಿ ಹದಿನೆಂಟು ಚಿತ್ರಗಳಿಗೆ ಸಂಗೀತ ನೀಡಿ ತಮ್ಮ ಛಾಪು ಒತ್ತಿದ್ದರು.

ದಕ್ಷಿಣದವರೇ ಆದ ವರ್ಮಾ ರೆಹಮಾನ್‍ರನ್ನು ಹಿಂದಿ ಚಿತ್ರರಂಗಕ್ಕೆ ಪರಿಚಯಿಸಿದ್ದು, ಬಾಲಿವುಡ್ ಸಿನಿ ಸಂಗೀತದ ಸ್ವರೂಪವನ್ನೇ ಬದಲಿಸಿತು.

ಅದು ಪಂಜಾಬಿ ಹಿನ್ನೆಲೆಯ ‘ರಂಗ್‍ದೇ ಬಸಂತಿ’ ಇರಲಿ, ಸೂಫಿ ಸಂಗೀತ ಅನುಭವ ನೀಡುವ ‘ಜೋಧಾ ಅಕ್ಬರ್’ ಇರಲಿ, ಪಾಶ್ಚಾತ್ಯ ಸ್ಪರ್ಶವಿರುವ ‘ಯುವ್‍ರಾಜ್’ ಇರಲಿ, ಹೀಗೆ ಪಟ್ಟಿ ಮಾಡುತ್ತಲೇ ಹೋಗಬಹುದು. ಅಂತಹ ವೈವಿಧ್ಯಮಯವಾದ ಸಂಗೀತ ನೀಡಿದ ಪ್ರತಿಭಾವಂತ ರೆಹಮಾನ್.

ಯಾಕೆ ಇಷ್ಟೆಲ್ಲಾ ನೆನಪಿಸಿಕೊಳ್ಳಬೇಕಾಯಿತು ಎಂದರೆ, ಯಾವ ಜನ ಈತನನ್ನು ಕೊಂಡಾಡಿದ್ದರೊ, ಅವರೇ ಗುಂಪುಗಾರಿಕೆ, ಸ್ವಜನಪಕ್ಷಪಾತ ಮಾಡುವ ಮೂಲಕ ತಮ್ಮನ್ನು ಅವಕಾಶಗಳಿಂದ ದೂರ ಮಾಡುತ್ತಿದ್ದಾರೆ ಎಂದು ಈಗ ಸ್ವತಃ ರೆಹಮಾನ್ ಹೇಳಿದ್ದಾರೆ. ಅವರು ‘ಗ್ಯಾಂಗ್’ ಎನ್ನುವ ಪದವನ್ನು ಬಳಸಿದ್ದಾರೆ. ಅಂದರೆ ಒಂದು ಗುಂಪು ವ್ಯವಸ್ಥಿತವಾಗಿ ಯಾರನ್ನು ಬೆಳೆಸಬೇಕು, ಯಾರನ್ನು ತುಳಿಯಬೇಕು ಎಂಬುದನ್ನು ನಿರ್ಧರಿಸುತ್ತದೆ ಎಂಬುದನ್ನು ಸೂಚಿಸಿದ್ದಾರೆ.

ನಿಜ, ಯಾವುದೇ ಸೃಜನಶೀಲ ವ್ಯಕ್ತಿಯ ಸೃಜನಶಕ್ತಿ ಒಂದು ಕಾಲದ ನಂತರ ಆಕರ್ಷಣೆ ಕಳೆದುಕೊಳ್ಳುತ್ತದೆ. ಆದರೆ ರೆಹಮಾನ್ ಇತರೆ ಭಾಷೆಯ ಸಿನಿಮಾಗಳಿಗೆ ನೀಡುವ ಸಂಗೀತದಲ್ಲಿ ಇನ್ನೂ ಅದೇ ಮೋಡಿ ಉಳಿದಿದೆ. ಆದರೂ ಹಿಂದಿ ಚಿತ್ರರಂಗ ಅವರನ್ನು ದೂರವಿಟ್ಟಿದ್ದು ಏಕೆ?

ರೆಹಮಾನ್ ಸಾರ್ವಜನಿಕವಾಗಿ ಬಾಲಿವುಡ್‍ನ ಪಕ್ಷಪಾತವನ್ನು, ಗುಂಪುಗಾರಿಕೆಯ ಬಗ್ಗೆ ತಮ್ಮ ಅಸಮಾಧಾನ, ಬೇಸರವನ್ನು ಹೊರಹಾಕುವುದಕ್ಕೂ ಎರಡು ದಿನಗಳ ಮೊದಲು ಹಿಂದಿನ ಪ್ರಸಿದ್ಧ ನಿರ್ದೇಶಕರುಗಳಾದ ಅನುಭವ ಸಿನ್ಹಾ, ಹನ್ಸಲ್ ಮೆಹ್ತಾ ಮತ್ತು ಸುಧೀರ್ ಶರ್ಮಾ, ಇನ್ನು ಬಾಲಿವುಡ್‍ನಿಂದ ಹೊರನಡೆಯುವುದಾಗಿ ಹೇಳಿಕೆಯನ್ನು ಕೊಟ್ಟಿದ್ದಾರೆ. ಇದು ಬಾಲಿವುಡ್ ಪಾಲಿಗೆ ಒಂದು ಆಘಾತ!

ತೊಂಬತ್ತರ ದಶಕದಲ್ಲಿ ಎರಡನೆಯ ದರ್ಜೆಯ ಸಿನಿಮಾಗಳೇ ಸದ್ದು ಮಾಡುತ್ತಿದ್ದಾಗ, ಹೊಸ ಅಲೆಯ ಸಿನಿಮಾ ಮತ್ತು ಸಂಗೀತ ಎರಡೂ ನಿಧಾನವಾಗಿ ತನ್ನ ಛಾಪು ಒತ್ತಿತು. ಇದು 2000ದಲ್ಲೂ ಮುಂದುವರೆದು ಹಿಂದಿ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆದವು.

ಖಾನ್, ಕಪೂರ್ ಸೇರಿದಂತೆ ಕೆಲವೇ ಕುಟುಂಬಗಳು ಹಿಂದಿ ಚಿತ್ರರಂಗವನ್ನು ನಿಯಂತ್ರಿಸುತ್ತಿದ್ದವು. ಆದರೆ ಕಾಲ ಸರಿದಂತೆ ಯಾವುದೇ ನಟನೆಯ ಹಿನ್ನೆಲೆಯಿಲ್ಲದ, ಸಿನಿಮಾ ಕುಟುಂಬದವರಲ್ಲದ ಪ್ರತಿಭೆಗಳು ನಟನೆ, ನಿರ್ದೇಶನ, ಸಂಗೀತ ನಿರ್ದೇಶನದ ಕನಸುಗಳನ್ನು ಹೊತ್ತು ಬಾಲಿವುಡ್ ಅಂಗಳಕ್ಕೆ ಬಂದರು. ವರ್ಷಗಟ್ಟಲೆ ಕಷ್ಟಪಟ್ಟು ತಮ್ಮದೇ ಆದ ವರ್ಚಸ್ಸು ರೂಪಿಸಿಕೊಳ್ಳಲು ಶ್ರಮಿಸಿದರು.

ಈ ಲೇಖನ ಬರೆಯುವ ಹೊತ್ತಿಗೆ ‘ಗ್ಯಾಂಗ್’ವೊಂದರ ಸ್ವಜನ ಪಕ್ಷಪಾತ ಅವರ ವೃತ್ತಿಜೀವನಕ್ಕೆ ಎಷ್ಟು ತೊಂದರೆ ಕೊಟ್ಟಿತು ಎಂಬುದನ್ನು ನಟ ರಣವೀರ್ ಶೊರೆ ವಿವರಿಸಿದ್ದಾರೆ. ಮಹೇಶ್ ಕುಟುಂಬದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ಶೋರೆ, ತಮ್ಮ ವಿರುದ್ಧ ಹರಡಲಾದ ಗಾಳಿಸುದ್ದಿ, ಸುಳ್ಳುಗಳಿಂದ ಮುಕ್ತವಾಗಿ ನಟನಾಗಿ ಬೆಳೆಯುವುದಕ್ಕೆ ಉಂಟಾದ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಮತ್ತೊಬ್ಬ ನಟ ಆಯುಷ್‌ಮಾನ್ ಖೊರನಾ, ಬಾಲಿವುಡ್‍ನಲ್ಲಿ ಸ್ವಜನ ಪಕ್ಷಪಾತವಿಲ್ಲದೇ ಹೋಗಿದ್ದರೆ ಐದು ವರ್ಷದ ಮೊದಲೇ ನಾನು ನಾಯಕ ನಟನಾಗುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ನಟ ಸುಶಾಂತ್ ರಾಜಪೂತ್ ಸಾವು ಹಲವರನ್ನು ಕಂಗೆಡಿಸಿದೆ. ಸಾಮಾನ್ಯ ಕುಟುಂಬದಿಂದ ಬಂದ ಸುಶಾಂತ್ ಸಿಂಗ್ ಒಳ್ಳೆಯ ನಟನಾಗಿ ಬೆಳೆಯುವುದನ್ನು ಸಹಿಸಿದ ಬಾಲಿವುಡ್‍ನ ಕೆಲವು ಹಿರಿಯರು ಆತನಿಗೆ ಅವಕಾಶ ಕೊಡದೇ ಇದ್ದ ಸುದ್ದಿಗಳು ನಿಧಾನವಾಗಿ ಹೊರಗೆ ಬರಲಾರಂಭಿಸಿದ ಕೂಡಲೇ ಅನೇಕರು ಬಾಲಿವುಡ್‍ನ ಒಳಗಿನ ಹೊಲಸನ್ನು ಬಿಚ್ಚಿಡಲಾರಂಭಿಸಿದ್ದಾರೆ.

ಈ ಬಾಲಿವುಡ್ ಒಂದು ಕಾಲದಲ್ಲಿ ಹಾಜಿ ಮಸ್ತಾನ್, ದಾವೂದ್ ಇಬ್ರಾಹಿಂ ಹಿಡಿತದಲ್ಲಿತ್ತು. ಅನಿಲ್ ಕಪೂರ್, ಸಲ್ಮಾನ್ ಖಾನ್, ಸುನಿಲ್ ದತ್, ಮಂದಾಕಿನಿ ಹೀಗೆ ಎಷ್ಟೊಂದು ನಟನಟಿಯರು ಭೂಗತ ದೊರೆಗಳ ಸಂಪರ್ಕದಲ್ಲಿ ಇದ್ದದ್ದು, ಸಿನಿಮಾ ನಿರ್ಮಾಣ, ನಟ-ನಟಿಯರ ಆಯ್ಕೆ ಎಲ್ಲದರಲ್ಲೂ ಈ ಭೂಗತ ಪಾತಕಿಗಳ ಕೈವಾಡ ಇದ್ದ ವಿಷಯಗಳೆಲ್ಲವೂ ತಿಳಿದದ್ದೆ. ಆದರೆ ಬಾಲಿವುಡ್‍ನ ಬೆರಳೆಣಿಕೆಯ ಚಿತ್ರ ನಿರ್ಮಾಣ ಸಂಸ್ಥೆಗಳು ಬಲಿಷ್ಠವಾದ ಮೇಲೆ, ಅವು ಬಾಲಿವುಡ್‍ನ ಪಾರುಪತ್ಯ ನಡೆಸುತ್ತಿವೆ ಎಂಬ ದೂರುಗಳು ಈಗ ಬಯಲಾಗುತ್ತಿವೆ.

ಧರ್ಮ ಪ್ರೊಡಕ್ಷನ್ಸ್‌ನ ಕರಣ್ ಜೋಹರ್ ಈಗ ನೆಪೊಟಿಸಂ ಆರೋಪಕ್ಕೆ ತೀವ್ರವಾಗಿ ಗುರಿಯಾಗಿರುವ ನಿರ್ಮಾಪಕ. ಸೂಪರ್ ಸ್ಟಾರ್ ಗಳನ್ನೇ ತಾರಾಗಣಕ್ಕೆ ಬಳಸಿ ಕೆಟ್ಟ ಸಿನಿಮಾಗಳನ್ನು ನಿರ್ಮಿಸಿಯೂ ಮಾರುಕಟ್ಟೆಯಲ್ಲಿ ಬದುಕುಳಿಯುವ ಯಶ್ ರಾಜ್ ಫಿಲ್ಮ್ಸ್ ವಿರುದ್ಧ ಅಂತಹ ದೂರುಗಳಿವೆ.

ಪ್ರೊಡಕ್ಷನ್ ಹೌಸ್‍ಗಳಷ್ಟೇ ಅಲ್ಲ, ಚಿತ್ರರಂಗದ ಹಿರಿತಲೆಗಳು ಕೂಡ ಉತ್ಸಾಹಿಗಳನ್ನು ಹತ್ತಿಕ್ಕಿದ್ದಾರೆ. ಮಹೇಶ್ ಭಟ್‍ರಂತಹ ನಿರ್ದೇಶಕರ ಮೇಲೆ ಇಂತಹ ಆರೋಪಗಳಿವೆ.

ಗುಜರಾತ್‍ನ ಗೋಧ್ರಾ ಪ್ರಕರಣದ ನಂತರ ರಾಜಕೀಯದ ಪ್ರಭಾವವೂ ತೀವ್ರವಾಗಿದ್ದು, ಚಿತ್ರರಂಗದ ಅನೇಕ ನಟ, ನಿರ್ದೇಶಕರಿಗೆ ತಮ್ಮ ವೃತ್ತಿ ಮುಂದುವರೆಸುವ ಸವಾಲು ಕೂಡ ಕಾಡಿದೆ. ಸದ್ಯ ಬಾಲಿವುಡ್‍ಗೆ ಗುಡ್ ಬೈ ಹೇಳಿದ ಮೂವರು ನಿರ್ದೇಶಕರು, ಭಯೋತ್ಪಾದನೆ, ಜಾತಿ ವ್ಯವಸ್ಥೆ, ಭ್ರಷ್ಟ ರಾಜಕಾರಣ, ಕೋಮು ರಾಜಕಾರಣಗಳನ್ನು ಬಲವಾಗಿ ಖಂಡಿಸಿ ಚಿತ್ರಗಳನ್ನು ನಿರ್ಮಿಸಿದ್ದವರು.

ಕಾಲಕಾಲಕ್ಕೆ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವುದಕ್ಕೆ ಎಲ್ಲ ರೀತಿಯ ಪಟ್ಟುಗಳನ್ನು ಹಾಕುತ್ತಾ ಬಂದ ಹಿಂದಿ ಚಿತ್ರರಂಗದ ಕೆಲವು ಪ್ರಭಾವಿಗಳು ನಿಧಾನವಾಗಿ ಕಥೆ, ಪ್ರತಿಭೆ, ಸೃಜನಶೀಲತೆಗೆ ಒತ್ತುಕೊಡದೆ, ಅಸ್ತಿತ್ವ, ಹಿತಾಸಕ್ತಿಗಳಿಗೆ ಒತ್ತುನೀಡುತ್ತಾ, ಪ್ರತಿಭಾವಂತರನ್ನು ಮತ್ತು ಚಿತ್ರ ನಿರ್ಮಾಣದ ನೈಜ ಸೃಜನಶೀಲ ಕ್ರಿಯೆಯನ್ನು ಕೊಲ್ಲಲಾರಂಭಿಸಿವೆ.

ಎಸ್ ಕುಮಾರ್


ಇದನ್ನು ಓದಿ: ಕರ್ನಾಟಕದ ಕರಿ ಚಿರತೆ; ಜಂಗಲ್ ಬುಕ್‌‌ ಸಿನಿಮಾದ ’ಬಘೀರಾ’ ಎಂದ ನೆಟ್ಟಿಗರು..!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...