Homeಮುಖಪುಟಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

- Advertisement -
- Advertisement -

ಬಹುತೇಕರಿಗೆ ನೆನಪಿದೆ. ತೊಂಬತ್ತರ ದಶಕದ ಮಧ್ಯಭಾಗದಲ್ಲಿ, ಅಂದರೆ 1995ರಲ್ಲಿ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ರಂಗೀಲಾ’ ಚಿತ್ರ ಹೊರಬಂತು. 90ರ ದಶಕದ ಹಿಂದಿ ಚಿತ್ರರಂಗದ ಅಷ್ಟೇನು ಆಪ್ತವಲ್ಲದ ಸಿನಿ ಸಂಗೀತಕ್ಕೆ ಹೊಸ ಹುರುಪು ಬಂದಿತ್ತು. ಮೂವತ್ತು ವರ್ಷದ ಎ ಆರ್ ರೆಹಮಾನ್ ಸಿನಿ ಸಂಗೀತದ ಹೊಸ ರುಚಿಯನ್ನು ಉಣಿಸಿದರು. ಅಷ್ಟು ಹೊತ್ತಿಗೆ ದಕ್ಷಿಣ ಭಾರತದಲ್ಲಿ ಹದಿನೆಂಟು ಚಿತ್ರಗಳಿಗೆ ಸಂಗೀತ ನೀಡಿ ತಮ್ಮ ಛಾಪು ಒತ್ತಿದ್ದರು.

ದಕ್ಷಿಣದವರೇ ಆದ ವರ್ಮಾ ರೆಹಮಾನ್‍ರನ್ನು ಹಿಂದಿ ಚಿತ್ರರಂಗಕ್ಕೆ ಪರಿಚಯಿಸಿದ್ದು, ಬಾಲಿವುಡ್ ಸಿನಿ ಸಂಗೀತದ ಸ್ವರೂಪವನ್ನೇ ಬದಲಿಸಿತು.

ಅದು ಪಂಜಾಬಿ ಹಿನ್ನೆಲೆಯ ‘ರಂಗ್‍ದೇ ಬಸಂತಿ’ ಇರಲಿ, ಸೂಫಿ ಸಂಗೀತ ಅನುಭವ ನೀಡುವ ‘ಜೋಧಾ ಅಕ್ಬರ್’ ಇರಲಿ, ಪಾಶ್ಚಾತ್ಯ ಸ್ಪರ್ಶವಿರುವ ‘ಯುವ್‍ರಾಜ್’ ಇರಲಿ, ಹೀಗೆ ಪಟ್ಟಿ ಮಾಡುತ್ತಲೇ ಹೋಗಬಹುದು. ಅಂತಹ ವೈವಿಧ್ಯಮಯವಾದ ಸಂಗೀತ ನೀಡಿದ ಪ್ರತಿಭಾವಂತ ರೆಹಮಾನ್.

ಯಾಕೆ ಇಷ್ಟೆಲ್ಲಾ ನೆನಪಿಸಿಕೊಳ್ಳಬೇಕಾಯಿತು ಎಂದರೆ, ಯಾವ ಜನ ಈತನನ್ನು ಕೊಂಡಾಡಿದ್ದರೊ, ಅವರೇ ಗುಂಪುಗಾರಿಕೆ, ಸ್ವಜನಪಕ್ಷಪಾತ ಮಾಡುವ ಮೂಲಕ ತಮ್ಮನ್ನು ಅವಕಾಶಗಳಿಂದ ದೂರ ಮಾಡುತ್ತಿದ್ದಾರೆ ಎಂದು ಈಗ ಸ್ವತಃ ರೆಹಮಾನ್ ಹೇಳಿದ್ದಾರೆ. ಅವರು ‘ಗ್ಯಾಂಗ್’ ಎನ್ನುವ ಪದವನ್ನು ಬಳಸಿದ್ದಾರೆ. ಅಂದರೆ ಒಂದು ಗುಂಪು ವ್ಯವಸ್ಥಿತವಾಗಿ ಯಾರನ್ನು ಬೆಳೆಸಬೇಕು, ಯಾರನ್ನು ತುಳಿಯಬೇಕು ಎಂಬುದನ್ನು ನಿರ್ಧರಿಸುತ್ತದೆ ಎಂಬುದನ್ನು ಸೂಚಿಸಿದ್ದಾರೆ.

ನಿಜ, ಯಾವುದೇ ಸೃಜನಶೀಲ ವ್ಯಕ್ತಿಯ ಸೃಜನಶಕ್ತಿ ಒಂದು ಕಾಲದ ನಂತರ ಆಕರ್ಷಣೆ ಕಳೆದುಕೊಳ್ಳುತ್ತದೆ. ಆದರೆ ರೆಹಮಾನ್ ಇತರೆ ಭಾಷೆಯ ಸಿನಿಮಾಗಳಿಗೆ ನೀಡುವ ಸಂಗೀತದಲ್ಲಿ ಇನ್ನೂ ಅದೇ ಮೋಡಿ ಉಳಿದಿದೆ. ಆದರೂ ಹಿಂದಿ ಚಿತ್ರರಂಗ ಅವರನ್ನು ದೂರವಿಟ್ಟಿದ್ದು ಏಕೆ?

ರೆಹಮಾನ್ ಸಾರ್ವಜನಿಕವಾಗಿ ಬಾಲಿವುಡ್‍ನ ಪಕ್ಷಪಾತವನ್ನು, ಗುಂಪುಗಾರಿಕೆಯ ಬಗ್ಗೆ ತಮ್ಮ ಅಸಮಾಧಾನ, ಬೇಸರವನ್ನು ಹೊರಹಾಕುವುದಕ್ಕೂ ಎರಡು ದಿನಗಳ ಮೊದಲು ಹಿಂದಿನ ಪ್ರಸಿದ್ಧ ನಿರ್ದೇಶಕರುಗಳಾದ ಅನುಭವ ಸಿನ್ಹಾ, ಹನ್ಸಲ್ ಮೆಹ್ತಾ ಮತ್ತು ಸುಧೀರ್ ಶರ್ಮಾ, ಇನ್ನು ಬಾಲಿವುಡ್‍ನಿಂದ ಹೊರನಡೆಯುವುದಾಗಿ ಹೇಳಿಕೆಯನ್ನು ಕೊಟ್ಟಿದ್ದಾರೆ. ಇದು ಬಾಲಿವುಡ್ ಪಾಲಿಗೆ ಒಂದು ಆಘಾತ!

ತೊಂಬತ್ತರ ದಶಕದಲ್ಲಿ ಎರಡನೆಯ ದರ್ಜೆಯ ಸಿನಿಮಾಗಳೇ ಸದ್ದು ಮಾಡುತ್ತಿದ್ದಾಗ, ಹೊಸ ಅಲೆಯ ಸಿನಿಮಾ ಮತ್ತು ಸಂಗೀತ ಎರಡೂ ನಿಧಾನವಾಗಿ ತನ್ನ ಛಾಪು ಒತ್ತಿತು. ಇದು 2000ದಲ್ಲೂ ಮುಂದುವರೆದು ಹಿಂದಿ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆದವು.

ಖಾನ್, ಕಪೂರ್ ಸೇರಿದಂತೆ ಕೆಲವೇ ಕುಟುಂಬಗಳು ಹಿಂದಿ ಚಿತ್ರರಂಗವನ್ನು ನಿಯಂತ್ರಿಸುತ್ತಿದ್ದವು. ಆದರೆ ಕಾಲ ಸರಿದಂತೆ ಯಾವುದೇ ನಟನೆಯ ಹಿನ್ನೆಲೆಯಿಲ್ಲದ, ಸಿನಿಮಾ ಕುಟುಂಬದವರಲ್ಲದ ಪ್ರತಿಭೆಗಳು ನಟನೆ, ನಿರ್ದೇಶನ, ಸಂಗೀತ ನಿರ್ದೇಶನದ ಕನಸುಗಳನ್ನು ಹೊತ್ತು ಬಾಲಿವುಡ್ ಅಂಗಳಕ್ಕೆ ಬಂದರು. ವರ್ಷಗಟ್ಟಲೆ ಕಷ್ಟಪಟ್ಟು ತಮ್ಮದೇ ಆದ ವರ್ಚಸ್ಸು ರೂಪಿಸಿಕೊಳ್ಳಲು ಶ್ರಮಿಸಿದರು.

ಈ ಲೇಖನ ಬರೆಯುವ ಹೊತ್ತಿಗೆ ‘ಗ್ಯಾಂಗ್’ವೊಂದರ ಸ್ವಜನ ಪಕ್ಷಪಾತ ಅವರ ವೃತ್ತಿಜೀವನಕ್ಕೆ ಎಷ್ಟು ತೊಂದರೆ ಕೊಟ್ಟಿತು ಎಂಬುದನ್ನು ನಟ ರಣವೀರ್ ಶೊರೆ ವಿವರಿಸಿದ್ದಾರೆ. ಮಹೇಶ್ ಕುಟುಂಬದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ಶೋರೆ, ತಮ್ಮ ವಿರುದ್ಧ ಹರಡಲಾದ ಗಾಳಿಸುದ್ದಿ, ಸುಳ್ಳುಗಳಿಂದ ಮುಕ್ತವಾಗಿ ನಟನಾಗಿ ಬೆಳೆಯುವುದಕ್ಕೆ ಉಂಟಾದ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಮತ್ತೊಬ್ಬ ನಟ ಆಯುಷ್‌ಮಾನ್ ಖೊರನಾ, ಬಾಲಿವುಡ್‍ನಲ್ಲಿ ಸ್ವಜನ ಪಕ್ಷಪಾತವಿಲ್ಲದೇ ಹೋಗಿದ್ದರೆ ಐದು ವರ್ಷದ ಮೊದಲೇ ನಾನು ನಾಯಕ ನಟನಾಗುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ನಟ ಸುಶಾಂತ್ ರಾಜಪೂತ್ ಸಾವು ಹಲವರನ್ನು ಕಂಗೆಡಿಸಿದೆ. ಸಾಮಾನ್ಯ ಕುಟುಂಬದಿಂದ ಬಂದ ಸುಶಾಂತ್ ಸಿಂಗ್ ಒಳ್ಳೆಯ ನಟನಾಗಿ ಬೆಳೆಯುವುದನ್ನು ಸಹಿಸಿದ ಬಾಲಿವುಡ್‍ನ ಕೆಲವು ಹಿರಿಯರು ಆತನಿಗೆ ಅವಕಾಶ ಕೊಡದೇ ಇದ್ದ ಸುದ್ದಿಗಳು ನಿಧಾನವಾಗಿ ಹೊರಗೆ ಬರಲಾರಂಭಿಸಿದ ಕೂಡಲೇ ಅನೇಕರು ಬಾಲಿವುಡ್‍ನ ಒಳಗಿನ ಹೊಲಸನ್ನು ಬಿಚ್ಚಿಡಲಾರಂಭಿಸಿದ್ದಾರೆ.

ಈ ಬಾಲಿವುಡ್ ಒಂದು ಕಾಲದಲ್ಲಿ ಹಾಜಿ ಮಸ್ತಾನ್, ದಾವೂದ್ ಇಬ್ರಾಹಿಂ ಹಿಡಿತದಲ್ಲಿತ್ತು. ಅನಿಲ್ ಕಪೂರ್, ಸಲ್ಮಾನ್ ಖಾನ್, ಸುನಿಲ್ ದತ್, ಮಂದಾಕಿನಿ ಹೀಗೆ ಎಷ್ಟೊಂದು ನಟನಟಿಯರು ಭೂಗತ ದೊರೆಗಳ ಸಂಪರ್ಕದಲ್ಲಿ ಇದ್ದದ್ದು, ಸಿನಿಮಾ ನಿರ್ಮಾಣ, ನಟ-ನಟಿಯರ ಆಯ್ಕೆ ಎಲ್ಲದರಲ್ಲೂ ಈ ಭೂಗತ ಪಾತಕಿಗಳ ಕೈವಾಡ ಇದ್ದ ವಿಷಯಗಳೆಲ್ಲವೂ ತಿಳಿದದ್ದೆ. ಆದರೆ ಬಾಲಿವುಡ್‍ನ ಬೆರಳೆಣಿಕೆಯ ಚಿತ್ರ ನಿರ್ಮಾಣ ಸಂಸ್ಥೆಗಳು ಬಲಿಷ್ಠವಾದ ಮೇಲೆ, ಅವು ಬಾಲಿವುಡ್‍ನ ಪಾರುಪತ್ಯ ನಡೆಸುತ್ತಿವೆ ಎಂಬ ದೂರುಗಳು ಈಗ ಬಯಲಾಗುತ್ತಿವೆ.

ಧರ್ಮ ಪ್ರೊಡಕ್ಷನ್ಸ್‌ನ ಕರಣ್ ಜೋಹರ್ ಈಗ ನೆಪೊಟಿಸಂ ಆರೋಪಕ್ಕೆ ತೀವ್ರವಾಗಿ ಗುರಿಯಾಗಿರುವ ನಿರ್ಮಾಪಕ. ಸೂಪರ್ ಸ್ಟಾರ್ ಗಳನ್ನೇ ತಾರಾಗಣಕ್ಕೆ ಬಳಸಿ ಕೆಟ್ಟ ಸಿನಿಮಾಗಳನ್ನು ನಿರ್ಮಿಸಿಯೂ ಮಾರುಕಟ್ಟೆಯಲ್ಲಿ ಬದುಕುಳಿಯುವ ಯಶ್ ರಾಜ್ ಫಿಲ್ಮ್ಸ್ ವಿರುದ್ಧ ಅಂತಹ ದೂರುಗಳಿವೆ.

ಪ್ರೊಡಕ್ಷನ್ ಹೌಸ್‍ಗಳಷ್ಟೇ ಅಲ್ಲ, ಚಿತ್ರರಂಗದ ಹಿರಿತಲೆಗಳು ಕೂಡ ಉತ್ಸಾಹಿಗಳನ್ನು ಹತ್ತಿಕ್ಕಿದ್ದಾರೆ. ಮಹೇಶ್ ಭಟ್‍ರಂತಹ ನಿರ್ದೇಶಕರ ಮೇಲೆ ಇಂತಹ ಆರೋಪಗಳಿವೆ.

ಗುಜರಾತ್‍ನ ಗೋಧ್ರಾ ಪ್ರಕರಣದ ನಂತರ ರಾಜಕೀಯದ ಪ್ರಭಾವವೂ ತೀವ್ರವಾಗಿದ್ದು, ಚಿತ್ರರಂಗದ ಅನೇಕ ನಟ, ನಿರ್ದೇಶಕರಿಗೆ ತಮ್ಮ ವೃತ್ತಿ ಮುಂದುವರೆಸುವ ಸವಾಲು ಕೂಡ ಕಾಡಿದೆ. ಸದ್ಯ ಬಾಲಿವುಡ್‍ಗೆ ಗುಡ್ ಬೈ ಹೇಳಿದ ಮೂವರು ನಿರ್ದೇಶಕರು, ಭಯೋತ್ಪಾದನೆ, ಜಾತಿ ವ್ಯವಸ್ಥೆ, ಭ್ರಷ್ಟ ರಾಜಕಾರಣ, ಕೋಮು ರಾಜಕಾರಣಗಳನ್ನು ಬಲವಾಗಿ ಖಂಡಿಸಿ ಚಿತ್ರಗಳನ್ನು ನಿರ್ಮಿಸಿದ್ದವರು.

ಕಾಲಕಾಲಕ್ಕೆ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವುದಕ್ಕೆ ಎಲ್ಲ ರೀತಿಯ ಪಟ್ಟುಗಳನ್ನು ಹಾಕುತ್ತಾ ಬಂದ ಹಿಂದಿ ಚಿತ್ರರಂಗದ ಕೆಲವು ಪ್ರಭಾವಿಗಳು ನಿಧಾನವಾಗಿ ಕಥೆ, ಪ್ರತಿಭೆ, ಸೃಜನಶೀಲತೆಗೆ ಒತ್ತುಕೊಡದೆ, ಅಸ್ತಿತ್ವ, ಹಿತಾಸಕ್ತಿಗಳಿಗೆ ಒತ್ತುನೀಡುತ್ತಾ, ಪ್ರತಿಭಾವಂತರನ್ನು ಮತ್ತು ಚಿತ್ರ ನಿರ್ಮಾಣದ ನೈಜ ಸೃಜನಶೀಲ ಕ್ರಿಯೆಯನ್ನು ಕೊಲ್ಲಲಾರಂಭಿಸಿವೆ.

ಎಸ್ ಕುಮಾರ್


ಇದನ್ನು ಓದಿ: ಕರ್ನಾಟಕದ ಕರಿ ಚಿರತೆ; ಜಂಗಲ್ ಬುಕ್‌‌ ಸಿನಿಮಾದ ’ಬಘೀರಾ’ ಎಂದ ನೆಟ್ಟಿಗರು..!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...