Homeಮುಖಪುಟಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

- Advertisement -
- Advertisement -

ಬಹುತೇಕರಿಗೆ ನೆನಪಿದೆ. ತೊಂಬತ್ತರ ದಶಕದ ಮಧ್ಯಭಾಗದಲ್ಲಿ, ಅಂದರೆ 1995ರಲ್ಲಿ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ರಂಗೀಲಾ’ ಚಿತ್ರ ಹೊರಬಂತು. 90ರ ದಶಕದ ಹಿಂದಿ ಚಿತ್ರರಂಗದ ಅಷ್ಟೇನು ಆಪ್ತವಲ್ಲದ ಸಿನಿ ಸಂಗೀತಕ್ಕೆ ಹೊಸ ಹುರುಪು ಬಂದಿತ್ತು. ಮೂವತ್ತು ವರ್ಷದ ಎ ಆರ್ ರೆಹಮಾನ್ ಸಿನಿ ಸಂಗೀತದ ಹೊಸ ರುಚಿಯನ್ನು ಉಣಿಸಿದರು. ಅಷ್ಟು ಹೊತ್ತಿಗೆ ದಕ್ಷಿಣ ಭಾರತದಲ್ಲಿ ಹದಿನೆಂಟು ಚಿತ್ರಗಳಿಗೆ ಸಂಗೀತ ನೀಡಿ ತಮ್ಮ ಛಾಪು ಒತ್ತಿದ್ದರು.

ದಕ್ಷಿಣದವರೇ ಆದ ವರ್ಮಾ ರೆಹಮಾನ್‍ರನ್ನು ಹಿಂದಿ ಚಿತ್ರರಂಗಕ್ಕೆ ಪರಿಚಯಿಸಿದ್ದು, ಬಾಲಿವುಡ್ ಸಿನಿ ಸಂಗೀತದ ಸ್ವರೂಪವನ್ನೇ ಬದಲಿಸಿತು.

ಅದು ಪಂಜಾಬಿ ಹಿನ್ನೆಲೆಯ ‘ರಂಗ್‍ದೇ ಬಸಂತಿ’ ಇರಲಿ, ಸೂಫಿ ಸಂಗೀತ ಅನುಭವ ನೀಡುವ ‘ಜೋಧಾ ಅಕ್ಬರ್’ ಇರಲಿ, ಪಾಶ್ಚಾತ್ಯ ಸ್ಪರ್ಶವಿರುವ ‘ಯುವ್‍ರಾಜ್’ ಇರಲಿ, ಹೀಗೆ ಪಟ್ಟಿ ಮಾಡುತ್ತಲೇ ಹೋಗಬಹುದು. ಅಂತಹ ವೈವಿಧ್ಯಮಯವಾದ ಸಂಗೀತ ನೀಡಿದ ಪ್ರತಿಭಾವಂತ ರೆಹಮಾನ್.

ಯಾಕೆ ಇಷ್ಟೆಲ್ಲಾ ನೆನಪಿಸಿಕೊಳ್ಳಬೇಕಾಯಿತು ಎಂದರೆ, ಯಾವ ಜನ ಈತನನ್ನು ಕೊಂಡಾಡಿದ್ದರೊ, ಅವರೇ ಗುಂಪುಗಾರಿಕೆ, ಸ್ವಜನಪಕ್ಷಪಾತ ಮಾಡುವ ಮೂಲಕ ತಮ್ಮನ್ನು ಅವಕಾಶಗಳಿಂದ ದೂರ ಮಾಡುತ್ತಿದ್ದಾರೆ ಎಂದು ಈಗ ಸ್ವತಃ ರೆಹಮಾನ್ ಹೇಳಿದ್ದಾರೆ. ಅವರು ‘ಗ್ಯಾಂಗ್’ ಎನ್ನುವ ಪದವನ್ನು ಬಳಸಿದ್ದಾರೆ. ಅಂದರೆ ಒಂದು ಗುಂಪು ವ್ಯವಸ್ಥಿತವಾಗಿ ಯಾರನ್ನು ಬೆಳೆಸಬೇಕು, ಯಾರನ್ನು ತುಳಿಯಬೇಕು ಎಂಬುದನ್ನು ನಿರ್ಧರಿಸುತ್ತದೆ ಎಂಬುದನ್ನು ಸೂಚಿಸಿದ್ದಾರೆ.

ನಿಜ, ಯಾವುದೇ ಸೃಜನಶೀಲ ವ್ಯಕ್ತಿಯ ಸೃಜನಶಕ್ತಿ ಒಂದು ಕಾಲದ ನಂತರ ಆಕರ್ಷಣೆ ಕಳೆದುಕೊಳ್ಳುತ್ತದೆ. ಆದರೆ ರೆಹಮಾನ್ ಇತರೆ ಭಾಷೆಯ ಸಿನಿಮಾಗಳಿಗೆ ನೀಡುವ ಸಂಗೀತದಲ್ಲಿ ಇನ್ನೂ ಅದೇ ಮೋಡಿ ಉಳಿದಿದೆ. ಆದರೂ ಹಿಂದಿ ಚಿತ್ರರಂಗ ಅವರನ್ನು ದೂರವಿಟ್ಟಿದ್ದು ಏಕೆ?

ರೆಹಮಾನ್ ಸಾರ್ವಜನಿಕವಾಗಿ ಬಾಲಿವುಡ್‍ನ ಪಕ್ಷಪಾತವನ್ನು, ಗುಂಪುಗಾರಿಕೆಯ ಬಗ್ಗೆ ತಮ್ಮ ಅಸಮಾಧಾನ, ಬೇಸರವನ್ನು ಹೊರಹಾಕುವುದಕ್ಕೂ ಎರಡು ದಿನಗಳ ಮೊದಲು ಹಿಂದಿನ ಪ್ರಸಿದ್ಧ ನಿರ್ದೇಶಕರುಗಳಾದ ಅನುಭವ ಸಿನ್ಹಾ, ಹನ್ಸಲ್ ಮೆಹ್ತಾ ಮತ್ತು ಸುಧೀರ್ ಶರ್ಮಾ, ಇನ್ನು ಬಾಲಿವುಡ್‍ನಿಂದ ಹೊರನಡೆಯುವುದಾಗಿ ಹೇಳಿಕೆಯನ್ನು ಕೊಟ್ಟಿದ್ದಾರೆ. ಇದು ಬಾಲಿವುಡ್ ಪಾಲಿಗೆ ಒಂದು ಆಘಾತ!

ತೊಂಬತ್ತರ ದಶಕದಲ್ಲಿ ಎರಡನೆಯ ದರ್ಜೆಯ ಸಿನಿಮಾಗಳೇ ಸದ್ದು ಮಾಡುತ್ತಿದ್ದಾಗ, ಹೊಸ ಅಲೆಯ ಸಿನಿಮಾ ಮತ್ತು ಸಂಗೀತ ಎರಡೂ ನಿಧಾನವಾಗಿ ತನ್ನ ಛಾಪು ಒತ್ತಿತು. ಇದು 2000ದಲ್ಲೂ ಮುಂದುವರೆದು ಹಿಂದಿ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆದವು.

ಖಾನ್, ಕಪೂರ್ ಸೇರಿದಂತೆ ಕೆಲವೇ ಕುಟುಂಬಗಳು ಹಿಂದಿ ಚಿತ್ರರಂಗವನ್ನು ನಿಯಂತ್ರಿಸುತ್ತಿದ್ದವು. ಆದರೆ ಕಾಲ ಸರಿದಂತೆ ಯಾವುದೇ ನಟನೆಯ ಹಿನ್ನೆಲೆಯಿಲ್ಲದ, ಸಿನಿಮಾ ಕುಟುಂಬದವರಲ್ಲದ ಪ್ರತಿಭೆಗಳು ನಟನೆ, ನಿರ್ದೇಶನ, ಸಂಗೀತ ನಿರ್ದೇಶನದ ಕನಸುಗಳನ್ನು ಹೊತ್ತು ಬಾಲಿವುಡ್ ಅಂಗಳಕ್ಕೆ ಬಂದರು. ವರ್ಷಗಟ್ಟಲೆ ಕಷ್ಟಪಟ್ಟು ತಮ್ಮದೇ ಆದ ವರ್ಚಸ್ಸು ರೂಪಿಸಿಕೊಳ್ಳಲು ಶ್ರಮಿಸಿದರು.

ಈ ಲೇಖನ ಬರೆಯುವ ಹೊತ್ತಿಗೆ ‘ಗ್ಯಾಂಗ್’ವೊಂದರ ಸ್ವಜನ ಪಕ್ಷಪಾತ ಅವರ ವೃತ್ತಿಜೀವನಕ್ಕೆ ಎಷ್ಟು ತೊಂದರೆ ಕೊಟ್ಟಿತು ಎಂಬುದನ್ನು ನಟ ರಣವೀರ್ ಶೊರೆ ವಿವರಿಸಿದ್ದಾರೆ. ಮಹೇಶ್ ಕುಟುಂಬದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ಶೋರೆ, ತಮ್ಮ ವಿರುದ್ಧ ಹರಡಲಾದ ಗಾಳಿಸುದ್ದಿ, ಸುಳ್ಳುಗಳಿಂದ ಮುಕ್ತವಾಗಿ ನಟನಾಗಿ ಬೆಳೆಯುವುದಕ್ಕೆ ಉಂಟಾದ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಮತ್ತೊಬ್ಬ ನಟ ಆಯುಷ್‌ಮಾನ್ ಖೊರನಾ, ಬಾಲಿವುಡ್‍ನಲ್ಲಿ ಸ್ವಜನ ಪಕ್ಷಪಾತವಿಲ್ಲದೇ ಹೋಗಿದ್ದರೆ ಐದು ವರ್ಷದ ಮೊದಲೇ ನಾನು ನಾಯಕ ನಟನಾಗುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ನಟ ಸುಶಾಂತ್ ರಾಜಪೂತ್ ಸಾವು ಹಲವರನ್ನು ಕಂಗೆಡಿಸಿದೆ. ಸಾಮಾನ್ಯ ಕುಟುಂಬದಿಂದ ಬಂದ ಸುಶಾಂತ್ ಸಿಂಗ್ ಒಳ್ಳೆಯ ನಟನಾಗಿ ಬೆಳೆಯುವುದನ್ನು ಸಹಿಸಿದ ಬಾಲಿವುಡ್‍ನ ಕೆಲವು ಹಿರಿಯರು ಆತನಿಗೆ ಅವಕಾಶ ಕೊಡದೇ ಇದ್ದ ಸುದ್ದಿಗಳು ನಿಧಾನವಾಗಿ ಹೊರಗೆ ಬರಲಾರಂಭಿಸಿದ ಕೂಡಲೇ ಅನೇಕರು ಬಾಲಿವುಡ್‍ನ ಒಳಗಿನ ಹೊಲಸನ್ನು ಬಿಚ್ಚಿಡಲಾರಂಭಿಸಿದ್ದಾರೆ.

ಈ ಬಾಲಿವುಡ್ ಒಂದು ಕಾಲದಲ್ಲಿ ಹಾಜಿ ಮಸ್ತಾನ್, ದಾವೂದ್ ಇಬ್ರಾಹಿಂ ಹಿಡಿತದಲ್ಲಿತ್ತು. ಅನಿಲ್ ಕಪೂರ್, ಸಲ್ಮಾನ್ ಖಾನ್, ಸುನಿಲ್ ದತ್, ಮಂದಾಕಿನಿ ಹೀಗೆ ಎಷ್ಟೊಂದು ನಟನಟಿಯರು ಭೂಗತ ದೊರೆಗಳ ಸಂಪರ್ಕದಲ್ಲಿ ಇದ್ದದ್ದು, ಸಿನಿಮಾ ನಿರ್ಮಾಣ, ನಟ-ನಟಿಯರ ಆಯ್ಕೆ ಎಲ್ಲದರಲ್ಲೂ ಈ ಭೂಗತ ಪಾತಕಿಗಳ ಕೈವಾಡ ಇದ್ದ ವಿಷಯಗಳೆಲ್ಲವೂ ತಿಳಿದದ್ದೆ. ಆದರೆ ಬಾಲಿವುಡ್‍ನ ಬೆರಳೆಣಿಕೆಯ ಚಿತ್ರ ನಿರ್ಮಾಣ ಸಂಸ್ಥೆಗಳು ಬಲಿಷ್ಠವಾದ ಮೇಲೆ, ಅವು ಬಾಲಿವುಡ್‍ನ ಪಾರುಪತ್ಯ ನಡೆಸುತ್ತಿವೆ ಎಂಬ ದೂರುಗಳು ಈಗ ಬಯಲಾಗುತ್ತಿವೆ.

ಧರ್ಮ ಪ್ರೊಡಕ್ಷನ್ಸ್‌ನ ಕರಣ್ ಜೋಹರ್ ಈಗ ನೆಪೊಟಿಸಂ ಆರೋಪಕ್ಕೆ ತೀವ್ರವಾಗಿ ಗುರಿಯಾಗಿರುವ ನಿರ್ಮಾಪಕ. ಸೂಪರ್ ಸ್ಟಾರ್ ಗಳನ್ನೇ ತಾರಾಗಣಕ್ಕೆ ಬಳಸಿ ಕೆಟ್ಟ ಸಿನಿಮಾಗಳನ್ನು ನಿರ್ಮಿಸಿಯೂ ಮಾರುಕಟ್ಟೆಯಲ್ಲಿ ಬದುಕುಳಿಯುವ ಯಶ್ ರಾಜ್ ಫಿಲ್ಮ್ಸ್ ವಿರುದ್ಧ ಅಂತಹ ದೂರುಗಳಿವೆ.

ಪ್ರೊಡಕ್ಷನ್ ಹೌಸ್‍ಗಳಷ್ಟೇ ಅಲ್ಲ, ಚಿತ್ರರಂಗದ ಹಿರಿತಲೆಗಳು ಕೂಡ ಉತ್ಸಾಹಿಗಳನ್ನು ಹತ್ತಿಕ್ಕಿದ್ದಾರೆ. ಮಹೇಶ್ ಭಟ್‍ರಂತಹ ನಿರ್ದೇಶಕರ ಮೇಲೆ ಇಂತಹ ಆರೋಪಗಳಿವೆ.

ಗುಜರಾತ್‍ನ ಗೋಧ್ರಾ ಪ್ರಕರಣದ ನಂತರ ರಾಜಕೀಯದ ಪ್ರಭಾವವೂ ತೀವ್ರವಾಗಿದ್ದು, ಚಿತ್ರರಂಗದ ಅನೇಕ ನಟ, ನಿರ್ದೇಶಕರಿಗೆ ತಮ್ಮ ವೃತ್ತಿ ಮುಂದುವರೆಸುವ ಸವಾಲು ಕೂಡ ಕಾಡಿದೆ. ಸದ್ಯ ಬಾಲಿವುಡ್‍ಗೆ ಗುಡ್ ಬೈ ಹೇಳಿದ ಮೂವರು ನಿರ್ದೇಶಕರು, ಭಯೋತ್ಪಾದನೆ, ಜಾತಿ ವ್ಯವಸ್ಥೆ, ಭ್ರಷ್ಟ ರಾಜಕಾರಣ, ಕೋಮು ರಾಜಕಾರಣಗಳನ್ನು ಬಲವಾಗಿ ಖಂಡಿಸಿ ಚಿತ್ರಗಳನ್ನು ನಿರ್ಮಿಸಿದ್ದವರು.

ಕಾಲಕಾಲಕ್ಕೆ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವುದಕ್ಕೆ ಎಲ್ಲ ರೀತಿಯ ಪಟ್ಟುಗಳನ್ನು ಹಾಕುತ್ತಾ ಬಂದ ಹಿಂದಿ ಚಿತ್ರರಂಗದ ಕೆಲವು ಪ್ರಭಾವಿಗಳು ನಿಧಾನವಾಗಿ ಕಥೆ, ಪ್ರತಿಭೆ, ಸೃಜನಶೀಲತೆಗೆ ಒತ್ತುಕೊಡದೆ, ಅಸ್ತಿತ್ವ, ಹಿತಾಸಕ್ತಿಗಳಿಗೆ ಒತ್ತುನೀಡುತ್ತಾ, ಪ್ರತಿಭಾವಂತರನ್ನು ಮತ್ತು ಚಿತ್ರ ನಿರ್ಮಾಣದ ನೈಜ ಸೃಜನಶೀಲ ಕ್ರಿಯೆಯನ್ನು ಕೊಲ್ಲಲಾರಂಭಿಸಿವೆ.

ಎಸ್ ಕುಮಾರ್


ಇದನ್ನು ಓದಿ: ಕರ್ನಾಟಕದ ಕರಿ ಚಿರತೆ; ಜಂಗಲ್ ಬುಕ್‌‌ ಸಿನಿಮಾದ ’ಬಘೀರಾ’ ಎಂದ ನೆಟ್ಟಿಗರು..!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...