Homeಮುಖಪುಟಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

- Advertisement -
- Advertisement -

ಬಹುತೇಕರಿಗೆ ನೆನಪಿದೆ. ತೊಂಬತ್ತರ ದಶಕದ ಮಧ್ಯಭಾಗದಲ್ಲಿ, ಅಂದರೆ 1995ರಲ್ಲಿ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ರಂಗೀಲಾ’ ಚಿತ್ರ ಹೊರಬಂತು. 90ರ ದಶಕದ ಹಿಂದಿ ಚಿತ್ರರಂಗದ ಅಷ್ಟೇನು ಆಪ್ತವಲ್ಲದ ಸಿನಿ ಸಂಗೀತಕ್ಕೆ ಹೊಸ ಹುರುಪು ಬಂದಿತ್ತು. ಮೂವತ್ತು ವರ್ಷದ ಎ ಆರ್ ರೆಹಮಾನ್ ಸಿನಿ ಸಂಗೀತದ ಹೊಸ ರುಚಿಯನ್ನು ಉಣಿಸಿದರು. ಅಷ್ಟು ಹೊತ್ತಿಗೆ ದಕ್ಷಿಣ ಭಾರತದಲ್ಲಿ ಹದಿನೆಂಟು ಚಿತ್ರಗಳಿಗೆ ಸಂಗೀತ ನೀಡಿ ತಮ್ಮ ಛಾಪು ಒತ್ತಿದ್ದರು.

ದಕ್ಷಿಣದವರೇ ಆದ ವರ್ಮಾ ರೆಹಮಾನ್‍ರನ್ನು ಹಿಂದಿ ಚಿತ್ರರಂಗಕ್ಕೆ ಪರಿಚಯಿಸಿದ್ದು, ಬಾಲಿವುಡ್ ಸಿನಿ ಸಂಗೀತದ ಸ್ವರೂಪವನ್ನೇ ಬದಲಿಸಿತು.

ಅದು ಪಂಜಾಬಿ ಹಿನ್ನೆಲೆಯ ‘ರಂಗ್‍ದೇ ಬಸಂತಿ’ ಇರಲಿ, ಸೂಫಿ ಸಂಗೀತ ಅನುಭವ ನೀಡುವ ‘ಜೋಧಾ ಅಕ್ಬರ್’ ಇರಲಿ, ಪಾಶ್ಚಾತ್ಯ ಸ್ಪರ್ಶವಿರುವ ‘ಯುವ್‍ರಾಜ್’ ಇರಲಿ, ಹೀಗೆ ಪಟ್ಟಿ ಮಾಡುತ್ತಲೇ ಹೋಗಬಹುದು. ಅಂತಹ ವೈವಿಧ್ಯಮಯವಾದ ಸಂಗೀತ ನೀಡಿದ ಪ್ರತಿಭಾವಂತ ರೆಹಮಾನ್.

ಯಾಕೆ ಇಷ್ಟೆಲ್ಲಾ ನೆನಪಿಸಿಕೊಳ್ಳಬೇಕಾಯಿತು ಎಂದರೆ, ಯಾವ ಜನ ಈತನನ್ನು ಕೊಂಡಾಡಿದ್ದರೊ, ಅವರೇ ಗುಂಪುಗಾರಿಕೆ, ಸ್ವಜನಪಕ್ಷಪಾತ ಮಾಡುವ ಮೂಲಕ ತಮ್ಮನ್ನು ಅವಕಾಶಗಳಿಂದ ದೂರ ಮಾಡುತ್ತಿದ್ದಾರೆ ಎಂದು ಈಗ ಸ್ವತಃ ರೆಹಮಾನ್ ಹೇಳಿದ್ದಾರೆ. ಅವರು ‘ಗ್ಯಾಂಗ್’ ಎನ್ನುವ ಪದವನ್ನು ಬಳಸಿದ್ದಾರೆ. ಅಂದರೆ ಒಂದು ಗುಂಪು ವ್ಯವಸ್ಥಿತವಾಗಿ ಯಾರನ್ನು ಬೆಳೆಸಬೇಕು, ಯಾರನ್ನು ತುಳಿಯಬೇಕು ಎಂಬುದನ್ನು ನಿರ್ಧರಿಸುತ್ತದೆ ಎಂಬುದನ್ನು ಸೂಚಿಸಿದ್ದಾರೆ.

ನಿಜ, ಯಾವುದೇ ಸೃಜನಶೀಲ ವ್ಯಕ್ತಿಯ ಸೃಜನಶಕ್ತಿ ಒಂದು ಕಾಲದ ನಂತರ ಆಕರ್ಷಣೆ ಕಳೆದುಕೊಳ್ಳುತ್ತದೆ. ಆದರೆ ರೆಹಮಾನ್ ಇತರೆ ಭಾಷೆಯ ಸಿನಿಮಾಗಳಿಗೆ ನೀಡುವ ಸಂಗೀತದಲ್ಲಿ ಇನ್ನೂ ಅದೇ ಮೋಡಿ ಉಳಿದಿದೆ. ಆದರೂ ಹಿಂದಿ ಚಿತ್ರರಂಗ ಅವರನ್ನು ದೂರವಿಟ್ಟಿದ್ದು ಏಕೆ?

ರೆಹಮಾನ್ ಸಾರ್ವಜನಿಕವಾಗಿ ಬಾಲಿವುಡ್‍ನ ಪಕ್ಷಪಾತವನ್ನು, ಗುಂಪುಗಾರಿಕೆಯ ಬಗ್ಗೆ ತಮ್ಮ ಅಸಮಾಧಾನ, ಬೇಸರವನ್ನು ಹೊರಹಾಕುವುದಕ್ಕೂ ಎರಡು ದಿನಗಳ ಮೊದಲು ಹಿಂದಿನ ಪ್ರಸಿದ್ಧ ನಿರ್ದೇಶಕರುಗಳಾದ ಅನುಭವ ಸಿನ್ಹಾ, ಹನ್ಸಲ್ ಮೆಹ್ತಾ ಮತ್ತು ಸುಧೀರ್ ಶರ್ಮಾ, ಇನ್ನು ಬಾಲಿವುಡ್‍ನಿಂದ ಹೊರನಡೆಯುವುದಾಗಿ ಹೇಳಿಕೆಯನ್ನು ಕೊಟ್ಟಿದ್ದಾರೆ. ಇದು ಬಾಲಿವುಡ್ ಪಾಲಿಗೆ ಒಂದು ಆಘಾತ!

ತೊಂಬತ್ತರ ದಶಕದಲ್ಲಿ ಎರಡನೆಯ ದರ್ಜೆಯ ಸಿನಿಮಾಗಳೇ ಸದ್ದು ಮಾಡುತ್ತಿದ್ದಾಗ, ಹೊಸ ಅಲೆಯ ಸಿನಿಮಾ ಮತ್ತು ಸಂಗೀತ ಎರಡೂ ನಿಧಾನವಾಗಿ ತನ್ನ ಛಾಪು ಒತ್ತಿತು. ಇದು 2000ದಲ್ಲೂ ಮುಂದುವರೆದು ಹಿಂದಿ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆದವು.

ಖಾನ್, ಕಪೂರ್ ಸೇರಿದಂತೆ ಕೆಲವೇ ಕುಟುಂಬಗಳು ಹಿಂದಿ ಚಿತ್ರರಂಗವನ್ನು ನಿಯಂತ್ರಿಸುತ್ತಿದ್ದವು. ಆದರೆ ಕಾಲ ಸರಿದಂತೆ ಯಾವುದೇ ನಟನೆಯ ಹಿನ್ನೆಲೆಯಿಲ್ಲದ, ಸಿನಿಮಾ ಕುಟುಂಬದವರಲ್ಲದ ಪ್ರತಿಭೆಗಳು ನಟನೆ, ನಿರ್ದೇಶನ, ಸಂಗೀತ ನಿರ್ದೇಶನದ ಕನಸುಗಳನ್ನು ಹೊತ್ತು ಬಾಲಿವುಡ್ ಅಂಗಳಕ್ಕೆ ಬಂದರು. ವರ್ಷಗಟ್ಟಲೆ ಕಷ್ಟಪಟ್ಟು ತಮ್ಮದೇ ಆದ ವರ್ಚಸ್ಸು ರೂಪಿಸಿಕೊಳ್ಳಲು ಶ್ರಮಿಸಿದರು.

ಈ ಲೇಖನ ಬರೆಯುವ ಹೊತ್ತಿಗೆ ‘ಗ್ಯಾಂಗ್’ವೊಂದರ ಸ್ವಜನ ಪಕ್ಷಪಾತ ಅವರ ವೃತ್ತಿಜೀವನಕ್ಕೆ ಎಷ್ಟು ತೊಂದರೆ ಕೊಟ್ಟಿತು ಎಂಬುದನ್ನು ನಟ ರಣವೀರ್ ಶೊರೆ ವಿವರಿಸಿದ್ದಾರೆ. ಮಹೇಶ್ ಕುಟುಂಬದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ಶೋರೆ, ತಮ್ಮ ವಿರುದ್ಧ ಹರಡಲಾದ ಗಾಳಿಸುದ್ದಿ, ಸುಳ್ಳುಗಳಿಂದ ಮುಕ್ತವಾಗಿ ನಟನಾಗಿ ಬೆಳೆಯುವುದಕ್ಕೆ ಉಂಟಾದ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಮತ್ತೊಬ್ಬ ನಟ ಆಯುಷ್‌ಮಾನ್ ಖೊರನಾ, ಬಾಲಿವುಡ್‍ನಲ್ಲಿ ಸ್ವಜನ ಪಕ್ಷಪಾತವಿಲ್ಲದೇ ಹೋಗಿದ್ದರೆ ಐದು ವರ್ಷದ ಮೊದಲೇ ನಾನು ನಾಯಕ ನಟನಾಗುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ನಟ ಸುಶಾಂತ್ ರಾಜಪೂತ್ ಸಾವು ಹಲವರನ್ನು ಕಂಗೆಡಿಸಿದೆ. ಸಾಮಾನ್ಯ ಕುಟುಂಬದಿಂದ ಬಂದ ಸುಶಾಂತ್ ಸಿಂಗ್ ಒಳ್ಳೆಯ ನಟನಾಗಿ ಬೆಳೆಯುವುದನ್ನು ಸಹಿಸಿದ ಬಾಲಿವುಡ್‍ನ ಕೆಲವು ಹಿರಿಯರು ಆತನಿಗೆ ಅವಕಾಶ ಕೊಡದೇ ಇದ್ದ ಸುದ್ದಿಗಳು ನಿಧಾನವಾಗಿ ಹೊರಗೆ ಬರಲಾರಂಭಿಸಿದ ಕೂಡಲೇ ಅನೇಕರು ಬಾಲಿವುಡ್‍ನ ಒಳಗಿನ ಹೊಲಸನ್ನು ಬಿಚ್ಚಿಡಲಾರಂಭಿಸಿದ್ದಾರೆ.

ಈ ಬಾಲಿವುಡ್ ಒಂದು ಕಾಲದಲ್ಲಿ ಹಾಜಿ ಮಸ್ತಾನ್, ದಾವೂದ್ ಇಬ್ರಾಹಿಂ ಹಿಡಿತದಲ್ಲಿತ್ತು. ಅನಿಲ್ ಕಪೂರ್, ಸಲ್ಮಾನ್ ಖಾನ್, ಸುನಿಲ್ ದತ್, ಮಂದಾಕಿನಿ ಹೀಗೆ ಎಷ್ಟೊಂದು ನಟನಟಿಯರು ಭೂಗತ ದೊರೆಗಳ ಸಂಪರ್ಕದಲ್ಲಿ ಇದ್ದದ್ದು, ಸಿನಿಮಾ ನಿರ್ಮಾಣ, ನಟ-ನಟಿಯರ ಆಯ್ಕೆ ಎಲ್ಲದರಲ್ಲೂ ಈ ಭೂಗತ ಪಾತಕಿಗಳ ಕೈವಾಡ ಇದ್ದ ವಿಷಯಗಳೆಲ್ಲವೂ ತಿಳಿದದ್ದೆ. ಆದರೆ ಬಾಲಿವುಡ್‍ನ ಬೆರಳೆಣಿಕೆಯ ಚಿತ್ರ ನಿರ್ಮಾಣ ಸಂಸ್ಥೆಗಳು ಬಲಿಷ್ಠವಾದ ಮೇಲೆ, ಅವು ಬಾಲಿವುಡ್‍ನ ಪಾರುಪತ್ಯ ನಡೆಸುತ್ತಿವೆ ಎಂಬ ದೂರುಗಳು ಈಗ ಬಯಲಾಗುತ್ತಿವೆ.

ಧರ್ಮ ಪ್ರೊಡಕ್ಷನ್ಸ್‌ನ ಕರಣ್ ಜೋಹರ್ ಈಗ ನೆಪೊಟಿಸಂ ಆರೋಪಕ್ಕೆ ತೀವ್ರವಾಗಿ ಗುರಿಯಾಗಿರುವ ನಿರ್ಮಾಪಕ. ಸೂಪರ್ ಸ್ಟಾರ್ ಗಳನ್ನೇ ತಾರಾಗಣಕ್ಕೆ ಬಳಸಿ ಕೆಟ್ಟ ಸಿನಿಮಾಗಳನ್ನು ನಿರ್ಮಿಸಿಯೂ ಮಾರುಕಟ್ಟೆಯಲ್ಲಿ ಬದುಕುಳಿಯುವ ಯಶ್ ರಾಜ್ ಫಿಲ್ಮ್ಸ್ ವಿರುದ್ಧ ಅಂತಹ ದೂರುಗಳಿವೆ.

ಪ್ರೊಡಕ್ಷನ್ ಹೌಸ್‍ಗಳಷ್ಟೇ ಅಲ್ಲ, ಚಿತ್ರರಂಗದ ಹಿರಿತಲೆಗಳು ಕೂಡ ಉತ್ಸಾಹಿಗಳನ್ನು ಹತ್ತಿಕ್ಕಿದ್ದಾರೆ. ಮಹೇಶ್ ಭಟ್‍ರಂತಹ ನಿರ್ದೇಶಕರ ಮೇಲೆ ಇಂತಹ ಆರೋಪಗಳಿವೆ.

ಗುಜರಾತ್‍ನ ಗೋಧ್ರಾ ಪ್ರಕರಣದ ನಂತರ ರಾಜಕೀಯದ ಪ್ರಭಾವವೂ ತೀವ್ರವಾಗಿದ್ದು, ಚಿತ್ರರಂಗದ ಅನೇಕ ನಟ, ನಿರ್ದೇಶಕರಿಗೆ ತಮ್ಮ ವೃತ್ತಿ ಮುಂದುವರೆಸುವ ಸವಾಲು ಕೂಡ ಕಾಡಿದೆ. ಸದ್ಯ ಬಾಲಿವುಡ್‍ಗೆ ಗುಡ್ ಬೈ ಹೇಳಿದ ಮೂವರು ನಿರ್ದೇಶಕರು, ಭಯೋತ್ಪಾದನೆ, ಜಾತಿ ವ್ಯವಸ್ಥೆ, ಭ್ರಷ್ಟ ರಾಜಕಾರಣ, ಕೋಮು ರಾಜಕಾರಣಗಳನ್ನು ಬಲವಾಗಿ ಖಂಡಿಸಿ ಚಿತ್ರಗಳನ್ನು ನಿರ್ಮಿಸಿದ್ದವರು.

ಕಾಲಕಾಲಕ್ಕೆ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವುದಕ್ಕೆ ಎಲ್ಲ ರೀತಿಯ ಪಟ್ಟುಗಳನ್ನು ಹಾಕುತ್ತಾ ಬಂದ ಹಿಂದಿ ಚಿತ್ರರಂಗದ ಕೆಲವು ಪ್ರಭಾವಿಗಳು ನಿಧಾನವಾಗಿ ಕಥೆ, ಪ್ರತಿಭೆ, ಸೃಜನಶೀಲತೆಗೆ ಒತ್ತುಕೊಡದೆ, ಅಸ್ತಿತ್ವ, ಹಿತಾಸಕ್ತಿಗಳಿಗೆ ಒತ್ತುನೀಡುತ್ತಾ, ಪ್ರತಿಭಾವಂತರನ್ನು ಮತ್ತು ಚಿತ್ರ ನಿರ್ಮಾಣದ ನೈಜ ಸೃಜನಶೀಲ ಕ್ರಿಯೆಯನ್ನು ಕೊಲ್ಲಲಾರಂಭಿಸಿವೆ.

ಎಸ್ ಕುಮಾರ್


ಇದನ್ನು ಓದಿ: ಕರ್ನಾಟಕದ ಕರಿ ಚಿರತೆ; ಜಂಗಲ್ ಬುಕ್‌‌ ಸಿನಿಮಾದ ’ಬಘೀರಾ’ ಎಂದ ನೆಟ್ಟಿಗರು..!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...