Homeಮುಖಪುಟಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

- Advertisement -
- Advertisement -

ಅತಿದೊಡ್ಡ ಆಹಾರ ಮತ್ತು ಪಾನೀಯ ಕಂಪನಿಯಾದ ನೆಸ್ಲೆ ಮತ್ತೊಮ್ಮೆ ಸುದ್ದಿಯಲ್ಲಿದೆ. ಮ್ಯಾಗಿ ತಯಾರಿಸುವ ನೆಸ್ಲೆ ಕಂಪನಿಯ ಉತ್ಪನ್ನಗಳಲ್ಲಿ ಶೇಕಡಾ 60 ರಷ್ಟು ಆರೋಗ್ಯಕರವಲ್ಲ ಎಂದು ಸಂಸ್ಥೆಯ ಆಂತರಿಕ ವರದಿಯೊಂದು ತಿಳಿಸಿದೆ.

ನೆಸ್ಲೆ ಸಂಸ್ಥೆಯೇ ತನ್ನ ಉತ್ಪನ್ನಗಳು ಶೇಕಡಾ 60 ರಷ್ಟು ಆರೋಗ್ಯಕರವಲ್ಲ ಎಂದಿದೆ. ಈ ಬಗ್ಗೆ ದಿ ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದ್ದು, ನೆಸ್ಲೆ ಕಂಪನಿಯ ಉತ್ಪನ್ನಗಳು ಆರೋಗ್ಯಕರ ವಿಭಾಗದಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಮ್ಯಾಗಿ ತಯಾರಕ ಕಂಪನಿಯು ತಮ್ಮ ಕೆಲವು ಆಹಾರ ಪದಾರ್ಥಗಳನ್ನು ಎಷ್ಟೇ ನವೀಕರಿಸಿದರೂ “ಎಂದಿಗೂ ಆರೋಗ್ಯಕರವಾಗಿರುವುದಿಲ್ಲ” ಎಂಬ ಅಂಶವನ್ನು ಹೇಳಿದ್ದಾರೆ. ಅದರಲ್ಲಿಯೂ ಅವರ ಚಾಕೊಲೇಟ್. ಇದು ಹೆಚ್ಚಿನ ಸಕ್ಕರೆ ಅಂಶವನ್ನು ಹೊಂದಿರುತ್ತದೆ.  ಈ ಸಮಸ್ಯೆಯನ್ನು ಸರಿದೂಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ನೆಸ್ಲೆ ತಿಳಿಸಿದೆ.

ಇದನ್ನೂ ಓದಿ: ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ 

ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ಹೆಲ್ತ್ ಸ್ಟಾರ್ ರೇಟಿಂಗ್ ವ್ಯವಸ್ಥೆಯಲ್ಲಿ ನೆಸ್ಲೆಯ ಆಹಾರ ಮತ್ತು ಪಾನೀಯ ಉತ್ಪನ್ನಗಳಲ್ಲಿ, ಸಾಕು ಪ್ರಾಣಿಗಳ ಆಹಾರ ಮತ್ತು ವೈದ್ಯಕೀಯ ನ್ಯೂಟ್ರಿಷಿಯನ್ ಉತ್ಪನ್ನಗಳು ಮಾತ್ರ 5 ರಲ್ಲಿ 3.5 ರೇಟಿಂಗ್ ಪಡೆದಿದೆ. ಇವುಗಳನ್ನು ಬಿಟ್ಟು ಮಿಕ್ಕ ಉತ್ಪನ್ನಗಳು ರೇಟಿಂಗ್‌ನಲ್ಲಿ ಹಿಂದಿವೆ ಎಂದು ಹೇಳಲಾಗಿದೆ.

ಈ ವರದಿ ಪ್ರತಿಕ್ರಿಯಿಸಿರುವ ನೆಸ್ಲೆ, ಇದು ಆಂತರಿಕ ವರದಿಯಾಗಿದೆ. ಪೌಷ್ಠಿಕ ಉತ್ಪನ್ನಗಳನ್ನು ಮಾತ್ರ ಗ್ರಾಹಕರಿಗೆ ನೀಡಲು ಪ್ರಯತ್ನಿಸುವುದಾಗಿ ಹೇಳಿದೆ. ಕಳೆದ ಏಳು ವರ್ಷಗಳಲ್ಲಿ ನೆಸ್ಲೆ ತಮ್ಮ ಉತ್ಪನ್ನಗಳಲ್ಲಿನ ಸಕ್ಕರೆ ಮತ್ತು ಸೋಡಿಯಂ ಅನ್ನು ಸುಮಾರು 14 ರಿಂದ 15% ರಷ್ಟು ಕಡಿಮೆ ಮಾಡಲಾಗಿದೆ. ಜೊತೆಗೆ ಅನೇಕ ಪೋಷಕಾಂಶಯುಕ್ತ ತಿನಿಸುಗಳನ್ನು ಬಿಡುಗಡೆ ಮಾಡಿದ್ದೇವೆ ಎಂದಿದೆ.

2015 ರಲ್ಲಿ ನೆಸ್ಲೆಯ ಮ್ಯಾಗಿ ಬಗ್ಗೆ ಬಂದ ಅನಾರೋಗ್ಯಕರ ಸುದ್ದಿಗಳು ಕಂಪನಿಗೆ ದೊಡ್ಡ ಹೊಡೆತ ನೀಡಿತ್ತು. ಇದರಿಂದ ಚೇತರಿಸಿಕೊಳ್ಳುವ ಮುನ್ನವೇ ಈ ವರದಿ ಬಂದಿದೆ. ಆದರೆ ಇದು ಆಂತರಿಕ ವರದಿ. ನಮ್ಮ ಉತ್ಪನ್ನಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸುತ್ತೇವೆ ಎಂದಿದೆ. ಕಂಪನಿಯು ತನ್ನ ಭಾರತದ ಮಾರುಕಟ್ಟೆ ಪರಿಸ್ಥಿತಿಯನ್ನು ಕಾಪಾಡಲು ಇನ್ನೂ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...