Homeಮುಖಪುಟಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

- Advertisement -
- Advertisement -

ಅತಿದೊಡ್ಡ ಆಹಾರ ಮತ್ತು ಪಾನೀಯ ಕಂಪನಿಯಾದ ನೆಸ್ಲೆ ಮತ್ತೊಮ್ಮೆ ಸುದ್ದಿಯಲ್ಲಿದೆ. ಮ್ಯಾಗಿ ತಯಾರಿಸುವ ನೆಸ್ಲೆ ಕಂಪನಿಯ ಉತ್ಪನ್ನಗಳಲ್ಲಿ ಶೇಕಡಾ 60 ರಷ್ಟು ಆರೋಗ್ಯಕರವಲ್ಲ ಎಂದು ಸಂಸ್ಥೆಯ ಆಂತರಿಕ ವರದಿಯೊಂದು ತಿಳಿಸಿದೆ.

ನೆಸ್ಲೆ ಸಂಸ್ಥೆಯೇ ತನ್ನ ಉತ್ಪನ್ನಗಳು ಶೇಕಡಾ 60 ರಷ್ಟು ಆರೋಗ್ಯಕರವಲ್ಲ ಎಂದಿದೆ. ಈ ಬಗ್ಗೆ ದಿ ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದ್ದು, ನೆಸ್ಲೆ ಕಂಪನಿಯ ಉತ್ಪನ್ನಗಳು ಆರೋಗ್ಯಕರ ವಿಭಾಗದಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಮ್ಯಾಗಿ ತಯಾರಕ ಕಂಪನಿಯು ತಮ್ಮ ಕೆಲವು ಆಹಾರ ಪದಾರ್ಥಗಳನ್ನು ಎಷ್ಟೇ ನವೀಕರಿಸಿದರೂ “ಎಂದಿಗೂ ಆರೋಗ್ಯಕರವಾಗಿರುವುದಿಲ್ಲ” ಎಂಬ ಅಂಶವನ್ನು ಹೇಳಿದ್ದಾರೆ. ಅದರಲ್ಲಿಯೂ ಅವರ ಚಾಕೊಲೇಟ್. ಇದು ಹೆಚ್ಚಿನ ಸಕ್ಕರೆ ಅಂಶವನ್ನು ಹೊಂದಿರುತ್ತದೆ.  ಈ ಸಮಸ್ಯೆಯನ್ನು ಸರಿದೂಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ನೆಸ್ಲೆ ತಿಳಿಸಿದೆ.

ಇದನ್ನೂ ಓದಿ: ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ 

ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ಹೆಲ್ತ್ ಸ್ಟಾರ್ ರೇಟಿಂಗ್ ವ್ಯವಸ್ಥೆಯಲ್ಲಿ ನೆಸ್ಲೆಯ ಆಹಾರ ಮತ್ತು ಪಾನೀಯ ಉತ್ಪನ್ನಗಳಲ್ಲಿ, ಸಾಕು ಪ್ರಾಣಿಗಳ ಆಹಾರ ಮತ್ತು ವೈದ್ಯಕೀಯ ನ್ಯೂಟ್ರಿಷಿಯನ್ ಉತ್ಪನ್ನಗಳು ಮಾತ್ರ 5 ರಲ್ಲಿ 3.5 ರೇಟಿಂಗ್ ಪಡೆದಿದೆ. ಇವುಗಳನ್ನು ಬಿಟ್ಟು ಮಿಕ್ಕ ಉತ್ಪನ್ನಗಳು ರೇಟಿಂಗ್‌ನಲ್ಲಿ ಹಿಂದಿವೆ ಎಂದು ಹೇಳಲಾಗಿದೆ.

ಈ ವರದಿ ಪ್ರತಿಕ್ರಿಯಿಸಿರುವ ನೆಸ್ಲೆ, ಇದು ಆಂತರಿಕ ವರದಿಯಾಗಿದೆ. ಪೌಷ್ಠಿಕ ಉತ್ಪನ್ನಗಳನ್ನು ಮಾತ್ರ ಗ್ರಾಹಕರಿಗೆ ನೀಡಲು ಪ್ರಯತ್ನಿಸುವುದಾಗಿ ಹೇಳಿದೆ. ಕಳೆದ ಏಳು ವರ್ಷಗಳಲ್ಲಿ ನೆಸ್ಲೆ ತಮ್ಮ ಉತ್ಪನ್ನಗಳಲ್ಲಿನ ಸಕ್ಕರೆ ಮತ್ತು ಸೋಡಿಯಂ ಅನ್ನು ಸುಮಾರು 14 ರಿಂದ 15% ರಷ್ಟು ಕಡಿಮೆ ಮಾಡಲಾಗಿದೆ. ಜೊತೆಗೆ ಅನೇಕ ಪೋಷಕಾಂಶಯುಕ್ತ ತಿನಿಸುಗಳನ್ನು ಬಿಡುಗಡೆ ಮಾಡಿದ್ದೇವೆ ಎಂದಿದೆ.

2015 ರಲ್ಲಿ ನೆಸ್ಲೆಯ ಮ್ಯಾಗಿ ಬಗ್ಗೆ ಬಂದ ಅನಾರೋಗ್ಯಕರ ಸುದ್ದಿಗಳು ಕಂಪನಿಗೆ ದೊಡ್ಡ ಹೊಡೆತ ನೀಡಿತ್ತು. ಇದರಿಂದ ಚೇತರಿಸಿಕೊಳ್ಳುವ ಮುನ್ನವೇ ಈ ವರದಿ ಬಂದಿದೆ. ಆದರೆ ಇದು ಆಂತರಿಕ ವರದಿ. ನಮ್ಮ ಉತ್ಪನ್ನಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸುತ್ತೇವೆ ಎಂದಿದೆ. ಕಂಪನಿಯು ತನ್ನ ಭಾರತದ ಮಾರುಕಟ್ಟೆ ಪರಿಸ್ಥಿತಿಯನ್ನು ಕಾಪಾಡಲು ಇನ್ನೂ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...