Homeಮುಖಪುಟಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

- Advertisement -
- Advertisement -

ಅತಿದೊಡ್ಡ ಆಹಾರ ಮತ್ತು ಪಾನೀಯ ಕಂಪನಿಯಾದ ನೆಸ್ಲೆ ಮತ್ತೊಮ್ಮೆ ಸುದ್ದಿಯಲ್ಲಿದೆ. ಮ್ಯಾಗಿ ತಯಾರಿಸುವ ನೆಸ್ಲೆ ಕಂಪನಿಯ ಉತ್ಪನ್ನಗಳಲ್ಲಿ ಶೇಕಡಾ 60 ರಷ್ಟು ಆರೋಗ್ಯಕರವಲ್ಲ ಎಂದು ಸಂಸ್ಥೆಯ ಆಂತರಿಕ ವರದಿಯೊಂದು ತಿಳಿಸಿದೆ.

ನೆಸ್ಲೆ ಸಂಸ್ಥೆಯೇ ತನ್ನ ಉತ್ಪನ್ನಗಳು ಶೇಕಡಾ 60 ರಷ್ಟು ಆರೋಗ್ಯಕರವಲ್ಲ ಎಂದಿದೆ. ಈ ಬಗ್ಗೆ ದಿ ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದ್ದು, ನೆಸ್ಲೆ ಕಂಪನಿಯ ಉತ್ಪನ್ನಗಳು ಆರೋಗ್ಯಕರ ವಿಭಾಗದಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಮ್ಯಾಗಿ ತಯಾರಕ ಕಂಪನಿಯು ತಮ್ಮ ಕೆಲವು ಆಹಾರ ಪದಾರ್ಥಗಳನ್ನು ಎಷ್ಟೇ ನವೀಕರಿಸಿದರೂ “ಎಂದಿಗೂ ಆರೋಗ್ಯಕರವಾಗಿರುವುದಿಲ್ಲ” ಎಂಬ ಅಂಶವನ್ನು ಹೇಳಿದ್ದಾರೆ. ಅದರಲ್ಲಿಯೂ ಅವರ ಚಾಕೊಲೇಟ್. ಇದು ಹೆಚ್ಚಿನ ಸಕ್ಕರೆ ಅಂಶವನ್ನು ಹೊಂದಿರುತ್ತದೆ.  ಈ ಸಮಸ್ಯೆಯನ್ನು ಸರಿದೂಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ನೆಸ್ಲೆ ತಿಳಿಸಿದೆ.

ಇದನ್ನೂ ಓದಿ: ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ 

ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ಹೆಲ್ತ್ ಸ್ಟಾರ್ ರೇಟಿಂಗ್ ವ್ಯವಸ್ಥೆಯಲ್ಲಿ ನೆಸ್ಲೆಯ ಆಹಾರ ಮತ್ತು ಪಾನೀಯ ಉತ್ಪನ್ನಗಳಲ್ಲಿ, ಸಾಕು ಪ್ರಾಣಿಗಳ ಆಹಾರ ಮತ್ತು ವೈದ್ಯಕೀಯ ನ್ಯೂಟ್ರಿಷಿಯನ್ ಉತ್ಪನ್ನಗಳು ಮಾತ್ರ 5 ರಲ್ಲಿ 3.5 ರೇಟಿಂಗ್ ಪಡೆದಿದೆ. ಇವುಗಳನ್ನು ಬಿಟ್ಟು ಮಿಕ್ಕ ಉತ್ಪನ್ನಗಳು ರೇಟಿಂಗ್‌ನಲ್ಲಿ ಹಿಂದಿವೆ ಎಂದು ಹೇಳಲಾಗಿದೆ.

ಈ ವರದಿ ಪ್ರತಿಕ್ರಿಯಿಸಿರುವ ನೆಸ್ಲೆ, ಇದು ಆಂತರಿಕ ವರದಿಯಾಗಿದೆ. ಪೌಷ್ಠಿಕ ಉತ್ಪನ್ನಗಳನ್ನು ಮಾತ್ರ ಗ್ರಾಹಕರಿಗೆ ನೀಡಲು ಪ್ರಯತ್ನಿಸುವುದಾಗಿ ಹೇಳಿದೆ. ಕಳೆದ ಏಳು ವರ್ಷಗಳಲ್ಲಿ ನೆಸ್ಲೆ ತಮ್ಮ ಉತ್ಪನ್ನಗಳಲ್ಲಿನ ಸಕ್ಕರೆ ಮತ್ತು ಸೋಡಿಯಂ ಅನ್ನು ಸುಮಾರು 14 ರಿಂದ 15% ರಷ್ಟು ಕಡಿಮೆ ಮಾಡಲಾಗಿದೆ. ಜೊತೆಗೆ ಅನೇಕ ಪೋಷಕಾಂಶಯುಕ್ತ ತಿನಿಸುಗಳನ್ನು ಬಿಡುಗಡೆ ಮಾಡಿದ್ದೇವೆ ಎಂದಿದೆ.

2015 ರಲ್ಲಿ ನೆಸ್ಲೆಯ ಮ್ಯಾಗಿ ಬಗ್ಗೆ ಬಂದ ಅನಾರೋಗ್ಯಕರ ಸುದ್ದಿಗಳು ಕಂಪನಿಗೆ ದೊಡ್ಡ ಹೊಡೆತ ನೀಡಿತ್ತು. ಇದರಿಂದ ಚೇತರಿಸಿಕೊಳ್ಳುವ ಮುನ್ನವೇ ಈ ವರದಿ ಬಂದಿದೆ. ಆದರೆ ಇದು ಆಂತರಿಕ ವರದಿ. ನಮ್ಮ ಉತ್ಪನ್ನಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸುತ್ತೇವೆ ಎಂದಿದೆ. ಕಂಪನಿಯು ತನ್ನ ಭಾರತದ ಮಾರುಕಟ್ಟೆ ಪರಿಸ್ಥಿತಿಯನ್ನು ಕಾಪಾಡಲು ಇನ್ನೂ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...