Homeಕರ್ನಾಟಕಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಯಶಸ್ವಿ ಬೋಧನೆಗೊಂದು ಬೆಳಕಿಂಡಿ ಬದುಕು ಕಮ್ಯೂನಿಟಿ ಕಾಲೇಜು. ಕಲಿಯಲು, ಕಲಿತು ಕಲಿಸಲು ಆಸಕ್ತಿ ಇರುವವರಿಗೆ ಒಂದೊಳ್ಳ ಅವಕಾಶ

- Advertisement -
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಕನಸು ಎಲ್ಲರಲ್ಲಿಯೂ ಚಿಗುರುತ್ತದೆ. ಅಂತಹ ಕನಸುಗಳನ್ನು ನನಸು ಮಾಡಲು ಕೆಲವರಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಸಹಾಯವಾದರೆ, ಮತ್ತೂ ಕೆಲವರಿಗೆ ಕನಸನ್ನ ಕನಸಾಗಿಯೇ ಉಳಿಸಿಬಿಡುತ್ತದೆ. ಅದರಲ್ಲೂ ಖಾಸಗೀಕರಣದ ದವಡೆಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ದುಭಾರಿಯೇ ಸರಿ. ಉತ್ತಮ ಶೈಕ್ಷಣಿಕ ಸೌಲಭ್ಯ, ಸಾಧನೆಯ ಹಾದಿಯಲ್ಲಿ ಒಂದಷ್ಟು ಮಾರ್ಗದರ್ಶನ ಪಡೆದುಕೊಳ್ಳಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಅಂತಹ ಬಯಕೆಗಳಿಗೆ ಆರ್ಥಿಕ ಪರಿಸ್ಥಿತಿಗಳಂತಹ ಹಲವು ಸಮಸ್ಯೆಗಳು ಎದುರಾಗುತ್ತವೆ.

- Advertisement -

ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿಯೂ ಉತ್ತಮ ಬೋಧಕರಾಗಬೇಕು, ಆಪ್ತ ಸಮಾಲೋಚಕರಾಗಬೇಕು, ಜೆಆರ್‍ಎಫ್-ಎನ್‍ಇಟಿಗಳನ್ನು ಪಾಸು ಮಾಡಿ ಪಿಎಚ್‍ಡಿ ಪದವಿ ಪಡೆಯಬೇಕೆಂದು, ಅದರೊಂದಿಗೆ ಸಮಾಜದಲ್ಲಿ ಏನನ್ನಾದರೂ ಕೊಡುಗೆ ಕೊಡಬೇಕು ಎಂದು ಬಯಸುವವರು ಸಾಕಷ್ಟಿದ್ದಾರೆ. ಅಂತಹವರಿಗೆ ಈಗೊಂದು ಸುವರ್ಣಾವಕಾಶವನ್ನು ಬದುಕು ಕಮ್ಯುನಿಟಿ ಕಾಲೇಜು ತೆರೆದಿಟ್ಟಿದೆ.

ಕಡಿಮೆ ಖರ್ಚಿನಲ್ಲಿ ಕೋಚಿಂಗ್ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುತ್ತಿರುವ ಈ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡುತ್ತಿರುವ ಸಂಸ್ಥೆ ಕಲಿಕೆಗೆ ಬರುವ ವಿದ್ಯಾರ್ಥಿಗಳನ್ನು ತಮ್ಮ ಆಯ್ಕೆಯ ವಿಷಯದಲ್ಲಿ ಹಿಡಿತ ಸಾಧಿಸಲು ನೆರವಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯ ನಿರ್ಮಾಣವಾಗಿದೆ. ಈ ಕಾಲೇಜು ಪ್ರಾಯೋಗಿಕ ಕಲಿಕೆ, ಸುಸಜ್ಜಿತ ಓದಿನ ಸಂಪನ್ಮೂಲಗಳು, ವಿಷಯ ತಜ್ಞರು-ಶಿಕ್ಷಣ ತಜ್ಞರಿಂದ ಮಾರ್ಗದರ್ಶನ, ಅಧ್ಯಯನ ಪ್ರವಾಸ ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಿದೆ. ಇಲ್ಲಿ ಮೂರು ತಿಂಗಳ ಅವಧಿಗೆ ಜುಲೈ 15ರಿಂದ ಆರಂಭವಾಗುತ್ತಿರುವ ಐeಚಿಡಿಟಿiಟಿg ಐಇಓSಇS ಕೋರ್ಸುಗಳಿಗೆ ಜುಲೈ 05 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಯಾವ ಕೋರ್ಸುಗಳು ಲಭ್ಯ
· ಸೃಜನಶೀಲ ಬೋಧನಾ ಕಲಿಕೆ
· ಆಪ್ತ ಸಮಾಲೋಚನಾ ಕೌಶಲ್ಯ ಕಲಿಕೆ
· ಡಿಜಿಟಲ್ ಕ್ಲಾಸ್ ರೂಂ ನಿರ್ವಹಣೆ
· ಜೆಆರ್‍ಎಫ್, ನೆಟ್ ಮತ್ತು ಸ್ಲೆಟ್ ಸಿದ್ಧತೆಗೆ ತರಬೇತಿ
· ಪಿಎಚ್‍ಡಿ ಮತ್ತು ಕಿರುಸಂಶೋಧನೆಗಳ ಸಿದ್ಧತೆಗೆ ಮಾರ್ಗದರ್ಶನ
· ಕಾಲೇಜುಗಳಲ್ಲಿ ನಡೆಯುವ ನೇಮಕಾತಿ ಸಂದರ್ಶನಗಳಿಗೆ ಸಹಾಯ

ಯಾರು ಅರ್ಜಿ ಸಲ್ಲಿಸಬಹುದು
· ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.
· ಸಂಶೋಧನಾ ವಿದ್ಯಾರ್ಥಿ/ನಿಯರು.
· ಈಗಾಗಲೇ ಅಧ್ಯಾಪಕ ವೃತ್ತಿಯಲ್ಲಿದ್ದು, ಮತ್ತಷ್ಟು ಸೃಜನಶೀಲತೆ ಕಲಿಯುವ ಆಸಕ್ತಿ ಇರುವವರು.

ಮೇಲಿನ ಕೋರ್ಸುಗಳಿಗೆ ಕೇವಲ 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಸಲಾಗುವುದು. ಅಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಯ ಮಾಹಿತಿ(ರೆಸುಮ್)ಯನ್ನು ಜುಲೈ 05 ರೊಳಗೆ ಕೆಳಕಂಡ ವಿಳಾಸಕ್ಕೆ ತಲುಪಿಸಿ ಅಥವಾ ಇ-ಮೇಲ್ ಮಾಡಬಹುದು.

ಸಂಪರ್ಕ: ಸಂವಾದ, ಬದುಕು ಕಮ್ಯುನಿಟಿ ಕಾಲೇಜು, #7, 2ನೇ ಕ್ರಾಸ್, ಡಯಾಗನಲ್ ರಸ್ತೆ, ಸಿಟಿ ಸೆಂಟ್ರಲ್ ಲೈಬ್ರರಿ ಹಿಂಭಾಗ, ಜಯನಗರ 3ನೇ ಹಂತ, ಬೆಂಗಳೂರು. 560011…
7899769899, 9739286217, 8050599001

ಇ-ಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...