Homeಕರ್ನಾಟಕಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಯಶಸ್ವಿ ಬೋಧನೆಗೊಂದು ಬೆಳಕಿಂಡಿ ಬದುಕು ಕಮ್ಯೂನಿಟಿ ಕಾಲೇಜು. ಕಲಿಯಲು, ಕಲಿತು ಕಲಿಸಲು ಆಸಕ್ತಿ ಇರುವವರಿಗೆ ಒಂದೊಳ್ಳ ಅವಕಾಶ

- Advertisement -
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಕನಸು ಎಲ್ಲರಲ್ಲಿಯೂ ಚಿಗುರುತ್ತದೆ. ಅಂತಹ ಕನಸುಗಳನ್ನು ನನಸು ಮಾಡಲು ಕೆಲವರಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಸಹಾಯವಾದರೆ, ಮತ್ತೂ ಕೆಲವರಿಗೆ ಕನಸನ್ನ ಕನಸಾಗಿಯೇ ಉಳಿಸಿಬಿಡುತ್ತದೆ. ಅದರಲ್ಲೂ ಖಾಸಗೀಕರಣದ ದವಡೆಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ದುಭಾರಿಯೇ ಸರಿ. ಉತ್ತಮ ಶೈಕ್ಷಣಿಕ ಸೌಲಭ್ಯ, ಸಾಧನೆಯ ಹಾದಿಯಲ್ಲಿ ಒಂದಷ್ಟು ಮಾರ್ಗದರ್ಶನ ಪಡೆದುಕೊಳ್ಳಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಅಂತಹ ಬಯಕೆಗಳಿಗೆ ಆರ್ಥಿಕ ಪರಿಸ್ಥಿತಿಗಳಂತಹ ಹಲವು ಸಮಸ್ಯೆಗಳು ಎದುರಾಗುತ್ತವೆ.

- Advertisement -

ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿಯೂ ಉತ್ತಮ ಬೋಧಕರಾಗಬೇಕು, ಆಪ್ತ ಸಮಾಲೋಚಕರಾಗಬೇಕು, ಜೆಆರ್‍ಎಫ್-ಎನ್‍ಇಟಿಗಳನ್ನು ಪಾಸು ಮಾಡಿ ಪಿಎಚ್‍ಡಿ ಪದವಿ ಪಡೆಯಬೇಕೆಂದು, ಅದರೊಂದಿಗೆ ಸಮಾಜದಲ್ಲಿ ಏನನ್ನಾದರೂ ಕೊಡುಗೆ ಕೊಡಬೇಕು ಎಂದು ಬಯಸುವವರು ಸಾಕಷ್ಟಿದ್ದಾರೆ. ಅಂತಹವರಿಗೆ ಈಗೊಂದು ಸುವರ್ಣಾವಕಾಶವನ್ನು ಬದುಕು ಕಮ್ಯುನಿಟಿ ಕಾಲೇಜು ತೆರೆದಿಟ್ಟಿದೆ.

ಕಡಿಮೆ ಖರ್ಚಿನಲ್ಲಿ ಕೋಚಿಂಗ್ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುತ್ತಿರುವ ಈ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡುತ್ತಿರುವ ಸಂಸ್ಥೆ ಕಲಿಕೆಗೆ ಬರುವ ವಿದ್ಯಾರ್ಥಿಗಳನ್ನು ತಮ್ಮ ಆಯ್ಕೆಯ ವಿಷಯದಲ್ಲಿ ಹಿಡಿತ ಸಾಧಿಸಲು ನೆರವಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯ ನಿರ್ಮಾಣವಾಗಿದೆ. ಈ ಕಾಲೇಜು ಪ್ರಾಯೋಗಿಕ ಕಲಿಕೆ, ಸುಸಜ್ಜಿತ ಓದಿನ ಸಂಪನ್ಮೂಲಗಳು, ವಿಷಯ ತಜ್ಞರು-ಶಿಕ್ಷಣ ತಜ್ಞರಿಂದ ಮಾರ್ಗದರ್ಶನ, ಅಧ್ಯಯನ ಪ್ರವಾಸ ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಿದೆ. ಇಲ್ಲಿ ಮೂರು ತಿಂಗಳ ಅವಧಿಗೆ ಜುಲೈ 15ರಿಂದ ಆರಂಭವಾಗುತ್ತಿರುವ ಐeಚಿಡಿಟಿiಟಿg ಐಇಓSಇS ಕೋರ್ಸುಗಳಿಗೆ ಜುಲೈ 05 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಯಾವ ಕೋರ್ಸುಗಳು ಲಭ್ಯ
· ಸೃಜನಶೀಲ ಬೋಧನಾ ಕಲಿಕೆ
· ಆಪ್ತ ಸಮಾಲೋಚನಾ ಕೌಶಲ್ಯ ಕಲಿಕೆ
· ಡಿಜಿಟಲ್ ಕ್ಲಾಸ್ ರೂಂ ನಿರ್ವಹಣೆ
· ಜೆಆರ್‍ಎಫ್, ನೆಟ್ ಮತ್ತು ಸ್ಲೆಟ್ ಸಿದ್ಧತೆಗೆ ತರಬೇತಿ
· ಪಿಎಚ್‍ಡಿ ಮತ್ತು ಕಿರುಸಂಶೋಧನೆಗಳ ಸಿದ್ಧತೆಗೆ ಮಾರ್ಗದರ್ಶನ
· ಕಾಲೇಜುಗಳಲ್ಲಿ ನಡೆಯುವ ನೇಮಕಾತಿ ಸಂದರ್ಶನಗಳಿಗೆ ಸಹಾಯ

ಯಾರು ಅರ್ಜಿ ಸಲ್ಲಿಸಬಹುದು
· ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.
· ಸಂಶೋಧನಾ ವಿದ್ಯಾರ್ಥಿ/ನಿಯರು.
· ಈಗಾಗಲೇ ಅಧ್ಯಾಪಕ ವೃತ್ತಿಯಲ್ಲಿದ್ದು, ಮತ್ತಷ್ಟು ಸೃಜನಶೀಲತೆ ಕಲಿಯುವ ಆಸಕ್ತಿ ಇರುವವರು.

ಮೇಲಿನ ಕೋರ್ಸುಗಳಿಗೆ ಕೇವಲ 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಸಲಾಗುವುದು. ಅಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಯ ಮಾಹಿತಿ(ರೆಸುಮ್)ಯನ್ನು ಜುಲೈ 05 ರೊಳಗೆ ಕೆಳಕಂಡ ವಿಳಾಸಕ್ಕೆ ತಲುಪಿಸಿ ಅಥವಾ ಇ-ಮೇಲ್ ಮಾಡಬಹುದು.

ಸಂಪರ್ಕ: ಸಂವಾದ, ಬದುಕು ಕಮ್ಯುನಿಟಿ ಕಾಲೇಜು, #7, 2ನೇ ಕ್ರಾಸ್, ಡಯಾಗನಲ್ ರಸ್ತೆ, ಸಿಟಿ ಸೆಂಟ್ರಲ್ ಲೈಬ್ರರಿ ಹಿಂಭಾಗ, ಜಯನಗರ 3ನೇ ಹಂತ, ಬೆಂಗಳೂರು. 560011…
7899769899, 9739286217, 8050599001

ಇ-ಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...