Homeಕರ್ನಾಟಕಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಯಶಸ್ವಿ ಬೋಧನೆಗೊಂದು ಬೆಳಕಿಂಡಿ ಬದುಕು ಕಮ್ಯೂನಿಟಿ ಕಾಲೇಜು. ಕಲಿಯಲು, ಕಲಿತು ಕಲಿಸಲು ಆಸಕ್ತಿ ಇರುವವರಿಗೆ ಒಂದೊಳ್ಳ ಅವಕಾಶ

- Advertisement -
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಕನಸು ಎಲ್ಲರಲ್ಲಿಯೂ ಚಿಗುರುತ್ತದೆ. ಅಂತಹ ಕನಸುಗಳನ್ನು ನನಸು ಮಾಡಲು ಕೆಲವರಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಸಹಾಯವಾದರೆ, ಮತ್ತೂ ಕೆಲವರಿಗೆ ಕನಸನ್ನ ಕನಸಾಗಿಯೇ ಉಳಿಸಿಬಿಡುತ್ತದೆ. ಅದರಲ್ಲೂ ಖಾಸಗೀಕರಣದ ದವಡೆಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ದುಭಾರಿಯೇ ಸರಿ. ಉತ್ತಮ ಶೈಕ್ಷಣಿಕ ಸೌಲಭ್ಯ, ಸಾಧನೆಯ ಹಾದಿಯಲ್ಲಿ ಒಂದಷ್ಟು ಮಾರ್ಗದರ್ಶನ ಪಡೆದುಕೊಳ್ಳಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಅಂತಹ ಬಯಕೆಗಳಿಗೆ ಆರ್ಥಿಕ ಪರಿಸ್ಥಿತಿಗಳಂತಹ ಹಲವು ಸಮಸ್ಯೆಗಳು ಎದುರಾಗುತ್ತವೆ.

- Advertisement -

ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿಯೂ ಉತ್ತಮ ಬೋಧಕರಾಗಬೇಕು, ಆಪ್ತ ಸಮಾಲೋಚಕರಾಗಬೇಕು, ಜೆಆರ್‍ಎಫ್-ಎನ್‍ಇಟಿಗಳನ್ನು ಪಾಸು ಮಾಡಿ ಪಿಎಚ್‍ಡಿ ಪದವಿ ಪಡೆಯಬೇಕೆಂದು, ಅದರೊಂದಿಗೆ ಸಮಾಜದಲ್ಲಿ ಏನನ್ನಾದರೂ ಕೊಡುಗೆ ಕೊಡಬೇಕು ಎಂದು ಬಯಸುವವರು ಸಾಕಷ್ಟಿದ್ದಾರೆ. ಅಂತಹವರಿಗೆ ಈಗೊಂದು ಸುವರ್ಣಾವಕಾಶವನ್ನು ಬದುಕು ಕಮ್ಯುನಿಟಿ ಕಾಲೇಜು ತೆರೆದಿಟ್ಟಿದೆ.

ಕಡಿಮೆ ಖರ್ಚಿನಲ್ಲಿ ಕೋಚಿಂಗ್ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುತ್ತಿರುವ ಈ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡುತ್ತಿರುವ ಸಂಸ್ಥೆ ಕಲಿಕೆಗೆ ಬರುವ ವಿದ್ಯಾರ್ಥಿಗಳನ್ನು ತಮ್ಮ ಆಯ್ಕೆಯ ವಿಷಯದಲ್ಲಿ ಹಿಡಿತ ಸಾಧಿಸಲು ನೆರವಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯ ನಿರ್ಮಾಣವಾಗಿದೆ. ಈ ಕಾಲೇಜು ಪ್ರಾಯೋಗಿಕ ಕಲಿಕೆ, ಸುಸಜ್ಜಿತ ಓದಿನ ಸಂಪನ್ಮೂಲಗಳು, ವಿಷಯ ತಜ್ಞರು-ಶಿಕ್ಷಣ ತಜ್ಞರಿಂದ ಮಾರ್ಗದರ್ಶನ, ಅಧ್ಯಯನ ಪ್ರವಾಸ ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಿದೆ. ಇಲ್ಲಿ ಮೂರು ತಿಂಗಳ ಅವಧಿಗೆ ಜುಲೈ 15ರಿಂದ ಆರಂಭವಾಗುತ್ತಿರುವ ಐeಚಿಡಿಟಿiಟಿg ಐಇಓSಇS ಕೋರ್ಸುಗಳಿಗೆ ಜುಲೈ 05 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಯಾವ ಕೋರ್ಸುಗಳು ಲಭ್ಯ
· ಸೃಜನಶೀಲ ಬೋಧನಾ ಕಲಿಕೆ
· ಆಪ್ತ ಸಮಾಲೋಚನಾ ಕೌಶಲ್ಯ ಕಲಿಕೆ
· ಡಿಜಿಟಲ್ ಕ್ಲಾಸ್ ರೂಂ ನಿರ್ವಹಣೆ
· ಜೆಆರ್‍ಎಫ್, ನೆಟ್ ಮತ್ತು ಸ್ಲೆಟ್ ಸಿದ್ಧತೆಗೆ ತರಬೇತಿ
· ಪಿಎಚ್‍ಡಿ ಮತ್ತು ಕಿರುಸಂಶೋಧನೆಗಳ ಸಿದ್ಧತೆಗೆ ಮಾರ್ಗದರ್ಶನ
· ಕಾಲೇಜುಗಳಲ್ಲಿ ನಡೆಯುವ ನೇಮಕಾತಿ ಸಂದರ್ಶನಗಳಿಗೆ ಸಹಾಯ

ಯಾರು ಅರ್ಜಿ ಸಲ್ಲಿಸಬಹುದು
· ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.
· ಸಂಶೋಧನಾ ವಿದ್ಯಾರ್ಥಿ/ನಿಯರು.
· ಈಗಾಗಲೇ ಅಧ್ಯಾಪಕ ವೃತ್ತಿಯಲ್ಲಿದ್ದು, ಮತ್ತಷ್ಟು ಸೃಜನಶೀಲತೆ ಕಲಿಯುವ ಆಸಕ್ತಿ ಇರುವವರು.

ಮೇಲಿನ ಕೋರ್ಸುಗಳಿಗೆ ಕೇವಲ 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಸಲಾಗುವುದು. ಅಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಯ ಮಾಹಿತಿ(ರೆಸುಮ್)ಯನ್ನು ಜುಲೈ 05 ರೊಳಗೆ ಕೆಳಕಂಡ ವಿಳಾಸಕ್ಕೆ ತಲುಪಿಸಿ ಅಥವಾ ಇ-ಮೇಲ್ ಮಾಡಬಹುದು.

ಸಂಪರ್ಕ: ಸಂವಾದ, ಬದುಕು ಕಮ್ಯುನಿಟಿ ಕಾಲೇಜು, #7, 2ನೇ ಕ್ರಾಸ್, ಡಯಾಗನಲ್ ರಸ್ತೆ, ಸಿಟಿ ಸೆಂಟ್ರಲ್ ಲೈಬ್ರರಿ ಹಿಂಭಾಗ, ಜಯನಗರ 3ನೇ ಹಂತ, ಬೆಂಗಳೂರು. 560011…
7899769899, 9739286217, 8050599001

ಇ-ಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...