Homeಕರ್ನಾಟಕಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಯಶಸ್ವಿ ಬೋಧನೆಗೊಂದು ಬೆಳಕಿಂಡಿ ಬದುಕು ಕಮ್ಯೂನಿಟಿ ಕಾಲೇಜು. ಕಲಿಯಲು, ಕಲಿತು ಕಲಿಸಲು ಆಸಕ್ತಿ ಇರುವವರಿಗೆ ಒಂದೊಳ್ಳ ಅವಕಾಶ

- Advertisement -
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಕನಸು ಎಲ್ಲರಲ್ಲಿಯೂ ಚಿಗುರುತ್ತದೆ. ಅಂತಹ ಕನಸುಗಳನ್ನು ನನಸು ಮಾಡಲು ಕೆಲವರಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಸಹಾಯವಾದರೆ, ಮತ್ತೂ ಕೆಲವರಿಗೆ ಕನಸನ್ನ ಕನಸಾಗಿಯೇ ಉಳಿಸಿಬಿಡುತ್ತದೆ. ಅದರಲ್ಲೂ ಖಾಸಗೀಕರಣದ ದವಡೆಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ದುಭಾರಿಯೇ ಸರಿ. ಉತ್ತಮ ಶೈಕ್ಷಣಿಕ ಸೌಲಭ್ಯ, ಸಾಧನೆಯ ಹಾದಿಯಲ್ಲಿ ಒಂದಷ್ಟು ಮಾರ್ಗದರ್ಶನ ಪಡೆದುಕೊಳ್ಳಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಅಂತಹ ಬಯಕೆಗಳಿಗೆ ಆರ್ಥಿಕ ಪರಿಸ್ಥಿತಿಗಳಂತಹ ಹಲವು ಸಮಸ್ಯೆಗಳು ಎದುರಾಗುತ್ತವೆ.

- Advertisement -

ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿಯೂ ಉತ್ತಮ ಬೋಧಕರಾಗಬೇಕು, ಆಪ್ತ ಸಮಾಲೋಚಕರಾಗಬೇಕು, ಜೆಆರ್‍ಎಫ್-ಎನ್‍ಇಟಿಗಳನ್ನು ಪಾಸು ಮಾಡಿ ಪಿಎಚ್‍ಡಿ ಪದವಿ ಪಡೆಯಬೇಕೆಂದು, ಅದರೊಂದಿಗೆ ಸಮಾಜದಲ್ಲಿ ಏನನ್ನಾದರೂ ಕೊಡುಗೆ ಕೊಡಬೇಕು ಎಂದು ಬಯಸುವವರು ಸಾಕಷ್ಟಿದ್ದಾರೆ. ಅಂತಹವರಿಗೆ ಈಗೊಂದು ಸುವರ್ಣಾವಕಾಶವನ್ನು ಬದುಕು ಕಮ್ಯುನಿಟಿ ಕಾಲೇಜು ತೆರೆದಿಟ್ಟಿದೆ.

ಕಡಿಮೆ ಖರ್ಚಿನಲ್ಲಿ ಕೋಚಿಂಗ್ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುತ್ತಿರುವ ಈ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡುತ್ತಿರುವ ಸಂಸ್ಥೆ ಕಲಿಕೆಗೆ ಬರುವ ವಿದ್ಯಾರ್ಥಿಗಳನ್ನು ತಮ್ಮ ಆಯ್ಕೆಯ ವಿಷಯದಲ್ಲಿ ಹಿಡಿತ ಸಾಧಿಸಲು ನೆರವಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯ ನಿರ್ಮಾಣವಾಗಿದೆ. ಈ ಕಾಲೇಜು ಪ್ರಾಯೋಗಿಕ ಕಲಿಕೆ, ಸುಸಜ್ಜಿತ ಓದಿನ ಸಂಪನ್ಮೂಲಗಳು, ವಿಷಯ ತಜ್ಞರು-ಶಿಕ್ಷಣ ತಜ್ಞರಿಂದ ಮಾರ್ಗದರ್ಶನ, ಅಧ್ಯಯನ ಪ್ರವಾಸ ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಿದೆ. ಇಲ್ಲಿ ಮೂರು ತಿಂಗಳ ಅವಧಿಗೆ ಜುಲೈ 15ರಿಂದ ಆರಂಭವಾಗುತ್ತಿರುವ ಐeಚಿಡಿಟಿiಟಿg ಐಇಓSಇS ಕೋರ್ಸುಗಳಿಗೆ ಜುಲೈ 05 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಯಾವ ಕೋರ್ಸುಗಳು ಲಭ್ಯ
· ಸೃಜನಶೀಲ ಬೋಧನಾ ಕಲಿಕೆ
· ಆಪ್ತ ಸಮಾಲೋಚನಾ ಕೌಶಲ್ಯ ಕಲಿಕೆ
· ಡಿಜಿಟಲ್ ಕ್ಲಾಸ್ ರೂಂ ನಿರ್ವಹಣೆ
· ಜೆಆರ್‍ಎಫ್, ನೆಟ್ ಮತ್ತು ಸ್ಲೆಟ್ ಸಿದ್ಧತೆಗೆ ತರಬೇತಿ
· ಪಿಎಚ್‍ಡಿ ಮತ್ತು ಕಿರುಸಂಶೋಧನೆಗಳ ಸಿದ್ಧತೆಗೆ ಮಾರ್ಗದರ್ಶನ
· ಕಾಲೇಜುಗಳಲ್ಲಿ ನಡೆಯುವ ನೇಮಕಾತಿ ಸಂದರ್ಶನಗಳಿಗೆ ಸಹಾಯ

ಯಾರು ಅರ್ಜಿ ಸಲ್ಲಿಸಬಹುದು
· ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.
· ಸಂಶೋಧನಾ ವಿದ್ಯಾರ್ಥಿ/ನಿಯರು.
· ಈಗಾಗಲೇ ಅಧ್ಯಾಪಕ ವೃತ್ತಿಯಲ್ಲಿದ್ದು, ಮತ್ತಷ್ಟು ಸೃಜನಶೀಲತೆ ಕಲಿಯುವ ಆಸಕ್ತಿ ಇರುವವರು.

ಮೇಲಿನ ಕೋರ್ಸುಗಳಿಗೆ ಕೇವಲ 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಸಲಾಗುವುದು. ಅಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಯ ಮಾಹಿತಿ(ರೆಸುಮ್)ಯನ್ನು ಜುಲೈ 05 ರೊಳಗೆ ಕೆಳಕಂಡ ವಿಳಾಸಕ್ಕೆ ತಲುಪಿಸಿ ಅಥವಾ ಇ-ಮೇಲ್ ಮಾಡಬಹುದು.

ಸಂಪರ್ಕ: ಸಂವಾದ, ಬದುಕು ಕಮ್ಯುನಿಟಿ ಕಾಲೇಜು, #7, 2ನೇ ಕ್ರಾಸ್, ಡಯಾಗನಲ್ ರಸ್ತೆ, ಸಿಟಿ ಸೆಂಟ್ರಲ್ ಲೈಬ್ರರಿ ಹಿಂಭಾಗ, ಜಯನಗರ 3ನೇ ಹಂತ, ಬೆಂಗಳೂರು. 560011…
7899769899, 9739286217, 8050599001

ಇ-ಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...