Homeಕರ್ನಾಟಕಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಯಶಸ್ವಿ ಬೋಧನೆಗೊಂದು ಬೆಳಕಿಂಡಿ ಬದುಕು ಕಮ್ಯೂನಿಟಿ ಕಾಲೇಜು. ಕಲಿಯಲು, ಕಲಿತು ಕಲಿಸಲು ಆಸಕ್ತಿ ಇರುವವರಿಗೆ ಒಂದೊಳ್ಳ ಅವಕಾಶ

- Advertisement -
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಕನಸು ಎಲ್ಲರಲ್ಲಿಯೂ ಚಿಗುರುತ್ತದೆ. ಅಂತಹ ಕನಸುಗಳನ್ನು ನನಸು ಮಾಡಲು ಕೆಲವರಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಸಹಾಯವಾದರೆ, ಮತ್ತೂ ಕೆಲವರಿಗೆ ಕನಸನ್ನ ಕನಸಾಗಿಯೇ ಉಳಿಸಿಬಿಡುತ್ತದೆ. ಅದರಲ್ಲೂ ಖಾಸಗೀಕರಣದ ದವಡೆಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ದುಭಾರಿಯೇ ಸರಿ. ಉತ್ತಮ ಶೈಕ್ಷಣಿಕ ಸೌಲಭ್ಯ, ಸಾಧನೆಯ ಹಾದಿಯಲ್ಲಿ ಒಂದಷ್ಟು ಮಾರ್ಗದರ್ಶನ ಪಡೆದುಕೊಳ್ಳಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಅಂತಹ ಬಯಕೆಗಳಿಗೆ ಆರ್ಥಿಕ ಪರಿಸ್ಥಿತಿಗಳಂತಹ ಹಲವು ಸಮಸ್ಯೆಗಳು ಎದುರಾಗುತ್ತವೆ.

- Advertisement -

ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿಯೂ ಉತ್ತಮ ಬೋಧಕರಾಗಬೇಕು, ಆಪ್ತ ಸಮಾಲೋಚಕರಾಗಬೇಕು, ಜೆಆರ್‍ಎಫ್-ಎನ್‍ಇಟಿಗಳನ್ನು ಪಾಸು ಮಾಡಿ ಪಿಎಚ್‍ಡಿ ಪದವಿ ಪಡೆಯಬೇಕೆಂದು, ಅದರೊಂದಿಗೆ ಸಮಾಜದಲ್ಲಿ ಏನನ್ನಾದರೂ ಕೊಡುಗೆ ಕೊಡಬೇಕು ಎಂದು ಬಯಸುವವರು ಸಾಕಷ್ಟಿದ್ದಾರೆ. ಅಂತಹವರಿಗೆ ಈಗೊಂದು ಸುವರ್ಣಾವಕಾಶವನ್ನು ಬದುಕು ಕಮ್ಯುನಿಟಿ ಕಾಲೇಜು ತೆರೆದಿಟ್ಟಿದೆ.

ಕಡಿಮೆ ಖರ್ಚಿನಲ್ಲಿ ಕೋಚಿಂಗ್ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುತ್ತಿರುವ ಈ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡುತ್ತಿರುವ ಸಂಸ್ಥೆ ಕಲಿಕೆಗೆ ಬರುವ ವಿದ್ಯಾರ್ಥಿಗಳನ್ನು ತಮ್ಮ ಆಯ್ಕೆಯ ವಿಷಯದಲ್ಲಿ ಹಿಡಿತ ಸಾಧಿಸಲು ನೆರವಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯ ನಿರ್ಮಾಣವಾಗಿದೆ. ಈ ಕಾಲೇಜು ಪ್ರಾಯೋಗಿಕ ಕಲಿಕೆ, ಸುಸಜ್ಜಿತ ಓದಿನ ಸಂಪನ್ಮೂಲಗಳು, ವಿಷಯ ತಜ್ಞರು-ಶಿಕ್ಷಣ ತಜ್ಞರಿಂದ ಮಾರ್ಗದರ್ಶನ, ಅಧ್ಯಯನ ಪ್ರವಾಸ ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಿದೆ. ಇಲ್ಲಿ ಮೂರು ತಿಂಗಳ ಅವಧಿಗೆ ಜುಲೈ 15ರಿಂದ ಆರಂಭವಾಗುತ್ತಿರುವ ಐeಚಿಡಿಟಿiಟಿg ಐಇಓSಇS ಕೋರ್ಸುಗಳಿಗೆ ಜುಲೈ 05 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಯಾವ ಕೋರ್ಸುಗಳು ಲಭ್ಯ
· ಸೃಜನಶೀಲ ಬೋಧನಾ ಕಲಿಕೆ
· ಆಪ್ತ ಸಮಾಲೋಚನಾ ಕೌಶಲ್ಯ ಕಲಿಕೆ
· ಡಿಜಿಟಲ್ ಕ್ಲಾಸ್ ರೂಂ ನಿರ್ವಹಣೆ
· ಜೆಆರ್‍ಎಫ್, ನೆಟ್ ಮತ್ತು ಸ್ಲೆಟ್ ಸಿದ್ಧತೆಗೆ ತರಬೇತಿ
· ಪಿಎಚ್‍ಡಿ ಮತ್ತು ಕಿರುಸಂಶೋಧನೆಗಳ ಸಿದ್ಧತೆಗೆ ಮಾರ್ಗದರ್ಶನ
· ಕಾಲೇಜುಗಳಲ್ಲಿ ನಡೆಯುವ ನೇಮಕಾತಿ ಸಂದರ್ಶನಗಳಿಗೆ ಸಹಾಯ

ಯಾರು ಅರ್ಜಿ ಸಲ್ಲಿಸಬಹುದು
· ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.
· ಸಂಶೋಧನಾ ವಿದ್ಯಾರ್ಥಿ/ನಿಯರು.
· ಈಗಾಗಲೇ ಅಧ್ಯಾಪಕ ವೃತ್ತಿಯಲ್ಲಿದ್ದು, ಮತ್ತಷ್ಟು ಸೃಜನಶೀಲತೆ ಕಲಿಯುವ ಆಸಕ್ತಿ ಇರುವವರು.

ಮೇಲಿನ ಕೋರ್ಸುಗಳಿಗೆ ಕೇವಲ 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಸಲಾಗುವುದು. ಅಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಯ ಮಾಹಿತಿ(ರೆಸುಮ್)ಯನ್ನು ಜುಲೈ 05 ರೊಳಗೆ ಕೆಳಕಂಡ ವಿಳಾಸಕ್ಕೆ ತಲುಪಿಸಿ ಅಥವಾ ಇ-ಮೇಲ್ ಮಾಡಬಹುದು.

ಸಂಪರ್ಕ: ಸಂವಾದ, ಬದುಕು ಕಮ್ಯುನಿಟಿ ಕಾಲೇಜು, #7, 2ನೇ ಕ್ರಾಸ್, ಡಯಾಗನಲ್ ರಸ್ತೆ, ಸಿಟಿ ಸೆಂಟ್ರಲ್ ಲೈಬ್ರರಿ ಹಿಂಭಾಗ, ಜಯನಗರ 3ನೇ ಹಂತ, ಬೆಂಗಳೂರು. 560011…
7899769899, 9739286217, 8050599001

ಇ-ಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...