Homeಕರ್ನಾಟಕಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಯಶಸ್ವಿ ಬೋಧನೆಗೊಂದು ಬೆಳಕಿಂಡಿ ಬದುಕು ಕಮ್ಯೂನಿಟಿ ಕಾಲೇಜು. ಕಲಿಯಲು, ಕಲಿತು ಕಲಿಸಲು ಆಸಕ್ತಿ ಇರುವವರಿಗೆ ಒಂದೊಳ್ಳ ಅವಕಾಶ

- Advertisement -
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಕನಸು ಎಲ್ಲರಲ್ಲಿಯೂ ಚಿಗುರುತ್ತದೆ. ಅಂತಹ ಕನಸುಗಳನ್ನು ನನಸು ಮಾಡಲು ಕೆಲವರಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಸಹಾಯವಾದರೆ, ಮತ್ತೂ ಕೆಲವರಿಗೆ ಕನಸನ್ನ ಕನಸಾಗಿಯೇ ಉಳಿಸಿಬಿಡುತ್ತದೆ. ಅದರಲ್ಲೂ ಖಾಸಗೀಕರಣದ ದವಡೆಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ದುಭಾರಿಯೇ ಸರಿ. ಉತ್ತಮ ಶೈಕ್ಷಣಿಕ ಸೌಲಭ್ಯ, ಸಾಧನೆಯ ಹಾದಿಯಲ್ಲಿ ಒಂದಷ್ಟು ಮಾರ್ಗದರ್ಶನ ಪಡೆದುಕೊಳ್ಳಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಅಂತಹ ಬಯಕೆಗಳಿಗೆ ಆರ್ಥಿಕ ಪರಿಸ್ಥಿತಿಗಳಂತಹ ಹಲವು ಸಮಸ್ಯೆಗಳು ಎದುರಾಗುತ್ತವೆ.

- Advertisement -

ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿಯೂ ಉತ್ತಮ ಬೋಧಕರಾಗಬೇಕು, ಆಪ್ತ ಸಮಾಲೋಚಕರಾಗಬೇಕು, ಜೆಆರ್‍ಎಫ್-ಎನ್‍ಇಟಿಗಳನ್ನು ಪಾಸು ಮಾಡಿ ಪಿಎಚ್‍ಡಿ ಪದವಿ ಪಡೆಯಬೇಕೆಂದು, ಅದರೊಂದಿಗೆ ಸಮಾಜದಲ್ಲಿ ಏನನ್ನಾದರೂ ಕೊಡುಗೆ ಕೊಡಬೇಕು ಎಂದು ಬಯಸುವವರು ಸಾಕಷ್ಟಿದ್ದಾರೆ. ಅಂತಹವರಿಗೆ ಈಗೊಂದು ಸುವರ್ಣಾವಕಾಶವನ್ನು ಬದುಕು ಕಮ್ಯುನಿಟಿ ಕಾಲೇಜು ತೆರೆದಿಟ್ಟಿದೆ.

ಕಡಿಮೆ ಖರ್ಚಿನಲ್ಲಿ ಕೋಚಿಂಗ್ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುತ್ತಿರುವ ಈ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡುತ್ತಿರುವ ಸಂಸ್ಥೆ ಕಲಿಕೆಗೆ ಬರುವ ವಿದ್ಯಾರ್ಥಿಗಳನ್ನು ತಮ್ಮ ಆಯ್ಕೆಯ ವಿಷಯದಲ್ಲಿ ಹಿಡಿತ ಸಾಧಿಸಲು ನೆರವಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯ ನಿರ್ಮಾಣವಾಗಿದೆ. ಈ ಕಾಲೇಜು ಪ್ರಾಯೋಗಿಕ ಕಲಿಕೆ, ಸುಸಜ್ಜಿತ ಓದಿನ ಸಂಪನ್ಮೂಲಗಳು, ವಿಷಯ ತಜ್ಞರು-ಶಿಕ್ಷಣ ತಜ್ಞರಿಂದ ಮಾರ್ಗದರ್ಶನ, ಅಧ್ಯಯನ ಪ್ರವಾಸ ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಿದೆ. ಇಲ್ಲಿ ಮೂರು ತಿಂಗಳ ಅವಧಿಗೆ ಜುಲೈ 15ರಿಂದ ಆರಂಭವಾಗುತ್ತಿರುವ ಐeಚಿಡಿಟಿiಟಿg ಐಇಓSಇS ಕೋರ್ಸುಗಳಿಗೆ ಜುಲೈ 05 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಯಾವ ಕೋರ್ಸುಗಳು ಲಭ್ಯ
· ಸೃಜನಶೀಲ ಬೋಧನಾ ಕಲಿಕೆ
· ಆಪ್ತ ಸಮಾಲೋಚನಾ ಕೌಶಲ್ಯ ಕಲಿಕೆ
· ಡಿಜಿಟಲ್ ಕ್ಲಾಸ್ ರೂಂ ನಿರ್ವಹಣೆ
· ಜೆಆರ್‍ಎಫ್, ನೆಟ್ ಮತ್ತು ಸ್ಲೆಟ್ ಸಿದ್ಧತೆಗೆ ತರಬೇತಿ
· ಪಿಎಚ್‍ಡಿ ಮತ್ತು ಕಿರುಸಂಶೋಧನೆಗಳ ಸಿದ್ಧತೆಗೆ ಮಾರ್ಗದರ್ಶನ
· ಕಾಲೇಜುಗಳಲ್ಲಿ ನಡೆಯುವ ನೇಮಕಾತಿ ಸಂದರ್ಶನಗಳಿಗೆ ಸಹಾಯ

ಯಾರು ಅರ್ಜಿ ಸಲ್ಲಿಸಬಹುದು
· ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.
· ಸಂಶೋಧನಾ ವಿದ್ಯಾರ್ಥಿ/ನಿಯರು.
· ಈಗಾಗಲೇ ಅಧ್ಯಾಪಕ ವೃತ್ತಿಯಲ್ಲಿದ್ದು, ಮತ್ತಷ್ಟು ಸೃಜನಶೀಲತೆ ಕಲಿಯುವ ಆಸಕ್ತಿ ಇರುವವರು.

ಮೇಲಿನ ಕೋರ್ಸುಗಳಿಗೆ ಕೇವಲ 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಸಲಾಗುವುದು. ಅಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಯ ಮಾಹಿತಿ(ರೆಸುಮ್)ಯನ್ನು ಜುಲೈ 05 ರೊಳಗೆ ಕೆಳಕಂಡ ವಿಳಾಸಕ್ಕೆ ತಲುಪಿಸಿ ಅಥವಾ ಇ-ಮೇಲ್ ಮಾಡಬಹುದು.

ಸಂಪರ್ಕ: ಸಂವಾದ, ಬದುಕು ಕಮ್ಯುನಿಟಿ ಕಾಲೇಜು, #7, 2ನೇ ಕ್ರಾಸ್, ಡಯಾಗನಲ್ ರಸ್ತೆ, ಸಿಟಿ ಸೆಂಟ್ರಲ್ ಲೈಬ್ರರಿ ಹಿಂಭಾಗ, ಜಯನಗರ 3ನೇ ಹಂತ, ಬೆಂಗಳೂರು. 560011…
7899769899, 9739286217, 8050599001

ಇ-ಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...