Homeಕರ್ನಾಟಕಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಯಶಸ್ವಿ ಬೋಧನೆಗೊಂದು ಬೆಳಕಿಂಡಿ ಬದುಕು ಕಮ್ಯೂನಿಟಿ ಕಾಲೇಜು. ಕಲಿಯಲು, ಕಲಿತು ಕಲಿಸಲು ಆಸಕ್ತಿ ಇರುವವರಿಗೆ ಒಂದೊಳ್ಳ ಅವಕಾಶ

- Advertisement -
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಕನಸು ಎಲ್ಲರಲ್ಲಿಯೂ ಚಿಗುರುತ್ತದೆ. ಅಂತಹ ಕನಸುಗಳನ್ನು ನನಸು ಮಾಡಲು ಕೆಲವರಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಸಹಾಯವಾದರೆ, ಮತ್ತೂ ಕೆಲವರಿಗೆ ಕನಸನ್ನ ಕನಸಾಗಿಯೇ ಉಳಿಸಿಬಿಡುತ್ತದೆ. ಅದರಲ್ಲೂ ಖಾಸಗೀಕರಣದ ದವಡೆಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ದುಭಾರಿಯೇ ಸರಿ. ಉತ್ತಮ ಶೈಕ್ಷಣಿಕ ಸೌಲಭ್ಯ, ಸಾಧನೆಯ ಹಾದಿಯಲ್ಲಿ ಒಂದಷ್ಟು ಮಾರ್ಗದರ್ಶನ ಪಡೆದುಕೊಳ್ಳಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಅಂತಹ ಬಯಕೆಗಳಿಗೆ ಆರ್ಥಿಕ ಪರಿಸ್ಥಿತಿಗಳಂತಹ ಹಲವು ಸಮಸ್ಯೆಗಳು ಎದುರಾಗುತ್ತವೆ.

- Advertisement -

ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿಯೂ ಉತ್ತಮ ಬೋಧಕರಾಗಬೇಕು, ಆಪ್ತ ಸಮಾಲೋಚಕರಾಗಬೇಕು, ಜೆಆರ್‍ಎಫ್-ಎನ್‍ಇಟಿಗಳನ್ನು ಪಾಸು ಮಾಡಿ ಪಿಎಚ್‍ಡಿ ಪದವಿ ಪಡೆಯಬೇಕೆಂದು, ಅದರೊಂದಿಗೆ ಸಮಾಜದಲ್ಲಿ ಏನನ್ನಾದರೂ ಕೊಡುಗೆ ಕೊಡಬೇಕು ಎಂದು ಬಯಸುವವರು ಸಾಕಷ್ಟಿದ್ದಾರೆ. ಅಂತಹವರಿಗೆ ಈಗೊಂದು ಸುವರ್ಣಾವಕಾಶವನ್ನು ಬದುಕು ಕಮ್ಯುನಿಟಿ ಕಾಲೇಜು ತೆರೆದಿಟ್ಟಿದೆ.

ಕಡಿಮೆ ಖರ್ಚಿನಲ್ಲಿ ಕೋಚಿಂಗ್ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುತ್ತಿರುವ ಈ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡುತ್ತಿರುವ ಸಂಸ್ಥೆ ಕಲಿಕೆಗೆ ಬರುವ ವಿದ್ಯಾರ್ಥಿಗಳನ್ನು ತಮ್ಮ ಆಯ್ಕೆಯ ವಿಷಯದಲ್ಲಿ ಹಿಡಿತ ಸಾಧಿಸಲು ನೆರವಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯ ನಿರ್ಮಾಣವಾಗಿದೆ. ಈ ಕಾಲೇಜು ಪ್ರಾಯೋಗಿಕ ಕಲಿಕೆ, ಸುಸಜ್ಜಿತ ಓದಿನ ಸಂಪನ್ಮೂಲಗಳು, ವಿಷಯ ತಜ್ಞರು-ಶಿಕ್ಷಣ ತಜ್ಞರಿಂದ ಮಾರ್ಗದರ್ಶನ, ಅಧ್ಯಯನ ಪ್ರವಾಸ ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಿದೆ. ಇಲ್ಲಿ ಮೂರು ತಿಂಗಳ ಅವಧಿಗೆ ಜುಲೈ 15ರಿಂದ ಆರಂಭವಾಗುತ್ತಿರುವ ಐeಚಿಡಿಟಿiಟಿg ಐಇಓSಇS ಕೋರ್ಸುಗಳಿಗೆ ಜುಲೈ 05 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಯಾವ ಕೋರ್ಸುಗಳು ಲಭ್ಯ
· ಸೃಜನಶೀಲ ಬೋಧನಾ ಕಲಿಕೆ
· ಆಪ್ತ ಸಮಾಲೋಚನಾ ಕೌಶಲ್ಯ ಕಲಿಕೆ
· ಡಿಜಿಟಲ್ ಕ್ಲಾಸ್ ರೂಂ ನಿರ್ವಹಣೆ
· ಜೆಆರ್‍ಎಫ್, ನೆಟ್ ಮತ್ತು ಸ್ಲೆಟ್ ಸಿದ್ಧತೆಗೆ ತರಬೇತಿ
· ಪಿಎಚ್‍ಡಿ ಮತ್ತು ಕಿರುಸಂಶೋಧನೆಗಳ ಸಿದ್ಧತೆಗೆ ಮಾರ್ಗದರ್ಶನ
· ಕಾಲೇಜುಗಳಲ್ಲಿ ನಡೆಯುವ ನೇಮಕಾತಿ ಸಂದರ್ಶನಗಳಿಗೆ ಸಹಾಯ

ಯಾರು ಅರ್ಜಿ ಸಲ್ಲಿಸಬಹುದು
· ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.
· ಸಂಶೋಧನಾ ವಿದ್ಯಾರ್ಥಿ/ನಿಯರು.
· ಈಗಾಗಲೇ ಅಧ್ಯಾಪಕ ವೃತ್ತಿಯಲ್ಲಿದ್ದು, ಮತ್ತಷ್ಟು ಸೃಜನಶೀಲತೆ ಕಲಿಯುವ ಆಸಕ್ತಿ ಇರುವವರು.

ಮೇಲಿನ ಕೋರ್ಸುಗಳಿಗೆ ಕೇವಲ 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಸಲಾಗುವುದು. ಅಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಯ ಮಾಹಿತಿ(ರೆಸುಮ್)ಯನ್ನು ಜುಲೈ 05 ರೊಳಗೆ ಕೆಳಕಂಡ ವಿಳಾಸಕ್ಕೆ ತಲುಪಿಸಿ ಅಥವಾ ಇ-ಮೇಲ್ ಮಾಡಬಹುದು.

ಸಂಪರ್ಕ: ಸಂವಾದ, ಬದುಕು ಕಮ್ಯುನಿಟಿ ಕಾಲೇಜು, #7, 2ನೇ ಕ್ರಾಸ್, ಡಯಾಗನಲ್ ರಸ್ತೆ, ಸಿಟಿ ಸೆಂಟ್ರಲ್ ಲೈಬ್ರರಿ ಹಿಂಭಾಗ, ಜಯನಗರ 3ನೇ ಹಂತ, ಬೆಂಗಳೂರು. 560011…
7899769899, 9739286217, 8050599001

ಇ-ಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...