Homeಕರ್ನಾಟಕಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಯಶಸ್ವಿ ಬೋಧನೆಗೊಂದು ಬೆಳಕಿಂಡಿ ಬದುಕು ಕಮ್ಯೂನಿಟಿ ಕಾಲೇಜು. ಕಲಿಯಲು, ಕಲಿತು ಕಲಿಸಲು ಆಸಕ್ತಿ ಇರುವವರಿಗೆ ಒಂದೊಳ್ಳ ಅವಕಾಶ

- Advertisement -
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಕನಸು ಎಲ್ಲರಲ್ಲಿಯೂ ಚಿಗುರುತ್ತದೆ. ಅಂತಹ ಕನಸುಗಳನ್ನು ನನಸು ಮಾಡಲು ಕೆಲವರಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಸಹಾಯವಾದರೆ, ಮತ್ತೂ ಕೆಲವರಿಗೆ ಕನಸನ್ನ ಕನಸಾಗಿಯೇ ಉಳಿಸಿಬಿಡುತ್ತದೆ. ಅದರಲ್ಲೂ ಖಾಸಗೀಕರಣದ ದವಡೆಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ದುಭಾರಿಯೇ ಸರಿ. ಉತ್ತಮ ಶೈಕ್ಷಣಿಕ ಸೌಲಭ್ಯ, ಸಾಧನೆಯ ಹಾದಿಯಲ್ಲಿ ಒಂದಷ್ಟು ಮಾರ್ಗದರ್ಶನ ಪಡೆದುಕೊಳ್ಳಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಅಂತಹ ಬಯಕೆಗಳಿಗೆ ಆರ್ಥಿಕ ಪರಿಸ್ಥಿತಿಗಳಂತಹ ಹಲವು ಸಮಸ್ಯೆಗಳು ಎದುರಾಗುತ್ತವೆ.

- Advertisement -

ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿಯೂ ಉತ್ತಮ ಬೋಧಕರಾಗಬೇಕು, ಆಪ್ತ ಸಮಾಲೋಚಕರಾಗಬೇಕು, ಜೆಆರ್‍ಎಫ್-ಎನ್‍ಇಟಿಗಳನ್ನು ಪಾಸು ಮಾಡಿ ಪಿಎಚ್‍ಡಿ ಪದವಿ ಪಡೆಯಬೇಕೆಂದು, ಅದರೊಂದಿಗೆ ಸಮಾಜದಲ್ಲಿ ಏನನ್ನಾದರೂ ಕೊಡುಗೆ ಕೊಡಬೇಕು ಎಂದು ಬಯಸುವವರು ಸಾಕಷ್ಟಿದ್ದಾರೆ. ಅಂತಹವರಿಗೆ ಈಗೊಂದು ಸುವರ್ಣಾವಕಾಶವನ್ನು ಬದುಕು ಕಮ್ಯುನಿಟಿ ಕಾಲೇಜು ತೆರೆದಿಟ್ಟಿದೆ.

ಕಡಿಮೆ ಖರ್ಚಿನಲ್ಲಿ ಕೋಚಿಂಗ್ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುತ್ತಿರುವ ಈ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡುತ್ತಿರುವ ಸಂಸ್ಥೆ ಕಲಿಕೆಗೆ ಬರುವ ವಿದ್ಯಾರ್ಥಿಗಳನ್ನು ತಮ್ಮ ಆಯ್ಕೆಯ ವಿಷಯದಲ್ಲಿ ಹಿಡಿತ ಸಾಧಿಸಲು ನೆರವಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯ ನಿರ್ಮಾಣವಾಗಿದೆ. ಈ ಕಾಲೇಜು ಪ್ರಾಯೋಗಿಕ ಕಲಿಕೆ, ಸುಸಜ್ಜಿತ ಓದಿನ ಸಂಪನ್ಮೂಲಗಳು, ವಿಷಯ ತಜ್ಞರು-ಶಿಕ್ಷಣ ತಜ್ಞರಿಂದ ಮಾರ್ಗದರ್ಶನ, ಅಧ್ಯಯನ ಪ್ರವಾಸ ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಿದೆ. ಇಲ್ಲಿ ಮೂರು ತಿಂಗಳ ಅವಧಿಗೆ ಜುಲೈ 15ರಿಂದ ಆರಂಭವಾಗುತ್ತಿರುವ ಐeಚಿಡಿಟಿiಟಿg ಐಇಓSಇS ಕೋರ್ಸುಗಳಿಗೆ ಜುಲೈ 05 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಯಾವ ಕೋರ್ಸುಗಳು ಲಭ್ಯ
· ಸೃಜನಶೀಲ ಬೋಧನಾ ಕಲಿಕೆ
· ಆಪ್ತ ಸಮಾಲೋಚನಾ ಕೌಶಲ್ಯ ಕಲಿಕೆ
· ಡಿಜಿಟಲ್ ಕ್ಲಾಸ್ ರೂಂ ನಿರ್ವಹಣೆ
· ಜೆಆರ್‍ಎಫ್, ನೆಟ್ ಮತ್ತು ಸ್ಲೆಟ್ ಸಿದ್ಧತೆಗೆ ತರಬೇತಿ
· ಪಿಎಚ್‍ಡಿ ಮತ್ತು ಕಿರುಸಂಶೋಧನೆಗಳ ಸಿದ್ಧತೆಗೆ ಮಾರ್ಗದರ್ಶನ
· ಕಾಲೇಜುಗಳಲ್ಲಿ ನಡೆಯುವ ನೇಮಕಾತಿ ಸಂದರ್ಶನಗಳಿಗೆ ಸಹಾಯ

ಯಾರು ಅರ್ಜಿ ಸಲ್ಲಿಸಬಹುದು
· ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.
· ಸಂಶೋಧನಾ ವಿದ್ಯಾರ್ಥಿ/ನಿಯರು.
· ಈಗಾಗಲೇ ಅಧ್ಯಾಪಕ ವೃತ್ತಿಯಲ್ಲಿದ್ದು, ಮತ್ತಷ್ಟು ಸೃಜನಶೀಲತೆ ಕಲಿಯುವ ಆಸಕ್ತಿ ಇರುವವರು.

ಮೇಲಿನ ಕೋರ್ಸುಗಳಿಗೆ ಕೇವಲ 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಸಲಾಗುವುದು. ಅಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಯ ಮಾಹಿತಿ(ರೆಸುಮ್)ಯನ್ನು ಜುಲೈ 05 ರೊಳಗೆ ಕೆಳಕಂಡ ವಿಳಾಸಕ್ಕೆ ತಲುಪಿಸಿ ಅಥವಾ ಇ-ಮೇಲ್ ಮಾಡಬಹುದು.

ಸಂಪರ್ಕ: ಸಂವಾದ, ಬದುಕು ಕಮ್ಯುನಿಟಿ ಕಾಲೇಜು, #7, 2ನೇ ಕ್ರಾಸ್, ಡಯಾಗನಲ್ ರಸ್ತೆ, ಸಿಟಿ ಸೆಂಟ್ರಲ್ ಲೈಬ್ರರಿ ಹಿಂಭಾಗ, ಜಯನಗರ 3ನೇ ಹಂತ, ಬೆಂಗಳೂರು. 560011…
7899769899, 9739286217, 8050599001

ಇ-ಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...