Homeಕರ್ನಾಟಕಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಅತಿ ಕಡಿಮೆ ಖರ್ಚಿನಲ್ಲಿ ಲೆಕ್ಚರ್ ಆಗುವ, ನೆಟ್ ಎಕ್ಸಾಂ ತರಬೇತಿ ಪಡೆಯುವ ಸುವಣಾವಕಾಶ ಇಲ್ಲಿದೆ ನೋಡಿ

ಯಶಸ್ವಿ ಬೋಧನೆಗೊಂದು ಬೆಳಕಿಂಡಿ ಬದುಕು ಕಮ್ಯೂನಿಟಿ ಕಾಲೇಜು. ಕಲಿಯಲು, ಕಲಿತು ಕಲಿಸಲು ಆಸಕ್ತಿ ಇರುವವರಿಗೆ ಒಂದೊಳ್ಳ ಅವಕಾಶ

- Advertisement -
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಕನಸು ಎಲ್ಲರಲ್ಲಿಯೂ ಚಿಗುರುತ್ತದೆ. ಅಂತಹ ಕನಸುಗಳನ್ನು ನನಸು ಮಾಡಲು ಕೆಲವರಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಸಹಾಯವಾದರೆ, ಮತ್ತೂ ಕೆಲವರಿಗೆ ಕನಸನ್ನ ಕನಸಾಗಿಯೇ ಉಳಿಸಿಬಿಡುತ್ತದೆ. ಅದರಲ್ಲೂ ಖಾಸಗೀಕರಣದ ದವಡೆಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ದುಭಾರಿಯೇ ಸರಿ. ಉತ್ತಮ ಶೈಕ್ಷಣಿಕ ಸೌಲಭ್ಯ, ಸಾಧನೆಯ ಹಾದಿಯಲ್ಲಿ ಒಂದಷ್ಟು ಮಾರ್ಗದರ್ಶನ ಪಡೆದುಕೊಳ್ಳಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಅಂತಹ ಬಯಕೆಗಳಿಗೆ ಆರ್ಥಿಕ ಪರಿಸ್ಥಿತಿಗಳಂತಹ ಹಲವು ಸಮಸ್ಯೆಗಳು ಎದುರಾಗುತ್ತವೆ.

- Advertisement -

ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿಯೂ ಉತ್ತಮ ಬೋಧಕರಾಗಬೇಕು, ಆಪ್ತ ಸಮಾಲೋಚಕರಾಗಬೇಕು, ಜೆಆರ್‍ಎಫ್-ಎನ್‍ಇಟಿಗಳನ್ನು ಪಾಸು ಮಾಡಿ ಪಿಎಚ್‍ಡಿ ಪದವಿ ಪಡೆಯಬೇಕೆಂದು, ಅದರೊಂದಿಗೆ ಸಮಾಜದಲ್ಲಿ ಏನನ್ನಾದರೂ ಕೊಡುಗೆ ಕೊಡಬೇಕು ಎಂದು ಬಯಸುವವರು ಸಾಕಷ್ಟಿದ್ದಾರೆ. ಅಂತಹವರಿಗೆ ಈಗೊಂದು ಸುವರ್ಣಾವಕಾಶವನ್ನು ಬದುಕು ಕಮ್ಯುನಿಟಿ ಕಾಲೇಜು ತೆರೆದಿಟ್ಟಿದೆ.

ಕಡಿಮೆ ಖರ್ಚಿನಲ್ಲಿ ಕೋಚಿಂಗ್ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುತ್ತಿರುವ ಈ ಸಂಸ್ಥೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಾಯೋಗಿಕ ತರಬೇತಿಗೆ ಹೆಚ್ಚು ಒತ್ತು ನೀಡುತ್ತಿರುವ ಸಂಸ್ಥೆ ಕಲಿಕೆಗೆ ಬರುವ ವಿದ್ಯಾರ್ಥಿಗಳನ್ನು ತಮ್ಮ ಆಯ್ಕೆಯ ವಿಷಯದಲ್ಲಿ ಹಿಡಿತ ಸಾಧಿಸಲು ನೆರವಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯ ನಿರ್ಮಾಣವಾಗಿದೆ. ಈ ಕಾಲೇಜು ಪ್ರಾಯೋಗಿಕ ಕಲಿಕೆ, ಸುಸಜ್ಜಿತ ಓದಿನ ಸಂಪನ್ಮೂಲಗಳು, ವಿಷಯ ತಜ್ಞರು-ಶಿಕ್ಷಣ ತಜ್ಞರಿಂದ ಮಾರ್ಗದರ್ಶನ, ಅಧ್ಯಯನ ಪ್ರವಾಸ ಮತ್ತು ವಸತಿ ವ್ಯವಸ್ಥೆಗಳನ್ನು ಒಳಗೊಂಡಿದೆ. ಇಲ್ಲಿ ಮೂರು ತಿಂಗಳ ಅವಧಿಗೆ ಜುಲೈ 15ರಿಂದ ಆರಂಭವಾಗುತ್ತಿರುವ ಐeಚಿಡಿಟಿiಟಿg ಐಇಓSಇS ಕೋರ್ಸುಗಳಿಗೆ ಜುಲೈ 05 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಯಾವ ಕೋರ್ಸುಗಳು ಲಭ್ಯ
· ಸೃಜನಶೀಲ ಬೋಧನಾ ಕಲಿಕೆ
· ಆಪ್ತ ಸಮಾಲೋಚನಾ ಕೌಶಲ್ಯ ಕಲಿಕೆ
· ಡಿಜಿಟಲ್ ಕ್ಲಾಸ್ ರೂಂ ನಿರ್ವಹಣೆ
· ಜೆಆರ್‍ಎಫ್, ನೆಟ್ ಮತ್ತು ಸ್ಲೆಟ್ ಸಿದ್ಧತೆಗೆ ತರಬೇತಿ
· ಪಿಎಚ್‍ಡಿ ಮತ್ತು ಕಿರುಸಂಶೋಧನೆಗಳ ಸಿದ್ಧತೆಗೆ ಮಾರ್ಗದರ್ಶನ
· ಕಾಲೇಜುಗಳಲ್ಲಿ ನಡೆಯುವ ನೇಮಕಾತಿ ಸಂದರ್ಶನಗಳಿಗೆ ಸಹಾಯ

ಯಾರು ಅರ್ಜಿ ಸಲ್ಲಿಸಬಹುದು
· ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.
· ಸಂಶೋಧನಾ ವಿದ್ಯಾರ್ಥಿ/ನಿಯರು.
· ಈಗಾಗಲೇ ಅಧ್ಯಾಪಕ ವೃತ್ತಿಯಲ್ಲಿದ್ದು, ಮತ್ತಷ್ಟು ಸೃಜನಶೀಲತೆ ಕಲಿಯುವ ಆಸಕ್ತಿ ಇರುವವರು.

ಮೇಲಿನ ಕೋರ್ಸುಗಳಿಗೆ ಕೇವಲ 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಸಲಾಗುವುದು. ಅಸಕ್ತ ವಿದ್ಯಾರ್ಥಿಗಳು ತಮ್ಮ ವೈಯಕ್ತಿಯ ಮಾಹಿತಿ(ರೆಸುಮ್)ಯನ್ನು ಜುಲೈ 05 ರೊಳಗೆ ಕೆಳಕಂಡ ವಿಳಾಸಕ್ಕೆ ತಲುಪಿಸಿ ಅಥವಾ ಇ-ಮೇಲ್ ಮಾಡಬಹುದು.

ಸಂಪರ್ಕ: ಸಂವಾದ, ಬದುಕು ಕಮ್ಯುನಿಟಿ ಕಾಲೇಜು, #7, 2ನೇ ಕ್ರಾಸ್, ಡಯಾಗನಲ್ ರಸ್ತೆ, ಸಿಟಿ ಸೆಂಟ್ರಲ್ ಲೈಬ್ರರಿ ಹಿಂಭಾಗ, ಜಯನಗರ 3ನೇ ಹಂತ, ಬೆಂಗಳೂರು. 560011…
7899769899, 9739286217, 8050599001

ಇ-ಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...