“ನೇತಾಜಿ ಸುಭಾಸ್ ಚಂದ್ರ ಬೋಸ್ ಭಾರತದ ಪ್ರಥಮ ಪ್ರಧಾನಿ” ಎಂಬ ಬಿಜೆಪಿ ಅಭ್ಯರ್ಥಿ ಹಾಗೂ ನಟಿ ಕಂಗನಾ ರಣಾವತ್ ಅವರ ಹೇಳಿಕೆಗೆ ನೇತಾಜಿ ಅವರ ಕುಟುಂಬ ಖಂಡನೆ ವ್ಯಕ್ತಪಡಿಸಿದೆ.
ಎಕ್ಸ್ನಲ್ಲಿ ಪತ್ರಿಕಾ ವರದಿಯೊಂದನ್ನು ಶೇರ್ ಮಾಡಿರುವ ನೇತಾಜಿ ಅವರ ಮರಿ ಅಳಿಯ ಚಂದ್ರ ಕುಮಾರ್ ಬೋಸ್, “ಯಾರೂ ಕೂಡ ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗಾಗಿ ಇತಿಹಾಸವನ್ನು ತಿರುಚಬಾರದು” ಎಂದು ಹೇಳಿದ್ದಾರೆ.
No one should distort history for their political ambition! @narendramodi @AmitShah @JPNadda @KanganaTeam pic.twitter.com/x5hHXDGk6O
— Chandra Kumar Bose (@Chandrakbose) April 7, 2024
ಮತ್ತೊಂದು ಪೋಸ್ಟ್ನಲ್ಲಿ “ನೇತಾಜಿ ಸುಭಾಸ್ ಚಂದ್ರ ಬೋಸ್ ಅವರು ರಾಜಕೀಯ ಚಿಂತಕರು, ಸೈನಿಕರು, ಮುತ್ಸದ್ದಿ, ದಾರ್ಶನಿಕರು ಮತ್ತು ಅವಿಭಜಿತ ಭಾರತದ ಪ್ರಥಮ ಪ್ರಧಾನಿ. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಲು ಎಲ್ಲಾ ಸಮುದಾಯಗಳನ್ನು ಭಾರತೀಯರು ಎಂಬ ಅಡಿಯಲ್ಲಿ ಒಗ್ಗೂಡಿಸಬಲ್ಲ ಏಕೈಕ ನಾಯಕರಾಗಿದ್ದರು. ಅವರ ಸರ್ವರನ್ನೊಳಗೊಂಡ ಸಿದ್ಧಾಂತವನ್ನು ಅನುಸರಿಸುವುದು ಅವರಿಗೆ ತೋರಬಹುದಾದ ನಿಜವಾದ ಗೌರವ” ಎಂದಿದ್ದಾರೆ.
Netaji Subhas Chandra Bose was a political thinker,soldier,statesman, visionary and the 1st PM of undivided India.The only leader who could unite all communities as Bharatiyas to fight for India’s freedom.Real respect to the leader would be to follow his inclusive ideology. pic.twitter.com/W4zjrHYOVs
— Chandra Kumar Bose (@Chandrakbose) April 6, 2024
ಇತ್ತೀಚೆಗೆ ಟೈಮ್ಸ್ ನೌ ಚಾನೆಲ್ನಲ್ಲಿ ನಡೆದ ‘ಟೈಮ್ಸ್ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್, “ಸ್ವತಂತ್ರ ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್” ಎಂದಿದ್ದರು. ಕಂಗನಾ ಅವರ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು.
ಇದನ್ನೂ ಓದಿ : ಸ್ವತಂತ್ರ ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದ ಕಂಗನಾ: ವ್ಯಾಪಕ ಟ್ರೋಲ್