Homeಮುಖಪುಟನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

- Advertisement -
- Advertisement -

ಭಾರತವನ್ನು ಒಗ್ಗೂಡಿಸಲು ನೇತಾಜಿಯ ಜಾತ್ಯತೀತ ಸಿದ್ಧಾಂತವನ್ನು ಬಿಜೆಪಿ ಪಕ್ಷವು ಅನುಸರಿಸದಿದ್ದರೆ, ದೇಶವು ವಿಭಜನೆಯಾಗುತ್ತದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಧರ್ಮಕ್ಕೆ ಸ್ಥಾನವಿಲ್ಲದ ಭಾರತವನ್ನು ಏಕೀಕರಿಸಲು ಪಕ್ಷವು ನೇತಾಜಿಯ ಸಿದ್ಧಾಂತವನ್ನು ಅನುಸರಿಸಬೇಕು. ಇಲ್ಲದಿದ್ದರೆ, ಇಡೀ ದೇಶವು ತುಂಡುಗಳಾಗಿ ಒಡೆಯುತ್ತದೆ. ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

ನಾನು ಕೂಡ ಬಿಜೆಪಿಯಲ್ಲಿದ್ದೇನೆ, ಆದರೂ ನಾನು ಧರ್ಮವು ವೈಯಕ್ತಿಕ ವಿಷಯ ಎಂದು ನಂಬಿದ್ದೇನೆ. ಇದನ್ನು ಅರ್ಥಮಾಡಿಕೊಳ್ಳದವರು ವಿಭಜಕ ಶಕ್ತಿಗಳು ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಕೋಲ್ಕತಾ ದಕ್ಷಿಣ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು.

ಈ ಹಿಂದೆ ಚಂದ್ರಕುಮಾರ್‌ ಬೋಷ್‌ ರವರು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವೂ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ಗೆ ಸಮರ್ಪಕ ಗೌರವ ಸಲ್ಲಿಸಲು ದೆಹಲಿಯಲ್ಲಿ ನೇತಾಜಿಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಭಾರತ ಸರ್ಕಾರವು, ಭಾರತದ ವಿಮೋಚಕ ಮತ್ತು ಆಜಾದ್ ಹಿಂದ್ ಫೌಜ್ ಸ್ಥಾಪಕ ಸುಭಾಷ್‌ ಚಂದ್ರ ಬೋಸ್‌ರವರಿಗೆ ಸರಿಯಾದ ಮತ್ತು ಸೂಕ್ತವಾದ ಗೌರವವನ್ನು ನೀಡುವ ಸಮಯ ಇದಾಗಿದೆ. ದೆಹಲಿಯ ರಾಜ್‌ಪಾತ್‌ನಲ್ಲಿರುವ ಇಂಡಿಯಾ ಗೇಟ್, ಐಎನ್‌ಎ ಸ್ಮಾರಕದಲ್ಲಿ ನೇತಾಜಿಯ ಪ್ರತಿಮೆಯನ್ನು ನಿರ್ಮಿಸಿ ಮತ್ತು ಎಲ್ಲಾ ಭಾರತೀಯರನ್ನು ಸಂಯೋಜಿಸಲು ನೇತಾಜಿಯ ಸಿದ್ಧಾಂತವನ್ನು ಜಾರಿಗೊಳಿಸಿ. ನೇತಾಜಿಯವರ ಸಾವಿನ ರಹಸ್ಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಿರಿ” ಎಂದು ಚಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ಯಾಗ್ ಮಾಡಿದ್ದಾರೆ.

ಇದೇ ವಿಷಯದ ಬಗ್ಗೆ ಪಿಎಂಒಗೆ ಪತ್ರ ಬರೆಯುವುದಾಗಿ ಹೇಳಿದ ಅವರು “ನಾವು (ಬಿಜೆಪಿ) ಗಾಂಧಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಾನು ಆರು ದಿನಗಳ ಕಾಲ ನಡೆದಿದ್ದೇನೆ, ಆದರೆ ಉತ್ತಮ ಪ್ರತಿಕ್ರಿಯೆ ಸಿಗಲಿಲ್ಲ. ನಾನು ಗಾಂಧಿಯನ್ನು ಕೀಳಾಗಿ ಕಾಣಲು ಬಯಸುವುದಿಲ್ಲ, ಆದರೆ ಇಡೀ ಜನವರಿ ತಿಂಗಳಲ್ಲಿ ನಾವು ದೇಶಾದ್ಯಂತ ನೇತಾಜಿ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಬೇಕೆಂದು ಪ್ರಧಾನಮಂತ್ರಿಗೆ ನನ್ನ ಸಲಹೆ ಇದೆ” ಎಂದು ಅವರು ಹೇಳಿದರು.

ನೇತಾಜಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಮೇ 3, 1939 ರಂದು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ರಚನೆಯನ್ನು ಘೋಷಿಸಿದರು ಮತ್ತು ನಂತರ ಬ್ರಿಟಿಷರನ್ನು ಎದುರಿಸಲು ಐಎನ್ಎ ಅನ್ನು ಪರಿಷ್ಕರಿಸಿದರು.

ನೇತಾಜಿಯ ಸಾವು ಅಥವಾ ಕಣ್ಮರೆ ಇನ್ನೂ ರಹಸ್ಯವಾಗಿ ಉಳಿದಿದೆ. ಅವರು ತೈವಾನ್‌ನಲ್ಲಿ ವಿಮಾನ ಹತ್ತಿದ್ದರು ಮತ್ತು ಅದು ಅವರ ಸಾವಿಗೆ ಕಾರಣವಾಯಿತು ಎಂದು ಹಲವಾರು ವರದಿಗಳು ಹೇಳಿಕೊಂಡಿವೆ. ಆದಾಗ್ಯೂ, ಅವರ ಕಣ್ಮರೆಯ ಬಗ್ಗೆ ತಜ್ಞರು ವಿಭಿನ್ನ ಸಿದ್ಧಾಂತಗಳನ್ನು ಮಂಡಿಸಿದ್ದರಿಂದ ಅವರ ಸಾವಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ರಹಸ್ಯದ ಬಗ್ಗೆ ಬೆಳಕು ಚೆಲ್ಲುವ ಸಲುವಾಗಿ ಕೇಂದ್ರವು ಕಾಲಕಾಲಕ್ಕೆ ಆಯೋಗಗಳನ್ನು ರಚಿಸಿತ್ತು – 1956 ರಲ್ಲಿ ಷಾ ನವಾಜ್ ಸಮಿತಿ, 1970 ರಲ್ಲಿ ಖೋಸ್ಲಾ ಆಯೋಗ ಮತ್ತು 2005 ರಲ್ಲಿ ಮುಖರ್ಜಿ ಕಮಿಷನ್ – ಆದರೆ ಯಾರೂ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...