Homeಮುಖಪುಟನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

- Advertisement -
- Advertisement -

ಭಾರತವನ್ನು ಒಗ್ಗೂಡಿಸಲು ನೇತಾಜಿಯ ಜಾತ್ಯತೀತ ಸಿದ್ಧಾಂತವನ್ನು ಬಿಜೆಪಿ ಪಕ್ಷವು ಅನುಸರಿಸದಿದ್ದರೆ, ದೇಶವು ವಿಭಜನೆಯಾಗುತ್ತದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಧರ್ಮಕ್ಕೆ ಸ್ಥಾನವಿಲ್ಲದ ಭಾರತವನ್ನು ಏಕೀಕರಿಸಲು ಪಕ್ಷವು ನೇತಾಜಿಯ ಸಿದ್ಧಾಂತವನ್ನು ಅನುಸರಿಸಬೇಕು. ಇಲ್ಲದಿದ್ದರೆ, ಇಡೀ ದೇಶವು ತುಂಡುಗಳಾಗಿ ಒಡೆಯುತ್ತದೆ. ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

ನಾನು ಕೂಡ ಬಿಜೆಪಿಯಲ್ಲಿದ್ದೇನೆ, ಆದರೂ ನಾನು ಧರ್ಮವು ವೈಯಕ್ತಿಕ ವಿಷಯ ಎಂದು ನಂಬಿದ್ದೇನೆ. ಇದನ್ನು ಅರ್ಥಮಾಡಿಕೊಳ್ಳದವರು ವಿಭಜಕ ಶಕ್ತಿಗಳು ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಕೋಲ್ಕತಾ ದಕ್ಷಿಣ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು.

ಈ ಹಿಂದೆ ಚಂದ್ರಕುಮಾರ್‌ ಬೋಷ್‌ ರವರು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವೂ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ಗೆ ಸಮರ್ಪಕ ಗೌರವ ಸಲ್ಲಿಸಲು ದೆಹಲಿಯಲ್ಲಿ ನೇತಾಜಿಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಭಾರತ ಸರ್ಕಾರವು, ಭಾರತದ ವಿಮೋಚಕ ಮತ್ತು ಆಜಾದ್ ಹಿಂದ್ ಫೌಜ್ ಸ್ಥಾಪಕ ಸುಭಾಷ್‌ ಚಂದ್ರ ಬೋಸ್‌ರವರಿಗೆ ಸರಿಯಾದ ಮತ್ತು ಸೂಕ್ತವಾದ ಗೌರವವನ್ನು ನೀಡುವ ಸಮಯ ಇದಾಗಿದೆ. ದೆಹಲಿಯ ರಾಜ್‌ಪಾತ್‌ನಲ್ಲಿರುವ ಇಂಡಿಯಾ ಗೇಟ್, ಐಎನ್‌ಎ ಸ್ಮಾರಕದಲ್ಲಿ ನೇತಾಜಿಯ ಪ್ರತಿಮೆಯನ್ನು ನಿರ್ಮಿಸಿ ಮತ್ತು ಎಲ್ಲಾ ಭಾರತೀಯರನ್ನು ಸಂಯೋಜಿಸಲು ನೇತಾಜಿಯ ಸಿದ್ಧಾಂತವನ್ನು ಜಾರಿಗೊಳಿಸಿ. ನೇತಾಜಿಯವರ ಸಾವಿನ ರಹಸ್ಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಿರಿ” ಎಂದು ಚಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ಯಾಗ್ ಮಾಡಿದ್ದಾರೆ.

ಇದೇ ವಿಷಯದ ಬಗ್ಗೆ ಪಿಎಂಒಗೆ ಪತ್ರ ಬರೆಯುವುದಾಗಿ ಹೇಳಿದ ಅವರು “ನಾವು (ಬಿಜೆಪಿ) ಗಾಂಧಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಾನು ಆರು ದಿನಗಳ ಕಾಲ ನಡೆದಿದ್ದೇನೆ, ಆದರೆ ಉತ್ತಮ ಪ್ರತಿಕ್ರಿಯೆ ಸಿಗಲಿಲ್ಲ. ನಾನು ಗಾಂಧಿಯನ್ನು ಕೀಳಾಗಿ ಕಾಣಲು ಬಯಸುವುದಿಲ್ಲ, ಆದರೆ ಇಡೀ ಜನವರಿ ತಿಂಗಳಲ್ಲಿ ನಾವು ದೇಶಾದ್ಯಂತ ನೇತಾಜಿ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಬೇಕೆಂದು ಪ್ರಧಾನಮಂತ್ರಿಗೆ ನನ್ನ ಸಲಹೆ ಇದೆ” ಎಂದು ಅವರು ಹೇಳಿದರು.

ನೇತಾಜಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಮೇ 3, 1939 ರಂದು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ರಚನೆಯನ್ನು ಘೋಷಿಸಿದರು ಮತ್ತು ನಂತರ ಬ್ರಿಟಿಷರನ್ನು ಎದುರಿಸಲು ಐಎನ್ಎ ಅನ್ನು ಪರಿಷ್ಕರಿಸಿದರು.

ನೇತಾಜಿಯ ಸಾವು ಅಥವಾ ಕಣ್ಮರೆ ಇನ್ನೂ ರಹಸ್ಯವಾಗಿ ಉಳಿದಿದೆ. ಅವರು ತೈವಾನ್‌ನಲ್ಲಿ ವಿಮಾನ ಹತ್ತಿದ್ದರು ಮತ್ತು ಅದು ಅವರ ಸಾವಿಗೆ ಕಾರಣವಾಯಿತು ಎಂದು ಹಲವಾರು ವರದಿಗಳು ಹೇಳಿಕೊಂಡಿವೆ. ಆದಾಗ್ಯೂ, ಅವರ ಕಣ್ಮರೆಯ ಬಗ್ಗೆ ತಜ್ಞರು ವಿಭಿನ್ನ ಸಿದ್ಧಾಂತಗಳನ್ನು ಮಂಡಿಸಿದ್ದರಿಂದ ಅವರ ಸಾವಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ರಹಸ್ಯದ ಬಗ್ಗೆ ಬೆಳಕು ಚೆಲ್ಲುವ ಸಲುವಾಗಿ ಕೇಂದ್ರವು ಕಾಲಕಾಲಕ್ಕೆ ಆಯೋಗಗಳನ್ನು ರಚಿಸಿತ್ತು – 1956 ರಲ್ಲಿ ಷಾ ನವಾಜ್ ಸಮಿತಿ, 1970 ರಲ್ಲಿ ಖೋಸ್ಲಾ ಆಯೋಗ ಮತ್ತು 2005 ರಲ್ಲಿ ಮುಖರ್ಜಿ ಕಮಿಷನ್ – ಆದರೆ ಯಾರೂ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...