Homeಮುಖಪುಟನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

- Advertisement -
- Advertisement -

ಭಾರತವನ್ನು ಒಗ್ಗೂಡಿಸಲು ನೇತಾಜಿಯ ಜಾತ್ಯತೀತ ಸಿದ್ಧಾಂತವನ್ನು ಬಿಜೆಪಿ ಪಕ್ಷವು ಅನುಸರಿಸದಿದ್ದರೆ, ದೇಶವು ವಿಭಜನೆಯಾಗುತ್ತದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಧರ್ಮಕ್ಕೆ ಸ್ಥಾನವಿಲ್ಲದ ಭಾರತವನ್ನು ಏಕೀಕರಿಸಲು ಪಕ್ಷವು ನೇತಾಜಿಯ ಸಿದ್ಧಾಂತವನ್ನು ಅನುಸರಿಸಬೇಕು. ಇಲ್ಲದಿದ್ದರೆ, ಇಡೀ ದೇಶವು ತುಂಡುಗಳಾಗಿ ಒಡೆಯುತ್ತದೆ. ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

ನಾನು ಕೂಡ ಬಿಜೆಪಿಯಲ್ಲಿದ್ದೇನೆ, ಆದರೂ ನಾನು ಧರ್ಮವು ವೈಯಕ್ತಿಕ ವಿಷಯ ಎಂದು ನಂಬಿದ್ದೇನೆ. ಇದನ್ನು ಅರ್ಥಮಾಡಿಕೊಳ್ಳದವರು ವಿಭಜಕ ಶಕ್ತಿಗಳು ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಕೋಲ್ಕತಾ ದಕ್ಷಿಣ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು.

ಈ ಹಿಂದೆ ಚಂದ್ರಕುಮಾರ್‌ ಬೋಷ್‌ ರವರು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವೂ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ಗೆ ಸಮರ್ಪಕ ಗೌರವ ಸಲ್ಲಿಸಲು ದೆಹಲಿಯಲ್ಲಿ ನೇತಾಜಿಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಭಾರತ ಸರ್ಕಾರವು, ಭಾರತದ ವಿಮೋಚಕ ಮತ್ತು ಆಜಾದ್ ಹಿಂದ್ ಫೌಜ್ ಸ್ಥಾಪಕ ಸುಭಾಷ್‌ ಚಂದ್ರ ಬೋಸ್‌ರವರಿಗೆ ಸರಿಯಾದ ಮತ್ತು ಸೂಕ್ತವಾದ ಗೌರವವನ್ನು ನೀಡುವ ಸಮಯ ಇದಾಗಿದೆ. ದೆಹಲಿಯ ರಾಜ್‌ಪಾತ್‌ನಲ್ಲಿರುವ ಇಂಡಿಯಾ ಗೇಟ್, ಐಎನ್‌ಎ ಸ್ಮಾರಕದಲ್ಲಿ ನೇತಾಜಿಯ ಪ್ರತಿಮೆಯನ್ನು ನಿರ್ಮಿಸಿ ಮತ್ತು ಎಲ್ಲಾ ಭಾರತೀಯರನ್ನು ಸಂಯೋಜಿಸಲು ನೇತಾಜಿಯ ಸಿದ್ಧಾಂತವನ್ನು ಜಾರಿಗೊಳಿಸಿ. ನೇತಾಜಿಯವರ ಸಾವಿನ ರಹಸ್ಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಿರಿ” ಎಂದು ಚಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ಯಾಗ್ ಮಾಡಿದ್ದಾರೆ.

ಇದೇ ವಿಷಯದ ಬಗ್ಗೆ ಪಿಎಂಒಗೆ ಪತ್ರ ಬರೆಯುವುದಾಗಿ ಹೇಳಿದ ಅವರು “ನಾವು (ಬಿಜೆಪಿ) ಗಾಂಧಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಾನು ಆರು ದಿನಗಳ ಕಾಲ ನಡೆದಿದ್ದೇನೆ, ಆದರೆ ಉತ್ತಮ ಪ್ರತಿಕ್ರಿಯೆ ಸಿಗಲಿಲ್ಲ. ನಾನು ಗಾಂಧಿಯನ್ನು ಕೀಳಾಗಿ ಕಾಣಲು ಬಯಸುವುದಿಲ್ಲ, ಆದರೆ ಇಡೀ ಜನವರಿ ತಿಂಗಳಲ್ಲಿ ನಾವು ದೇಶಾದ್ಯಂತ ನೇತಾಜಿ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಬೇಕೆಂದು ಪ್ರಧಾನಮಂತ್ರಿಗೆ ನನ್ನ ಸಲಹೆ ಇದೆ” ಎಂದು ಅವರು ಹೇಳಿದರು.

ನೇತಾಜಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಮೇ 3, 1939 ರಂದು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ರಚನೆಯನ್ನು ಘೋಷಿಸಿದರು ಮತ್ತು ನಂತರ ಬ್ರಿಟಿಷರನ್ನು ಎದುರಿಸಲು ಐಎನ್ಎ ಅನ್ನು ಪರಿಷ್ಕರಿಸಿದರು.

ನೇತಾಜಿಯ ಸಾವು ಅಥವಾ ಕಣ್ಮರೆ ಇನ್ನೂ ರಹಸ್ಯವಾಗಿ ಉಳಿದಿದೆ. ಅವರು ತೈವಾನ್‌ನಲ್ಲಿ ವಿಮಾನ ಹತ್ತಿದ್ದರು ಮತ್ತು ಅದು ಅವರ ಸಾವಿಗೆ ಕಾರಣವಾಯಿತು ಎಂದು ಹಲವಾರು ವರದಿಗಳು ಹೇಳಿಕೊಂಡಿವೆ. ಆದಾಗ್ಯೂ, ಅವರ ಕಣ್ಮರೆಯ ಬಗ್ಗೆ ತಜ್ಞರು ವಿಭಿನ್ನ ಸಿದ್ಧಾಂತಗಳನ್ನು ಮಂಡಿಸಿದ್ದರಿಂದ ಅವರ ಸಾವಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ರಹಸ್ಯದ ಬಗ್ಗೆ ಬೆಳಕು ಚೆಲ್ಲುವ ಸಲುವಾಗಿ ಕೇಂದ್ರವು ಕಾಲಕಾಲಕ್ಕೆ ಆಯೋಗಗಳನ್ನು ರಚಿಸಿತ್ತು – 1956 ರಲ್ಲಿ ಷಾ ನವಾಜ್ ಸಮಿತಿ, 1970 ರಲ್ಲಿ ಖೋಸ್ಲಾ ಆಯೋಗ ಮತ್ತು 2005 ರಲ್ಲಿ ಮುಖರ್ಜಿ ಕಮಿಷನ್ – ಆದರೆ ಯಾರೂ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....