Homeಮುಖಪುಟನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

- Advertisement -
- Advertisement -

ಭಾರತವನ್ನು ಒಗ್ಗೂಡಿಸಲು ನೇತಾಜಿಯ ಜಾತ್ಯತೀತ ಸಿದ್ಧಾಂತವನ್ನು ಬಿಜೆಪಿ ಪಕ್ಷವು ಅನುಸರಿಸದಿದ್ದರೆ, ದೇಶವು ವಿಭಜನೆಯಾಗುತ್ತದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಧರ್ಮಕ್ಕೆ ಸ್ಥಾನವಿಲ್ಲದ ಭಾರತವನ್ನು ಏಕೀಕರಿಸಲು ಪಕ್ಷವು ನೇತಾಜಿಯ ಸಿದ್ಧಾಂತವನ್ನು ಅನುಸರಿಸಬೇಕು. ಇಲ್ಲದಿದ್ದರೆ, ಇಡೀ ದೇಶವು ತುಂಡುಗಳಾಗಿ ಒಡೆಯುತ್ತದೆ. ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

ನಾನು ಕೂಡ ಬಿಜೆಪಿಯಲ್ಲಿದ್ದೇನೆ, ಆದರೂ ನಾನು ಧರ್ಮವು ವೈಯಕ್ತಿಕ ವಿಷಯ ಎಂದು ನಂಬಿದ್ದೇನೆ. ಇದನ್ನು ಅರ್ಥಮಾಡಿಕೊಳ್ಳದವರು ವಿಭಜಕ ಶಕ್ತಿಗಳು ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಕೋಲ್ಕತಾ ದಕ್ಷಿಣ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು.

ಈ ಹಿಂದೆ ಚಂದ್ರಕುಮಾರ್‌ ಬೋಷ್‌ ರವರು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವೂ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ಗೆ ಸಮರ್ಪಕ ಗೌರವ ಸಲ್ಲಿಸಲು ದೆಹಲಿಯಲ್ಲಿ ನೇತಾಜಿಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಭಾರತ ಸರ್ಕಾರವು, ಭಾರತದ ವಿಮೋಚಕ ಮತ್ತು ಆಜಾದ್ ಹಿಂದ್ ಫೌಜ್ ಸ್ಥಾಪಕ ಸುಭಾಷ್‌ ಚಂದ್ರ ಬೋಸ್‌ರವರಿಗೆ ಸರಿಯಾದ ಮತ್ತು ಸೂಕ್ತವಾದ ಗೌರವವನ್ನು ನೀಡುವ ಸಮಯ ಇದಾಗಿದೆ. ದೆಹಲಿಯ ರಾಜ್‌ಪಾತ್‌ನಲ್ಲಿರುವ ಇಂಡಿಯಾ ಗೇಟ್, ಐಎನ್‌ಎ ಸ್ಮಾರಕದಲ್ಲಿ ನೇತಾಜಿಯ ಪ್ರತಿಮೆಯನ್ನು ನಿರ್ಮಿಸಿ ಮತ್ತು ಎಲ್ಲಾ ಭಾರತೀಯರನ್ನು ಸಂಯೋಜಿಸಲು ನೇತಾಜಿಯ ಸಿದ್ಧಾಂತವನ್ನು ಜಾರಿಗೊಳಿಸಿ. ನೇತಾಜಿಯವರ ಸಾವಿನ ರಹಸ್ಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಿರಿ” ಎಂದು ಚಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ಯಾಗ್ ಮಾಡಿದ್ದಾರೆ.

ಇದೇ ವಿಷಯದ ಬಗ್ಗೆ ಪಿಎಂಒಗೆ ಪತ್ರ ಬರೆಯುವುದಾಗಿ ಹೇಳಿದ ಅವರು “ನಾವು (ಬಿಜೆಪಿ) ಗಾಂಧಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಾನು ಆರು ದಿನಗಳ ಕಾಲ ನಡೆದಿದ್ದೇನೆ, ಆದರೆ ಉತ್ತಮ ಪ್ರತಿಕ್ರಿಯೆ ಸಿಗಲಿಲ್ಲ. ನಾನು ಗಾಂಧಿಯನ್ನು ಕೀಳಾಗಿ ಕಾಣಲು ಬಯಸುವುದಿಲ್ಲ, ಆದರೆ ಇಡೀ ಜನವರಿ ತಿಂಗಳಲ್ಲಿ ನಾವು ದೇಶಾದ್ಯಂತ ನೇತಾಜಿ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಬೇಕೆಂದು ಪ್ರಧಾನಮಂತ್ರಿಗೆ ನನ್ನ ಸಲಹೆ ಇದೆ” ಎಂದು ಅವರು ಹೇಳಿದರು.

ನೇತಾಜಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಮೇ 3, 1939 ರಂದು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ರಚನೆಯನ್ನು ಘೋಷಿಸಿದರು ಮತ್ತು ನಂತರ ಬ್ರಿಟಿಷರನ್ನು ಎದುರಿಸಲು ಐಎನ್ಎ ಅನ್ನು ಪರಿಷ್ಕರಿಸಿದರು.

ನೇತಾಜಿಯ ಸಾವು ಅಥವಾ ಕಣ್ಮರೆ ಇನ್ನೂ ರಹಸ್ಯವಾಗಿ ಉಳಿದಿದೆ. ಅವರು ತೈವಾನ್‌ನಲ್ಲಿ ವಿಮಾನ ಹತ್ತಿದ್ದರು ಮತ್ತು ಅದು ಅವರ ಸಾವಿಗೆ ಕಾರಣವಾಯಿತು ಎಂದು ಹಲವಾರು ವರದಿಗಳು ಹೇಳಿಕೊಂಡಿವೆ. ಆದಾಗ್ಯೂ, ಅವರ ಕಣ್ಮರೆಯ ಬಗ್ಗೆ ತಜ್ಞರು ವಿಭಿನ್ನ ಸಿದ್ಧಾಂತಗಳನ್ನು ಮಂಡಿಸಿದ್ದರಿಂದ ಅವರ ಸಾವಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ರಹಸ್ಯದ ಬಗ್ಗೆ ಬೆಳಕು ಚೆಲ್ಲುವ ಸಲುವಾಗಿ ಕೇಂದ್ರವು ಕಾಲಕಾಲಕ್ಕೆ ಆಯೋಗಗಳನ್ನು ರಚಿಸಿತ್ತು – 1956 ರಲ್ಲಿ ಷಾ ನವಾಜ್ ಸಮಿತಿ, 1970 ರಲ್ಲಿ ಖೋಸ್ಲಾ ಆಯೋಗ ಮತ್ತು 2005 ರಲ್ಲಿ ಮುಖರ್ಜಿ ಕಮಿಷನ್ – ಆದರೆ ಯಾರೂ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...