Homeಮುಖಪುಟನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

- Advertisement -
- Advertisement -

ಭಾರತವನ್ನು ಒಗ್ಗೂಡಿಸಲು ನೇತಾಜಿಯ ಜಾತ್ಯತೀತ ಸಿದ್ಧಾಂತವನ್ನು ಬಿಜೆಪಿ ಪಕ್ಷವು ಅನುಸರಿಸದಿದ್ದರೆ, ದೇಶವು ವಿಭಜನೆಯಾಗುತ್ತದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಧರ್ಮಕ್ಕೆ ಸ್ಥಾನವಿಲ್ಲದ ಭಾರತವನ್ನು ಏಕೀಕರಿಸಲು ಪಕ್ಷವು ನೇತಾಜಿಯ ಸಿದ್ಧಾಂತವನ್ನು ಅನುಸರಿಸಬೇಕು. ಇಲ್ಲದಿದ್ದರೆ, ಇಡೀ ದೇಶವು ತುಂಡುಗಳಾಗಿ ಒಡೆಯುತ್ತದೆ. ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

ನಾನು ಕೂಡ ಬಿಜೆಪಿಯಲ್ಲಿದ್ದೇನೆ, ಆದರೂ ನಾನು ಧರ್ಮವು ವೈಯಕ್ತಿಕ ವಿಷಯ ಎಂದು ನಂಬಿದ್ದೇನೆ. ಇದನ್ನು ಅರ್ಥಮಾಡಿಕೊಳ್ಳದವರು ವಿಭಜಕ ಶಕ್ತಿಗಳು ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಕೋಲ್ಕತಾ ದಕ್ಷಿಣ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು.

ಈ ಹಿಂದೆ ಚಂದ್ರಕುಮಾರ್‌ ಬೋಷ್‌ ರವರು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವೂ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ಗೆ ಸಮರ್ಪಕ ಗೌರವ ಸಲ್ಲಿಸಲು ದೆಹಲಿಯಲ್ಲಿ ನೇತಾಜಿಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಭಾರತ ಸರ್ಕಾರವು, ಭಾರತದ ವಿಮೋಚಕ ಮತ್ತು ಆಜಾದ್ ಹಿಂದ್ ಫೌಜ್ ಸ್ಥಾಪಕ ಸುಭಾಷ್‌ ಚಂದ್ರ ಬೋಸ್‌ರವರಿಗೆ ಸರಿಯಾದ ಮತ್ತು ಸೂಕ್ತವಾದ ಗೌರವವನ್ನು ನೀಡುವ ಸಮಯ ಇದಾಗಿದೆ. ದೆಹಲಿಯ ರಾಜ್‌ಪಾತ್‌ನಲ್ಲಿರುವ ಇಂಡಿಯಾ ಗೇಟ್, ಐಎನ್‌ಎ ಸ್ಮಾರಕದಲ್ಲಿ ನೇತಾಜಿಯ ಪ್ರತಿಮೆಯನ್ನು ನಿರ್ಮಿಸಿ ಮತ್ತು ಎಲ್ಲಾ ಭಾರತೀಯರನ್ನು ಸಂಯೋಜಿಸಲು ನೇತಾಜಿಯ ಸಿದ್ಧಾಂತವನ್ನು ಜಾರಿಗೊಳಿಸಿ. ನೇತಾಜಿಯವರ ಸಾವಿನ ರಹಸ್ಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಿರಿ” ಎಂದು ಚಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ಯಾಗ್ ಮಾಡಿದ್ದಾರೆ.

ಇದೇ ವಿಷಯದ ಬಗ್ಗೆ ಪಿಎಂಒಗೆ ಪತ್ರ ಬರೆಯುವುದಾಗಿ ಹೇಳಿದ ಅವರು “ನಾವು (ಬಿಜೆಪಿ) ಗಾಂಧಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಾನು ಆರು ದಿನಗಳ ಕಾಲ ನಡೆದಿದ್ದೇನೆ, ಆದರೆ ಉತ್ತಮ ಪ್ರತಿಕ್ರಿಯೆ ಸಿಗಲಿಲ್ಲ. ನಾನು ಗಾಂಧಿಯನ್ನು ಕೀಳಾಗಿ ಕಾಣಲು ಬಯಸುವುದಿಲ್ಲ, ಆದರೆ ಇಡೀ ಜನವರಿ ತಿಂಗಳಲ್ಲಿ ನಾವು ದೇಶಾದ್ಯಂತ ನೇತಾಜಿ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಬೇಕೆಂದು ಪ್ರಧಾನಮಂತ್ರಿಗೆ ನನ್ನ ಸಲಹೆ ಇದೆ” ಎಂದು ಅವರು ಹೇಳಿದರು.

ನೇತಾಜಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಮೇ 3, 1939 ರಂದು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ರಚನೆಯನ್ನು ಘೋಷಿಸಿದರು ಮತ್ತು ನಂತರ ಬ್ರಿಟಿಷರನ್ನು ಎದುರಿಸಲು ಐಎನ್ಎ ಅನ್ನು ಪರಿಷ್ಕರಿಸಿದರು.

ನೇತಾಜಿಯ ಸಾವು ಅಥವಾ ಕಣ್ಮರೆ ಇನ್ನೂ ರಹಸ್ಯವಾಗಿ ಉಳಿದಿದೆ. ಅವರು ತೈವಾನ್‌ನಲ್ಲಿ ವಿಮಾನ ಹತ್ತಿದ್ದರು ಮತ್ತು ಅದು ಅವರ ಸಾವಿಗೆ ಕಾರಣವಾಯಿತು ಎಂದು ಹಲವಾರು ವರದಿಗಳು ಹೇಳಿಕೊಂಡಿವೆ. ಆದಾಗ್ಯೂ, ಅವರ ಕಣ್ಮರೆಯ ಬಗ್ಗೆ ತಜ್ಞರು ವಿಭಿನ್ನ ಸಿದ್ಧಾಂತಗಳನ್ನು ಮಂಡಿಸಿದ್ದರಿಂದ ಅವರ ಸಾವಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ರಹಸ್ಯದ ಬಗ್ಗೆ ಬೆಳಕು ಚೆಲ್ಲುವ ಸಲುವಾಗಿ ಕೇಂದ್ರವು ಕಾಲಕಾಲಕ್ಕೆ ಆಯೋಗಗಳನ್ನು ರಚಿಸಿತ್ತು – 1956 ರಲ್ಲಿ ಷಾ ನವಾಜ್ ಸಮಿತಿ, 1970 ರಲ್ಲಿ ಖೋಸ್ಲಾ ಆಯೋಗ ಮತ್ತು 2005 ರಲ್ಲಿ ಮುಖರ್ಜಿ ಕಮಿಷನ್ – ಆದರೆ ಯಾರೂ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...