Homeಮುಖಪುಟನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

- Advertisement -
- Advertisement -

ಭಾರತವನ್ನು ಒಗ್ಗೂಡಿಸಲು ನೇತಾಜಿಯ ಜಾತ್ಯತೀತ ಸಿದ್ಧಾಂತವನ್ನು ಬಿಜೆಪಿ ಪಕ್ಷವು ಅನುಸರಿಸದಿದ್ದರೆ, ದೇಶವು ವಿಭಜನೆಯಾಗುತ್ತದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಧರ್ಮಕ್ಕೆ ಸ್ಥಾನವಿಲ್ಲದ ಭಾರತವನ್ನು ಏಕೀಕರಿಸಲು ಪಕ್ಷವು ನೇತಾಜಿಯ ಸಿದ್ಧಾಂತವನ್ನು ಅನುಸರಿಸಬೇಕು. ಇಲ್ಲದಿದ್ದರೆ, ಇಡೀ ದೇಶವು ತುಂಡುಗಳಾಗಿ ಒಡೆಯುತ್ತದೆ. ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

ನಾನು ಕೂಡ ಬಿಜೆಪಿಯಲ್ಲಿದ್ದೇನೆ, ಆದರೂ ನಾನು ಧರ್ಮವು ವೈಯಕ್ತಿಕ ವಿಷಯ ಎಂದು ನಂಬಿದ್ದೇನೆ. ಇದನ್ನು ಅರ್ಥಮಾಡಿಕೊಳ್ಳದವರು ವಿಭಜಕ ಶಕ್ತಿಗಳು ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಕೋಲ್ಕತಾ ದಕ್ಷಿಣ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು.

ಈ ಹಿಂದೆ ಚಂದ್ರಕುಮಾರ್‌ ಬೋಷ್‌ ರವರು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವೂ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ಗೆ ಸಮರ್ಪಕ ಗೌರವ ಸಲ್ಲಿಸಲು ದೆಹಲಿಯಲ್ಲಿ ನೇತಾಜಿಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಭಾರತ ಸರ್ಕಾರವು, ಭಾರತದ ವಿಮೋಚಕ ಮತ್ತು ಆಜಾದ್ ಹಿಂದ್ ಫೌಜ್ ಸ್ಥಾಪಕ ಸುಭಾಷ್‌ ಚಂದ್ರ ಬೋಸ್‌ರವರಿಗೆ ಸರಿಯಾದ ಮತ್ತು ಸೂಕ್ತವಾದ ಗೌರವವನ್ನು ನೀಡುವ ಸಮಯ ಇದಾಗಿದೆ. ದೆಹಲಿಯ ರಾಜ್‌ಪಾತ್‌ನಲ್ಲಿರುವ ಇಂಡಿಯಾ ಗೇಟ್, ಐಎನ್‌ಎ ಸ್ಮಾರಕದಲ್ಲಿ ನೇತಾಜಿಯ ಪ್ರತಿಮೆಯನ್ನು ನಿರ್ಮಿಸಿ ಮತ್ತು ಎಲ್ಲಾ ಭಾರತೀಯರನ್ನು ಸಂಯೋಜಿಸಲು ನೇತಾಜಿಯ ಸಿದ್ಧಾಂತವನ್ನು ಜಾರಿಗೊಳಿಸಿ. ನೇತಾಜಿಯವರ ಸಾವಿನ ರಹಸ್ಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಿರಿ” ಎಂದು ಚಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ಯಾಗ್ ಮಾಡಿದ್ದಾರೆ.

ಇದೇ ವಿಷಯದ ಬಗ್ಗೆ ಪಿಎಂಒಗೆ ಪತ್ರ ಬರೆಯುವುದಾಗಿ ಹೇಳಿದ ಅವರು “ನಾವು (ಬಿಜೆಪಿ) ಗಾಂಧಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಾನು ಆರು ದಿನಗಳ ಕಾಲ ನಡೆದಿದ್ದೇನೆ, ಆದರೆ ಉತ್ತಮ ಪ್ರತಿಕ್ರಿಯೆ ಸಿಗಲಿಲ್ಲ. ನಾನು ಗಾಂಧಿಯನ್ನು ಕೀಳಾಗಿ ಕಾಣಲು ಬಯಸುವುದಿಲ್ಲ, ಆದರೆ ಇಡೀ ಜನವರಿ ತಿಂಗಳಲ್ಲಿ ನಾವು ದೇಶಾದ್ಯಂತ ನೇತಾಜಿ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಬೇಕೆಂದು ಪ್ರಧಾನಮಂತ್ರಿಗೆ ನನ್ನ ಸಲಹೆ ಇದೆ” ಎಂದು ಅವರು ಹೇಳಿದರು.

ನೇತಾಜಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಮೇ 3, 1939 ರಂದು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ರಚನೆಯನ್ನು ಘೋಷಿಸಿದರು ಮತ್ತು ನಂತರ ಬ್ರಿಟಿಷರನ್ನು ಎದುರಿಸಲು ಐಎನ್ಎ ಅನ್ನು ಪರಿಷ್ಕರಿಸಿದರು.

ನೇತಾಜಿಯ ಸಾವು ಅಥವಾ ಕಣ್ಮರೆ ಇನ್ನೂ ರಹಸ್ಯವಾಗಿ ಉಳಿದಿದೆ. ಅವರು ತೈವಾನ್‌ನಲ್ಲಿ ವಿಮಾನ ಹತ್ತಿದ್ದರು ಮತ್ತು ಅದು ಅವರ ಸಾವಿಗೆ ಕಾರಣವಾಯಿತು ಎಂದು ಹಲವಾರು ವರದಿಗಳು ಹೇಳಿಕೊಂಡಿವೆ. ಆದಾಗ್ಯೂ, ಅವರ ಕಣ್ಮರೆಯ ಬಗ್ಗೆ ತಜ್ಞರು ವಿಭಿನ್ನ ಸಿದ್ಧಾಂತಗಳನ್ನು ಮಂಡಿಸಿದ್ದರಿಂದ ಅವರ ಸಾವಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ರಹಸ್ಯದ ಬಗ್ಗೆ ಬೆಳಕು ಚೆಲ್ಲುವ ಸಲುವಾಗಿ ಕೇಂದ್ರವು ಕಾಲಕಾಲಕ್ಕೆ ಆಯೋಗಗಳನ್ನು ರಚಿಸಿತ್ತು – 1956 ರಲ್ಲಿ ಷಾ ನವಾಜ್ ಸಮಿತಿ, 1970 ರಲ್ಲಿ ಖೋಸ್ಲಾ ಆಯೋಗ ಮತ್ತು 2005 ರಲ್ಲಿ ಮುಖರ್ಜಿ ಕಮಿಷನ್ – ಆದರೆ ಯಾರೂ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...