Homeಮುಖಪುಟನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

- Advertisement -
- Advertisement -

ಭಾರತವನ್ನು ಒಗ್ಗೂಡಿಸಲು ನೇತಾಜಿಯ ಜಾತ್ಯತೀತ ಸಿದ್ಧಾಂತವನ್ನು ಬಿಜೆಪಿ ಪಕ್ಷವು ಅನುಸರಿಸದಿದ್ದರೆ, ದೇಶವು ವಿಭಜನೆಯಾಗುತ್ತದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಧರ್ಮಕ್ಕೆ ಸ್ಥಾನವಿಲ್ಲದ ಭಾರತವನ್ನು ಏಕೀಕರಿಸಲು ಪಕ್ಷವು ನೇತಾಜಿಯ ಸಿದ್ಧಾಂತವನ್ನು ಅನುಸರಿಸಬೇಕು. ಇಲ್ಲದಿದ್ದರೆ, ಇಡೀ ದೇಶವು ತುಂಡುಗಳಾಗಿ ಒಡೆಯುತ್ತದೆ. ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

ನಾನು ಕೂಡ ಬಿಜೆಪಿಯಲ್ಲಿದ್ದೇನೆ, ಆದರೂ ನಾನು ಧರ್ಮವು ವೈಯಕ್ತಿಕ ವಿಷಯ ಎಂದು ನಂಬಿದ್ದೇನೆ. ಇದನ್ನು ಅರ್ಥಮಾಡಿಕೊಳ್ಳದವರು ವಿಭಜಕ ಶಕ್ತಿಗಳು ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಕೋಲ್ಕತಾ ದಕ್ಷಿಣ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು.

ಈ ಹಿಂದೆ ಚಂದ್ರಕುಮಾರ್‌ ಬೋಷ್‌ ರವರು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವೂ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ಗೆ ಸಮರ್ಪಕ ಗೌರವ ಸಲ್ಲಿಸಲು ದೆಹಲಿಯಲ್ಲಿ ನೇತಾಜಿಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಭಾರತ ಸರ್ಕಾರವು, ಭಾರತದ ವಿಮೋಚಕ ಮತ್ತು ಆಜಾದ್ ಹಿಂದ್ ಫೌಜ್ ಸ್ಥಾಪಕ ಸುಭಾಷ್‌ ಚಂದ್ರ ಬೋಸ್‌ರವರಿಗೆ ಸರಿಯಾದ ಮತ್ತು ಸೂಕ್ತವಾದ ಗೌರವವನ್ನು ನೀಡುವ ಸಮಯ ಇದಾಗಿದೆ. ದೆಹಲಿಯ ರಾಜ್‌ಪಾತ್‌ನಲ್ಲಿರುವ ಇಂಡಿಯಾ ಗೇಟ್, ಐಎನ್‌ಎ ಸ್ಮಾರಕದಲ್ಲಿ ನೇತಾಜಿಯ ಪ್ರತಿಮೆಯನ್ನು ನಿರ್ಮಿಸಿ ಮತ್ತು ಎಲ್ಲಾ ಭಾರತೀಯರನ್ನು ಸಂಯೋಜಿಸಲು ನೇತಾಜಿಯ ಸಿದ್ಧಾಂತವನ್ನು ಜಾರಿಗೊಳಿಸಿ. ನೇತಾಜಿಯವರ ಸಾವಿನ ರಹಸ್ಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಿರಿ” ಎಂದು ಚಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ಯಾಗ್ ಮಾಡಿದ್ದಾರೆ.

ಇದೇ ವಿಷಯದ ಬಗ್ಗೆ ಪಿಎಂಒಗೆ ಪತ್ರ ಬರೆಯುವುದಾಗಿ ಹೇಳಿದ ಅವರು “ನಾವು (ಬಿಜೆಪಿ) ಗಾಂಧಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಾನು ಆರು ದಿನಗಳ ಕಾಲ ನಡೆದಿದ್ದೇನೆ, ಆದರೆ ಉತ್ತಮ ಪ್ರತಿಕ್ರಿಯೆ ಸಿಗಲಿಲ್ಲ. ನಾನು ಗಾಂಧಿಯನ್ನು ಕೀಳಾಗಿ ಕಾಣಲು ಬಯಸುವುದಿಲ್ಲ, ಆದರೆ ಇಡೀ ಜನವರಿ ತಿಂಗಳಲ್ಲಿ ನಾವು ದೇಶಾದ್ಯಂತ ನೇತಾಜಿ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಬೇಕೆಂದು ಪ್ರಧಾನಮಂತ್ರಿಗೆ ನನ್ನ ಸಲಹೆ ಇದೆ” ಎಂದು ಅವರು ಹೇಳಿದರು.

ನೇತಾಜಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಮೇ 3, 1939 ರಂದು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ರಚನೆಯನ್ನು ಘೋಷಿಸಿದರು ಮತ್ತು ನಂತರ ಬ್ರಿಟಿಷರನ್ನು ಎದುರಿಸಲು ಐಎನ್ಎ ಅನ್ನು ಪರಿಷ್ಕರಿಸಿದರು.

ನೇತಾಜಿಯ ಸಾವು ಅಥವಾ ಕಣ್ಮರೆ ಇನ್ನೂ ರಹಸ್ಯವಾಗಿ ಉಳಿದಿದೆ. ಅವರು ತೈವಾನ್‌ನಲ್ಲಿ ವಿಮಾನ ಹತ್ತಿದ್ದರು ಮತ್ತು ಅದು ಅವರ ಸಾವಿಗೆ ಕಾರಣವಾಯಿತು ಎಂದು ಹಲವಾರು ವರದಿಗಳು ಹೇಳಿಕೊಂಡಿವೆ. ಆದಾಗ್ಯೂ, ಅವರ ಕಣ್ಮರೆಯ ಬಗ್ಗೆ ತಜ್ಞರು ವಿಭಿನ್ನ ಸಿದ್ಧಾಂತಗಳನ್ನು ಮಂಡಿಸಿದ್ದರಿಂದ ಅವರ ಸಾವಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ರಹಸ್ಯದ ಬಗ್ಗೆ ಬೆಳಕು ಚೆಲ್ಲುವ ಸಲುವಾಗಿ ಕೇಂದ್ರವು ಕಾಲಕಾಲಕ್ಕೆ ಆಯೋಗಗಳನ್ನು ರಚಿಸಿತ್ತು – 1956 ರಲ್ಲಿ ಷಾ ನವಾಜ್ ಸಮಿತಿ, 1970 ರಲ್ಲಿ ಖೋಸ್ಲಾ ಆಯೋಗ ಮತ್ತು 2005 ರಲ್ಲಿ ಮುಖರ್ಜಿ ಕಮಿಷನ್ – ಆದರೆ ಯಾರೂ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...