Homeಮುಖಪುಟನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

- Advertisement -
- Advertisement -

ಭಾರತವನ್ನು ಒಗ್ಗೂಡಿಸಲು ನೇತಾಜಿಯ ಜಾತ್ಯತೀತ ಸಿದ್ಧಾಂತವನ್ನು ಬಿಜೆಪಿ ಪಕ್ಷವು ಅನುಸರಿಸದಿದ್ದರೆ, ದೇಶವು ವಿಭಜನೆಯಾಗುತ್ತದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಧರ್ಮಕ್ಕೆ ಸ್ಥಾನವಿಲ್ಲದ ಭಾರತವನ್ನು ಏಕೀಕರಿಸಲು ಪಕ್ಷವು ನೇತಾಜಿಯ ಸಿದ್ಧಾಂತವನ್ನು ಅನುಸರಿಸಬೇಕು. ಇಲ್ಲದಿದ್ದರೆ, ಇಡೀ ದೇಶವು ತುಂಡುಗಳಾಗಿ ಒಡೆಯುತ್ತದೆ. ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

ನಾನು ಕೂಡ ಬಿಜೆಪಿಯಲ್ಲಿದ್ದೇನೆ, ಆದರೂ ನಾನು ಧರ್ಮವು ವೈಯಕ್ತಿಕ ವಿಷಯ ಎಂದು ನಂಬಿದ್ದೇನೆ. ಇದನ್ನು ಅರ್ಥಮಾಡಿಕೊಳ್ಳದವರು ವಿಭಜಕ ಶಕ್ತಿಗಳು ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಕೋಲ್ಕತಾ ದಕ್ಷಿಣ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು.

ಈ ಹಿಂದೆ ಚಂದ್ರಕುಮಾರ್‌ ಬೋಷ್‌ ರವರು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವೂ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ಗೆ ಸಮರ್ಪಕ ಗೌರವ ಸಲ್ಲಿಸಲು ದೆಹಲಿಯಲ್ಲಿ ನೇತಾಜಿಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಭಾರತ ಸರ್ಕಾರವು, ಭಾರತದ ವಿಮೋಚಕ ಮತ್ತು ಆಜಾದ್ ಹಿಂದ್ ಫೌಜ್ ಸ್ಥಾಪಕ ಸುಭಾಷ್‌ ಚಂದ್ರ ಬೋಸ್‌ರವರಿಗೆ ಸರಿಯಾದ ಮತ್ತು ಸೂಕ್ತವಾದ ಗೌರವವನ್ನು ನೀಡುವ ಸಮಯ ಇದಾಗಿದೆ. ದೆಹಲಿಯ ರಾಜ್‌ಪಾತ್‌ನಲ್ಲಿರುವ ಇಂಡಿಯಾ ಗೇಟ್, ಐಎನ್‌ಎ ಸ್ಮಾರಕದಲ್ಲಿ ನೇತಾಜಿಯ ಪ್ರತಿಮೆಯನ್ನು ನಿರ್ಮಿಸಿ ಮತ್ತು ಎಲ್ಲಾ ಭಾರತೀಯರನ್ನು ಸಂಯೋಜಿಸಲು ನೇತಾಜಿಯ ಸಿದ್ಧಾಂತವನ್ನು ಜಾರಿಗೊಳಿಸಿ. ನೇತಾಜಿಯವರ ಸಾವಿನ ರಹಸ್ಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಿರಿ” ಎಂದು ಚಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ಯಾಗ್ ಮಾಡಿದ್ದಾರೆ.

ಇದೇ ವಿಷಯದ ಬಗ್ಗೆ ಪಿಎಂಒಗೆ ಪತ್ರ ಬರೆಯುವುದಾಗಿ ಹೇಳಿದ ಅವರು “ನಾವು (ಬಿಜೆಪಿ) ಗಾಂಧಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಾನು ಆರು ದಿನಗಳ ಕಾಲ ನಡೆದಿದ್ದೇನೆ, ಆದರೆ ಉತ್ತಮ ಪ್ರತಿಕ್ರಿಯೆ ಸಿಗಲಿಲ್ಲ. ನಾನು ಗಾಂಧಿಯನ್ನು ಕೀಳಾಗಿ ಕಾಣಲು ಬಯಸುವುದಿಲ್ಲ, ಆದರೆ ಇಡೀ ಜನವರಿ ತಿಂಗಳಲ್ಲಿ ನಾವು ದೇಶಾದ್ಯಂತ ನೇತಾಜಿ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಬೇಕೆಂದು ಪ್ರಧಾನಮಂತ್ರಿಗೆ ನನ್ನ ಸಲಹೆ ಇದೆ” ಎಂದು ಅವರು ಹೇಳಿದರು.

ನೇತಾಜಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಮೇ 3, 1939 ರಂದು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ರಚನೆಯನ್ನು ಘೋಷಿಸಿದರು ಮತ್ತು ನಂತರ ಬ್ರಿಟಿಷರನ್ನು ಎದುರಿಸಲು ಐಎನ್ಎ ಅನ್ನು ಪರಿಷ್ಕರಿಸಿದರು.

ನೇತಾಜಿಯ ಸಾವು ಅಥವಾ ಕಣ್ಮರೆ ಇನ್ನೂ ರಹಸ್ಯವಾಗಿ ಉಳಿದಿದೆ. ಅವರು ತೈವಾನ್‌ನಲ್ಲಿ ವಿಮಾನ ಹತ್ತಿದ್ದರು ಮತ್ತು ಅದು ಅವರ ಸಾವಿಗೆ ಕಾರಣವಾಯಿತು ಎಂದು ಹಲವಾರು ವರದಿಗಳು ಹೇಳಿಕೊಂಡಿವೆ. ಆದಾಗ್ಯೂ, ಅವರ ಕಣ್ಮರೆಯ ಬಗ್ಗೆ ತಜ್ಞರು ವಿಭಿನ್ನ ಸಿದ್ಧಾಂತಗಳನ್ನು ಮಂಡಿಸಿದ್ದರಿಂದ ಅವರ ಸಾವಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ರಹಸ್ಯದ ಬಗ್ಗೆ ಬೆಳಕು ಚೆಲ್ಲುವ ಸಲುವಾಗಿ ಕೇಂದ್ರವು ಕಾಲಕಾಲಕ್ಕೆ ಆಯೋಗಗಳನ್ನು ರಚಿಸಿತ್ತು – 1956 ರಲ್ಲಿ ಷಾ ನವಾಜ್ ಸಮಿತಿ, 1970 ರಲ್ಲಿ ಖೋಸ್ಲಾ ಆಯೋಗ ಮತ್ತು 2005 ರಲ್ಲಿ ಮುಖರ್ಜಿ ಕಮಿಷನ್ – ಆದರೆ ಯಾರೂ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...