Homeಅಂತರಾಷ್ಟ್ರೀಯಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

ಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

- Advertisement -
- Advertisement -

ಇಸ್ರೇಲಿನ ವಿಭಿನ್ನ ಸಿದ್ದಾಂತಗಳ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಏರಿದೆ. ಭಾನುವಾರ ಅತಿ ಹೆಚ್ಚು ಕಾಲ ಅಧಿಕಾರ ನಡೆಸಿದ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅಧಿಕಾರ ಕಳೆದುಕೊಂಡಿದ್ದಾರೆ. ದೇಶದ ಪ್ರಕ್ಷುಬ್ಧ ರಾಜಕೀಯ ಸನ್ನಿವೇಶದಲ್ಲಿ ನಡೆದ ಈ ಭಾರಿ ಬದಲಾವಣೆಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಬಲಪಂಥೀಯ ಯಹೂದಿ ಜನಾಂಗೀಯವಾಗಿ ಮತ್ತು ಮಾಜಿ ಟೆಕ್ ಮಿಲಿಯನೇರ್ ಆಗಿರುವ ನಫ್ತಾಲಿ ಬೆನೆಟ್ ಅವರು ಈಗ ನೂತನ ಪ್ರಧಾನಿಯಾಗಿದ್ದಾರೆ.

71 ವರ್ಷದ ನೆತನ್ಯಾಹು ಸೋಲಿನ ಸ್ವಲ್ಪ ಸಮಯದ ಮೊದಲು, “ಪ್ರತಿಪಕ್ಷದಲ್ಲಿರುವುದು ನಮ್ಮ ಹಣೆಬರಹವಾಗಿದ್ದರೆ, ಅದನ್ನು ತಪ್ಪಿಸಲಾಗದು. ನಾವು ಈ ಕೆಟ್ಟ ಸರ್ಕಾರವನ್ನು ಕೆಳಗಿಳಿಸಿ ದೇಶವನ್ನು ನಮ್ಮ ದಾರಿಯಲ್ಲಿ ಮುನ್ನಡೆಸುವವರೆಗೆ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರದಿಂದ ಅನ್‌ಲಾಕ್‌, 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ

ಅವರ ಬಲಪಂಥೀಯ ಬೆಂಬಲಿಗರಿಂದ “ಕಿಂಗ್ ಬೀಬಿ” ಎಂದು ಹೊಗಳಲ್ಪಡುವ ಮತ್ತು ಅವರ ಟೀಕಾಕಾರರಿಂದ “ಅಪರಾಧ ಮಂತ್ರಿ” ಎಂದು ಖಂಡಿಸಲ್ಪಡುವ ನೆತನ್ಯಾಹು ಇಸ್ರೇಲಿ ರಾಜಕೀಯದಲ್ಲಿ ಬಹುಕಾಲದಿಂದ ಪ್ರಬಲ ಮತ್ತು ವಿಭಜಕ ವ್ಯಕ್ತಿ ಎನಿಸಿದ್ದಾರೆ.

ಹಲವು ವಾರಗಳ ಕಾಲ ತೀವ್ರವಾದ ರಾಜಕೀಯ ನಾಟಕದ ನಂತರ ಭಾನುವಾರ ನೆಸ್ಸೆಟ್ ಶಾಸಕಾಂಗದಲ್ಲಿ ಮತದಾನ ನಡೆಯಿತು. ಒಟ್ಟು 120 ಸ್ಥಾನಗಳಲ್ಲಿ 60-59 ಮತಗಳ ತೀವ್ರ ಪೈಪೋಟಿ ನಡೆಯಿತು. ನೆತನ್ಯಾಹು 59 ಮತಗಳೊಂದಿಗೆ ಅಧಿಕಾರ ಕಳೆದುಕೊಂಡರು.

ಟೆಲ್ ಅವೀವ್‌ನ ರಾಬಿನ್ ಚೌಕದಲ್ಲಿ “ಬೈ ಬೈ ಬೀಬಿ” ಫಲಕಗಳೊಂದಿಗೆ ರ್‍ಯಾಲಿ ಮಾಡಿದ ನೆತನ್ಯಾಹು ಅವರ ವಿರೋಧಿಗಳು ಹರ್ಷೋದ್ಗಾರಗಳ ಮೂಲಕ  ಸಂಭ್ರಮಾಚರಣೆ ಮಾಡಿದರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ 19 ವರ್ಷದ ತಾಲ್ ನರ್ಕಿಸ್‍,  ಹೊಸ ಸರ್ಕಾರದ ಬಗ್ಗೆ ಮಿಶ್ರ ಭಾವನೆಗಳನ್ನು  ವ್ಯಕ್ತಪಡಿಸಿದರೂ, ಈಗ ಬದಲಾವಣೆ ಅಗತ್ಯವಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

49ರ ಹರೆಯದ ಬೆನೆಟ್ ಮತದಾನದ ಮೊದಲು ನೆಸ್ಸೆಟ್ ಭಾಷಣದಲ್ಲಿ, ಸೈದ್ಧಾಂತಿಕವಾಗಿ ಭಿನ್ನವಾಗಿರುವ ಪಕ್ಷಗಳ ಒಕ್ಕೂಟವಾದ ಹೊಸ ಸರ್ಕಾರ ಸಂಪೂರ್ಣ ಇಸ್ರೇಲ್‍ ಅನ್ನು  ಪ್ರತಿನಿಧಿಸಲಿದೆ ಎಂದು ಭರವಸೆ ನೀಡಿದರು.

ಎರಡು ವರ್ಷಗಳಲ್ಲಿ ನಾಲ್ಕು ಅನಿಶ್ಚಿತ ಚುನಾವಣೆಗಳ ನಂತರ ದೇಶವನ್ನು ದ್ವೇಷ ಮತ್ತು ಹೋರಾಟದ ಸುಂಟರಗಾಳಿಯಲ್ಲಿ ಎಸೆಯಲಾಗಿದೆ ಎಂದು ಅವರು ಹೇಳಿದರು.

“ಜನಸಂಖ್ಯೆಯ ಎಲ್ಲಾ ಭಾಗಗಳಳನ್ನು ಪ್ರತಿನಿಧಿಸುವ ವಿಭಿನ್ನ ನಾಯಕರು ಒಟ್ಟಾಗಿ ನಿಂತು ಈ ಹುಚ್ಚುತನವನ್ನು ತಡೆಯುವ ಸಮಯ ಬಂದಿದೆ” ಎಂದು ಅವರು ಹೇಳಿದರು,

ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನೆತನ್ಯಾಹು, ಹಿಂದಿನ ಮೂರು  ಅವಧಿಗೆ ಪ್ರಧಾನಿಯಾಗಿದ್ದಾರೆ.

ಅವರ ಬೆಂಬಲಿಗರು ಇಸ್ರೇಲ್‍ನ ಪ್ರಬಲ ರಕ್ಷಕ ಎಂದು ಶ್ಲಾಘಿಸುತ್ತಾರೆ. ಇರಾನ್‍, ಪ್ಯಾಲಿಸ್ಟೈನ್‍ ವಿಚಾರದಲ್ಲಿ ನೆತನ್ಯಾಹು ಅವರು ಮಾನವ ಹಕ್ಕುಗಳ ಹೋರಾಟಗಾರರಿಂದ ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಆದರೆ ಕಳೆದ ವರ್ಷ ಹಲವಾರು ಅರಬ್ ರಾಷ್ಟ್ರಗಳೊಂದಿಗೆ ಐತಿಹಾಸಿಕ ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...