Homeಅಂತರಾಷ್ಟ್ರೀಯಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

ಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

- Advertisement -
- Advertisement -

ಇಸ್ರೇಲಿನ ವಿಭಿನ್ನ ಸಿದ್ದಾಂತಗಳ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಏರಿದೆ. ಭಾನುವಾರ ಅತಿ ಹೆಚ್ಚು ಕಾಲ ಅಧಿಕಾರ ನಡೆಸಿದ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅಧಿಕಾರ ಕಳೆದುಕೊಂಡಿದ್ದಾರೆ. ದೇಶದ ಪ್ರಕ್ಷುಬ್ಧ ರಾಜಕೀಯ ಸನ್ನಿವೇಶದಲ್ಲಿ ನಡೆದ ಈ ಭಾರಿ ಬದಲಾವಣೆಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಬಲಪಂಥೀಯ ಯಹೂದಿ ಜನಾಂಗೀಯವಾಗಿ ಮತ್ತು ಮಾಜಿ ಟೆಕ್ ಮಿಲಿಯನೇರ್ ಆಗಿರುವ ನಫ್ತಾಲಿ ಬೆನೆಟ್ ಅವರು ಈಗ ನೂತನ ಪ್ರಧಾನಿಯಾಗಿದ್ದಾರೆ.

71 ವರ್ಷದ ನೆತನ್ಯಾಹು ಸೋಲಿನ ಸ್ವಲ್ಪ ಸಮಯದ ಮೊದಲು, “ಪ್ರತಿಪಕ್ಷದಲ್ಲಿರುವುದು ನಮ್ಮ ಹಣೆಬರಹವಾಗಿದ್ದರೆ, ಅದನ್ನು ತಪ್ಪಿಸಲಾಗದು. ನಾವು ಈ ಕೆಟ್ಟ ಸರ್ಕಾರವನ್ನು ಕೆಳಗಿಳಿಸಿ ದೇಶವನ್ನು ನಮ್ಮ ದಾರಿಯಲ್ಲಿ ಮುನ್ನಡೆಸುವವರೆಗೆ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರದಿಂದ ಅನ್‌ಲಾಕ್‌, 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ

ಅವರ ಬಲಪಂಥೀಯ ಬೆಂಬಲಿಗರಿಂದ “ಕಿಂಗ್ ಬೀಬಿ” ಎಂದು ಹೊಗಳಲ್ಪಡುವ ಮತ್ತು ಅವರ ಟೀಕಾಕಾರರಿಂದ “ಅಪರಾಧ ಮಂತ್ರಿ” ಎಂದು ಖಂಡಿಸಲ್ಪಡುವ ನೆತನ್ಯಾಹು ಇಸ್ರೇಲಿ ರಾಜಕೀಯದಲ್ಲಿ ಬಹುಕಾಲದಿಂದ ಪ್ರಬಲ ಮತ್ತು ವಿಭಜಕ ವ್ಯಕ್ತಿ ಎನಿಸಿದ್ದಾರೆ.

ಹಲವು ವಾರಗಳ ಕಾಲ ತೀವ್ರವಾದ ರಾಜಕೀಯ ನಾಟಕದ ನಂತರ ಭಾನುವಾರ ನೆಸ್ಸೆಟ್ ಶಾಸಕಾಂಗದಲ್ಲಿ ಮತದಾನ ನಡೆಯಿತು. ಒಟ್ಟು 120 ಸ್ಥಾನಗಳಲ್ಲಿ 60-59 ಮತಗಳ ತೀವ್ರ ಪೈಪೋಟಿ ನಡೆಯಿತು. ನೆತನ್ಯಾಹು 59 ಮತಗಳೊಂದಿಗೆ ಅಧಿಕಾರ ಕಳೆದುಕೊಂಡರು.

ಟೆಲ್ ಅವೀವ್‌ನ ರಾಬಿನ್ ಚೌಕದಲ್ಲಿ “ಬೈ ಬೈ ಬೀಬಿ” ಫಲಕಗಳೊಂದಿಗೆ ರ್‍ಯಾಲಿ ಮಾಡಿದ ನೆತನ್ಯಾಹು ಅವರ ವಿರೋಧಿಗಳು ಹರ್ಷೋದ್ಗಾರಗಳ ಮೂಲಕ  ಸಂಭ್ರಮಾಚರಣೆ ಮಾಡಿದರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ 19 ವರ್ಷದ ತಾಲ್ ನರ್ಕಿಸ್‍,  ಹೊಸ ಸರ್ಕಾರದ ಬಗ್ಗೆ ಮಿಶ್ರ ಭಾವನೆಗಳನ್ನು  ವ್ಯಕ್ತಪಡಿಸಿದರೂ, ಈಗ ಬದಲಾವಣೆ ಅಗತ್ಯವಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

49ರ ಹರೆಯದ ಬೆನೆಟ್ ಮತದಾನದ ಮೊದಲು ನೆಸ್ಸೆಟ್ ಭಾಷಣದಲ್ಲಿ, ಸೈದ್ಧಾಂತಿಕವಾಗಿ ಭಿನ್ನವಾಗಿರುವ ಪಕ್ಷಗಳ ಒಕ್ಕೂಟವಾದ ಹೊಸ ಸರ್ಕಾರ ಸಂಪೂರ್ಣ ಇಸ್ರೇಲ್‍ ಅನ್ನು  ಪ್ರತಿನಿಧಿಸಲಿದೆ ಎಂದು ಭರವಸೆ ನೀಡಿದರು.

ಎರಡು ವರ್ಷಗಳಲ್ಲಿ ನಾಲ್ಕು ಅನಿಶ್ಚಿತ ಚುನಾವಣೆಗಳ ನಂತರ ದೇಶವನ್ನು ದ್ವೇಷ ಮತ್ತು ಹೋರಾಟದ ಸುಂಟರಗಾಳಿಯಲ್ಲಿ ಎಸೆಯಲಾಗಿದೆ ಎಂದು ಅವರು ಹೇಳಿದರು.

“ಜನಸಂಖ್ಯೆಯ ಎಲ್ಲಾ ಭಾಗಗಳಳನ್ನು ಪ್ರತಿನಿಧಿಸುವ ವಿಭಿನ್ನ ನಾಯಕರು ಒಟ್ಟಾಗಿ ನಿಂತು ಈ ಹುಚ್ಚುತನವನ್ನು ತಡೆಯುವ ಸಮಯ ಬಂದಿದೆ” ಎಂದು ಅವರು ಹೇಳಿದರು,

ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನೆತನ್ಯಾಹು, ಹಿಂದಿನ ಮೂರು  ಅವಧಿಗೆ ಪ್ರಧಾನಿಯಾಗಿದ್ದಾರೆ.

ಅವರ ಬೆಂಬಲಿಗರು ಇಸ್ರೇಲ್‍ನ ಪ್ರಬಲ ರಕ್ಷಕ ಎಂದು ಶ್ಲಾಘಿಸುತ್ತಾರೆ. ಇರಾನ್‍, ಪ್ಯಾಲಿಸ್ಟೈನ್‍ ವಿಚಾರದಲ್ಲಿ ನೆತನ್ಯಾಹು ಅವರು ಮಾನವ ಹಕ್ಕುಗಳ ಹೋರಾಟಗಾರರಿಂದ ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಆದರೆ ಕಳೆದ ವರ್ಷ ಹಲವಾರು ಅರಬ್ ರಾಷ್ಟ್ರಗಳೊಂದಿಗೆ ಐತಿಹಾಸಿಕ ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...