Homeಅಂತರಾಷ್ಟ್ರೀಯಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

ಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

- Advertisement -
- Advertisement -

ಇಸ್ರೇಲಿನ ವಿಭಿನ್ನ ಸಿದ್ದಾಂತಗಳ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಏರಿದೆ. ಭಾನುವಾರ ಅತಿ ಹೆಚ್ಚು ಕಾಲ ಅಧಿಕಾರ ನಡೆಸಿದ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅಧಿಕಾರ ಕಳೆದುಕೊಂಡಿದ್ದಾರೆ. ದೇಶದ ಪ್ರಕ್ಷುಬ್ಧ ರಾಜಕೀಯ ಸನ್ನಿವೇಶದಲ್ಲಿ ನಡೆದ ಈ ಭಾರಿ ಬದಲಾವಣೆಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಬಲಪಂಥೀಯ ಯಹೂದಿ ಜನಾಂಗೀಯವಾಗಿ ಮತ್ತು ಮಾಜಿ ಟೆಕ್ ಮಿಲಿಯನೇರ್ ಆಗಿರುವ ನಫ್ತಾಲಿ ಬೆನೆಟ್ ಅವರು ಈಗ ನೂತನ ಪ್ರಧಾನಿಯಾಗಿದ್ದಾರೆ.

71 ವರ್ಷದ ನೆತನ್ಯಾಹು ಸೋಲಿನ ಸ್ವಲ್ಪ ಸಮಯದ ಮೊದಲು, “ಪ್ರತಿಪಕ್ಷದಲ್ಲಿರುವುದು ನಮ್ಮ ಹಣೆಬರಹವಾಗಿದ್ದರೆ, ಅದನ್ನು ತಪ್ಪಿಸಲಾಗದು. ನಾವು ಈ ಕೆಟ್ಟ ಸರ್ಕಾರವನ್ನು ಕೆಳಗಿಳಿಸಿ ದೇಶವನ್ನು ನಮ್ಮ ದಾರಿಯಲ್ಲಿ ಮುನ್ನಡೆಸುವವರೆಗೆ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರದಿಂದ ಅನ್‌ಲಾಕ್‌, 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ

ಅವರ ಬಲಪಂಥೀಯ ಬೆಂಬಲಿಗರಿಂದ “ಕಿಂಗ್ ಬೀಬಿ” ಎಂದು ಹೊಗಳಲ್ಪಡುವ ಮತ್ತು ಅವರ ಟೀಕಾಕಾರರಿಂದ “ಅಪರಾಧ ಮಂತ್ರಿ” ಎಂದು ಖಂಡಿಸಲ್ಪಡುವ ನೆತನ್ಯಾಹು ಇಸ್ರೇಲಿ ರಾಜಕೀಯದಲ್ಲಿ ಬಹುಕಾಲದಿಂದ ಪ್ರಬಲ ಮತ್ತು ವಿಭಜಕ ವ್ಯಕ್ತಿ ಎನಿಸಿದ್ದಾರೆ.

ಹಲವು ವಾರಗಳ ಕಾಲ ತೀವ್ರವಾದ ರಾಜಕೀಯ ನಾಟಕದ ನಂತರ ಭಾನುವಾರ ನೆಸ್ಸೆಟ್ ಶಾಸಕಾಂಗದಲ್ಲಿ ಮತದಾನ ನಡೆಯಿತು. ಒಟ್ಟು 120 ಸ್ಥಾನಗಳಲ್ಲಿ 60-59 ಮತಗಳ ತೀವ್ರ ಪೈಪೋಟಿ ನಡೆಯಿತು. ನೆತನ್ಯಾಹು 59 ಮತಗಳೊಂದಿಗೆ ಅಧಿಕಾರ ಕಳೆದುಕೊಂಡರು.

ಟೆಲ್ ಅವೀವ್‌ನ ರಾಬಿನ್ ಚೌಕದಲ್ಲಿ “ಬೈ ಬೈ ಬೀಬಿ” ಫಲಕಗಳೊಂದಿಗೆ ರ್‍ಯಾಲಿ ಮಾಡಿದ ನೆತನ್ಯಾಹು ಅವರ ವಿರೋಧಿಗಳು ಹರ್ಷೋದ್ಗಾರಗಳ ಮೂಲಕ  ಸಂಭ್ರಮಾಚರಣೆ ಮಾಡಿದರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ 19 ವರ್ಷದ ತಾಲ್ ನರ್ಕಿಸ್‍,  ಹೊಸ ಸರ್ಕಾರದ ಬಗ್ಗೆ ಮಿಶ್ರ ಭಾವನೆಗಳನ್ನು  ವ್ಯಕ್ತಪಡಿಸಿದರೂ, ಈಗ ಬದಲಾವಣೆ ಅಗತ್ಯವಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

49ರ ಹರೆಯದ ಬೆನೆಟ್ ಮತದಾನದ ಮೊದಲು ನೆಸ್ಸೆಟ್ ಭಾಷಣದಲ್ಲಿ, ಸೈದ್ಧಾಂತಿಕವಾಗಿ ಭಿನ್ನವಾಗಿರುವ ಪಕ್ಷಗಳ ಒಕ್ಕೂಟವಾದ ಹೊಸ ಸರ್ಕಾರ ಸಂಪೂರ್ಣ ಇಸ್ರೇಲ್‍ ಅನ್ನು  ಪ್ರತಿನಿಧಿಸಲಿದೆ ಎಂದು ಭರವಸೆ ನೀಡಿದರು.

ಎರಡು ವರ್ಷಗಳಲ್ಲಿ ನಾಲ್ಕು ಅನಿಶ್ಚಿತ ಚುನಾವಣೆಗಳ ನಂತರ ದೇಶವನ್ನು ದ್ವೇಷ ಮತ್ತು ಹೋರಾಟದ ಸುಂಟರಗಾಳಿಯಲ್ಲಿ ಎಸೆಯಲಾಗಿದೆ ಎಂದು ಅವರು ಹೇಳಿದರು.

“ಜನಸಂಖ್ಯೆಯ ಎಲ್ಲಾ ಭಾಗಗಳಳನ್ನು ಪ್ರತಿನಿಧಿಸುವ ವಿಭಿನ್ನ ನಾಯಕರು ಒಟ್ಟಾಗಿ ನಿಂತು ಈ ಹುಚ್ಚುತನವನ್ನು ತಡೆಯುವ ಸಮಯ ಬಂದಿದೆ” ಎಂದು ಅವರು ಹೇಳಿದರು,

ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನೆತನ್ಯಾಹು, ಹಿಂದಿನ ಮೂರು  ಅವಧಿಗೆ ಪ್ರಧಾನಿಯಾಗಿದ್ದಾರೆ.

ಅವರ ಬೆಂಬಲಿಗರು ಇಸ್ರೇಲ್‍ನ ಪ್ರಬಲ ರಕ್ಷಕ ಎಂದು ಶ್ಲಾಘಿಸುತ್ತಾರೆ. ಇರಾನ್‍, ಪ್ಯಾಲಿಸ್ಟೈನ್‍ ವಿಚಾರದಲ್ಲಿ ನೆತನ್ಯಾಹು ಅವರು ಮಾನವ ಹಕ್ಕುಗಳ ಹೋರಾಟಗಾರರಿಂದ ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಆದರೆ ಕಳೆದ ವರ್ಷ ಹಲವಾರು ಅರಬ್ ರಾಷ್ಟ್ರಗಳೊಂದಿಗೆ ಐತಿಹಾಸಿಕ ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...