Homeಅಂತರಾಷ್ಟ್ರೀಯಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

ಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

- Advertisement -
- Advertisement -

ಇಸ್ರೇಲಿನ ವಿಭಿನ್ನ ಸಿದ್ದಾಂತಗಳ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಏರಿದೆ. ಭಾನುವಾರ ಅತಿ ಹೆಚ್ಚು ಕಾಲ ಅಧಿಕಾರ ನಡೆಸಿದ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅಧಿಕಾರ ಕಳೆದುಕೊಂಡಿದ್ದಾರೆ. ದೇಶದ ಪ್ರಕ್ಷುಬ್ಧ ರಾಜಕೀಯ ಸನ್ನಿವೇಶದಲ್ಲಿ ನಡೆದ ಈ ಭಾರಿ ಬದಲಾವಣೆಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಬಲಪಂಥೀಯ ಯಹೂದಿ ಜನಾಂಗೀಯವಾಗಿ ಮತ್ತು ಮಾಜಿ ಟೆಕ್ ಮಿಲಿಯನೇರ್ ಆಗಿರುವ ನಫ್ತಾಲಿ ಬೆನೆಟ್ ಅವರು ಈಗ ನೂತನ ಪ್ರಧಾನಿಯಾಗಿದ್ದಾರೆ.

71 ವರ್ಷದ ನೆತನ್ಯಾಹು ಸೋಲಿನ ಸ್ವಲ್ಪ ಸಮಯದ ಮೊದಲು, “ಪ್ರತಿಪಕ್ಷದಲ್ಲಿರುವುದು ನಮ್ಮ ಹಣೆಬರಹವಾಗಿದ್ದರೆ, ಅದನ್ನು ತಪ್ಪಿಸಲಾಗದು. ನಾವು ಈ ಕೆಟ್ಟ ಸರ್ಕಾರವನ್ನು ಕೆಳಗಿಳಿಸಿ ದೇಶವನ್ನು ನಮ್ಮ ದಾರಿಯಲ್ಲಿ ಮುನ್ನಡೆಸುವವರೆಗೆ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರದಿಂದ ಅನ್‌ಲಾಕ್‌, 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ

ಅವರ ಬಲಪಂಥೀಯ ಬೆಂಬಲಿಗರಿಂದ “ಕಿಂಗ್ ಬೀಬಿ” ಎಂದು ಹೊಗಳಲ್ಪಡುವ ಮತ್ತು ಅವರ ಟೀಕಾಕಾರರಿಂದ “ಅಪರಾಧ ಮಂತ್ರಿ” ಎಂದು ಖಂಡಿಸಲ್ಪಡುವ ನೆತನ್ಯಾಹು ಇಸ್ರೇಲಿ ರಾಜಕೀಯದಲ್ಲಿ ಬಹುಕಾಲದಿಂದ ಪ್ರಬಲ ಮತ್ತು ವಿಭಜಕ ವ್ಯಕ್ತಿ ಎನಿಸಿದ್ದಾರೆ.

ಹಲವು ವಾರಗಳ ಕಾಲ ತೀವ್ರವಾದ ರಾಜಕೀಯ ನಾಟಕದ ನಂತರ ಭಾನುವಾರ ನೆಸ್ಸೆಟ್ ಶಾಸಕಾಂಗದಲ್ಲಿ ಮತದಾನ ನಡೆಯಿತು. ಒಟ್ಟು 120 ಸ್ಥಾನಗಳಲ್ಲಿ 60-59 ಮತಗಳ ತೀವ್ರ ಪೈಪೋಟಿ ನಡೆಯಿತು. ನೆತನ್ಯಾಹು 59 ಮತಗಳೊಂದಿಗೆ ಅಧಿಕಾರ ಕಳೆದುಕೊಂಡರು.

ಟೆಲ್ ಅವೀವ್‌ನ ರಾಬಿನ್ ಚೌಕದಲ್ಲಿ “ಬೈ ಬೈ ಬೀಬಿ” ಫಲಕಗಳೊಂದಿಗೆ ರ್‍ಯಾಲಿ ಮಾಡಿದ ನೆತನ್ಯಾಹು ಅವರ ವಿರೋಧಿಗಳು ಹರ್ಷೋದ್ಗಾರಗಳ ಮೂಲಕ  ಸಂಭ್ರಮಾಚರಣೆ ಮಾಡಿದರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ 19 ವರ್ಷದ ತಾಲ್ ನರ್ಕಿಸ್‍,  ಹೊಸ ಸರ್ಕಾರದ ಬಗ್ಗೆ ಮಿಶ್ರ ಭಾವನೆಗಳನ್ನು  ವ್ಯಕ್ತಪಡಿಸಿದರೂ, ಈಗ ಬದಲಾವಣೆ ಅಗತ್ಯವಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

49ರ ಹರೆಯದ ಬೆನೆಟ್ ಮತದಾನದ ಮೊದಲು ನೆಸ್ಸೆಟ್ ಭಾಷಣದಲ್ಲಿ, ಸೈದ್ಧಾಂತಿಕವಾಗಿ ಭಿನ್ನವಾಗಿರುವ ಪಕ್ಷಗಳ ಒಕ್ಕೂಟವಾದ ಹೊಸ ಸರ್ಕಾರ ಸಂಪೂರ್ಣ ಇಸ್ರೇಲ್‍ ಅನ್ನು  ಪ್ರತಿನಿಧಿಸಲಿದೆ ಎಂದು ಭರವಸೆ ನೀಡಿದರು.

ಎರಡು ವರ್ಷಗಳಲ್ಲಿ ನಾಲ್ಕು ಅನಿಶ್ಚಿತ ಚುನಾವಣೆಗಳ ನಂತರ ದೇಶವನ್ನು ದ್ವೇಷ ಮತ್ತು ಹೋರಾಟದ ಸುಂಟರಗಾಳಿಯಲ್ಲಿ ಎಸೆಯಲಾಗಿದೆ ಎಂದು ಅವರು ಹೇಳಿದರು.

“ಜನಸಂಖ್ಯೆಯ ಎಲ್ಲಾ ಭಾಗಗಳಳನ್ನು ಪ್ರತಿನಿಧಿಸುವ ವಿಭಿನ್ನ ನಾಯಕರು ಒಟ್ಟಾಗಿ ನಿಂತು ಈ ಹುಚ್ಚುತನವನ್ನು ತಡೆಯುವ ಸಮಯ ಬಂದಿದೆ” ಎಂದು ಅವರು ಹೇಳಿದರು,

ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನೆತನ್ಯಾಹು, ಹಿಂದಿನ ಮೂರು  ಅವಧಿಗೆ ಪ್ರಧಾನಿಯಾಗಿದ್ದಾರೆ.

ಅವರ ಬೆಂಬಲಿಗರು ಇಸ್ರೇಲ್‍ನ ಪ್ರಬಲ ರಕ್ಷಕ ಎಂದು ಶ್ಲಾಘಿಸುತ್ತಾರೆ. ಇರಾನ್‍, ಪ್ಯಾಲಿಸ್ಟೈನ್‍ ವಿಚಾರದಲ್ಲಿ ನೆತನ್ಯಾಹು ಅವರು ಮಾನವ ಹಕ್ಕುಗಳ ಹೋರಾಟಗಾರರಿಂದ ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಆದರೆ ಕಳೆದ ವರ್ಷ ಹಲವಾರು ಅರಬ್ ರಾಷ್ಟ್ರಗಳೊಂದಿಗೆ ಐತಿಹಾಸಿಕ ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...