Homeಅಂತರಾಷ್ಟ್ರೀಯಇಸ್ರೇಲ್ ಪ್ರಧಾನಿ ಭೇಟಿಯಾದ ಭಾರತೀಯ ಪತ್ರಕರ್ತರು: ಆಟೋಗ್ರಾಪ್ ಪಡೆದು ಚರ್ಚೆಗೆ ಗ್ರಾಸವಾದ ತಂಡ

ಇಸ್ರೇಲ್ ಪ್ರಧಾನಿ ಭೇಟಿಯಾದ ಭಾರತೀಯ ಪತ್ರಕರ್ತರು: ಆಟೋಗ್ರಾಪ್ ಪಡೆದು ಚರ್ಚೆಗೆ ಗ್ರಾಸವಾದ ತಂಡ

- Advertisement -
- Advertisement -

ಜೆರುಸಲೇಮ್: ಹಿರಿಯ ಭಾರತೀಯ ಪತ್ರಕರ್ತರ ತಂಡವು ನೆತನ್ಯಾಹು ಅವರನ್ನು ಭೇಟಿ ಮಾಡಿ, ಆಟೋಗ್ರಾಫ್ ಪಡೆದುಕೊಂಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ಸ್ (CPJ) ಸೇರಿದಂತೆ 15 ಮಾಧ್ಯಮ ಮತ್ತು ಮಾನವ ಹಕ್ಕುಗಳ ಸಂಸ್ಥೆಗಳು ಪತ್ರ ಬರೆದು, ಇಸ್ರೇಲ್ ಗಾಜಾದಲ್ಲಿ ಪತ್ರಕರ್ತರ ಹತ್ಯೆ ಮತ್ತು ಅವರನ್ನು ಹಸಿವಿನಿಂದ ಬಳಲಿಸುವುದನ್ನು ನಿಲ್ಲಿಸುವಂತೆ ಜಂಟಿ ಪತ್ರ ಬರೆದು ಒತ್ತಾಯಿಸಿರುವ ನಡುವೆ ಈ ಬೆಳವಣಿಗೆ ನಡೆದಿದೆ.

“ನಾವು ಮತ್ತೊಮ್ಮೆ ಇಸ್ರೇಲ್ ಅಧಿಕಾರಿಗಳಿಗೆ ಪತ್ರಕರ್ತರನ್ನು ಗಾಜಾದ ಒಳಗೆ ಮತ್ತು ಹೊರಗೆ ಹೋಗಲು ಅನುಮತಿಸುವಂತೆ ಒತ್ತಾಯಿಸುತ್ತೇವೆ. ಅಲ್ಲಿನ ಜನರಿಗೆ ಸಾಕಷ್ಟು ಆಹಾರ ಸರಬರಾಜು ತಲುಪುವುದು ಅತ್ಯಗತ್ಯ” ಎಂದು ಸಿಪಿಜೆ ಪತ್ರ ಬರೆದು ಒತ್ತಾಯಿಸಿರುವುದು ಈ ಹಿಂದೆ ವರದಿಯಾಗಿತ್ತು.

ಭಾರತೀಯ ಪತ್ರಕರ್ತ ಸಿದ್ಧಾಂತ್ ಸಿಬಲ್ ಅವರು ನೆತನ್ಯಾಹು ಅವರ ಜೆರುಸಲೇಮ್ ಕಚೇರಿಯಲ್ಲಿ ಭೇಟಿಯಾದ ನಂತರ ಪಡೆದ ಆಟೋಗ್ರಾಫ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ, ಭಾರತೀಯ ರಾಯಭಾರಿ ಜೆ.ಪಿ. ಸಿಂಗ್ ಕೂಡ ಉಪಸ್ಥಿತರಿದ್ದು, ಭದ್ರತೆ ಮತ್ತು ಆರ್ಥಿಕ ವಿಚಾರಗಳ ಕುರಿತು ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿದ್ದಾರೆ.

TV9 ನೆಟ್‌ವರ್ಕ್‌ನ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಆದಿತ್ಯ ರಾಜ್ ಕೌಲ್ ಅವರ ಪ್ರಕಾರ, ನೆತನ್ಯಾಹು ಅವರು “ಇಸ್ರೇಲ್‌ಗೆ ಹೆಚ್ಚು ಭಾರತೀಯ ಕಾರ್ಮಿಕರು ಬೇಕು, ಏಕೆಂದರೆ ಅವರು ವಿವೇಕವಂತರು. ಆ ನಿಟ್ಟಿನಲ್ಲಿ ಇಸ್ರೇಲ್ ಅಧಿಕಾರಶಾಹಿ ಅಡೆತಡೆಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಗಾಜಾದಲ್ಲಿ ಪತ್ರಕರ್ತರ ಪರಿಸ್ಥಿತಿ

ಅಕ್ಟೋಬರ್ 2023ರಿಂದ ಇಸ್ರೇಲ್‌ನಿಂದ ಗಾಜಾದಲ್ಲಿ 230ಕ್ಕೂ ಹೆಚ್ಚು ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ.

“ಪತ್ರಕರ್ತ ಸಮುದಾಯ ಮತ್ತು ಪ್ರಪಂಚದ ಮೇಲೆ ದೊಡ್ಡ ಜವಾಬ್ದಾರಿ ಇದೆ; ನಮ್ಮ ಸಹೋದ್ಯೋಗಿಗಳಿಗೆ ಬೆಂಬಲ ನೀಡಲು ನಮ್ಮ ಧ್ವನಿ ಎತ್ತುವುದು ಮತ್ತು ಲಭ್ಯವಿರುವ ಎಲ್ಲ ವಿಧಾನಗಳನ್ನು ಬಳಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ” ಎಂದು CPJ ಮತ್ತು ಅದರ ಪಾಲುದಾರರು ಜಂಟಿ ಹೇಳಿಕೆಯಲ್ಲಿ ಈ ಹಿಂದೆ ತಿಳಿಸಿದ್ದವು.

“ಅಂತರರಾಷ್ಟ್ರೀಯ ಸಮುದಾಯವು ಕಾರ್ಯಪ್ರವೃತ್ತವಾಗಲು ವಿಫಲವಾದರೆ, ಈ ಪತ್ರಕರ್ತರ ಸಾವು ಕೇವಲ ನೈತಿಕ ದುರಂತವಾಗುವುದಿಲ್ಲ, ಬದಲಾಗಿ ಗಾಜಾದಲ್ಲಿ ಸತ್ಯದ ಸಾವೂ ಆಗಲಿದೆ. ನಮ್ಮ ನಿಷ್ಕ್ರಿಯತೆಯು ನಮ್ಮ ಸಹ ಪತ್ರಕರ್ತರನ್ನು ರಕ್ಷಿಸುವಲ್ಲಿ ಮತ್ತು ಪ್ರತಿಯೊಬ್ಬ ಪತ್ರಕರ್ತರೂ ಎತ್ತಿ ಹಿಡಿಯುವ ತತ್ವಗಳನ್ನು ದ್ರೋಹ ಮಾಡುವಲ್ಲಿನ ಒಂದು ದೊಡ್ಡ ವೈಫಲ್ಯ ಎಂದು ಇತಿಹಾಸದಲ್ಲಿ ದಾಖಲಾಗುತ್ತದೆ” ಎಂದು ಹೇಳಿಕೆಯಲ್ಲಿ ಒತ್ತಿ ಹೇಳಲಾಗಿತ್ತು.

ಕಳೆದ ತಿಂಗಳು, AFP, AP, BBC News ಮತ್ತು ರಾಯಿಟರ್ಸ್ ಕೂಡ ಗಾಜಾದಲ್ಲಿ ಪತ್ರಕರ್ತರು ಎದುರಿಸುತ್ತಿರುವ ಹಸಿವಿನ ಬಗ್ಗೆ ಜಂಟಿ ಹೇಳಿಕೆ ನೀಡಿದ್ದವು. “ನಾವು ಗಾಜಾದಲ್ಲಿರುವ ನಮ್ಮ ಪತ್ರಕರ್ತರ ಬಗ್ಗೆ ತೀವ್ರ ಕಳವಳ ಹೊಂದಿದ್ದೇವೆ, ಅವರು ಮತ್ತು ಅವರ ಕುಟುಂಬಗಳಿಗೆ ಆಹಾರ ನೀಡಲು ಅಸಾಧ್ಯವಾಗುತ್ತಿದೆ. ಹಲವು ತಿಂಗಳುಗಳಿಂದ ಈ ಸ್ವತಂತ್ರ ಪತ್ರಕರ್ತರು ಗಾಜಾದಲ್ಲಿ ಪ್ರಪಂಚದ ಕಣ್ಣು ಮತ್ತು ಕಿವಿಗಳಾಗಿದ್ದಾರೆ. ಈಗ ಅವರು ತಾವು ವರದಿ ಮಾಡುತ್ತಿರುವವರಂತೆಯೇ ಅದೇ ಭೀಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ” ಎಂದು ಆ ಸಂಸ್ಥೆಗಳು ಹೇಳಿದ್ದವು.

ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ಸ್ (CPJ) ಎಂದರೇನು?

ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ಸ್ (CPJ) ಎಂಬುದು ನ್ಯೂಯಾರ್ಕ್ ನಗರದಲ್ಲಿರುವ ಒಂದು ಅಮೆರಿಕನ್ ಲಾಭರಹಿತ ಸಂಸ್ಥೆ. ಇದು ಪ್ರಪಂಚದಾದ್ಯಂತ ಪತ್ರಿಕಾ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ಪತ್ರಕರ್ತರ ಹಕ್ಕುಗಳನ್ನು ಕಾಪಾಡಲು ಕೆಲಸ ಮಾಡುತ್ತದೆ.

ಮುಖ್ಯ ಕಾರ್ಯಗಳು:

ಪತ್ರಕರ್ತರ ರಕ್ಷಣೆ: ವರದಿಗಾರಿಕೆ ಮಾಡುತ್ತಿರುವಾಗ ಅಪಾಯದಲ್ಲಿರುವ ಪತ್ರಕರ್ತರನ್ನು ಇದು ಬೆಂಬಲಿಸುತ್ತದೆ.

ದಾಖಲೀಕರಣ ಮತ್ತು ವರದಿ: ಪ್ರಪಂಚದಾದ್ಯಂತ ಪತ್ರಕರ್ತರ ಮೇಲೆ ನಡೆಯುವ ಹಲ್ಲೆಗಳು, ಹತ್ಯೆಗಳು ಮತ್ತು ಜೈಲು ಶಿಕ್ಷೆಗಳಂತಹ ಘಟನೆಗಳನ್ನು CPJ ದಾಖಲಿಸುತ್ತದೆ. ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ಪ್ರವೃತ್ತಿಗಳ ಬಗ್ಗೆ ವರದಿಗಳನ್ನು ಪ್ರಕಟಿಸುತ್ತದೆ.

ಪರಿಹಾರ ಮತ್ತು ನೆರವು: ಅಪಾಯದಲ್ಲಿರುವ ಪತ್ರಕರ್ತರಿಗೆ ನೆರವು ನೀಡುತ್ತದೆ. ಇದು ಅವರಿಗೆ ಸುರಕ್ಷತೆಯ ಬಗ್ಗೆ ತರಬೇತಿ ಕಾರ್ಯಾಗಾರಗಳನ್ನು ಸಹ ನಡೆಸುತ್ತದೆ.

ಇದನ್ನು “ಜರ್ನಲಿಸಂನ ರೆಡ್ ಕ್ರಾಸ್” ಎಂದು ಕೂಡ ಕರೆಯಲಾಗುತ್ತದೆ, ಏಕೆಂದರೆ ಇದು ಪತ್ರಕರ್ತರ ಸುರಕ್ಷತೆ ಮತ್ತು ಹಕ್ಕುಗಳಿಗಾಗಿ ಹೋರಾಡುತ್ತದೆ. CPJ ಯ ಸಂಸ್ಥಾಪಕರು ಅಮೆರಿಕನ್ ವರದಿಗಾರರಾಗಿದ್ದು, ತಮ್ಮ ಸಹೋದ್ಯೋಗಿಗಳು ಎದುರಿಸುತ್ತಿದ್ದ ಅಪಾಯಗಳನ್ನು ನೋಡಿದ ನಂತರ 1981ರಲ್ಲಿ ಇದನ್ನು ಸ್ಥಾಪಿಸಿದರು. ಪ್ರಸ್ತುತ, ಈ ಸಂಸ್ಥೆಯು ಪ್ರಪಂಚದ ವಿವಿಧ ಭಾಗಗಳಲ್ಲಿ ಕೆಲಸ ಮಾಡುವ ತಜ್ಞರು ಮತ್ತು ವರದಿಗಾರರ ದೊಡ್ಡ ಜಾಲವನ್ನು ಹೊಂದಿದೆ.

ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ಸರೋವರ ಬೆಂಕಿಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...

ತಮಿಳುನಾಡು ವಿಧಾನಸಭಾ ಚುನಾವಣೆ 2026| ದಕ್ಷಿಣ ರಾಜ್ಯಗಳು ‘ದೆಹಲಿ ತಂಡ’ವನ್ನು ಓಡಿಸಬೇಕು: ಉದಯನಿಧಿ ಸ್ಟಾಲಿನ್

ತಮಿಳುನಾಡು: ಮುಂಬರುವ ವಿಧಾನಸಭಾ ಚುನಾವಣೆಗಳು ತಮಿಳುನಾಡು ತಂಡ ಮತ್ತು ದೆಹಲಿ ತಂಡದ ನಡುವಿನ ಹೋರಾಟವಾಗಿದ್ದು, ದಕ್ಷಿಣ ರಾಜ್ಯವು ದೆಹಲಿಯನ್ನು "ಓಡಿಸಬೇಕು" ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಮತ್ತೊಮ್ಮೆ ಒತ್ತಾಯಿಸಿದ್ದಾರೆ. "ನಮ್ಮ ನಾಯಕ (ಎಂ.ಕೆ....

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...