Homeಅಂತರಾಷ್ಟ್ರೀಯಗಾಝಾ ಮೇಲೆ 'ಪ್ರಬಲ ದಾಳಿ'ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

- Advertisement -
- Advertisement -

ಈ ಹಿಂದಿನಂತೆ ಗಾಝಾ ಕದನ ವಿರಾಮ ಕೇವಲ ಕಾಗದಕ್ಕೆ ಸೀಮಿತವಾಗಿದ್ದು, ಇಸ್ರೇಲ್ ಬಾಂಬ್ ದಾಳಿ ನಡೆಸಿ ಅಮಾಯಕರ ಹತ್ಯೆಯನ್ನು ಮುಂದುವರಿಸಿದೆ.

ಹಮಾಸ್ ಒಪ್ಪಂದ ಉಲ್ಲಂಘಿಸಿದ ನೆಪ ಹೇಳಿ ಮಂಗಳವಾರ (ಅ.28) ಇಸ್ರೇಲ್ ಗಾಝಾ ಪಟ್ಟಿಯ ವಿವಿಧ ಪ್ರದೇಶಗಳ ಮೇಲೆ ಭೀಕರ ವಾಯದಾಳಿ ನಡೆಸಿದೆ. ಇದರಲ್ಲಿ ಈವರೆಗೆ 30 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ತನ್ನ ಪಡೆಗಳ ಮೇಲೆ ಹಮಾಸ್ ನಡೆಸಿದ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ. ಪ್ಯಾಲೆಸ್ತೀನಿಯನ್ ಗುಂಪು ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ.

ಮಂಗಳವಾರ ಹಮಾಸ್ ಮತ್ತು ಇಸ್ರೇಲ್ ಸೇನೆ ನಡುವೆ ದಕ್ಷಿಣ ರಫಾದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ. ಹಮಾಸ್ ರೆಡ್‌ ಲೇನ್ ದಾಟಿ ಬಂದು ನಮ್ಮ ಪಡೆಗಳ ಮೇಲೆ ಅಪ್ರಚೋದಿನ ಗುಂಡಿನ ದಾಳಿ ಮಾಡಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಈ ಗುಂಡಿನ ಚಕಮಕಿ ವರದಿಯ ಬಳಿಕ, ಗಾಝಾ ಮೇಲೆ ಪ್ರಬಲ ದಾಳಿ ನಡೆಸುವಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇನೆಗೆ ಆದೇಶಿಸಿದ್ದಾರೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ನೆತನ್ಯಾಹು ಆದೇಶದ ಬೆನ್ನಲ್ಲೇ ಇಸ್ರೇಲ್ ಸೇನೆ ಗಾಝಾ ಮೇಲೆ ದಾಳಿ ನಡೆಸಿ ನಾಗರಿಕರನ್ನು ಹತ್ಯೆ ಮಾಡಿದೆ. ಹಮಾಸ್ ಪ್ರಕಾಶಮಾನವಾದ ರೆಡ್ ಲೇನ್ ದಾಟಿ ಮುನ್ನುಗ್ಗಿದೆ. ಇದಕ್ಕೆ ಬಲವಾದ ತಿರುಗೇಟನ್ನು ನಾವು ಕೊಡುತ್ತೇವೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

ಹಮಾಸ್‌ನ ಸಶಸ್ತ್ರ ವಿಭಾಗವಾದ ಕಸ್ಸಮ್ ಬ್ರಿಗೇಡ್ಸ್, ಇಸ್ರೇಲ್ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ. ಕಾಣೆಯಾದ ಒತ್ತೆಯಾಳುಗಳ ಶವದ ಹಸ್ತಾಂತರವನ್ನು ಮುಂದೂಡುವುದಾಗಿ ಹೇಳಿದೆ.

ಇಸ್ರೇಲ್ ದಾಳಿ ನಡೆಸುತ್ತಿರುವುದರಿಂದ ಕಟ್ಟಡಗಳ ಅವಶೇಷಗಳಡಿ ಹುದುಗಿರುವ ಇಸ್ರೇಲಿ ಒತ್ತೆಯಾಳುಗಳ ಶವಗಳ ಹುಡುಕಾಟಕ್ಕೆ ಅಡ್ಡಿಯಾಗಿದೆ. ಇದರಿಂದ ಶವಗಳ ವಿಳಂಬವಾಗಲಿದೆ ಎಂದು ಹಮಾಸ್ ತಿಳಿಸಿದೆ.

ಎರಡೂ ಕಡೆಗಳಿಂದ ಕದನ ವಿರಾಮ ಉಲ್ಲಂಘನೆ ಆರೋಪಗಳು ಕೇಳಿ ಬಂದರೂ, ಗಾಝಾ ಕದನ ವಿರಾಮ ಇನ್ನೂ ಚಾಲ್ತಿಯಲ್ಲಿದೆ ಎಂದು ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ವಾಷಿಂಗ್ಟನ್ ಡಿಸಿಯಲ್ಲಿ ಹೇಳಿದ್ದಾರೆ.

“ಕದನ ವಿರಾಮ ಎಂದರೆ ಅಲ್ಲಲ್ಲಿ ಸಣ್ಣಪುಟ್ಟ ಗುಂಡಿನ ಚಕಮಕಿಗಳು ನಡೆಯುವುದಿಲ್ಲ ಎಂದರ್ಥವಲ್ಲ” ಎಂದು ವ್ಯಾನ್ಸ್ ಕ್ಯಾಪಿಟಲ್ ಹಿಲ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಹಮಾಸ್ ಅಥವಾ ಗಾಝಾದೊಳಗಿನ ಇತರ ಯಾರೋ ಇಸ್ರೇಲ್ ಸೇನೆ ಮೇಲೆ ದಾಳಿ ಮಾಡಿದ್ದಾರೆ ಎಂದು ನಮಗೆ ಗೊತ್ತಾಗಿದೆ. ಅದಕ್ಕೆ ಇಸ್ರೇಲ್ ಸೇನೆ ಪ್ರತಿಕ್ರಿಯೆ ನೀಡುತ್ತದೆ. ಇದರ ಹೊರತಾಗಿಯೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮ ಜಾರಿಯಲ್ಲಿರುತ್ತದೆ” ಎಂದು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ.

ಇಸ್ರೇಲ್ ಸೇನೆ ಮೇಲೆ ರಫಾದಲ್ಲಿ ದಾಳಿ ಮಾಡಲಾಗಿದೆ ಎಂಬುವುದನ್ನು ಹಮಾಸ್ ತಳ್ಳಿಹಾಕಿದೆ.

ಯುಕೆಯಲ್ಲಿ ಮತ್ತೊಬ್ಬರು ಭಾರತೀಯ ಮೂಲದ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ಅಂತರ್ಜಾತಿ ವಿವಾಹ, ಸೊಸೆಯ ಕುಟುಂಬದವರಿಂದ ದಲಿತ ವ್ಯಕ್ತಿ ಕೊಲೆ.

ವಧುವಿನ ಕುಟುಂಬವು ಈ ಹಿಂದೆ ವರನ ತಂದೆಯನ್ನು ಬೆದರಿಸಿ ಸೊಸೆಯನ್ನು ತಮ್ಮ ಮನೆಗೆ ವಾಪಸ್‌ ಕಳುಹಿಸಲು ಒತ್ತಾಯಿಸಿತ್ತು ಎಂದು ವರನ ಕುಟುಂಬದವರು ಆರೋಪಿಸಿದ್ದಾರೆ. ಗುಜರಾತ್‌ ನ ನರೋಲ್‌ ಬಳಿ ಅಂತರ್ಜಾತಿ ವಿವಾಹವಾದ ನಂತರ ಮೇಲ್ಜಾತಿಗೆ...

ಕನ್ನಡ ವಿರೋಧಿ ಚಟುವಟಿಕೆ: ಎಂಇಎಸ್ ನಿಷೇಧಕ್ಕೆ ಗಂಭೀರ ಚರ್ಚೆ-ಸತೀಶ ಜಾರಕಿಹೊಳಿ

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸ ದಿನದಂದೆ ನಾಡ ವಿರೋಧಿ ಘೋಷಣೆ ಹಾಕಿದ ಎಂ.ಇ.ಎಸ್ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.  ನಗರದಲ್ಲಿ ಶನಿವಾರ ರಾಜ್ಯೋತ್ಸವ...

ಬಿಹಾರದ ಒಂದೇ ಎಂಜಿನ್ ಸರ್ಕಾರ ಕೇಂದ್ರದಿಂದ ನಡೆಸಲ್ಪಡುತ್ತಿದೆ: ಪ್ರಿಯಾಂಕಾ ಗಾಂಧಿ

ಮುಂಬರುವ ರಾಜ್ಯ ಚುನಾವಣೆಯಲ್ಲಿ ಬುದ್ಧಿವಂತಿಕೆಯಿಂದ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಶನಿವಾರ ಬಿಹಾರದ ಜನರಲ್ಲಿ ಮನವಿ ಮಾಡಿದರು. ಬೇಗುಸರಾಯ್‌ನಲ್ಲಿ ನಡೆದ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, "ಬಿಹಾರದ ಎನ್‌ಡಿಎ ಸರ್ಕಾರದ ಉದ್ದೇಶಗಳು...

‘ನನ್ನ ಮಾತು ಕೇಳಿದ್ದರೆ ಯಡಿಯೂರಪ್ಪ ಜೈಲಿಗೆ ಹೋಗುತ್ತಿರಲಿಲ್ಲ’: ಜಮೀರ್ ಅಹಮದ್ ಖಾನ್

ಹೊಸಪೇಟೆ: ಬಿ.ಎಸ್. ಯಡಿಯೂರಪ್ಪ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದಾಗ, ಹಣಕಾಸು ನಿರ್ವಹಣೆ ವಿಚಾರಣೆಯಲ್ಲಿ ಸಿದ್ದರಾಮಯ್ಯ ಅವರ ಸಲಹೆ ಪಡೆಯುವಂತೆ ಸೂಚಿಸಿದ್ದೆ, ನನ್ನ ಮಾತನ್ನು ತಿರಸ್ಕರಿಸಿ, ಯಡಿಯೂರಪ್ಪನವರು ಜೈಲಿಗೆ ಹೋಗುವಂತಾಯಿತು. ನನ್ನ ಮಾತು...

ಮಸೀದಿ ಧ್ವಂಸಕ್ಕೆ ‘ಜೈಶ್ರೀರಾಮ್-ಜೈ ಬಜರಂಗಬಲಿ’ ಘೋಷಣೆ ಸಾಧನವಾಗಿ ಬಳಸಲಾಗುತ್ತಿದೆ: ಸ್ವಾಮಿ ಪ್ರಸಾದ್ ಮೌರ್ಯ

ಬಿಜೆಪಿ ಆಡಳಿತದಲ್ಲಿ ದಲಿತ ಮತ್ತು ಮುಸ್ಲಿಂ ಸಮುದಾಯಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಈಗ ಜೈ ಶ್ರೀ...

ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಕಾಲ್ತುಳಿತ: ಆಯೋಜಕರ ಮೇಲೆ ಆರೋಪ ಹೊರಿಸಿದ ಆಂಧ್ರ ಮುಖ್ಯಮಂತ್ರಿ

ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗಾ ಪ್ರದೇಶದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಹತ್ತು ಮಂದಿ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡ ಘಟನೆಯ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದೇವಸ್ಥಾನವು ಖಾಸಗಿ ವ್ಯಕ್ತಿಗೆ ಸೇರಿದ್ದು,...

ದೆಹಲಿ ವಿಷಕಾರಿ ಗಾಳಿ: ಪ್ರತಿ ಏಳು ಸಾವುಗಳಲ್ಲಿ ಒಂದು ಮಾಲಿನ್ಯಕ್ಕೆ ಸಂಬಂಧಿಸಿದ್ದು

ಆರೋಗ್ಯ ಮಾಪನ ಮತ್ತು ಮೌಲ್ಯಮಾಪನ ಸಂಸ್ಥೆ (ಐಎಚ್‌ಎಂಇ) ನಡೆಸಿದ ವಿಶ್ಲೇಷಣೆಯ ಪ್ರಕಾರ, ವಾಯು ಮಾಲಿನ್ಯವು ದೆಹಲಿಗೆ ಅತ್ಯಂತ ಮಾರಕ ಆರೋಗ್ಯ ಸಮಸ್ಯೆಯಾಗಿ ಮುಂದುವರೆದಿದೆ. ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಬೊಜ್ಜುಗಿಂತ ಹೆಚ್ಚಿನ ಜೀವಗಳನ್ನು...

ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ…ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ರಾತ್ರಿ ಹೊತ್ತು ರಸ್ತೆಯಲ್ಲಿ ಕುಳಿತಿರುವ ಹುಲಿಯೊಂದರ ತಲೆ ಸವರುವ ವ್ಯಕ್ತಿ, ತನ್ನ ಕೈಯ್ಯಲ್ಲಿದ್ದ ಮದ್ಯದ ಬಾಟಲಿಯಿಂದ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ 6 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದು...

ಕನ್ನಡ ವಿರೋಧಿ ಚಟುವಟಿಕೆ: ಎಂಇಎಸ್ ನಿಷೇಧಕ್ಕೆ ಗಂಭೀರ ಚರ್ಚೆ: ಸತೀಶ ಜಾರಕಿಹೊಳಿ

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸ ದಿನದಂದೆ ನಾಡ ವಿರೋಧಿ ಘೋಷಣೆ ಹಾಕಿದ ಎಂ.ಇ.ಎಸ್ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.  ನಗರದಲ್ಲಿ ಶನಿವಾರ ರಾಜ್ಯೋತ್ಸವ...

ದೆಹಲಿಯನ್ನು ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಿ: ಕೇಂದ್ರಕ್ಕೆ ಬಿಜೆಪಿ ಸಂಸದನ ಒತ್ತಾಯ

ರಾಷ್ಟ್ರ ರಾಜಧಾನಿ ದೆಹಲಿಯನ್ನು ಮಹಾಭಾರತ ಯುಗದಲ್ಲಿ ಪಾಂಡವರು ಸ್ಥಾಪಿಸಿದರು ಎಂದು ನಂಬಲಾದ ಪ್ರಾಚೀನ ನಗರದ ಹೆಸರಾದ 'ಇಂದ್ರಪ್ರಸ್ಥ' ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಕೇಂದ್ರ ಗೃಹ ಸಚಿವ...