Homeಅಂತರಾಷ್ಟ್ರೀಯಗಾಝಾ ಮೇಲೆ 'ಪ್ರಬಲ ದಾಳಿ'ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

- Advertisement -
- Advertisement -

ಈ ಹಿಂದಿನಂತೆ ಗಾಝಾ ಕದನ ವಿರಾಮ ಕೇವಲ ಕಾಗದಕ್ಕೆ ಸೀಮಿತವಾಗಿದ್ದು, ಇಸ್ರೇಲ್ ಬಾಂಬ್ ದಾಳಿ ನಡೆಸಿ ಅಮಾಯಕರ ಹತ್ಯೆಯನ್ನು ಮುಂದುವರಿಸಿದೆ.

ಹಮಾಸ್ ಒಪ್ಪಂದ ಉಲ್ಲಂಘಿಸಿದ ನೆಪ ಹೇಳಿ ಮಂಗಳವಾರ (ಅ.28) ಇಸ್ರೇಲ್ ಗಾಝಾ ಪಟ್ಟಿಯ ವಿವಿಧ ಪ್ರದೇಶಗಳ ಮೇಲೆ ಭೀಕರ ವಾಯದಾಳಿ ನಡೆಸಿದೆ. ಇದರಲ್ಲಿ ಈವರೆಗೆ 30 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ತನ್ನ ಪಡೆಗಳ ಮೇಲೆ ಹಮಾಸ್ ನಡೆಸಿದ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ. ಪ್ಯಾಲೆಸ್ತೀನಿಯನ್ ಗುಂಪು ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ.

ಮಂಗಳವಾರ ಹಮಾಸ್ ಮತ್ತು ಇಸ್ರೇಲ್ ಸೇನೆ ನಡುವೆ ದಕ್ಷಿಣ ರಫಾದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ. ಹಮಾಸ್ ರೆಡ್‌ ಲೇನ್ ದಾಟಿ ಬಂದು ನಮ್ಮ ಪಡೆಗಳ ಮೇಲೆ ಅಪ್ರಚೋದಿನ ಗುಂಡಿನ ದಾಳಿ ಮಾಡಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಈ ಗುಂಡಿನ ಚಕಮಕಿ ವರದಿಯ ಬಳಿಕ, ಗಾಝಾ ಮೇಲೆ ಪ್ರಬಲ ದಾಳಿ ನಡೆಸುವಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇನೆಗೆ ಆದೇಶಿಸಿದ್ದಾರೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ನೆತನ್ಯಾಹು ಆದೇಶದ ಬೆನ್ನಲ್ಲೇ ಇಸ್ರೇಲ್ ಸೇನೆ ಗಾಝಾ ಮೇಲೆ ದಾಳಿ ನಡೆಸಿ ನಾಗರಿಕರನ್ನು ಹತ್ಯೆ ಮಾಡಿದೆ. ಹಮಾಸ್ ಪ್ರಕಾಶಮಾನವಾದ ರೆಡ್ ಲೇನ್ ದಾಟಿ ಮುನ್ನುಗ್ಗಿದೆ. ಇದಕ್ಕೆ ಬಲವಾದ ತಿರುಗೇಟನ್ನು ನಾವು ಕೊಡುತ್ತೇವೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

ಹಮಾಸ್‌ನ ಸಶಸ್ತ್ರ ವಿಭಾಗವಾದ ಕಸ್ಸಮ್ ಬ್ರಿಗೇಡ್ಸ್, ಇಸ್ರೇಲ್ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ. ಕಾಣೆಯಾದ ಒತ್ತೆಯಾಳುಗಳ ಶವದ ಹಸ್ತಾಂತರವನ್ನು ಮುಂದೂಡುವುದಾಗಿ ಹೇಳಿದೆ.

ಇಸ್ರೇಲ್ ದಾಳಿ ನಡೆಸುತ್ತಿರುವುದರಿಂದ ಕಟ್ಟಡಗಳ ಅವಶೇಷಗಳಡಿ ಹುದುಗಿರುವ ಇಸ್ರೇಲಿ ಒತ್ತೆಯಾಳುಗಳ ಶವಗಳ ಹುಡುಕಾಟಕ್ಕೆ ಅಡ್ಡಿಯಾಗಿದೆ. ಇದರಿಂದ ಶವಗಳ ವಿಳಂಬವಾಗಲಿದೆ ಎಂದು ಹಮಾಸ್ ತಿಳಿಸಿದೆ.

ಎರಡೂ ಕಡೆಗಳಿಂದ ಕದನ ವಿರಾಮ ಉಲ್ಲಂಘನೆ ಆರೋಪಗಳು ಕೇಳಿ ಬಂದರೂ, ಗಾಝಾ ಕದನ ವಿರಾಮ ಇನ್ನೂ ಚಾಲ್ತಿಯಲ್ಲಿದೆ ಎಂದು ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ವಾಷಿಂಗ್ಟನ್ ಡಿಸಿಯಲ್ಲಿ ಹೇಳಿದ್ದಾರೆ.

“ಕದನ ವಿರಾಮ ಎಂದರೆ ಅಲ್ಲಲ್ಲಿ ಸಣ್ಣಪುಟ್ಟ ಗುಂಡಿನ ಚಕಮಕಿಗಳು ನಡೆಯುವುದಿಲ್ಲ ಎಂದರ್ಥವಲ್ಲ” ಎಂದು ವ್ಯಾನ್ಸ್ ಕ್ಯಾಪಿಟಲ್ ಹಿಲ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಹಮಾಸ್ ಅಥವಾ ಗಾಝಾದೊಳಗಿನ ಇತರ ಯಾರೋ ಇಸ್ರೇಲ್ ಸೇನೆ ಮೇಲೆ ದಾಳಿ ಮಾಡಿದ್ದಾರೆ ಎಂದು ನಮಗೆ ಗೊತ್ತಾಗಿದೆ. ಅದಕ್ಕೆ ಇಸ್ರೇಲ್ ಸೇನೆ ಪ್ರತಿಕ್ರಿಯೆ ನೀಡುತ್ತದೆ. ಇದರ ಹೊರತಾಗಿಯೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮ ಜಾರಿಯಲ್ಲಿರುತ್ತದೆ” ಎಂದು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ.

ಇಸ್ರೇಲ್ ಸೇನೆ ಮೇಲೆ ರಫಾದಲ್ಲಿ ದಾಳಿ ಮಾಡಲಾಗಿದೆ ಎಂಬುವುದನ್ನು ಹಮಾಸ್ ತಳ್ಳಿಹಾಕಿದೆ.

ಯುಕೆಯಲ್ಲಿ ಮತ್ತೊಬ್ಬರು ಭಾರತೀಯ ಮೂಲದ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...