Homeಅಂತರಾಷ್ಟ್ರೀಯ'ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..'; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

‘ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..’; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

- Advertisement -
- Advertisement -

ಇಸ್ರೇಲ್‌ನ ಎರಡು ಪ್ರಮುಖ ಮಾನವ ಹಕ್ಕುಗಳ ಗುಂಪುಗಳಾದ ಬಿಟ್ಸೆಲೆಮ್ ಮತ್ತು ಫಿಸಿಶಿಯನ್ಸ್ ಫಾರ್ ಹ್ಯೂಮನ್ ರೈಟ್ಸ್ ಸಂಸ್ಥೆಗಳು, ಗಾಝಾದಲ್ಲಿ ಇಸ್ರೇಲ್‌ನ ಕ್ರಮಗಳು ನರಮೇಧಕ್ಕೆ ಕಾರಣವೆಂದು ಹೇಳುವ ಹೊಸ ವರದಿಯನ್ನು ಪ್ರಕಟಿಸಿವೆ.

ಈ ವರದಿಯು ಇಸ್ರೇಲ್‌ನ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ವಿವರಿಸಲು ‘ನರಮೇಧ’ ಎಂಬ ಪದವನ್ನು ಮೊದಲ ಬಾರಿಗೆ ಬಳಸಿದೆ ಎನ್ನಲಾಗುತ್ತಿ. ಇದಕ್ಕೂ ಮೊದಲು, ಅಮ್ನೆಸ್ಟಿ ಇಂಟರ್‌ನ್ಯಾಷನಲ್, ಹ್ಯೂಮನ್ ರೈಟ್ಸ್ ವಾಚ್ ಮತ್ತು ವಿಶ್ವಸಂಸ್ಥೆಯ ವಿಶೇಷ ಸಮಿತಿ ಸೇರಿದಂತೆ ಅನೇಕ ಪ್ರಮುಖ ಅಂತರರಾಷ್ಟ್ರೀಯ ಎನ್‌ಜಿಒಗಳು ಹಲವಾರು ತಿಂಗಳುಗಳಿಂದ ಈ ಪದವನ್ನು ಬಳಸುತ್ತಿವೆ.

ಈ ಬಗ್ಗೆ ಬಿಟ್ಸೆಲೆಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಗಾಝಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು “ಗಾಝಾದ ಜನಸಂಖ್ಯೆಯನ್ನು ನಾಶಮಾಡುವ ಮತ್ತು ಪ್ಯಾಲೆಸ್ತೀನಿಯನ್ ಸಮಾಜವು ಅಲ್ಲಿ ಅಸ್ತಿತ್ವದಲ್ಲಿರಲು ಸಾಧ್ಯವಾಗದಷ್ಟು ದುರಂತದ ಜೀವನ ಪರಿಸ್ಥಿತಿಗಳನ್ನು ಹೇರುವ ಸ್ಪಷ್ಟ ಪ್ರಯತ್ನ” ಎಂದು ವಿವರಿಸಿದ್ದಾರೆ.

“ಇಸ್ರೇಲ್ ಆಡಳಿತದ ಜನಾಂಗೀಯ ಹತ್ಯಾಕಾಂಡದಲ್ಲಿ ಯಾವುದೇ ಪ್ಯಾಲೆಸ್ತೀನಿಯನ್ ಸುರಕ್ಷಿತವಾಗಿಲ್ಲ. ನರಮೇಧಕ್ಕೆ ಯಾವುದೇ ಸಮರ್ಥನೆ ಇಲ್ಲ, ಸ್ವರಕ್ಷಣೆ ಅಲ್ಲ, ಭದ್ರತೆ ಅಲ್ಲ, ಅಕ್ಟೋಬರ್ 7, 2023 ರಂದು ಹಮಾಸ್ ಮಾಡಿದ ಘೋರ ಕೃತ್ಯಗಳು ಇಸ್ರೇಲಿಗಳಲ್ಲಿ ಆಳವಾದ ಅಸ್ತಿತ್ವದ ಭಯವನ್ನು ಹುಟ್ಟುಹಾಕಿದವು. ಅಂತರರಾಷ್ಟ್ರೀಯ ಸಮುದಾಯವು ದೌರ್ಜನ್ಯಗಳನ್ನು ತಡೆಯುವ ಕರ್ತವ್ಯದಲ್ಲಿ ವಿಫಲವಾಗಿದೆ. ಆದರೆ, ಪಾಶ್ಚಿಮಾತ್ಯ ಜಗತ್ತಿನ ನಾಯಕರು, ವಿಶೇಷವಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್, ಇಸ್ರೇಲ್‌ನ ವಿನಾಶಕಾರಿ ಕೃತ್ಯಗಳಿಗೆ ಅನುವು ಮಾಡಿಕೊಡುವ ಬೆಂಬಲವನ್ನು ನೀಡುವ ಮೂಲಕ ಜವಾಬ್ದಾರಿಯನ್ನು ಹಂಚಿಕೊಂಡಿದ್ದಾರೆ. ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ನರಮೇಧವನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಕರ್ತವ್ಯವಾಗಿದೆ” ಎಂದು ಹೇಳಿದೆ.

“ಸಾಮಾಜಿಕ ಮಾಧ್ಯಮಗಳಲ್ಲಿ, ಬಾಂಬ್ ದಾಳಿಯಿಂದ ನಾಶವಾದ ಕಟ್ಟಡಗಳ ಅಡಿಯಲ್ಲಿ ಜನರು ಹೂತುಹೋಗಿರುವುದು, ಸ್ಥಳಾಂತರಗೊಂಡವರ ಶಿಬಿರಗಳು ಬೆಂಕಿಯಲ್ಲಿ ಬಿದ್ದಿರುವುದು, ಹಸಿವಿನಿಂದ ಬಳಲುತ್ತಿರುವ ಮಕ್ಕಳು, ನೀರಿಗಾಗಿ ಹತಾಶರಾಗಿರುವ ಜನರು, ಗಾಯಗೊಂಡವರಿಗೆ ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ ಉಳಿದಿರುವ ಆಸ್ಪತ್ರೆಗಳ ದೃಶ್ಯಗಳನ್ನು ನಾವು ನೋಡುತ್ತಿದ್ದೇವೆ. ಮಾನವ ಹಕ್ಕುಗಳ ಸಂಘಟನೆಯಾಗಿ ಸತ್ಯವನ್ನು ಹೇಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ; ನರಮೇಧ ಇಲ್ಲಿಯೇ ಮತ್ತು ಇದೀಗ ನಡೆಯುತ್ತಿದೆ. ಇದು ನಮ್ಮ ನರಮೇಧ, ನಾವು ಇದನ್ನು ನಿಲ್ಲಿಸಬೇಕಾಗಿದೆ” ಎಂದು ಸಂಸ್ಥೆ ಪ್ರತಿಪಾದಿಸಿದೆ.

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...