Homeಅಂತರಾಷ್ಟ್ರೀಯ'ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..'; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

‘ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..’; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

- Advertisement -
- Advertisement -

ಇಸ್ರೇಲ್‌ನ ಎರಡು ಪ್ರಮುಖ ಮಾನವ ಹಕ್ಕುಗಳ ಗುಂಪುಗಳಾದ ಬಿಟ್ಸೆಲೆಮ್ ಮತ್ತು ಫಿಸಿಶಿಯನ್ಸ್ ಫಾರ್ ಹ್ಯೂಮನ್ ರೈಟ್ಸ್ ಸಂಸ್ಥೆಗಳು, ಗಾಝಾದಲ್ಲಿ ಇಸ್ರೇಲ್‌ನ ಕ್ರಮಗಳು ನರಮೇಧಕ್ಕೆ ಕಾರಣವೆಂದು ಹೇಳುವ ಹೊಸ ವರದಿಯನ್ನು ಪ್ರಕಟಿಸಿವೆ.

ಈ ವರದಿಯು ಇಸ್ರೇಲ್‌ನ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ವಿವರಿಸಲು ‘ನರಮೇಧ’ ಎಂಬ ಪದವನ್ನು ಮೊದಲ ಬಾರಿಗೆ ಬಳಸಿದೆ ಎನ್ನಲಾಗುತ್ತಿ. ಇದಕ್ಕೂ ಮೊದಲು, ಅಮ್ನೆಸ್ಟಿ ಇಂಟರ್‌ನ್ಯಾಷನಲ್, ಹ್ಯೂಮನ್ ರೈಟ್ಸ್ ವಾಚ್ ಮತ್ತು ವಿಶ್ವಸಂಸ್ಥೆಯ ವಿಶೇಷ ಸಮಿತಿ ಸೇರಿದಂತೆ ಅನೇಕ ಪ್ರಮುಖ ಅಂತರರಾಷ್ಟ್ರೀಯ ಎನ್‌ಜಿಒಗಳು ಹಲವಾರು ತಿಂಗಳುಗಳಿಂದ ಈ ಪದವನ್ನು ಬಳಸುತ್ತಿವೆ.

ಈ ಬಗ್ಗೆ ಬಿಟ್ಸೆಲೆಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಗಾಝಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು “ಗಾಝಾದ ಜನಸಂಖ್ಯೆಯನ್ನು ನಾಶಮಾಡುವ ಮತ್ತು ಪ್ಯಾಲೆಸ್ತೀನಿಯನ್ ಸಮಾಜವು ಅಲ್ಲಿ ಅಸ್ತಿತ್ವದಲ್ಲಿರಲು ಸಾಧ್ಯವಾಗದಷ್ಟು ದುರಂತದ ಜೀವನ ಪರಿಸ್ಥಿತಿಗಳನ್ನು ಹೇರುವ ಸ್ಪಷ್ಟ ಪ್ರಯತ್ನ” ಎಂದು ವಿವರಿಸಿದ್ದಾರೆ.

“ಇಸ್ರೇಲ್ ಆಡಳಿತದ ಜನಾಂಗೀಯ ಹತ್ಯಾಕಾಂಡದಲ್ಲಿ ಯಾವುದೇ ಪ್ಯಾಲೆಸ್ತೀನಿಯನ್ ಸುರಕ್ಷಿತವಾಗಿಲ್ಲ. ನರಮೇಧಕ್ಕೆ ಯಾವುದೇ ಸಮರ್ಥನೆ ಇಲ್ಲ, ಸ್ವರಕ್ಷಣೆ ಅಲ್ಲ, ಭದ್ರತೆ ಅಲ್ಲ, ಅಕ್ಟೋಬರ್ 7, 2023 ರಂದು ಹಮಾಸ್ ಮಾಡಿದ ಘೋರ ಕೃತ್ಯಗಳು ಇಸ್ರೇಲಿಗಳಲ್ಲಿ ಆಳವಾದ ಅಸ್ತಿತ್ವದ ಭಯವನ್ನು ಹುಟ್ಟುಹಾಕಿದವು. ಅಂತರರಾಷ್ಟ್ರೀಯ ಸಮುದಾಯವು ದೌರ್ಜನ್ಯಗಳನ್ನು ತಡೆಯುವ ಕರ್ತವ್ಯದಲ್ಲಿ ವಿಫಲವಾಗಿದೆ. ಆದರೆ, ಪಾಶ್ಚಿಮಾತ್ಯ ಜಗತ್ತಿನ ನಾಯಕರು, ವಿಶೇಷವಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್, ಇಸ್ರೇಲ್‌ನ ವಿನಾಶಕಾರಿ ಕೃತ್ಯಗಳಿಗೆ ಅನುವು ಮಾಡಿಕೊಡುವ ಬೆಂಬಲವನ್ನು ನೀಡುವ ಮೂಲಕ ಜವಾಬ್ದಾರಿಯನ್ನು ಹಂಚಿಕೊಂಡಿದ್ದಾರೆ. ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ನರಮೇಧವನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಕರ್ತವ್ಯವಾಗಿದೆ” ಎಂದು ಹೇಳಿದೆ.

“ಸಾಮಾಜಿಕ ಮಾಧ್ಯಮಗಳಲ್ಲಿ, ಬಾಂಬ್ ದಾಳಿಯಿಂದ ನಾಶವಾದ ಕಟ್ಟಡಗಳ ಅಡಿಯಲ್ಲಿ ಜನರು ಹೂತುಹೋಗಿರುವುದು, ಸ್ಥಳಾಂತರಗೊಂಡವರ ಶಿಬಿರಗಳು ಬೆಂಕಿಯಲ್ಲಿ ಬಿದ್ದಿರುವುದು, ಹಸಿವಿನಿಂದ ಬಳಲುತ್ತಿರುವ ಮಕ್ಕಳು, ನೀರಿಗಾಗಿ ಹತಾಶರಾಗಿರುವ ಜನರು, ಗಾಯಗೊಂಡವರಿಗೆ ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ ಉಳಿದಿರುವ ಆಸ್ಪತ್ರೆಗಳ ದೃಶ್ಯಗಳನ್ನು ನಾವು ನೋಡುತ್ತಿದ್ದೇವೆ. ಮಾನವ ಹಕ್ಕುಗಳ ಸಂಘಟನೆಯಾಗಿ ಸತ್ಯವನ್ನು ಹೇಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ; ನರಮೇಧ ಇಲ್ಲಿಯೇ ಮತ್ತು ಇದೀಗ ನಡೆಯುತ್ತಿದೆ. ಇದು ನಮ್ಮ ನರಮೇಧ, ನಾವು ಇದನ್ನು ನಿಲ್ಲಿಸಬೇಕಾಗಿದೆ” ಎಂದು ಸಂಸ್ಥೆ ಪ್ರತಿಪಾದಿಸಿದೆ.

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...