Homeಅಂತರಾಷ್ಟ್ರೀಯ'ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..'; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

‘ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..’; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

- Advertisement -
- Advertisement -

ಇಸ್ರೇಲ್‌ನ ಎರಡು ಪ್ರಮುಖ ಮಾನವ ಹಕ್ಕುಗಳ ಗುಂಪುಗಳಾದ ಬಿಟ್ಸೆಲೆಮ್ ಮತ್ತು ಫಿಸಿಶಿಯನ್ಸ್ ಫಾರ್ ಹ್ಯೂಮನ್ ರೈಟ್ಸ್ ಸಂಸ್ಥೆಗಳು, ಗಾಝಾದಲ್ಲಿ ಇಸ್ರೇಲ್‌ನ ಕ್ರಮಗಳು ನರಮೇಧಕ್ಕೆ ಕಾರಣವೆಂದು ಹೇಳುವ ಹೊಸ ವರದಿಯನ್ನು ಪ್ರಕಟಿಸಿವೆ.

ಈ ವರದಿಯು ಇಸ್ರೇಲ್‌ನ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ವಿವರಿಸಲು ‘ನರಮೇಧ’ ಎಂಬ ಪದವನ್ನು ಮೊದಲ ಬಾರಿಗೆ ಬಳಸಿದೆ ಎನ್ನಲಾಗುತ್ತಿ. ಇದಕ್ಕೂ ಮೊದಲು, ಅಮ್ನೆಸ್ಟಿ ಇಂಟರ್‌ನ್ಯಾಷನಲ್, ಹ್ಯೂಮನ್ ರೈಟ್ಸ್ ವಾಚ್ ಮತ್ತು ವಿಶ್ವಸಂಸ್ಥೆಯ ವಿಶೇಷ ಸಮಿತಿ ಸೇರಿದಂತೆ ಅನೇಕ ಪ್ರಮುಖ ಅಂತರರಾಷ್ಟ್ರೀಯ ಎನ್‌ಜಿಒಗಳು ಹಲವಾರು ತಿಂಗಳುಗಳಿಂದ ಈ ಪದವನ್ನು ಬಳಸುತ್ತಿವೆ.

ಈ ಬಗ್ಗೆ ಬಿಟ್ಸೆಲೆಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಗಾಝಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು “ಗಾಝಾದ ಜನಸಂಖ್ಯೆಯನ್ನು ನಾಶಮಾಡುವ ಮತ್ತು ಪ್ಯಾಲೆಸ್ತೀನಿಯನ್ ಸಮಾಜವು ಅಲ್ಲಿ ಅಸ್ತಿತ್ವದಲ್ಲಿರಲು ಸಾಧ್ಯವಾಗದಷ್ಟು ದುರಂತದ ಜೀವನ ಪರಿಸ್ಥಿತಿಗಳನ್ನು ಹೇರುವ ಸ್ಪಷ್ಟ ಪ್ರಯತ್ನ” ಎಂದು ವಿವರಿಸಿದ್ದಾರೆ.

“ಇಸ್ರೇಲ್ ಆಡಳಿತದ ಜನಾಂಗೀಯ ಹತ್ಯಾಕಾಂಡದಲ್ಲಿ ಯಾವುದೇ ಪ್ಯಾಲೆಸ್ತೀನಿಯನ್ ಸುರಕ್ಷಿತವಾಗಿಲ್ಲ. ನರಮೇಧಕ್ಕೆ ಯಾವುದೇ ಸಮರ್ಥನೆ ಇಲ್ಲ, ಸ್ವರಕ್ಷಣೆ ಅಲ್ಲ, ಭದ್ರತೆ ಅಲ್ಲ, ಅಕ್ಟೋಬರ್ 7, 2023 ರಂದು ಹಮಾಸ್ ಮಾಡಿದ ಘೋರ ಕೃತ್ಯಗಳು ಇಸ್ರೇಲಿಗಳಲ್ಲಿ ಆಳವಾದ ಅಸ್ತಿತ್ವದ ಭಯವನ್ನು ಹುಟ್ಟುಹಾಕಿದವು. ಅಂತರರಾಷ್ಟ್ರೀಯ ಸಮುದಾಯವು ದೌರ್ಜನ್ಯಗಳನ್ನು ತಡೆಯುವ ಕರ್ತವ್ಯದಲ್ಲಿ ವಿಫಲವಾಗಿದೆ. ಆದರೆ, ಪಾಶ್ಚಿಮಾತ್ಯ ಜಗತ್ತಿನ ನಾಯಕರು, ವಿಶೇಷವಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್, ಇಸ್ರೇಲ್‌ನ ವಿನಾಶಕಾರಿ ಕೃತ್ಯಗಳಿಗೆ ಅನುವು ಮಾಡಿಕೊಡುವ ಬೆಂಬಲವನ್ನು ನೀಡುವ ಮೂಲಕ ಜವಾಬ್ದಾರಿಯನ್ನು ಹಂಚಿಕೊಂಡಿದ್ದಾರೆ. ಇಸ್ರೇಲ್ ಗಾಝಾದಲ್ಲಿ ನಡೆಸುತ್ತಿರುವ ನರಮೇಧವನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಕರ್ತವ್ಯವಾಗಿದೆ” ಎಂದು ಹೇಳಿದೆ.

“ಸಾಮಾಜಿಕ ಮಾಧ್ಯಮಗಳಲ್ಲಿ, ಬಾಂಬ್ ದಾಳಿಯಿಂದ ನಾಶವಾದ ಕಟ್ಟಡಗಳ ಅಡಿಯಲ್ಲಿ ಜನರು ಹೂತುಹೋಗಿರುವುದು, ಸ್ಥಳಾಂತರಗೊಂಡವರ ಶಿಬಿರಗಳು ಬೆಂಕಿಯಲ್ಲಿ ಬಿದ್ದಿರುವುದು, ಹಸಿವಿನಿಂದ ಬಳಲುತ್ತಿರುವ ಮಕ್ಕಳು, ನೀರಿಗಾಗಿ ಹತಾಶರಾಗಿರುವ ಜನರು, ಗಾಯಗೊಂಡವರಿಗೆ ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ ಉಳಿದಿರುವ ಆಸ್ಪತ್ರೆಗಳ ದೃಶ್ಯಗಳನ್ನು ನಾವು ನೋಡುತ್ತಿದ್ದೇವೆ. ಮಾನವ ಹಕ್ಕುಗಳ ಸಂಘಟನೆಯಾಗಿ ಸತ್ಯವನ್ನು ಹೇಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ; ನರಮೇಧ ಇಲ್ಲಿಯೇ ಮತ್ತು ಇದೀಗ ನಡೆಯುತ್ತಿದೆ. ಇದು ನಮ್ಮ ನರಮೇಧ, ನಾವು ಇದನ್ನು ನಿಲ್ಲಿಸಬೇಕಾಗಿದೆ” ಎಂದು ಸಂಸ್ಥೆ ಪ್ರತಿಪಾದಿಸಿದೆ.

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...