Homeಅಂತರಾಷ್ಟ್ರೀಯಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

- Advertisement -
- Advertisement -

ಪ್ಯಾಲೆಸ್ತೀನ್‌ ಮೇಲೆ ಬಾಂಬ್‌ ದಾಳಿ ಮೂಲಕ ನಿರಂತರ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌, ಗಾಝಾ ಪಟ್ಟಿ ಮತ್ತು ಈಜಿಪ್ಟ್ ನಡುವಿನ ಗಡಿ ವಲಯವು ಇಸ್ರೇಲ್‌ನ ನಿಯಂತ್ರಣದಲ್ಲಿರಬೇಕು ಎಂದು ಬಯಸುತ್ತಿದೆ. ಈ ಕುರಿತು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೆಯನ್ನು ನೀಡಿದ್ದಾರೆ. ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವ ಮತ್ತು ಹಮಾಸ್‌ನ್ನು ನಿರ್ನಾಮ ಮಾಡುವವರೆಗೆ ಯುದ್ಧ ಮುಂದುವರಿಸುವುದಾಗಿ ಹೇಳಿದ್ದಾರೆ.

ಯುದ್ಧ 13ನೇ ವಾರ ಪ್ರವೇಶಿಸಿದ ಹಿನ್ನೆಲೆ ಸುದ್ದಿಗೋಷ್ಠಿಯನ್ನು ನಡೆಸಿದ ಬೆಂಜಮಿನ್ ನೆತನ್ಯಾಹು,  ಹಮಾಸ್‌ನ್ನು ನಿರ್ಣಾಮ ಮಾಡಲಾಗುವುದು ಮತ್ತು ಗಾಝಾದಲ್ಲಿ ಸೆರೆಯಲ್ಲಿರುವ ಎಲ್ಲಾ ಇಸ್ರೇಲ್‌ ಜನರನ್ನು ಮನೆಗೆ ಕರೆತರುವ ಪ್ರಯತ್ನ ಮಾಡಲಾಗುವುದು. ಯುದ್ಧವು ಹಲವು ತಿಂಗಳುಗಳವರೆಗೆ ಇನ್ನು ಕೂಡ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಫಿಲಡೆಲ್ಫಿ ಕಾರಿಡಾರ್ ನಮ್ಮ ಕೈಯಲ್ಲಿರಬೇಕು. ಅದನ್ನು ಮುಚ್ಚಬೇಕು. ಹಮಾಸ್‌ ಸಶಸ್ತ್ರ ಗುಂಪು ಅಕ್ಟೋಬರ್ 7ರಂದು ನಡೆಸಿದ ದಾಳಿಯಂತೆ ಮತ್ತೆ ದಾಳಿ ಪುನರಾವರ್ತನೆಯಾಗದಂತೆ ತಡೆಯಲು ಗಾಝಾದಲ್ಲಿ ಹಮಾಸ್‌ನ್ನು ನಾಶಮಾಡಲು ಮತ್ತು ಸಶಸ್ತ್ರೀಕರಣಗೊಳಿಸಲು ಇಸ್ರೇಲ್ ಉದ್ದೇಶಿಸಿದೆ. ಯುದ್ಧವು ನಡೆಯುತ್ತಿದೆ. ನಾವು ಎಲ್ಲಾ ರಂಗಗಳಲ್ಲಿ ಹೋರಾಡುತ್ತಿದ್ದೇವೆ. ವಿಜಯ ಸಾಧಿಸಲು ಸಮಯ ಬೇಕಾಗುತ್ತದೆ. ಇಸ್ರೇಲ್‌ ಸೈನ್ಯದ ಮುಖ್ಯಸ್ಥರು ಹೇಳಿದಂತೆ ಯುದ್ಧವು ಇನ್ನೂ ಹಲವು ತಿಂಗಳುಗಳವರೆಗೆ ಮುಂದುವರಿಯುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಇದಲ್ಲದೆ ಇರಾನ್ ಬೆಂಬಲಿತ ಲೆಬನಾನಿನ ಸಶಸ್ತ್ರ ಗುಂಪು ಹೆಜ್ಬುಲ್ಲಾ ಮೊಂಡುತನ ಮುಂದುವರಿಸಿದರೆ, ಅದು ಕಂಡರಿಯದ ಹೊಡೆತಗಳನ್ನು ಅನುಭವಿಸುತ್ತದೆ ಮತ್ತು ಇರಾನ್ ಕೂಡ ಎಂದು ನೆತನ್ಯಾಹು ವಿವರಿಸದೆ ಹೇಳಿದರು. ಇದರಿಂದ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿಯು ಉದ್ಭವಿಸಿದೆ.

ಇಸ್ರೇಲ್‌ ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ನಡೆಸುತ್ತಿರುವ ಯುದ್ಧದಲ್ಲಿ 24,000ಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. 10,000ಕ್ಕೂ ಅಧಿಕ ಮಕ್ಕಳು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದು, ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಹತ್ಯಾಕಾಂಡವನ್ನು ನಡೆಸುತ್ತಿದೆ ಎಂದು ವಿವಿಧ ರಾಷ್ಟ್ರಗಳು ಕದನ ವಿರಾಮಕ್ಕೆ ಆಗ್ರಹಿಸುತ್ತಿದೆ. ಆದರೆ ಇಸ್ರೇಲ್‌ ಮಾತ್ರ ಗಾಝಾದಲ್ಲಿ ಅಮಾಯಕರ ಮೇಲೆ ತಮ್ಮ ಕ್ರೌರ್ಯವನ್ನು ಮುಂದುವರಿಸಿದೆ. ಅಮೆರಿಕ, ಬ್ರಿಟನ್‌ನಂತಹ ರಾಷ್ಟ್ರಗಳು ಈ ಕೃತ್ಯಕ್ಕೆ ಬೆಂಬಲಿಸುತ್ತಿದೆ.

ನಿನ್ನೆಯಷ್ಟೇ ಗಾಝಾದ ಮೇಲೆ ಮಿಲಿಟರಿ ಆಕ್ರಮಣದ ಮೂಲಕ ಇಸ್ರೇಲ್‌ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ವಿರುದ್ಧ ಮೊಕದ್ದಮೆಯನ್ನು ಹೂಡಿದೆ ಮತ್ತು ಅರ್ಜಿಯ ತ್ವರಿತ ವಿಲೇವಾರಿಗೆ ಆಗ್ರಹಿಸಿತ್ತು.

ಇದನ್ನು ಓದಿ: ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...