Homeಅಂತರಾಷ್ಟ್ರೀಯಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

- Advertisement -
- Advertisement -

ಪ್ಯಾಲೆಸ್ತೀನ್‌ ಮೇಲೆ ಬಾಂಬ್‌ ದಾಳಿ ಮೂಲಕ ನಿರಂತರ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌, ಗಾಝಾ ಪಟ್ಟಿ ಮತ್ತು ಈಜಿಪ್ಟ್ ನಡುವಿನ ಗಡಿ ವಲಯವು ಇಸ್ರೇಲ್‌ನ ನಿಯಂತ್ರಣದಲ್ಲಿರಬೇಕು ಎಂದು ಬಯಸುತ್ತಿದೆ. ಈ ಕುರಿತು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೆಯನ್ನು ನೀಡಿದ್ದಾರೆ. ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವ ಮತ್ತು ಹಮಾಸ್‌ನ್ನು ನಿರ್ನಾಮ ಮಾಡುವವರೆಗೆ ಯುದ್ಧ ಮುಂದುವರಿಸುವುದಾಗಿ ಹೇಳಿದ್ದಾರೆ.

ಯುದ್ಧ 13ನೇ ವಾರ ಪ್ರವೇಶಿಸಿದ ಹಿನ್ನೆಲೆ ಸುದ್ದಿಗೋಷ್ಠಿಯನ್ನು ನಡೆಸಿದ ಬೆಂಜಮಿನ್ ನೆತನ್ಯಾಹು,  ಹಮಾಸ್‌ನ್ನು ನಿರ್ಣಾಮ ಮಾಡಲಾಗುವುದು ಮತ್ತು ಗಾಝಾದಲ್ಲಿ ಸೆರೆಯಲ್ಲಿರುವ ಎಲ್ಲಾ ಇಸ್ರೇಲ್‌ ಜನರನ್ನು ಮನೆಗೆ ಕರೆತರುವ ಪ್ರಯತ್ನ ಮಾಡಲಾಗುವುದು. ಯುದ್ಧವು ಹಲವು ತಿಂಗಳುಗಳವರೆಗೆ ಇನ್ನು ಕೂಡ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಫಿಲಡೆಲ್ಫಿ ಕಾರಿಡಾರ್ ನಮ್ಮ ಕೈಯಲ್ಲಿರಬೇಕು. ಅದನ್ನು ಮುಚ್ಚಬೇಕು. ಹಮಾಸ್‌ ಸಶಸ್ತ್ರ ಗುಂಪು ಅಕ್ಟೋಬರ್ 7ರಂದು ನಡೆಸಿದ ದಾಳಿಯಂತೆ ಮತ್ತೆ ದಾಳಿ ಪುನರಾವರ್ತನೆಯಾಗದಂತೆ ತಡೆಯಲು ಗಾಝಾದಲ್ಲಿ ಹಮಾಸ್‌ನ್ನು ನಾಶಮಾಡಲು ಮತ್ತು ಸಶಸ್ತ್ರೀಕರಣಗೊಳಿಸಲು ಇಸ್ರೇಲ್ ಉದ್ದೇಶಿಸಿದೆ. ಯುದ್ಧವು ನಡೆಯುತ್ತಿದೆ. ನಾವು ಎಲ್ಲಾ ರಂಗಗಳಲ್ಲಿ ಹೋರಾಡುತ್ತಿದ್ದೇವೆ. ವಿಜಯ ಸಾಧಿಸಲು ಸಮಯ ಬೇಕಾಗುತ್ತದೆ. ಇಸ್ರೇಲ್‌ ಸೈನ್ಯದ ಮುಖ್ಯಸ್ಥರು ಹೇಳಿದಂತೆ ಯುದ್ಧವು ಇನ್ನೂ ಹಲವು ತಿಂಗಳುಗಳವರೆಗೆ ಮುಂದುವರಿಯುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಇದಲ್ಲದೆ ಇರಾನ್ ಬೆಂಬಲಿತ ಲೆಬನಾನಿನ ಸಶಸ್ತ್ರ ಗುಂಪು ಹೆಜ್ಬುಲ್ಲಾ ಮೊಂಡುತನ ಮುಂದುವರಿಸಿದರೆ, ಅದು ಕಂಡರಿಯದ ಹೊಡೆತಗಳನ್ನು ಅನುಭವಿಸುತ್ತದೆ ಮತ್ತು ಇರಾನ್ ಕೂಡ ಎಂದು ನೆತನ್ಯಾಹು ವಿವರಿಸದೆ ಹೇಳಿದರು. ಇದರಿಂದ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿಯು ಉದ್ಭವಿಸಿದೆ.

ಇಸ್ರೇಲ್‌ ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ನಡೆಸುತ್ತಿರುವ ಯುದ್ಧದಲ್ಲಿ 24,000ಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. 10,000ಕ್ಕೂ ಅಧಿಕ ಮಕ್ಕಳು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದು, ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಹತ್ಯಾಕಾಂಡವನ್ನು ನಡೆಸುತ್ತಿದೆ ಎಂದು ವಿವಿಧ ರಾಷ್ಟ್ರಗಳು ಕದನ ವಿರಾಮಕ್ಕೆ ಆಗ್ರಹಿಸುತ್ತಿದೆ. ಆದರೆ ಇಸ್ರೇಲ್‌ ಮಾತ್ರ ಗಾಝಾದಲ್ಲಿ ಅಮಾಯಕರ ಮೇಲೆ ತಮ್ಮ ಕ್ರೌರ್ಯವನ್ನು ಮುಂದುವರಿಸಿದೆ. ಅಮೆರಿಕ, ಬ್ರಿಟನ್‌ನಂತಹ ರಾಷ್ಟ್ರಗಳು ಈ ಕೃತ್ಯಕ್ಕೆ ಬೆಂಬಲಿಸುತ್ತಿದೆ.

ನಿನ್ನೆಯಷ್ಟೇ ಗಾಝಾದ ಮೇಲೆ ಮಿಲಿಟರಿ ಆಕ್ರಮಣದ ಮೂಲಕ ಇಸ್ರೇಲ್‌ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ವಿರುದ್ಧ ಮೊಕದ್ದಮೆಯನ್ನು ಹೂಡಿದೆ ಮತ್ತು ಅರ್ಜಿಯ ತ್ವರಿತ ವಿಲೇವಾರಿಗೆ ಆಗ್ರಹಿಸಿತ್ತು.

ಇದನ್ನು ಓದಿ: ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...