Homeಅಂತರಾಷ್ಟ್ರೀಯಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

- Advertisement -
- Advertisement -

ಪ್ಯಾಲೆಸ್ತೀನ್‌ ಮೇಲೆ ಬಾಂಬ್‌ ದಾಳಿ ಮೂಲಕ ನಿರಂತರ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌, ಗಾಝಾ ಪಟ್ಟಿ ಮತ್ತು ಈಜಿಪ್ಟ್ ನಡುವಿನ ಗಡಿ ವಲಯವು ಇಸ್ರೇಲ್‌ನ ನಿಯಂತ್ರಣದಲ್ಲಿರಬೇಕು ಎಂದು ಬಯಸುತ್ತಿದೆ. ಈ ಕುರಿತು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೆಯನ್ನು ನೀಡಿದ್ದಾರೆ. ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವ ಮತ್ತು ಹಮಾಸ್‌ನ್ನು ನಿರ್ನಾಮ ಮಾಡುವವರೆಗೆ ಯುದ್ಧ ಮುಂದುವರಿಸುವುದಾಗಿ ಹೇಳಿದ್ದಾರೆ.

ಯುದ್ಧ 13ನೇ ವಾರ ಪ್ರವೇಶಿಸಿದ ಹಿನ್ನೆಲೆ ಸುದ್ದಿಗೋಷ್ಠಿಯನ್ನು ನಡೆಸಿದ ಬೆಂಜಮಿನ್ ನೆತನ್ಯಾಹು,  ಹಮಾಸ್‌ನ್ನು ನಿರ್ಣಾಮ ಮಾಡಲಾಗುವುದು ಮತ್ತು ಗಾಝಾದಲ್ಲಿ ಸೆರೆಯಲ್ಲಿರುವ ಎಲ್ಲಾ ಇಸ್ರೇಲ್‌ ಜನರನ್ನು ಮನೆಗೆ ಕರೆತರುವ ಪ್ರಯತ್ನ ಮಾಡಲಾಗುವುದು. ಯುದ್ಧವು ಹಲವು ತಿಂಗಳುಗಳವರೆಗೆ ಇನ್ನು ಕೂಡ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಫಿಲಡೆಲ್ಫಿ ಕಾರಿಡಾರ್ ನಮ್ಮ ಕೈಯಲ್ಲಿರಬೇಕು. ಅದನ್ನು ಮುಚ್ಚಬೇಕು. ಹಮಾಸ್‌ ಸಶಸ್ತ್ರ ಗುಂಪು ಅಕ್ಟೋಬರ್ 7ರಂದು ನಡೆಸಿದ ದಾಳಿಯಂತೆ ಮತ್ತೆ ದಾಳಿ ಪುನರಾವರ್ತನೆಯಾಗದಂತೆ ತಡೆಯಲು ಗಾಝಾದಲ್ಲಿ ಹಮಾಸ್‌ನ್ನು ನಾಶಮಾಡಲು ಮತ್ತು ಸಶಸ್ತ್ರೀಕರಣಗೊಳಿಸಲು ಇಸ್ರೇಲ್ ಉದ್ದೇಶಿಸಿದೆ. ಯುದ್ಧವು ನಡೆಯುತ್ತಿದೆ. ನಾವು ಎಲ್ಲಾ ರಂಗಗಳಲ್ಲಿ ಹೋರಾಡುತ್ತಿದ್ದೇವೆ. ವಿಜಯ ಸಾಧಿಸಲು ಸಮಯ ಬೇಕಾಗುತ್ತದೆ. ಇಸ್ರೇಲ್‌ ಸೈನ್ಯದ ಮುಖ್ಯಸ್ಥರು ಹೇಳಿದಂತೆ ಯುದ್ಧವು ಇನ್ನೂ ಹಲವು ತಿಂಗಳುಗಳವರೆಗೆ ಮುಂದುವರಿಯುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಇದಲ್ಲದೆ ಇರಾನ್ ಬೆಂಬಲಿತ ಲೆಬನಾನಿನ ಸಶಸ್ತ್ರ ಗುಂಪು ಹೆಜ್ಬುಲ್ಲಾ ಮೊಂಡುತನ ಮುಂದುವರಿಸಿದರೆ, ಅದು ಕಂಡರಿಯದ ಹೊಡೆತಗಳನ್ನು ಅನುಭವಿಸುತ್ತದೆ ಮತ್ತು ಇರಾನ್ ಕೂಡ ಎಂದು ನೆತನ್ಯಾಹು ವಿವರಿಸದೆ ಹೇಳಿದರು. ಇದರಿಂದ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿಯು ಉದ್ಭವಿಸಿದೆ.

ಇಸ್ರೇಲ್‌ ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ನಡೆಸುತ್ತಿರುವ ಯುದ್ಧದಲ್ಲಿ 24,000ಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. 10,000ಕ್ಕೂ ಅಧಿಕ ಮಕ್ಕಳು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದು, ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಹತ್ಯಾಕಾಂಡವನ್ನು ನಡೆಸುತ್ತಿದೆ ಎಂದು ವಿವಿಧ ರಾಷ್ಟ್ರಗಳು ಕದನ ವಿರಾಮಕ್ಕೆ ಆಗ್ರಹಿಸುತ್ತಿದೆ. ಆದರೆ ಇಸ್ರೇಲ್‌ ಮಾತ್ರ ಗಾಝಾದಲ್ಲಿ ಅಮಾಯಕರ ಮೇಲೆ ತಮ್ಮ ಕ್ರೌರ್ಯವನ್ನು ಮುಂದುವರಿಸಿದೆ. ಅಮೆರಿಕ, ಬ್ರಿಟನ್‌ನಂತಹ ರಾಷ್ಟ್ರಗಳು ಈ ಕೃತ್ಯಕ್ಕೆ ಬೆಂಬಲಿಸುತ್ತಿದೆ.

ನಿನ್ನೆಯಷ್ಟೇ ಗಾಝಾದ ಮೇಲೆ ಮಿಲಿಟರಿ ಆಕ್ರಮಣದ ಮೂಲಕ ಇಸ್ರೇಲ್‌ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ವಿರುದ್ಧ ಮೊಕದ್ದಮೆಯನ್ನು ಹೂಡಿದೆ ಮತ್ತು ಅರ್ಜಿಯ ತ್ವರಿತ ವಿಲೇವಾರಿಗೆ ಆಗ್ರಹಿಸಿತ್ತು.

ಇದನ್ನು ಓದಿ: ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...