Homeಕರ್ನಾಟಕಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

- Advertisement -
- Advertisement -

ಪ್ರಸ್ತುತ ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುತ್ತಿರುವ ’ಕ್ರೈಮ್ ಸ್ಟೋರಿಸ್: ಇಂಡಿಯಾ ಡಿಟೆಕ್ಟಿವ್ಸ್’ನ ಎಲ್ಲಾ ಸಂಚಿಕೆಗಳು ಈ ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯ ಕಾರಣಕ್ಕಾಗಿ ವೀಕ್ಷಿಸಲು ಅನರ್ಹವಾಗಿವೆ. ಹಾಗಾಗಿ ಅವುಗಳ ಪ್ರಸಾರವನ್ನು ನೆಟ್‌ಫ್ಲಿಕ್ಸ್ ನಿಲ್ಲಿಸಬೇಕೆನ್ನುವ ಕೂಗು ಸಕಾರಣದಿಂದ ಕೂಡಿದೆ.

ನಾಲ್ಕು ಸಂಚಿಕೆಗಳ ಈ ಡಾಕ್ಯುಮೆಂಟರಿ ಸರಣಿಯಲ್ಲಿ ಬೆಂಗಳೂರು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ಯಾವುದೇ ನಿರ್ಬಂಧಗಳನ್ನು ಹೇರಿಕೊಳ್ಳದೆ, ಕ್ಯಾಮರಾಕ್ಕೆ ಯಾವುದೇ ರೀತಿಯ ತಡೆಗೋಡೆಗಳನ್ನು ಹಾಕಿಕೊಳ್ಳದೆ ನೇರವಾಗಿ ತೋರಿಸಲಾಗಿದೆ. ಕಾನೂನು ಎಚ್ಚರಿಕೆಗಳನ್ನು ಸ್ಪಷ್ಟವಾಗಿ ಗಾಳಿಗೆ ತೂರಲಾಗಿದೆ. ಪ್ರಕರಣವೊಂದರ ತನಿಖೆಯ ವೇಳೆ ಅದರ ವಿವರಗಳನ್ನು ಯಾವುದೇ ಪ್ರಕಾರದ ಮಾಧ್ಯಮಗಳಿಗೆ ನೀಡಬಾರದು ಎಂಬ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ನಿರ್ದೇಶನವನ್ನು ಈ ಚಿತ್ರದಲ್ಲಿ ಕಾಣಿಸಿಕೊಂಡ ಪೊಲೀಸ್ ಅಧಿಕಾರಿಗಳು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಕ್ರೈಮ್ ರಿಪೋರ್ಟರ್‌ಗಳು ತನಿಖಾ ಅಧಿಕಾರಿಗಳಿಂದ ಮತ್ತು ಹಿರಿಯ ಶ್ರೇಣಿಯ ಅಧಿಕಾರಿಗಳಿಂದ ತನಿಖೆಯ ಕೆಲ ವಿವರಗಳನ್ನು ಪಡೆಯಲು ದಿನನಿತ್ಯ ಹೆಣಗಾಡುತ್ತಿರುವ ಸಂದರ್ಭದಲ್ಲಿ, ಪೊಲೀಸರು ತಮ್ಮ ತಥಾಕಥಿತ ತನಿಖೆಯ ಕೌಶಲ್ಯದ ಪ್ರೊಪಗಾಂಡವನ್ನು ಬಿತ್ತಲು ಹಾಗೂ ಪ್ರದರ್ಶಿಸಿಕೊಳ್ಳಲು ಈ ಡಾಕ್ಯುಮೆಂಟರಿ ಸರಣಿಯನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ. ಬೆಂಗಳೂರು ಪೊಲೀಸರ ತನಿಖಾ ಶೈಲಿಯನ್ನು ಪ್ರದರ್ಶಿಸಿಕೊಳ್ಳಲು ಹೋಗಿ, ಕ್ರಿಮಿನಲ್‌ಗಳಿಗೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸರಣಿ ಅಂತ್ಯಗೊಂಡಿದೆ ಎಂದು ಕೆಲ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ. ಪ್ರಚಾರಕ್ಕಾಗಿ ಹಸಿದಿದ್ದ ಪೊಲೀಸ್ ಅಧಿಕಾರಿಗಳನ್ನು ಯಶಸ್ವಿಯಾಗಿ ಮರಳು ಮಾಡಿದ ಈ ಸರಣಿ ತಯಾರಕರಿಗೆ ಧನ್ಯವಾದ ತಿಳಿಸಬೇಕಾಗಿದೆ.

ಕಾನೂನು ಉಲ್ಲಂಘನೆಗಳಿಗಿಂತಲೂ ಈ ಸರಣಿಯು ಆರೋಪಿಗಳು ಮತ್ತು ಸಂತ್ರಸ್ತರ ಬಗ್ಗೆ ಅಸೂಕ್ಷ್ಮತೆಯನ್ನು ಮೆರೆಯುತ್ತದೆ. ಅದಕ್ಕಾಗಿ ಸರಣಿಯು ಸೂಕ್ತ ಬೆಲೆ ಕೂಡ ತೆತ್ತಿದೆ. ಆರೋಪಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸರಣಿಯ ಮೊದಲ ಸಂಚಿಕೆಯಲ್ಲಿ (A murdered mother) ತಮ್ಮ ಪ್ರಕರಣ ಇನ್ನೂ ವಿಚಾರಣೆಯಲ್ಲಿರುವ ಸಂದರ್ಭದಲ್ಲಿಯೇ ತನ್ನನ್ನು ಕೆಟ್ಟದಾಗಿ ತೋರಿಸಲಾಗಿದೆ ಮತ್ತು ನಾನೇ ನನ್ನ ಸ್ವಂತ ತಾಯಿಯನ್ನು ಕೊಂದೆ ಎನ್ನುವ ರೀತಿ ಬಿಂಬಿಸಲಾಗಿದೆ ಎಂದು ದೂರಿ, ಸರಣಿಯ ಆ ಸಂಚಿಕೆಯನ್ನು ತಡೆಹಿಡಿಯುವಂತೆ ಕೋರಿದ್ದರು. ಯಾವುದೇ ಮಾಧ್ಯಮಗಳಿಗೆ ಆರೋಪಿಗಳನ್ನು ಅಪರಾಧಿಗಳ ರೀತಿ ತೋರಿಸುವ ಹಕ್ಕು ಇಲ್ಲ. ಅಲ್ಲದೇ ಪ್ರತಿಯೊಬ್ಬ ಆರೋಪಿಗೂ ಸಹ ತನ್ನನ್ನು ಸಮರ್ಥಿಸಿಕೊಳ್ಳುವ ಹಕ್ಕು ಇದೆ. ಕರ್ನಾಟಕ ಹೈಕೋರ್ಟ್ ಈ ವಿಷಯದಲ್ಲಿ ಮಧ್ಯಂತರ ಆದೇಶ ನೀಡಿದ್ದು ಆ ಮೊದಲ ಸಂಚಿಕೆಯನ್ನು ಪ್ರಸಾರ ಮಾಡದಂತೆ ನೆಟ್‌ಫ್ಲಿಕ್ಸ್‌ಗೆ ಆದೇಶಿಸಿದೆ.

PC : The Economic Times

ಈ ಸರಣಿಯಲ್ಲಿ ಬರುವ ಮಹಿಳೆಯರು, ಮಕ್ಕಳು ಸೇರಿದಂತೆ ಆರೋಪಿಗಳು, ಶಂಕಿತರು, ಸಂತ್ರಸ್ತರು ಯಾರೊಬ್ಬರ ಮುಖವನ್ನು ಸಹ ಬ್ಲರ್ ಮಾಡದೇ ನೇರವಾಗಿ ತೋರಿಸಲಾಗಿದೆ. ಇದು ಆತಂಕಕಾರಿ ಪ್ರವೃತ್ತಿಯಾಗಿದೆ. ಆರೋಪಿ ಮತ್ತು ಸಂತ್ರಸ್ತರ ಒಪ್ಪಿಗೆಯಿಲ್ಲದೆ ಅವರನ್ನು ತೋರಿಸುವ ಹಕ್ಕು ಅಥವಾ ಅಧಿಕಾರ ಯಾವ ಮಾಧ್ಯಮಗಳಿಗೂ ಇಲ್ಲ ಎಂದು ಖ್ಯಾತ ವಕೀಲರಾದ ಬಿ.ಟಿ ವೆಂಕಟೇಶ್ ಹೇಳುತ್ತಾರೆ. ಒಂದು ವೇಳೆ ಅವರ ಒಪ್ಪಿಗೆ ಸಿಕ್ಕಿದರೂ ಸಹ ಅದನ್ನು ತಿರುಚುವ ಕೆಲಸವನ್ನು ಮಾಧ್ಯಮಗಳು ಮಾಡಬಾರದು. ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರೊಂದಿಗೆ ವ್ಯವಹರಿಸುವಾಗ ಮಾಧ್ಯಮಗಳು ಹೆಚ್ಚು ಎಚ್ಚರಿಕೆ ಮತ್ತು ಜಾಗೃತರಾಗಿರಬೇಕು.

Body in the Bag ಎಂಬ ಸಂಚಿಕೆಯಲ್ಲಿ ಪೊಲೀಸರು ಕೊಲೆಯಾದ ಸಂತ್ರಸ್ತನ ತಾಯಿಯ ಆರೋಪದ ಮೇಲೆ, ಆರಂಭದಲ್ಲಿಯೇ ಕೊಲೆಯಾದವನ ಹೆಂಡತಿ ಮತ್ತು ಆಕೆಯ ತಾಯಿಯ ಮೇಲೆ ಶಂಕೆ ವ್ಯಕ್ತಪಡಿಸಿ ವಶಕ್ಕೆ ಪಡೆಯುತ್ತಾರೆ. ಪೊಲೀಸರು ಅವರ ವಿರುದ್ಧ ಒಂದು ಸಣ್ಣ ಸಾಕ್ಷ್ಯ ಕೂಡ ಸಂಗ್ರಹಿಸಲು ವಿಫಲವಾದರೂ, ಸಂಚಿಕೆಯುದ್ದಕ್ಕೂ ಅವರಿಬ್ಬರೆ ಕೊಲೆಗಾರರು ಎಂಬ ಭಾವನೆ ನೋಡುಗರಲ್ಲಿ ಉಳಿಯುತ್ತದೆ. ಅವರಿಬ್ಬರ ಮೇಲೆ ಈ ಸರಣಿ ತಯಾರಕರಾದ ಎನ್ ಅಮಿತ್ ಮತ್ತು ಜಾಕ್ ರ್‍ಯಾಂಪ್ಲಿಂಗ್‌ರವರು ಸಂಚಿಕೆಯ ಕೊನೆಯವರೆಗೂ ಯಾವುದೇ ಕರುಣೆ ತೋರಿಸುವುದಿಲ್ಲ. ಆದರೆ ಸಂಚಿಕೆಯ ಕೊನೆಯಲ್ಲಿ ಆ ಕೊಲೆ ಮಾಡಿದ ಇನ್ನೊಂದು ಜೋಡಿ ಸಿಕ್ಕ ನಂತರ ಮಾತ್ರ ಆರಂಭದಿಂದಲೂ ಶಂಕಿತರಾಗಿದ್ದ ಇವರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡಲಾಗುತ್ತದೆ. ಯಾವುದೇ ವಾರೆಂಟ್ ಇಲ್ಲದೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿರುತ್ತದೆ!

Dying for Protection ಸಂಚಿಕೆಯಲ್ಲಿ ಕೊಲೆಯಾದ ವೇಶ್ಯೆಯೊಬ್ಬರ ಮಗನನ್ನು ಅಪ್ರಾಪ್ತ ಎಂಬುದನ್ನು ಕೂಡ ಲೆಕ್ಕಿಸದೇ ಅಕ್ರಮವಾಗಿ ವಶಕ್ಕೆ ಪಡೆಯಲಾಗುತ್ತದೆ. ಆತನ ವಿರುದ್ಧ ಪೊಲೀಸರು ಅಶ್ಲೀಲ ಪದಗಳನ್ನು ಬಳಸುತ್ತಾರೆ. ಇಡೀ ಘಟನೆಯನ್ನು ವೈಭವೀಕರಿಸುವುದು ನಿರ್ದೇಶಕರಿಗೆ ಸಮಸ್ಯೆ ಅನ್ನಿಸುವುದಿಲ್ಲ. ಆದರೂ ಕೊನೆಗೆ ಆಕೆಯ ಗ್ರಾಹಕನಾಗಿದ್ದವನನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸುತ್ತಾರೆ. ಇಲ್ಲಿ ಅಪ್ರಾಪ್ತ ಬಾಲಕನ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಮತ್ತು ಯಾರಾದರೂ ಈ ವಿಷಯದಲ್ಲಿ ತಯಾರಕರ ವಿರುದ್ಧ ದೂರು ನೀಡಿದರೆ ಪ್ರಕರಣ ದಾಖಲಾಗುವುದರಲ್ಲಿ ಅನುಮಾನವಿಲ್ಲ. ಕೊನೆಯ Stolen Baby ಸಂಚಿಕೆಯಲ್ಲಿ ಚಿಕ್ಕ ಮಕ್ಕಳನ್ನು ಕೂಡ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿ, ಮಗುವನ್ನು ಕಳೆದುಕೊಂಡ ದುಃಖಿತ ತಾಯಿ ಮತ್ತು ತಂದೆಯೊಂದಿಗೆ ತೋರಿಸಲಾಗಿದೆ.

ಈ ಉಲ್ಲಂಘನೆಗಳಿಗೆ, ನಿರ್ದಿಷ್ಟವಾಗಿ ಸಂತ್ರಸ್ತರು ಮತ್ತು ಆರೋಪಿಗಳ ಹಕ್ಕುಗಳನ್ನು ಉಲ್ಲಂಘಿಸಿರುವುದಕ್ಕೆ ನಿರ್ದೇಶಕರು, ನಿರ್ಮಾಪಕರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕೋರ್ಟ್‌ಗಳು ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ಹಲವು ನಿರ್ದೇಶನಗಳನ್ನು ಉಲ್ಲಂಘಿಸಿರುವ ಪೊಲೀಸರು ಕೂಡ ಶಿಸ್ತು ಕ್ರಮ ಎದುರಿಸುವ ಸಾಧ್ಯತೆ ಇದೆ. ಈ ಸರಣಿಯನ್ನು ನೋಡುವ ಕ್ರಿಮಿನಲ್‌ಗಳಿಗೆ ಇದು ಪೊಲೀಸರನ್ನು ದಿಕ್ಕು ತಪ್ಪಿಸಲು ಮತ್ತು ಸಾಕ್ಷ್ಯಗಳನ್ನು ನಾಶಮಾಡಲು ಉತ್ತಮ ಅಧ್ಯಯನವಾಗಲಿದೆ.

ಮಧು ಜಿ.ಸಿ
ಮಣಿಪಾಲ್ ವಿಶ್ವವಿದ್ಯಾಲಯದಿಂದ ಸಾಮಾಜಿಕ ಮಾನವಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದಿದ್ದಾರೆ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಾರೆ.

ಕನ್ನಡಕ್ಕೆ: ಮುತ್ತುರಾಜ್


ಇದನ್ನೂ ಓದಿ: ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....