Homeಕರ್ನಾಟಕಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

- Advertisement -
- Advertisement -

ಪ್ರಸ್ತುತ ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುತ್ತಿರುವ ’ಕ್ರೈಮ್ ಸ್ಟೋರಿಸ್: ಇಂಡಿಯಾ ಡಿಟೆಕ್ಟಿವ್ಸ್’ನ ಎಲ್ಲಾ ಸಂಚಿಕೆಗಳು ಈ ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯ ಕಾರಣಕ್ಕಾಗಿ ವೀಕ್ಷಿಸಲು ಅನರ್ಹವಾಗಿವೆ. ಹಾಗಾಗಿ ಅವುಗಳ ಪ್ರಸಾರವನ್ನು ನೆಟ್‌ಫ್ಲಿಕ್ಸ್ ನಿಲ್ಲಿಸಬೇಕೆನ್ನುವ ಕೂಗು ಸಕಾರಣದಿಂದ ಕೂಡಿದೆ.

ನಾಲ್ಕು ಸಂಚಿಕೆಗಳ ಈ ಡಾಕ್ಯುಮೆಂಟರಿ ಸರಣಿಯಲ್ಲಿ ಬೆಂಗಳೂರು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ಯಾವುದೇ ನಿರ್ಬಂಧಗಳನ್ನು ಹೇರಿಕೊಳ್ಳದೆ, ಕ್ಯಾಮರಾಕ್ಕೆ ಯಾವುದೇ ರೀತಿಯ ತಡೆಗೋಡೆಗಳನ್ನು ಹಾಕಿಕೊಳ್ಳದೆ ನೇರವಾಗಿ ತೋರಿಸಲಾಗಿದೆ. ಕಾನೂನು ಎಚ್ಚರಿಕೆಗಳನ್ನು ಸ್ಪಷ್ಟವಾಗಿ ಗಾಳಿಗೆ ತೂರಲಾಗಿದೆ. ಪ್ರಕರಣವೊಂದರ ತನಿಖೆಯ ವೇಳೆ ಅದರ ವಿವರಗಳನ್ನು ಯಾವುದೇ ಪ್ರಕಾರದ ಮಾಧ್ಯಮಗಳಿಗೆ ನೀಡಬಾರದು ಎಂಬ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ನಿರ್ದೇಶನವನ್ನು ಈ ಚಿತ್ರದಲ್ಲಿ ಕಾಣಿಸಿಕೊಂಡ ಪೊಲೀಸ್ ಅಧಿಕಾರಿಗಳು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಕ್ರೈಮ್ ರಿಪೋರ್ಟರ್‌ಗಳು ತನಿಖಾ ಅಧಿಕಾರಿಗಳಿಂದ ಮತ್ತು ಹಿರಿಯ ಶ್ರೇಣಿಯ ಅಧಿಕಾರಿಗಳಿಂದ ತನಿಖೆಯ ಕೆಲ ವಿವರಗಳನ್ನು ಪಡೆಯಲು ದಿನನಿತ್ಯ ಹೆಣಗಾಡುತ್ತಿರುವ ಸಂದರ್ಭದಲ್ಲಿ, ಪೊಲೀಸರು ತಮ್ಮ ತಥಾಕಥಿತ ತನಿಖೆಯ ಕೌಶಲ್ಯದ ಪ್ರೊಪಗಾಂಡವನ್ನು ಬಿತ್ತಲು ಹಾಗೂ ಪ್ರದರ್ಶಿಸಿಕೊಳ್ಳಲು ಈ ಡಾಕ್ಯುಮೆಂಟರಿ ಸರಣಿಯನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ. ಬೆಂಗಳೂರು ಪೊಲೀಸರ ತನಿಖಾ ಶೈಲಿಯನ್ನು ಪ್ರದರ್ಶಿಸಿಕೊಳ್ಳಲು ಹೋಗಿ, ಕ್ರಿಮಿನಲ್‌ಗಳಿಗೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸರಣಿ ಅಂತ್ಯಗೊಂಡಿದೆ ಎಂದು ಕೆಲ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ. ಪ್ರಚಾರಕ್ಕಾಗಿ ಹಸಿದಿದ್ದ ಪೊಲೀಸ್ ಅಧಿಕಾರಿಗಳನ್ನು ಯಶಸ್ವಿಯಾಗಿ ಮರಳು ಮಾಡಿದ ಈ ಸರಣಿ ತಯಾರಕರಿಗೆ ಧನ್ಯವಾದ ತಿಳಿಸಬೇಕಾಗಿದೆ.

ಕಾನೂನು ಉಲ್ಲಂಘನೆಗಳಿಗಿಂತಲೂ ಈ ಸರಣಿಯು ಆರೋಪಿಗಳು ಮತ್ತು ಸಂತ್ರಸ್ತರ ಬಗ್ಗೆ ಅಸೂಕ್ಷ್ಮತೆಯನ್ನು ಮೆರೆಯುತ್ತದೆ. ಅದಕ್ಕಾಗಿ ಸರಣಿಯು ಸೂಕ್ತ ಬೆಲೆ ಕೂಡ ತೆತ್ತಿದೆ. ಆರೋಪಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸರಣಿಯ ಮೊದಲ ಸಂಚಿಕೆಯಲ್ಲಿ (A murdered mother) ತಮ್ಮ ಪ್ರಕರಣ ಇನ್ನೂ ವಿಚಾರಣೆಯಲ್ಲಿರುವ ಸಂದರ್ಭದಲ್ಲಿಯೇ ತನ್ನನ್ನು ಕೆಟ್ಟದಾಗಿ ತೋರಿಸಲಾಗಿದೆ ಮತ್ತು ನಾನೇ ನನ್ನ ಸ್ವಂತ ತಾಯಿಯನ್ನು ಕೊಂದೆ ಎನ್ನುವ ರೀತಿ ಬಿಂಬಿಸಲಾಗಿದೆ ಎಂದು ದೂರಿ, ಸರಣಿಯ ಆ ಸಂಚಿಕೆಯನ್ನು ತಡೆಹಿಡಿಯುವಂತೆ ಕೋರಿದ್ದರು. ಯಾವುದೇ ಮಾಧ್ಯಮಗಳಿಗೆ ಆರೋಪಿಗಳನ್ನು ಅಪರಾಧಿಗಳ ರೀತಿ ತೋರಿಸುವ ಹಕ್ಕು ಇಲ್ಲ. ಅಲ್ಲದೇ ಪ್ರತಿಯೊಬ್ಬ ಆರೋಪಿಗೂ ಸಹ ತನ್ನನ್ನು ಸಮರ್ಥಿಸಿಕೊಳ್ಳುವ ಹಕ್ಕು ಇದೆ. ಕರ್ನಾಟಕ ಹೈಕೋರ್ಟ್ ಈ ವಿಷಯದಲ್ಲಿ ಮಧ್ಯಂತರ ಆದೇಶ ನೀಡಿದ್ದು ಆ ಮೊದಲ ಸಂಚಿಕೆಯನ್ನು ಪ್ರಸಾರ ಮಾಡದಂತೆ ನೆಟ್‌ಫ್ಲಿಕ್ಸ್‌ಗೆ ಆದೇಶಿಸಿದೆ.

PC : The Economic Times

ಈ ಸರಣಿಯಲ್ಲಿ ಬರುವ ಮಹಿಳೆಯರು, ಮಕ್ಕಳು ಸೇರಿದಂತೆ ಆರೋಪಿಗಳು, ಶಂಕಿತರು, ಸಂತ್ರಸ್ತರು ಯಾರೊಬ್ಬರ ಮುಖವನ್ನು ಸಹ ಬ್ಲರ್ ಮಾಡದೇ ನೇರವಾಗಿ ತೋರಿಸಲಾಗಿದೆ. ಇದು ಆತಂಕಕಾರಿ ಪ್ರವೃತ್ತಿಯಾಗಿದೆ. ಆರೋಪಿ ಮತ್ತು ಸಂತ್ರಸ್ತರ ಒಪ್ಪಿಗೆಯಿಲ್ಲದೆ ಅವರನ್ನು ತೋರಿಸುವ ಹಕ್ಕು ಅಥವಾ ಅಧಿಕಾರ ಯಾವ ಮಾಧ್ಯಮಗಳಿಗೂ ಇಲ್ಲ ಎಂದು ಖ್ಯಾತ ವಕೀಲರಾದ ಬಿ.ಟಿ ವೆಂಕಟೇಶ್ ಹೇಳುತ್ತಾರೆ. ಒಂದು ವೇಳೆ ಅವರ ಒಪ್ಪಿಗೆ ಸಿಕ್ಕಿದರೂ ಸಹ ಅದನ್ನು ತಿರುಚುವ ಕೆಲಸವನ್ನು ಮಾಧ್ಯಮಗಳು ಮಾಡಬಾರದು. ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರೊಂದಿಗೆ ವ್ಯವಹರಿಸುವಾಗ ಮಾಧ್ಯಮಗಳು ಹೆಚ್ಚು ಎಚ್ಚರಿಕೆ ಮತ್ತು ಜಾಗೃತರಾಗಿರಬೇಕು.

Body in the Bag ಎಂಬ ಸಂಚಿಕೆಯಲ್ಲಿ ಪೊಲೀಸರು ಕೊಲೆಯಾದ ಸಂತ್ರಸ್ತನ ತಾಯಿಯ ಆರೋಪದ ಮೇಲೆ, ಆರಂಭದಲ್ಲಿಯೇ ಕೊಲೆಯಾದವನ ಹೆಂಡತಿ ಮತ್ತು ಆಕೆಯ ತಾಯಿಯ ಮೇಲೆ ಶಂಕೆ ವ್ಯಕ್ತಪಡಿಸಿ ವಶಕ್ಕೆ ಪಡೆಯುತ್ತಾರೆ. ಪೊಲೀಸರು ಅವರ ವಿರುದ್ಧ ಒಂದು ಸಣ್ಣ ಸಾಕ್ಷ್ಯ ಕೂಡ ಸಂಗ್ರಹಿಸಲು ವಿಫಲವಾದರೂ, ಸಂಚಿಕೆಯುದ್ದಕ್ಕೂ ಅವರಿಬ್ಬರೆ ಕೊಲೆಗಾರರು ಎಂಬ ಭಾವನೆ ನೋಡುಗರಲ್ಲಿ ಉಳಿಯುತ್ತದೆ. ಅವರಿಬ್ಬರ ಮೇಲೆ ಈ ಸರಣಿ ತಯಾರಕರಾದ ಎನ್ ಅಮಿತ್ ಮತ್ತು ಜಾಕ್ ರ್‍ಯಾಂಪ್ಲಿಂಗ್‌ರವರು ಸಂಚಿಕೆಯ ಕೊನೆಯವರೆಗೂ ಯಾವುದೇ ಕರುಣೆ ತೋರಿಸುವುದಿಲ್ಲ. ಆದರೆ ಸಂಚಿಕೆಯ ಕೊನೆಯಲ್ಲಿ ಆ ಕೊಲೆ ಮಾಡಿದ ಇನ್ನೊಂದು ಜೋಡಿ ಸಿಕ್ಕ ನಂತರ ಮಾತ್ರ ಆರಂಭದಿಂದಲೂ ಶಂಕಿತರಾಗಿದ್ದ ಇವರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡಲಾಗುತ್ತದೆ. ಯಾವುದೇ ವಾರೆಂಟ್ ಇಲ್ಲದೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿರುತ್ತದೆ!

Dying for Protection ಸಂಚಿಕೆಯಲ್ಲಿ ಕೊಲೆಯಾದ ವೇಶ್ಯೆಯೊಬ್ಬರ ಮಗನನ್ನು ಅಪ್ರಾಪ್ತ ಎಂಬುದನ್ನು ಕೂಡ ಲೆಕ್ಕಿಸದೇ ಅಕ್ರಮವಾಗಿ ವಶಕ್ಕೆ ಪಡೆಯಲಾಗುತ್ತದೆ. ಆತನ ವಿರುದ್ಧ ಪೊಲೀಸರು ಅಶ್ಲೀಲ ಪದಗಳನ್ನು ಬಳಸುತ್ತಾರೆ. ಇಡೀ ಘಟನೆಯನ್ನು ವೈಭವೀಕರಿಸುವುದು ನಿರ್ದೇಶಕರಿಗೆ ಸಮಸ್ಯೆ ಅನ್ನಿಸುವುದಿಲ್ಲ. ಆದರೂ ಕೊನೆಗೆ ಆಕೆಯ ಗ್ರಾಹಕನಾಗಿದ್ದವನನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸುತ್ತಾರೆ. ಇಲ್ಲಿ ಅಪ್ರಾಪ್ತ ಬಾಲಕನ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಮತ್ತು ಯಾರಾದರೂ ಈ ವಿಷಯದಲ್ಲಿ ತಯಾರಕರ ವಿರುದ್ಧ ದೂರು ನೀಡಿದರೆ ಪ್ರಕರಣ ದಾಖಲಾಗುವುದರಲ್ಲಿ ಅನುಮಾನವಿಲ್ಲ. ಕೊನೆಯ Stolen Baby ಸಂಚಿಕೆಯಲ್ಲಿ ಚಿಕ್ಕ ಮಕ್ಕಳನ್ನು ಕೂಡ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿ, ಮಗುವನ್ನು ಕಳೆದುಕೊಂಡ ದುಃಖಿತ ತಾಯಿ ಮತ್ತು ತಂದೆಯೊಂದಿಗೆ ತೋರಿಸಲಾಗಿದೆ.

ಈ ಉಲ್ಲಂಘನೆಗಳಿಗೆ, ನಿರ್ದಿಷ್ಟವಾಗಿ ಸಂತ್ರಸ್ತರು ಮತ್ತು ಆರೋಪಿಗಳ ಹಕ್ಕುಗಳನ್ನು ಉಲ್ಲಂಘಿಸಿರುವುದಕ್ಕೆ ನಿರ್ದೇಶಕರು, ನಿರ್ಮಾಪಕರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕೋರ್ಟ್‌ಗಳು ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ಹಲವು ನಿರ್ದೇಶನಗಳನ್ನು ಉಲ್ಲಂಘಿಸಿರುವ ಪೊಲೀಸರು ಕೂಡ ಶಿಸ್ತು ಕ್ರಮ ಎದುರಿಸುವ ಸಾಧ್ಯತೆ ಇದೆ. ಈ ಸರಣಿಯನ್ನು ನೋಡುವ ಕ್ರಿಮಿನಲ್‌ಗಳಿಗೆ ಇದು ಪೊಲೀಸರನ್ನು ದಿಕ್ಕು ತಪ್ಪಿಸಲು ಮತ್ತು ಸಾಕ್ಷ್ಯಗಳನ್ನು ನಾಶಮಾಡಲು ಉತ್ತಮ ಅಧ್ಯಯನವಾಗಲಿದೆ.

ಮಧು ಜಿ.ಸಿ
ಮಣಿಪಾಲ್ ವಿಶ್ವವಿದ್ಯಾಲಯದಿಂದ ಸಾಮಾಜಿಕ ಮಾನವಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದಿದ್ದಾರೆ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಾರೆ.

ಕನ್ನಡಕ್ಕೆ: ಮುತ್ತುರಾಜ್


ಇದನ್ನೂ ಓದಿ: ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...