Homeಕರ್ನಾಟಕಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

- Advertisement -
- Advertisement -

ಪ್ರಸ್ತುತ ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುತ್ತಿರುವ ’ಕ್ರೈಮ್ ಸ್ಟೋರಿಸ್: ಇಂಡಿಯಾ ಡಿಟೆಕ್ಟಿವ್ಸ್’ನ ಎಲ್ಲಾ ಸಂಚಿಕೆಗಳು ಈ ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯ ಕಾರಣಕ್ಕಾಗಿ ವೀಕ್ಷಿಸಲು ಅನರ್ಹವಾಗಿವೆ. ಹಾಗಾಗಿ ಅವುಗಳ ಪ್ರಸಾರವನ್ನು ನೆಟ್‌ಫ್ಲಿಕ್ಸ್ ನಿಲ್ಲಿಸಬೇಕೆನ್ನುವ ಕೂಗು ಸಕಾರಣದಿಂದ ಕೂಡಿದೆ.

ನಾಲ್ಕು ಸಂಚಿಕೆಗಳ ಈ ಡಾಕ್ಯುಮೆಂಟರಿ ಸರಣಿಯಲ್ಲಿ ಬೆಂಗಳೂರು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ಯಾವುದೇ ನಿರ್ಬಂಧಗಳನ್ನು ಹೇರಿಕೊಳ್ಳದೆ, ಕ್ಯಾಮರಾಕ್ಕೆ ಯಾವುದೇ ರೀತಿಯ ತಡೆಗೋಡೆಗಳನ್ನು ಹಾಕಿಕೊಳ್ಳದೆ ನೇರವಾಗಿ ತೋರಿಸಲಾಗಿದೆ. ಕಾನೂನು ಎಚ್ಚರಿಕೆಗಳನ್ನು ಸ್ಪಷ್ಟವಾಗಿ ಗಾಳಿಗೆ ತೂರಲಾಗಿದೆ. ಪ್ರಕರಣವೊಂದರ ತನಿಖೆಯ ವೇಳೆ ಅದರ ವಿವರಗಳನ್ನು ಯಾವುದೇ ಪ್ರಕಾರದ ಮಾಧ್ಯಮಗಳಿಗೆ ನೀಡಬಾರದು ಎಂಬ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ನಿರ್ದೇಶನವನ್ನು ಈ ಚಿತ್ರದಲ್ಲಿ ಕಾಣಿಸಿಕೊಂಡ ಪೊಲೀಸ್ ಅಧಿಕಾರಿಗಳು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಕ್ರೈಮ್ ರಿಪೋರ್ಟರ್‌ಗಳು ತನಿಖಾ ಅಧಿಕಾರಿಗಳಿಂದ ಮತ್ತು ಹಿರಿಯ ಶ್ರೇಣಿಯ ಅಧಿಕಾರಿಗಳಿಂದ ತನಿಖೆಯ ಕೆಲ ವಿವರಗಳನ್ನು ಪಡೆಯಲು ದಿನನಿತ್ಯ ಹೆಣಗಾಡುತ್ತಿರುವ ಸಂದರ್ಭದಲ್ಲಿ, ಪೊಲೀಸರು ತಮ್ಮ ತಥಾಕಥಿತ ತನಿಖೆಯ ಕೌಶಲ್ಯದ ಪ್ರೊಪಗಾಂಡವನ್ನು ಬಿತ್ತಲು ಹಾಗೂ ಪ್ರದರ್ಶಿಸಿಕೊಳ್ಳಲು ಈ ಡಾಕ್ಯುಮೆಂಟರಿ ಸರಣಿಯನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ. ಬೆಂಗಳೂರು ಪೊಲೀಸರ ತನಿಖಾ ಶೈಲಿಯನ್ನು ಪ್ರದರ್ಶಿಸಿಕೊಳ್ಳಲು ಹೋಗಿ, ಕ್ರಿಮಿನಲ್‌ಗಳಿಗೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸರಣಿ ಅಂತ್ಯಗೊಂಡಿದೆ ಎಂದು ಕೆಲ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ. ಪ್ರಚಾರಕ್ಕಾಗಿ ಹಸಿದಿದ್ದ ಪೊಲೀಸ್ ಅಧಿಕಾರಿಗಳನ್ನು ಯಶಸ್ವಿಯಾಗಿ ಮರಳು ಮಾಡಿದ ಈ ಸರಣಿ ತಯಾರಕರಿಗೆ ಧನ್ಯವಾದ ತಿಳಿಸಬೇಕಾಗಿದೆ.

ಕಾನೂನು ಉಲ್ಲಂಘನೆಗಳಿಗಿಂತಲೂ ಈ ಸರಣಿಯು ಆರೋಪಿಗಳು ಮತ್ತು ಸಂತ್ರಸ್ತರ ಬಗ್ಗೆ ಅಸೂಕ್ಷ್ಮತೆಯನ್ನು ಮೆರೆಯುತ್ತದೆ. ಅದಕ್ಕಾಗಿ ಸರಣಿಯು ಸೂಕ್ತ ಬೆಲೆ ಕೂಡ ತೆತ್ತಿದೆ. ಆರೋಪಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸರಣಿಯ ಮೊದಲ ಸಂಚಿಕೆಯಲ್ಲಿ (A murdered mother) ತಮ್ಮ ಪ್ರಕರಣ ಇನ್ನೂ ವಿಚಾರಣೆಯಲ್ಲಿರುವ ಸಂದರ್ಭದಲ್ಲಿಯೇ ತನ್ನನ್ನು ಕೆಟ್ಟದಾಗಿ ತೋರಿಸಲಾಗಿದೆ ಮತ್ತು ನಾನೇ ನನ್ನ ಸ್ವಂತ ತಾಯಿಯನ್ನು ಕೊಂದೆ ಎನ್ನುವ ರೀತಿ ಬಿಂಬಿಸಲಾಗಿದೆ ಎಂದು ದೂರಿ, ಸರಣಿಯ ಆ ಸಂಚಿಕೆಯನ್ನು ತಡೆಹಿಡಿಯುವಂತೆ ಕೋರಿದ್ದರು. ಯಾವುದೇ ಮಾಧ್ಯಮಗಳಿಗೆ ಆರೋಪಿಗಳನ್ನು ಅಪರಾಧಿಗಳ ರೀತಿ ತೋರಿಸುವ ಹಕ್ಕು ಇಲ್ಲ. ಅಲ್ಲದೇ ಪ್ರತಿಯೊಬ್ಬ ಆರೋಪಿಗೂ ಸಹ ತನ್ನನ್ನು ಸಮರ್ಥಿಸಿಕೊಳ್ಳುವ ಹಕ್ಕು ಇದೆ. ಕರ್ನಾಟಕ ಹೈಕೋರ್ಟ್ ಈ ವಿಷಯದಲ್ಲಿ ಮಧ್ಯಂತರ ಆದೇಶ ನೀಡಿದ್ದು ಆ ಮೊದಲ ಸಂಚಿಕೆಯನ್ನು ಪ್ರಸಾರ ಮಾಡದಂತೆ ನೆಟ್‌ಫ್ಲಿಕ್ಸ್‌ಗೆ ಆದೇಶಿಸಿದೆ.

PC : The Economic Times

ಈ ಸರಣಿಯಲ್ಲಿ ಬರುವ ಮಹಿಳೆಯರು, ಮಕ್ಕಳು ಸೇರಿದಂತೆ ಆರೋಪಿಗಳು, ಶಂಕಿತರು, ಸಂತ್ರಸ್ತರು ಯಾರೊಬ್ಬರ ಮುಖವನ್ನು ಸಹ ಬ್ಲರ್ ಮಾಡದೇ ನೇರವಾಗಿ ತೋರಿಸಲಾಗಿದೆ. ಇದು ಆತಂಕಕಾರಿ ಪ್ರವೃತ್ತಿಯಾಗಿದೆ. ಆರೋಪಿ ಮತ್ತು ಸಂತ್ರಸ್ತರ ಒಪ್ಪಿಗೆಯಿಲ್ಲದೆ ಅವರನ್ನು ತೋರಿಸುವ ಹಕ್ಕು ಅಥವಾ ಅಧಿಕಾರ ಯಾವ ಮಾಧ್ಯಮಗಳಿಗೂ ಇಲ್ಲ ಎಂದು ಖ್ಯಾತ ವಕೀಲರಾದ ಬಿ.ಟಿ ವೆಂಕಟೇಶ್ ಹೇಳುತ್ತಾರೆ. ಒಂದು ವೇಳೆ ಅವರ ಒಪ್ಪಿಗೆ ಸಿಕ್ಕಿದರೂ ಸಹ ಅದನ್ನು ತಿರುಚುವ ಕೆಲಸವನ್ನು ಮಾಧ್ಯಮಗಳು ಮಾಡಬಾರದು. ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರೊಂದಿಗೆ ವ್ಯವಹರಿಸುವಾಗ ಮಾಧ್ಯಮಗಳು ಹೆಚ್ಚು ಎಚ್ಚರಿಕೆ ಮತ್ತು ಜಾಗೃತರಾಗಿರಬೇಕು.

Body in the Bag ಎಂಬ ಸಂಚಿಕೆಯಲ್ಲಿ ಪೊಲೀಸರು ಕೊಲೆಯಾದ ಸಂತ್ರಸ್ತನ ತಾಯಿಯ ಆರೋಪದ ಮೇಲೆ, ಆರಂಭದಲ್ಲಿಯೇ ಕೊಲೆಯಾದವನ ಹೆಂಡತಿ ಮತ್ತು ಆಕೆಯ ತಾಯಿಯ ಮೇಲೆ ಶಂಕೆ ವ್ಯಕ್ತಪಡಿಸಿ ವಶಕ್ಕೆ ಪಡೆಯುತ್ತಾರೆ. ಪೊಲೀಸರು ಅವರ ವಿರುದ್ಧ ಒಂದು ಸಣ್ಣ ಸಾಕ್ಷ್ಯ ಕೂಡ ಸಂಗ್ರಹಿಸಲು ವಿಫಲವಾದರೂ, ಸಂಚಿಕೆಯುದ್ದಕ್ಕೂ ಅವರಿಬ್ಬರೆ ಕೊಲೆಗಾರರು ಎಂಬ ಭಾವನೆ ನೋಡುಗರಲ್ಲಿ ಉಳಿಯುತ್ತದೆ. ಅವರಿಬ್ಬರ ಮೇಲೆ ಈ ಸರಣಿ ತಯಾರಕರಾದ ಎನ್ ಅಮಿತ್ ಮತ್ತು ಜಾಕ್ ರ್‍ಯಾಂಪ್ಲಿಂಗ್‌ರವರು ಸಂಚಿಕೆಯ ಕೊನೆಯವರೆಗೂ ಯಾವುದೇ ಕರುಣೆ ತೋರಿಸುವುದಿಲ್ಲ. ಆದರೆ ಸಂಚಿಕೆಯ ಕೊನೆಯಲ್ಲಿ ಆ ಕೊಲೆ ಮಾಡಿದ ಇನ್ನೊಂದು ಜೋಡಿ ಸಿಕ್ಕ ನಂತರ ಮಾತ್ರ ಆರಂಭದಿಂದಲೂ ಶಂಕಿತರಾಗಿದ್ದ ಇವರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡಲಾಗುತ್ತದೆ. ಯಾವುದೇ ವಾರೆಂಟ್ ಇಲ್ಲದೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿರುತ್ತದೆ!

Dying for Protection ಸಂಚಿಕೆಯಲ್ಲಿ ಕೊಲೆಯಾದ ವೇಶ್ಯೆಯೊಬ್ಬರ ಮಗನನ್ನು ಅಪ್ರಾಪ್ತ ಎಂಬುದನ್ನು ಕೂಡ ಲೆಕ್ಕಿಸದೇ ಅಕ್ರಮವಾಗಿ ವಶಕ್ಕೆ ಪಡೆಯಲಾಗುತ್ತದೆ. ಆತನ ವಿರುದ್ಧ ಪೊಲೀಸರು ಅಶ್ಲೀಲ ಪದಗಳನ್ನು ಬಳಸುತ್ತಾರೆ. ಇಡೀ ಘಟನೆಯನ್ನು ವೈಭವೀಕರಿಸುವುದು ನಿರ್ದೇಶಕರಿಗೆ ಸಮಸ್ಯೆ ಅನ್ನಿಸುವುದಿಲ್ಲ. ಆದರೂ ಕೊನೆಗೆ ಆಕೆಯ ಗ್ರಾಹಕನಾಗಿದ್ದವನನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸುತ್ತಾರೆ. ಇಲ್ಲಿ ಅಪ್ರಾಪ್ತ ಬಾಲಕನ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಮತ್ತು ಯಾರಾದರೂ ಈ ವಿಷಯದಲ್ಲಿ ತಯಾರಕರ ವಿರುದ್ಧ ದೂರು ನೀಡಿದರೆ ಪ್ರಕರಣ ದಾಖಲಾಗುವುದರಲ್ಲಿ ಅನುಮಾನವಿಲ್ಲ. ಕೊನೆಯ Stolen Baby ಸಂಚಿಕೆಯಲ್ಲಿ ಚಿಕ್ಕ ಮಕ್ಕಳನ್ನು ಕೂಡ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿ, ಮಗುವನ್ನು ಕಳೆದುಕೊಂಡ ದುಃಖಿತ ತಾಯಿ ಮತ್ತು ತಂದೆಯೊಂದಿಗೆ ತೋರಿಸಲಾಗಿದೆ.

ಈ ಉಲ್ಲಂಘನೆಗಳಿಗೆ, ನಿರ್ದಿಷ್ಟವಾಗಿ ಸಂತ್ರಸ್ತರು ಮತ್ತು ಆರೋಪಿಗಳ ಹಕ್ಕುಗಳನ್ನು ಉಲ್ಲಂಘಿಸಿರುವುದಕ್ಕೆ ನಿರ್ದೇಶಕರು, ನಿರ್ಮಾಪಕರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕೋರ್ಟ್‌ಗಳು ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ಹಲವು ನಿರ್ದೇಶನಗಳನ್ನು ಉಲ್ಲಂಘಿಸಿರುವ ಪೊಲೀಸರು ಕೂಡ ಶಿಸ್ತು ಕ್ರಮ ಎದುರಿಸುವ ಸಾಧ್ಯತೆ ಇದೆ. ಈ ಸರಣಿಯನ್ನು ನೋಡುವ ಕ್ರಿಮಿನಲ್‌ಗಳಿಗೆ ಇದು ಪೊಲೀಸರನ್ನು ದಿಕ್ಕು ತಪ್ಪಿಸಲು ಮತ್ತು ಸಾಕ್ಷ್ಯಗಳನ್ನು ನಾಶಮಾಡಲು ಉತ್ತಮ ಅಧ್ಯಯನವಾಗಲಿದೆ.

ಮಧು ಜಿ.ಸಿ
ಮಣಿಪಾಲ್ ವಿಶ್ವವಿದ್ಯಾಲಯದಿಂದ ಸಾಮಾಜಿಕ ಮಾನವಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದಿದ್ದಾರೆ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಾರೆ.

ಕನ್ನಡಕ್ಕೆ: ಮುತ್ತುರಾಜ್


ಇದನ್ನೂ ಓದಿ: ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...