Homeಕರ್ನಾಟಕಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

- Advertisement -
- Advertisement -

ಪ್ರಸ್ತುತ ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುತ್ತಿರುವ ’ಕ್ರೈಮ್ ಸ್ಟೋರಿಸ್: ಇಂಡಿಯಾ ಡಿಟೆಕ್ಟಿವ್ಸ್’ನ ಎಲ್ಲಾ ಸಂಚಿಕೆಗಳು ಈ ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯ ಕಾರಣಕ್ಕಾಗಿ ವೀಕ್ಷಿಸಲು ಅನರ್ಹವಾಗಿವೆ. ಹಾಗಾಗಿ ಅವುಗಳ ಪ್ರಸಾರವನ್ನು ನೆಟ್‌ಫ್ಲಿಕ್ಸ್ ನಿಲ್ಲಿಸಬೇಕೆನ್ನುವ ಕೂಗು ಸಕಾರಣದಿಂದ ಕೂಡಿದೆ.

ನಾಲ್ಕು ಸಂಚಿಕೆಗಳ ಈ ಡಾಕ್ಯುಮೆಂಟರಿ ಸರಣಿಯಲ್ಲಿ ಬೆಂಗಳೂರು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ಯಾವುದೇ ನಿರ್ಬಂಧಗಳನ್ನು ಹೇರಿಕೊಳ್ಳದೆ, ಕ್ಯಾಮರಾಕ್ಕೆ ಯಾವುದೇ ರೀತಿಯ ತಡೆಗೋಡೆಗಳನ್ನು ಹಾಕಿಕೊಳ್ಳದೆ ನೇರವಾಗಿ ತೋರಿಸಲಾಗಿದೆ. ಕಾನೂನು ಎಚ್ಚರಿಕೆಗಳನ್ನು ಸ್ಪಷ್ಟವಾಗಿ ಗಾಳಿಗೆ ತೂರಲಾಗಿದೆ. ಪ್ರಕರಣವೊಂದರ ತನಿಖೆಯ ವೇಳೆ ಅದರ ವಿವರಗಳನ್ನು ಯಾವುದೇ ಪ್ರಕಾರದ ಮಾಧ್ಯಮಗಳಿಗೆ ನೀಡಬಾರದು ಎಂಬ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ನಿರ್ದೇಶನವನ್ನು ಈ ಚಿತ್ರದಲ್ಲಿ ಕಾಣಿಸಿಕೊಂಡ ಪೊಲೀಸ್ ಅಧಿಕಾರಿಗಳು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಕ್ರೈಮ್ ರಿಪೋರ್ಟರ್‌ಗಳು ತನಿಖಾ ಅಧಿಕಾರಿಗಳಿಂದ ಮತ್ತು ಹಿರಿಯ ಶ್ರೇಣಿಯ ಅಧಿಕಾರಿಗಳಿಂದ ತನಿಖೆಯ ಕೆಲ ವಿವರಗಳನ್ನು ಪಡೆಯಲು ದಿನನಿತ್ಯ ಹೆಣಗಾಡುತ್ತಿರುವ ಸಂದರ್ಭದಲ್ಲಿ, ಪೊಲೀಸರು ತಮ್ಮ ತಥಾಕಥಿತ ತನಿಖೆಯ ಕೌಶಲ್ಯದ ಪ್ರೊಪಗಾಂಡವನ್ನು ಬಿತ್ತಲು ಹಾಗೂ ಪ್ರದರ್ಶಿಸಿಕೊಳ್ಳಲು ಈ ಡಾಕ್ಯುಮೆಂಟರಿ ಸರಣಿಯನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ. ಬೆಂಗಳೂರು ಪೊಲೀಸರ ತನಿಖಾ ಶೈಲಿಯನ್ನು ಪ್ರದರ್ಶಿಸಿಕೊಳ್ಳಲು ಹೋಗಿ, ಕ್ರಿಮಿನಲ್‌ಗಳಿಗೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸರಣಿ ಅಂತ್ಯಗೊಂಡಿದೆ ಎಂದು ಕೆಲ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ. ಪ್ರಚಾರಕ್ಕಾಗಿ ಹಸಿದಿದ್ದ ಪೊಲೀಸ್ ಅಧಿಕಾರಿಗಳನ್ನು ಯಶಸ್ವಿಯಾಗಿ ಮರಳು ಮಾಡಿದ ಈ ಸರಣಿ ತಯಾರಕರಿಗೆ ಧನ್ಯವಾದ ತಿಳಿಸಬೇಕಾಗಿದೆ.

ಕಾನೂನು ಉಲ್ಲಂಘನೆಗಳಿಗಿಂತಲೂ ಈ ಸರಣಿಯು ಆರೋಪಿಗಳು ಮತ್ತು ಸಂತ್ರಸ್ತರ ಬಗ್ಗೆ ಅಸೂಕ್ಷ್ಮತೆಯನ್ನು ಮೆರೆಯುತ್ತದೆ. ಅದಕ್ಕಾಗಿ ಸರಣಿಯು ಸೂಕ್ತ ಬೆಲೆ ಕೂಡ ತೆತ್ತಿದೆ. ಆರೋಪಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸರಣಿಯ ಮೊದಲ ಸಂಚಿಕೆಯಲ್ಲಿ (A murdered mother) ತಮ್ಮ ಪ್ರಕರಣ ಇನ್ನೂ ವಿಚಾರಣೆಯಲ್ಲಿರುವ ಸಂದರ್ಭದಲ್ಲಿಯೇ ತನ್ನನ್ನು ಕೆಟ್ಟದಾಗಿ ತೋರಿಸಲಾಗಿದೆ ಮತ್ತು ನಾನೇ ನನ್ನ ಸ್ವಂತ ತಾಯಿಯನ್ನು ಕೊಂದೆ ಎನ್ನುವ ರೀತಿ ಬಿಂಬಿಸಲಾಗಿದೆ ಎಂದು ದೂರಿ, ಸರಣಿಯ ಆ ಸಂಚಿಕೆಯನ್ನು ತಡೆಹಿಡಿಯುವಂತೆ ಕೋರಿದ್ದರು. ಯಾವುದೇ ಮಾಧ್ಯಮಗಳಿಗೆ ಆರೋಪಿಗಳನ್ನು ಅಪರಾಧಿಗಳ ರೀತಿ ತೋರಿಸುವ ಹಕ್ಕು ಇಲ್ಲ. ಅಲ್ಲದೇ ಪ್ರತಿಯೊಬ್ಬ ಆರೋಪಿಗೂ ಸಹ ತನ್ನನ್ನು ಸಮರ್ಥಿಸಿಕೊಳ್ಳುವ ಹಕ್ಕು ಇದೆ. ಕರ್ನಾಟಕ ಹೈಕೋರ್ಟ್ ಈ ವಿಷಯದಲ್ಲಿ ಮಧ್ಯಂತರ ಆದೇಶ ನೀಡಿದ್ದು ಆ ಮೊದಲ ಸಂಚಿಕೆಯನ್ನು ಪ್ರಸಾರ ಮಾಡದಂತೆ ನೆಟ್‌ಫ್ಲಿಕ್ಸ್‌ಗೆ ಆದೇಶಿಸಿದೆ.

PC : The Economic Times

ಈ ಸರಣಿಯಲ್ಲಿ ಬರುವ ಮಹಿಳೆಯರು, ಮಕ್ಕಳು ಸೇರಿದಂತೆ ಆರೋಪಿಗಳು, ಶಂಕಿತರು, ಸಂತ್ರಸ್ತರು ಯಾರೊಬ್ಬರ ಮುಖವನ್ನು ಸಹ ಬ್ಲರ್ ಮಾಡದೇ ನೇರವಾಗಿ ತೋರಿಸಲಾಗಿದೆ. ಇದು ಆತಂಕಕಾರಿ ಪ್ರವೃತ್ತಿಯಾಗಿದೆ. ಆರೋಪಿ ಮತ್ತು ಸಂತ್ರಸ್ತರ ಒಪ್ಪಿಗೆಯಿಲ್ಲದೆ ಅವರನ್ನು ತೋರಿಸುವ ಹಕ್ಕು ಅಥವಾ ಅಧಿಕಾರ ಯಾವ ಮಾಧ್ಯಮಗಳಿಗೂ ಇಲ್ಲ ಎಂದು ಖ್ಯಾತ ವಕೀಲರಾದ ಬಿ.ಟಿ ವೆಂಕಟೇಶ್ ಹೇಳುತ್ತಾರೆ. ಒಂದು ವೇಳೆ ಅವರ ಒಪ್ಪಿಗೆ ಸಿಕ್ಕಿದರೂ ಸಹ ಅದನ್ನು ತಿರುಚುವ ಕೆಲಸವನ್ನು ಮಾಧ್ಯಮಗಳು ಮಾಡಬಾರದು. ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರೊಂದಿಗೆ ವ್ಯವಹರಿಸುವಾಗ ಮಾಧ್ಯಮಗಳು ಹೆಚ್ಚು ಎಚ್ಚರಿಕೆ ಮತ್ತು ಜಾಗೃತರಾಗಿರಬೇಕು.

Body in the Bag ಎಂಬ ಸಂಚಿಕೆಯಲ್ಲಿ ಪೊಲೀಸರು ಕೊಲೆಯಾದ ಸಂತ್ರಸ್ತನ ತಾಯಿಯ ಆರೋಪದ ಮೇಲೆ, ಆರಂಭದಲ್ಲಿಯೇ ಕೊಲೆಯಾದವನ ಹೆಂಡತಿ ಮತ್ತು ಆಕೆಯ ತಾಯಿಯ ಮೇಲೆ ಶಂಕೆ ವ್ಯಕ್ತಪಡಿಸಿ ವಶಕ್ಕೆ ಪಡೆಯುತ್ತಾರೆ. ಪೊಲೀಸರು ಅವರ ವಿರುದ್ಧ ಒಂದು ಸಣ್ಣ ಸಾಕ್ಷ್ಯ ಕೂಡ ಸಂಗ್ರಹಿಸಲು ವಿಫಲವಾದರೂ, ಸಂಚಿಕೆಯುದ್ದಕ್ಕೂ ಅವರಿಬ್ಬರೆ ಕೊಲೆಗಾರರು ಎಂಬ ಭಾವನೆ ನೋಡುಗರಲ್ಲಿ ಉಳಿಯುತ್ತದೆ. ಅವರಿಬ್ಬರ ಮೇಲೆ ಈ ಸರಣಿ ತಯಾರಕರಾದ ಎನ್ ಅಮಿತ್ ಮತ್ತು ಜಾಕ್ ರ್‍ಯಾಂಪ್ಲಿಂಗ್‌ರವರು ಸಂಚಿಕೆಯ ಕೊನೆಯವರೆಗೂ ಯಾವುದೇ ಕರುಣೆ ತೋರಿಸುವುದಿಲ್ಲ. ಆದರೆ ಸಂಚಿಕೆಯ ಕೊನೆಯಲ್ಲಿ ಆ ಕೊಲೆ ಮಾಡಿದ ಇನ್ನೊಂದು ಜೋಡಿ ಸಿಕ್ಕ ನಂತರ ಮಾತ್ರ ಆರಂಭದಿಂದಲೂ ಶಂಕಿತರಾಗಿದ್ದ ಇವರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡಲಾಗುತ್ತದೆ. ಯಾವುದೇ ವಾರೆಂಟ್ ಇಲ್ಲದೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿರುತ್ತದೆ!

Dying for Protection ಸಂಚಿಕೆಯಲ್ಲಿ ಕೊಲೆಯಾದ ವೇಶ್ಯೆಯೊಬ್ಬರ ಮಗನನ್ನು ಅಪ್ರಾಪ್ತ ಎಂಬುದನ್ನು ಕೂಡ ಲೆಕ್ಕಿಸದೇ ಅಕ್ರಮವಾಗಿ ವಶಕ್ಕೆ ಪಡೆಯಲಾಗುತ್ತದೆ. ಆತನ ವಿರುದ್ಧ ಪೊಲೀಸರು ಅಶ್ಲೀಲ ಪದಗಳನ್ನು ಬಳಸುತ್ತಾರೆ. ಇಡೀ ಘಟನೆಯನ್ನು ವೈಭವೀಕರಿಸುವುದು ನಿರ್ದೇಶಕರಿಗೆ ಸಮಸ್ಯೆ ಅನ್ನಿಸುವುದಿಲ್ಲ. ಆದರೂ ಕೊನೆಗೆ ಆಕೆಯ ಗ್ರಾಹಕನಾಗಿದ್ದವನನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸುತ್ತಾರೆ. ಇಲ್ಲಿ ಅಪ್ರಾಪ್ತ ಬಾಲಕನ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಮತ್ತು ಯಾರಾದರೂ ಈ ವಿಷಯದಲ್ಲಿ ತಯಾರಕರ ವಿರುದ್ಧ ದೂರು ನೀಡಿದರೆ ಪ್ರಕರಣ ದಾಖಲಾಗುವುದರಲ್ಲಿ ಅನುಮಾನವಿಲ್ಲ. ಕೊನೆಯ Stolen Baby ಸಂಚಿಕೆಯಲ್ಲಿ ಚಿಕ್ಕ ಮಕ್ಕಳನ್ನು ಕೂಡ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿ, ಮಗುವನ್ನು ಕಳೆದುಕೊಂಡ ದುಃಖಿತ ತಾಯಿ ಮತ್ತು ತಂದೆಯೊಂದಿಗೆ ತೋರಿಸಲಾಗಿದೆ.

ಈ ಉಲ್ಲಂಘನೆಗಳಿಗೆ, ನಿರ್ದಿಷ್ಟವಾಗಿ ಸಂತ್ರಸ್ತರು ಮತ್ತು ಆರೋಪಿಗಳ ಹಕ್ಕುಗಳನ್ನು ಉಲ್ಲಂಘಿಸಿರುವುದಕ್ಕೆ ನಿರ್ದೇಶಕರು, ನಿರ್ಮಾಪಕರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕೋರ್ಟ್‌ಗಳು ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ಹಲವು ನಿರ್ದೇಶನಗಳನ್ನು ಉಲ್ಲಂಘಿಸಿರುವ ಪೊಲೀಸರು ಕೂಡ ಶಿಸ್ತು ಕ್ರಮ ಎದುರಿಸುವ ಸಾಧ್ಯತೆ ಇದೆ. ಈ ಸರಣಿಯನ್ನು ನೋಡುವ ಕ್ರಿಮಿನಲ್‌ಗಳಿಗೆ ಇದು ಪೊಲೀಸರನ್ನು ದಿಕ್ಕು ತಪ್ಪಿಸಲು ಮತ್ತು ಸಾಕ್ಷ್ಯಗಳನ್ನು ನಾಶಮಾಡಲು ಉತ್ತಮ ಅಧ್ಯಯನವಾಗಲಿದೆ.

ಮಧು ಜಿ.ಸಿ
ಮಣಿಪಾಲ್ ವಿಶ್ವವಿದ್ಯಾಲಯದಿಂದ ಸಾಮಾಜಿಕ ಮಾನವಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದಿದ್ದಾರೆ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಾರೆ.

ಕನ್ನಡಕ್ಕೆ: ಮುತ್ತುರಾಜ್


ಇದನ್ನೂ ಓದಿ: ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...